Homeಮುಖಪುಟಪ್ರಧಾನಿಗೆ ಸೋನಿಯಾ ಗಾಂಧಿಯ 5 ಸಲಹೆಗಳು: ಮಾಧ್ಯಮ ಸಂಸ್ಥೆಗಳಿಂದ ಆಕ್ಷೇಪ

ಪ್ರಧಾನಿಗೆ ಸೋನಿಯಾ ಗಾಂಧಿಯ 5 ಸಲಹೆಗಳು: ಮಾಧ್ಯಮ ಸಂಸ್ಥೆಗಳಿಂದ ಆಕ್ಷೇಪ

- Advertisement -
- Advertisement -

ಸರ್ಕಾರಿ ಮತ್ತು ಸಾರ್ವಜನಿಕ ವಲಯದ ಮಾಧ್ಯಮಗಳಿಗೆ ಜಾಹೀರಾತು ನೀಡುವುದನ್ನು ಎರಡು ವರ್ಷಗಳ ಕಾಲ ತಡೆಹಿಡಿಯಬೇಕೆಂಬ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಶಿಫಾರಸ್ನನ್ನು ಅಸೋಸಿಯೇಷನ್ ​​ಆಫ್ ರೇಡಿಯೋ ಆಪರೇಟರ್ಸ್ ಫಾರ್ ಇಂಡಿಯಾ (AROI) ವಿರೋಧಿಸಿದೆ.

ಕಾಂಗ್ರೆಸ್ ಅಧ್ಯಕ್ಷೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೊರೊನಾ ಕಾಲದಲ್ಲಿ ಸರ್ಕಾರ ಮಾಡಬೇಕಾದ 5 ಅಂಶಗಳ ಪಟ್ಟಿಯೊಂದಿಗೆ ಪತ್ರ ಬರೆದಿದ್ದರು. ಅವುಗಳಲ್ಲಿ ಒಂದು  ಜಾಹೀರಾತುಗಳನ್ನು ಕಡಿತಗೊಳಿಸುವ ಮೂಲಕ ಹಣವನ್ನು ಉಳಿಸುವುದಾಗಿತ್ತು.

ದೇಶದ ಖಾಸಗಿ ಎಫ್‌ಎಂ ಚಾನೆಲ್‌ಗಳ ಸಂಸ್ಥೆಯಾದ AROI ಸೊನಿಯಾ ಗಾಂಧಿಯವರ ಈ ಅಂಶವನ್ನು ತೀವ್ರವಾಗಿ ವಿರೋಧಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. “ಕಳೆದ ವರ್ಷ ರೇಡಿಯೊಗೆ, ವಿಶೇಷವಾಗಿ ಸಣ್ಣ ಪಟ್ಟಣಗಳಲ್ಲಿನ ರೇಡಿಯೊ ಕೇಂದ್ರಗಳಿಗೆ, ಸರ್ಕಾರದ ಜಾಹೀರಾತಿನಲ್ಲಿ ಭಾರಿ ಕುಸಿತ ಕಂಡುಬಂದಿದೆ” ಎಂದು ಅಸೋಸಿಯೇಷನ್ ​​ಹೇಳಿದೆ.

ರೇಡಿಯೊ ವಲಯವು ಈಗಾಗಲೇ ಆಳವಾದ ಆರ್ಥಿಕ ಬಿಕ್ಕಟ್ಟಿನಲ್ಲಿದೆ, ಕಳೆದ ವರ್ಷದಲ್ಲಿ ರೇಡಿಯೊ ಉಧ್ಯಮದ ಜಾಹೀರಾತು ಆದಾಯವು 20% ರಷ್ಟು ಕುಸಿಯುವ ಮೂಲಕ ಕಠಿಣ ಹಂತದಲ್ಲಿದೆ. ರಾಷ್ಟ್ರವ್ಯಾಪಿ ಲಾಕ್‌ಡೌನ್ ನಂತರ ಜಾಹೀರಾತು ಆದಾಯವು 80% ಕುಸಿದಿದೆ ಎನ್ನಲಾಗಿದೆ.

