Homeಮುಖಪುಟಪ್ರಧಾನಿಗೆ ಸೋನಿಯಾ ಗಾಂಧಿಯ 5 ಸಲಹೆಗಳು: ಮಾಧ್ಯಮ ಸಂಸ್ಥೆಗಳಿಂದ ಆಕ್ಷೇಪ

ಪ್ರಧಾನಿಗೆ ಸೋನಿಯಾ ಗಾಂಧಿಯ 5 ಸಲಹೆಗಳು: ಮಾಧ್ಯಮ ಸಂಸ್ಥೆಗಳಿಂದ ಆಕ್ಷೇಪ

- Advertisement -
- Advertisement -

ಸರ್ಕಾರಿ ಮತ್ತು ಸಾರ್ವಜನಿಕ ವಲಯದ ಮಾಧ್ಯಮಗಳಿಗೆ ಜಾಹೀರಾತು ನೀಡುವುದನ್ನು ಎರಡು ವರ್ಷಗಳ ಕಾಲ ತಡೆಹಿಡಿಯಬೇಕೆಂಬ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಶಿಫಾರಸ್ನನ್ನು ಅಸೋಸಿಯೇಷನ್ ​​ಆಫ್ ರೇಡಿಯೋ ಆಪರೇಟರ್ಸ್ ಫಾರ್ ಇಂಡಿಯಾ (AROI) ವಿರೋಧಿಸಿದೆ.

ಕಾಂಗ್ರೆಸ್ ಅಧ್ಯಕ್ಷೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೊರೊನಾ ಕಾಲದಲ್ಲಿ ಸರ್ಕಾರ ಮಾಡಬೇಕಾದ 5 ಅಂಶಗಳ ಪಟ್ಟಿಯೊಂದಿಗೆ ಪತ್ರ ಬರೆದಿದ್ದರು. ಅವುಗಳಲ್ಲಿ ಒಂದು  ಜಾಹೀರಾತುಗಳನ್ನು ಕಡಿತಗೊಳಿಸುವ ಮೂಲಕ ಹಣವನ್ನು ಉಳಿಸುವುದಾಗಿತ್ತು.

ದೇಶದ ಖಾಸಗಿ ಎಫ್‌ಎಂ ಚಾನೆಲ್‌ಗಳ ಸಂಸ್ಥೆಯಾದ AROI ಸೊನಿಯಾ ಗಾಂಧಿಯವರ ಈ ಅಂಶವನ್ನು ತೀವ್ರವಾಗಿ ವಿರೋಧಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. “ಕಳೆದ ವರ್ಷ ರೇಡಿಯೊಗೆ, ವಿಶೇಷವಾಗಿ ಸಣ್ಣ ಪಟ್ಟಣಗಳಲ್ಲಿನ ರೇಡಿಯೊ ಕೇಂದ್ರಗಳಿಗೆ, ಸರ್ಕಾರದ ಜಾಹೀರಾತಿನಲ್ಲಿ ಭಾರಿ ಕುಸಿತ ಕಂಡುಬಂದಿದೆ” ಎಂದು ಅಸೋಸಿಯೇಷನ್ ​​ಹೇಳಿದೆ.

ರೇಡಿಯೊ ವಲಯವು ಈಗಾಗಲೇ ಆಳವಾದ ಆರ್ಥಿಕ ಬಿಕ್ಕಟ್ಟಿನಲ್ಲಿದೆ, ಕಳೆದ ವರ್ಷದಲ್ಲಿ ರೇಡಿಯೊ ಉಧ್ಯಮದ ಜಾಹೀರಾತು ಆದಾಯವು 20% ರಷ್ಟು ಕುಸಿಯುವ ಮೂಲಕ ಕಠಿಣ ಹಂತದಲ್ಲಿದೆ. ರಾಷ್ಟ್ರವ್ಯಾಪಿ ಲಾಕ್‌ಡೌನ್ ನಂತರ ಜಾಹೀರಾತು ಆದಾಯವು 80% ಕುಸಿದಿದೆ ಎನ್ನಲಾಗಿದೆ.

