Homeಮುಖಪುಟಪ್ರಧಾನಿಗೆ ಸೋನಿಯಾ ಗಾಂಧಿಯ 5 ಸಲಹೆಗಳು: ಮಾಧ್ಯಮ ಸಂಸ್ಥೆಗಳಿಂದ ಆಕ್ಷೇಪ

ಪ್ರಧಾನಿಗೆ ಸೋನಿಯಾ ಗಾಂಧಿಯ 5 ಸಲಹೆಗಳು: ಮಾಧ್ಯಮ ಸಂಸ್ಥೆಗಳಿಂದ ಆಕ್ಷೇಪ

- Advertisement -
- Advertisement -

ಸರ್ಕಾರಿ ಮತ್ತು ಸಾರ್ವಜನಿಕ ವಲಯದ ಮಾಧ್ಯಮಗಳಿಗೆ ಜಾಹೀರಾತು ನೀಡುವುದನ್ನು ಎರಡು ವರ್ಷಗಳ ಕಾಲ ತಡೆಹಿಡಿಯಬೇಕೆಂಬ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಶಿಫಾರಸ್ನನ್ನು ಅಸೋಸಿಯೇಷನ್ ​​ಆಫ್ ರೇಡಿಯೋ ಆಪರೇಟರ್ಸ್ ಫಾರ್ ಇಂಡಿಯಾ (AROI) ವಿರೋಧಿಸಿದೆ.

ಕಾಂಗ್ರೆಸ್ ಅಧ್ಯಕ್ಷೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೊರೊನಾ ಕಾಲದಲ್ಲಿ ಸರ್ಕಾರ ಮಾಡಬೇಕಾದ 5 ಅಂಶಗಳ ಪಟ್ಟಿಯೊಂದಿಗೆ ಪತ್ರ ಬರೆದಿದ್ದರು. ಅವುಗಳಲ್ಲಿ ಒಂದು  ಜಾಹೀರಾತುಗಳನ್ನು ಕಡಿತಗೊಳಿಸುವ ಮೂಲಕ ಹಣವನ್ನು ಉಳಿಸುವುದಾಗಿತ್ತು.

ದೇಶದ ಖಾಸಗಿ ಎಫ್‌ಎಂ ಚಾನೆಲ್‌ಗಳ ಸಂಸ್ಥೆಯಾದ AROI ಸೊನಿಯಾ ಗಾಂಧಿಯವರ ಈ ಅಂಶವನ್ನು ತೀವ್ರವಾಗಿ ವಿರೋಧಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. “ಕಳೆದ ವರ್ಷ ರೇಡಿಯೊಗೆ, ವಿಶೇಷವಾಗಿ ಸಣ್ಣ ಪಟ್ಟಣಗಳಲ್ಲಿನ ರೇಡಿಯೊ ಕೇಂದ್ರಗಳಿಗೆ, ಸರ್ಕಾರದ ಜಾಹೀರಾತಿನಲ್ಲಿ ಭಾರಿ ಕುಸಿತ ಕಂಡುಬಂದಿದೆ” ಎಂದು ಅಸೋಸಿಯೇಷನ್ ​​ಹೇಳಿದೆ.

ರೇಡಿಯೊ ವಲಯವು ಈಗಾಗಲೇ ಆಳವಾದ ಆರ್ಥಿಕ ಬಿಕ್ಕಟ್ಟಿನಲ್ಲಿದೆ, ಕಳೆದ ವರ್ಷದಲ್ಲಿ ರೇಡಿಯೊ ಉಧ್ಯಮದ ಜಾಹೀರಾತು ಆದಾಯವು 20% ರಷ್ಟು ಕುಸಿಯುವ ಮೂಲಕ ಕಠಿಣ ಹಂತದಲ್ಲಿದೆ. ರಾಷ್ಟ್ರವ್ಯಾಪಿ ಲಾಕ್‌ಡೌನ್ ನಂತರ ಜಾಹೀರಾತು ಆದಾಯವು 80% ಕುಸಿದಿದೆ ಎನ್ನಲಾಗಿದೆ.

