Homeಅಂತರಾಷ್ಟ್ರೀಯCNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ.

ಪ್ಯಾಲೆಸ್ತೀನ್‌ನ ತಯಾಸಿರ್ ಗ್ರಾಮದ ಬಳಿ ಇಸ್ರೇಲಿ ವಸಾಹತುಗಾರರು ನಡೆಸಿದ ದಾಳಿ ಮತ್ತು ಅಕ್ರಮ ಹೊರಠಾಣೆ ನಿರ್ಮಾಣದ ನಂತರದ ಪರಿಸ್ಥಿತಿಯ ಬಗ್ಗೆ ಗುರುವಾರ (ಮಾ.26) ವರದಿ ಮಾಡುತ್ತಿದ್ದ ಸಿಎನ್‌ಎನ್ ತಂಡವನ್ನು ಇಸ್ರೇಲಿ ಸೈನಿಕರು ಬಂಧಿಸಿದ್ದಾರೆ ಎಂದು ಶನಿವಾರ (ಮಾ.28) ಎಫ್‌ಪಿಎ ಹೇಳಿದೆ.

ಇಸ್ರೇಲಿ ಸೈನಿಕರು ಪ್ಯಾಲೆಸ್ತೀನಿಯನ್ನರ ಮೇಲೆ ಆಕ್ರಮಣಕಾರಿ ಧೋರಣೆ ತೋರಿದ್ದು, ಪತ್ರಕರ್ತರು ತಮ್ಮ ಗುರುತನ್ನು ತಿಳಿಸಿದ ನಂತರವೂ ಅವರತ್ತ ಬಂದೂಕು ತೋರಿಸಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇಸ್ರೇಲಿ ರಕ್ಷಣಾ ಪಡೆಯ (ಐಡಿಎಫ್‌) ಸೈನಿಕನೊಬ್ಬ ಸಿಎನ್‌ಎನ್‌ ಫೋಟೋ ಜರ್ನಲಿಸ್ಟ್ ಸಿರಿಲ್ ಥಿಯೋಫಿಲೋಸ್ ಅವರ ಕುತ್ತಿಗೆ ಪಟ್ಟಿ ಹಿಡಿದು ನೆಲಕ್ಕೆ ತಳ್ಳಿದ್ದಲ್ಲದೆ, ಅವರ ಕ್ಯಾಮರಾವನ್ನೂ ಹಾನಿಗೊಳಿಸಿದ್ದಾನೆ ಎನ್ನಲಾಗಿದೆ.

ಸಿಎನ್‌ಎನ್ ತನ್ನದೇ ವರದಿಯಲ್ಲಿ ಈ ಘಟನೆಯ ವಿವರಗಳನ್ನು ದೃಢಪಡಿಸಿದ್ದು, ಫೋಟೋ ಜರ್ನಲಿಸ್ಟ್ ಅನ್ನು ಸಿರಿಲ್ ಥಿಯೋಫಿಲೋಸ್ ಎಂದು ಹೇಳಿದೆ.

ಸಿಎನ್‌ಎನ್‌ ತಂಡವು ತಯಾಸಿರ್ ಗ್ರಾಮದಲ್ಲಿ ವಸಾಹತುಗಾರರ ಹಿಂಸಾಚಾರವನ್ನು ದಾಖಲಿಸುತ್ತಿತ್ತು. ವರದಿಗಾರ ಜೆರೆಮಿ ಡೈಮಂಡ್ ಪ್ರಕಾರ, ಸೈನಿಕರು ವಸಾಹತುಗಾರರನ್ನು ತಡೆಯುವ ಬದಲು ಪತ್ರಕರ್ತರನ್ನೇ ಗುರಿಯಾಗಿಸಿಕೊಂಡಿದ್ದಾರೆ.

ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿರುವ ಎಫ್‌ಪಿಎ “ಇದು ಅಚಾತುರ್ಯದಿಂದ ನಡೆದ ದಾಳಿಯಲ್ಲ. ಪತ್ರಕರ್ತರು ಎಂದು ಗೊತ್ತಾದ ಮೇಲೂ ಉದ್ದೇಶಪೂರ್ವಕವಾಗಿ ಹಿಂಸಾತ್ಮಕ ಹಲ್ಲೆ ನಡೆಸಲಾಗಿದೆ. ಇದು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ನೇರ ದಾಳಿಯಾಗಿದೆ ಎಂದಿದೆ.

ಇಸ್ರೇಲಿ ಸೈನಿಕರ ಬಲಪ್ರಯೋಗವು ಅತಿಯಾದದ್ದು ಮತ್ತು ಅಪಾಯಕಾರಿಯಾಗಿತ್ತು. ಪತ್ರಕರ್ತರು ಮತ್ತು ನಾಗರಿಕರತ್ತ ಬಂದೂಕುಗಳನ್ನು ತೋರಿಸುವುದು, ಕ್ಯಾಮರಾಮ್ಯಾನ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವುದು ಮತ್ತು ಸಿಬ್ಬಂದಿಯನ್ನು ಬಂಧಿಸಿರುವುದು ಎಲ್ಲಾ ಮಿತಿಗಳನ್ನು ಮೀರಿದ ಕ್ರಮಗಳಾಗಿವೆ ಎಂದು ಹೇಳಿದೆ.