“ಭಾರತದಾದ್ಯಂತ 380 ಖಾಸಗಿ ಎಫ್‌ಎಂ ಕೇಂದ್ರಗಳ ಮೂಲಕ ಕೋವಿಡ್ -19 ವಿರುದ್ಧದ ಸಮರಕ್ಕೆ ಪೂರ್ಣ ಹೃದಯದಿಂದ ಬೆಂಬಲಿಸುತ್ತಿದೆ ಹಾಗೂ ರೇಡಿಯೊದಲ್ಲಿ ಜಾಹೀರಾತನ್ನು ಸಾಮಾನ್ಯ ಮಟ್ಟಕ್ಕೆ ಮರುಸ್ಥಾಪಿಸುವಂತೆ ಸರ್ಕಾರವನ್ನು ಕೋರಿದೆ” ಎಂದು AROI ಹೇಳಿಕೆಯಲ್ಲಿ ತಿಳಿಸಿದೆ.

“ಶ್ರೀಮತಿ ಸೋನಿಯಾ ಗಾಂಧಿಯವರು, ಅವರ ಸಲಹೆಯನ್ನು ದಯವಿಟ್ಟು ಪರಿಶೀಲಿಸಲು ಹಾಗೂ ಹಿಂತೆಗೆದುಕೊಳ್ಳಲು ನಾವು ವಿನಂತಿಸುತ್ತೇವೆ ಮತ್ತು ಆ ಮೂಲಕ ಪ್ರಜಾಪ್ರಭುತ್ವದ ನಿರ್ಣಾಯಕ ಸ್ತಂಭಗಳಲ್ಲಿ ಒಂದಾದ ಮಾಧ್ಯಮಕ್ಕೆ ತನ್ನ ಬೆಂಬಲವನ್ನು ಕೋರುತ್ತೇವೆ” ಎಂದು ಸಂಘ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷರ ಸಲಹೆಯನ್ನು ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ​​(NBA) ಆಕ್ಷೇಪ ವ್ಯಕ್ತಪಡಿಸಿಸಿದೆ, ಅವರ ಸಲಹೆಯನ್ನು “ನಿರಾಶಾದಾಯಕ” ಎಂದು ಬಣ್ಣಿಸಿದೆ.

“ಮಾಧ್ಯಮ ಸಿಬ್ಬಂದಿಗಳು, ತಮ್ಮ ಜೀವ ಭಯವಿಲ್ಲದೆ, ಸಾಂಕ್ರಾಮಿಕ ರೋಗದ ಬಗ್ಗೆ ಸುದ್ದಿ ಪ್ರಸಾರ ಮಾಡುವ ಮೂಲಕ ತಮ್ಮ ರಾಷ್ಟ್ರೀಯ ಕರ್ತವ್ಯವನ್ನು ನಿರ್ವಹಿಸುತ್ತಿರುವ ಸಮಯದಲ್ಲಿ, ಕಾಂಗ್ರೆಸ್ ಅಧ್ಯಕ್ಷೆಯ ಈ ರೀತಿಯ ಹೇಳಿಕೆ ಹೆಚ್ಚು ನಿರಾಶಾದಾಯಕವಾಗಿದೆ” ಎಂದು NBA ಅಧ್ಯಕ್ಷ ರಜತ್ ಶರ್ಮಾ ಹೇಳಿದ್ದಾರೆ.

ಆರ್ಥಿಕ ಹಿಂಜರಿತದಿಂದಾಗಿ ಜಾಹೀರಾತು ಆದಾಯದಲ್ಲಿ ಕುಸಿತ ಕಂಡುಬಂದಿದೆ ಹಾಗೂ 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನಿಂದಾಗಿ ಮಾಧ್ಯಮವೂ ಆರ್ಥಿಕ ಹೊಡೆತಗಳನ್ನು ಅನುಭವಿಸುತ್ತಿದೆ ಎಂದು ಶರ್ಮಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...