“ಭಾರತದಾದ್ಯಂತ 380 ಖಾಸಗಿ ಎಫ್‌ಎಂ ಕೇಂದ್ರಗಳ ಮೂಲಕ ಕೋವಿಡ್ -19 ವಿರುದ್ಧದ ಸಮರಕ್ಕೆ ಪೂರ್ಣ ಹೃದಯದಿಂದ ಬೆಂಬಲಿಸುತ್ತಿದೆ ಹಾಗೂ ರೇಡಿಯೊದಲ್ಲಿ ಜಾಹೀರಾತನ್ನು ಸಾಮಾನ್ಯ ಮಟ್ಟಕ್ಕೆ ಮರುಸ್ಥಾಪಿಸುವಂತೆ ಸರ್ಕಾರವನ್ನು ಕೋರಿದೆ” ಎಂದು AROI ಹೇಳಿಕೆಯಲ್ಲಿ ತಿಳಿಸಿದೆ.

“ಶ್ರೀಮತಿ ಸೋನಿಯಾ ಗಾಂಧಿಯವರು, ಅವರ ಸಲಹೆಯನ್ನು ದಯವಿಟ್ಟು ಪರಿಶೀಲಿಸಲು ಹಾಗೂ ಹಿಂತೆಗೆದುಕೊಳ್ಳಲು ನಾವು ವಿನಂತಿಸುತ್ತೇವೆ ಮತ್ತು ಆ ಮೂಲಕ ಪ್ರಜಾಪ್ರಭುತ್ವದ ನಿರ್ಣಾಯಕ ಸ್ತಂಭಗಳಲ್ಲಿ ಒಂದಾದ ಮಾಧ್ಯಮಕ್ಕೆ ತನ್ನ ಬೆಂಬಲವನ್ನು ಕೋರುತ್ತೇವೆ” ಎಂದು ಸಂಘ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷರ ಸಲಹೆಯನ್ನು ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ​​(NBA) ಆಕ್ಷೇಪ ವ್ಯಕ್ತಪಡಿಸಿಸಿದೆ, ಅವರ ಸಲಹೆಯನ್ನು “ನಿರಾಶಾದಾಯಕ” ಎಂದು ಬಣ್ಣಿಸಿದೆ.

“ಮಾಧ್ಯಮ ಸಿಬ್ಬಂದಿಗಳು, ತಮ್ಮ ಜೀವ ಭಯವಿಲ್ಲದೆ, ಸಾಂಕ್ರಾಮಿಕ ರೋಗದ ಬಗ್ಗೆ ಸುದ್ದಿ ಪ್ರಸಾರ ಮಾಡುವ ಮೂಲಕ ತಮ್ಮ ರಾಷ್ಟ್ರೀಯ ಕರ್ತವ್ಯವನ್ನು ನಿರ್ವಹಿಸುತ್ತಿರುವ ಸಮಯದಲ್ಲಿ, ಕಾಂಗ್ರೆಸ್ ಅಧ್ಯಕ್ಷೆಯ ಈ ರೀತಿಯ ಹೇಳಿಕೆ ಹೆಚ್ಚು ನಿರಾಶಾದಾಯಕವಾಗಿದೆ” ಎಂದು NBA ಅಧ್ಯಕ್ಷ ರಜತ್ ಶರ್ಮಾ ಹೇಳಿದ್ದಾರೆ.

ಆರ್ಥಿಕ ಹಿಂಜರಿತದಿಂದಾಗಿ ಜಾಹೀರಾತು ಆದಾಯದಲ್ಲಿ ಕುಸಿತ ಕಂಡುಬಂದಿದೆ ಹಾಗೂ 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನಿಂದಾಗಿ ಮಾಧ್ಯಮವೂ ಆರ್ಥಿಕ ಹೊಡೆತಗಳನ್ನು ಅನುಭವಿಸುತ್ತಿದೆ ಎಂದು ಶರ್ಮಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...