ಇಂತಹ ವರ್ತನೆಯು ಮಾಧ್ಯಮಗಳ ಬಗ್ಗೆ ಇರುವ ಆಳವಾದ ಆತಂಕಕಾರಿ ದ್ವೇಷದ ಪ್ರವೃತ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ಇದನ್ನು ಯಾವುದೇ ಸಂದರ್ಭದಲ್ಲೂ ಸಹಿಸಲು ಸಾಧ್ಯವಿಲ್ಲ ಎಂದು ಖಂಡಿಸಿದೆ.

ಇಸ್ರೇಲಿ ಮಿಲಿಟರಿಯು ಈ ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದು, ಸೈನಿಕರ ಈ ವರ್ತನೆಯು ಐಡಿಎಫ್ ಮೌಲ್ಯಗಳಿಗೆ ವಿರುದ್ಧವಾದುದು ಎಂದು ಹೇಳಿದೆ.

“ಈ ಘಟನೆಯಲ್ಲಿ ಸೈನಿಕರ ನಡವಳಿಕೆ ಮತ್ತು ಹೇಳಿಕೆಗಳು ಐಡಿಎಫ್ ಅನ್ನು ಪ್ರತಿನಿಧಿಸುವುದಿಲ್ಲ. ಇದು ಐಡಿಎಫ್ ಸೈನಿಕರಿಂದ ನಿರೀಕ್ಷಿಸುವ ಶಿಸ್ತಿಗೆ ವಿರುದ್ಧವಾಗಿದೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುವುದು” ಎಂದು ಐಡಿಎಫ್‌ ವಕ್ತಾರ ಲೆಫ್ಟಿನೆಂಟ್ ಕರ್ನಲ್ ನಾದವ್ ಶೋಶಾನಿ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮುಂದುವರಿದು, “ನಾನು ಖಾಸಗಿಯಾಗಿ ಕ್ಷಮೆಯಾಚಿಸಿದ್ದೇನೆ. ಮತ್ತೆ ಹೇಳುತ್ತಿದ್ದೇನೆ, ಇದು ಸಂಭವಿಸಬಾರದಿತ್ತು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ನಮ್ಮ ಕೆಲಸ, ಅದರಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಅವಕಾಶ ನೀಡುವುದೂ ಸೇರಿದೆ” ಎಂದಿದ್ದಾರೆ.

ಈ ತಿಂಗಳಲ್ಲಿ ಸಿಎನ್‌ಎನ್‌ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ದಾಳಿ ನಡೆಸಿದ ಎರಡನೇ ಪ್ರಕರಣ ಇದಾಗಿದೆ.

ಕೆಲವು ದಿನಗಳ ಹಿಂದೆ ರಂಝಾನ್ ತಿಂಗಳಲ್ಲಿ, ಪೂರ್ವ ಜೆರುಸಲೇಂನ ಓಲ್ಡ್‌ ಸಿಟಿಯ ಗೋಡೆಗಳ ಹೊರಗೆ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಬಗ್ಗೆ ವರದಿ ಮಾಡುತ್ತಿದ್ದಾಗ ಪತ್ರಕರ್ತರ ಮೇಲೆ ದಾಳಿ ಮಾಡಲಾಗಿತ್ತು.

ಇಸ್ರೇಲಿ ಪೊಲೀಸ್ ಅಧಿಕಾರಿಗಳು ನಡೆಸಿದ ಅಪ್ರೊಚೋದಿತ ದಾಳಿಯಿಂದ ಸಿಎನ್‌ಎನ್ ಪ್ರೊಡ್ಯೂಸರ್ ಒಬ್ಬರ ಮಣಿಕಟ್ಟು ಮುರಿದಿತ್ತು.

ಅಕ್ಟೋಬರ್ 2025ರಲ್ಲಿ ಗಾಝಾ ಕದನ ವಿರಾಮವಾದರೂ, ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲಿ ಸೈನಿಕರು ದೌರ್ಜನ್ಯ ಮುಂದುವರಿಸಿದ್ದಾರೆ. ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭವಾದಾಗಿನಿಂದ, ಇಸ್ರೇಲಿ ವಸಾಹತುಗಾರರಿಂದ ಪ್ಯಾಲೆಸ್ತೀನಿಯರ ಮೇಲೆ ಪ್ರಾಣಹಾನಿ ಉಂಟುಮಾಡುವ ಹೊಸ ಸರಣಿ ದಾಳಿಗಳು ನಡೆಯುತ್ತಿವೆ. ಇಸ್ರೇಲಿ ಸೈನಿಕರು ಇದನ್ನು ತಡೆಯುವ ಬದಲು, ದಾಳಿಕೋರರನ್ನು ಪ್ರಚೋದಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...