“ಭಾರತದಾದ್ಯಂತ 380 ಖಾಸಗಿ ಎಫ್‌ಎಂ ಕೇಂದ್ರಗಳ ಮೂಲಕ ಕೋವಿಡ್ -19 ವಿರುದ್ಧದ ಸಮರಕ್ಕೆ ಪೂರ್ಣ ಹೃದಯದಿಂದ ಬೆಂಬಲಿಸುತ್ತಿದೆ ಹಾಗೂ ರೇಡಿಯೊದಲ್ಲಿ ಜಾಹೀರಾತನ್ನು ಸಾಮಾನ್ಯ ಮಟ್ಟಕ್ಕೆ ಮರುಸ್ಥಾಪಿಸುವಂತೆ ಸರ್ಕಾರವನ್ನು ಕೋರಿದೆ” ಎಂದು AROI ಹೇಳಿಕೆಯಲ್ಲಿ ತಿಳಿಸಿದೆ.

“ಶ್ರೀಮತಿ ಸೋನಿಯಾ ಗಾಂಧಿಯವರು, ಅವರ ಸಲಹೆಯನ್ನು ದಯವಿಟ್ಟು ಪರಿಶೀಲಿಸಲು ಹಾಗೂ ಹಿಂತೆಗೆದುಕೊಳ್ಳಲು ನಾವು ವಿನಂತಿಸುತ್ತೇವೆ ಮತ್ತು ಆ ಮೂಲಕ ಪ್ರಜಾಪ್ರಭುತ್ವದ ನಿರ್ಣಾಯಕ ಸ್ತಂಭಗಳಲ್ಲಿ ಒಂದಾದ ಮಾಧ್ಯಮಕ್ಕೆ ತನ್ನ ಬೆಂಬಲವನ್ನು ಕೋರುತ್ತೇವೆ” ಎಂದು ಸಂಘ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷರ ಸಲಹೆಯನ್ನು ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ​​(NBA) ಆಕ್ಷೇಪ ವ್ಯಕ್ತಪಡಿಸಿಸಿದೆ, ಅವರ ಸಲಹೆಯನ್ನು “ನಿರಾಶಾದಾಯಕ” ಎಂದು ಬಣ್ಣಿಸಿದೆ.

“ಮಾಧ್ಯಮ ಸಿಬ್ಬಂದಿಗಳು, ತಮ್ಮ ಜೀವ ಭಯವಿಲ್ಲದೆ, ಸಾಂಕ್ರಾಮಿಕ ರೋಗದ ಬಗ್ಗೆ ಸುದ್ದಿ ಪ್ರಸಾರ ಮಾಡುವ ಮೂಲಕ ತಮ್ಮ ರಾಷ್ಟ್ರೀಯ ಕರ್ತವ್ಯವನ್ನು ನಿರ್ವಹಿಸುತ್ತಿರುವ ಸಮಯದಲ್ಲಿ, ಕಾಂಗ್ರೆಸ್ ಅಧ್ಯಕ್ಷೆಯ ಈ ರೀತಿಯ ಹೇಳಿಕೆ ಹೆಚ್ಚು ನಿರಾಶಾದಾಯಕವಾಗಿದೆ” ಎಂದು NBA ಅಧ್ಯಕ್ಷ ರಜತ್ ಶರ್ಮಾ ಹೇಳಿದ್ದಾರೆ.

ಆರ್ಥಿಕ ಹಿಂಜರಿತದಿಂದಾಗಿ ಜಾಹೀರಾತು ಆದಾಯದಲ್ಲಿ ಕುಸಿತ ಕಂಡುಬಂದಿದೆ ಹಾಗೂ 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನಿಂದಾಗಿ ಮಾಧ್ಯಮವೂ ಆರ್ಥಿಕ ಹೊಡೆತಗಳನ್ನು ಅನುಭವಿಸುತ್ತಿದೆ ಎಂದು ಶರ್ಮಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...