Homeಅಂತರಾಷ್ಟ್ರೀಯCNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ.

ಪ್ಯಾಲೆಸ್ತೀನ್‌ನ ತಯಾಸಿರ್ ಗ್ರಾಮದ ಬಳಿ ಇಸ್ರೇಲಿ ವಸಾಹತುಗಾರರು ನಡೆಸಿದ ದಾಳಿ ಮತ್ತು ಅಕ್ರಮ ಹೊರಠಾಣೆ ನಿರ್ಮಾಣದ ನಂತರದ ಪರಿಸ್ಥಿತಿಯ ಬಗ್ಗೆ ಗುರುವಾರ (ಮಾ.26) ವರದಿ ಮಾಡುತ್ತಿದ್ದ ಸಿಎನ್‌ಎನ್ ತಂಡವನ್ನು ಇಸ್ರೇಲಿ ಸೈನಿಕರು ಬಂಧಿಸಿದ್ದಾರೆ ಎಂದು ಶನಿವಾರ (ಮಾ.28) ಎಫ್‌ಪಿಎ ಹೇಳಿದೆ.

ಇಸ್ರೇಲಿ ಸೈನಿಕರು ಪ್ಯಾಲೆಸ್ತೀನಿಯನ್ನರ ಮೇಲೆ ಆಕ್ರಮಣಕಾರಿ ಧೋರಣೆ ತೋರಿದ್ದು, ಪತ್ರಕರ್ತರು ತಮ್ಮ ಗುರುತನ್ನು ತಿಳಿಸಿದ ನಂತರವೂ ಅವರತ್ತ ಬಂದೂಕು ತೋರಿಸಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇಸ್ರೇಲಿ ರಕ್ಷಣಾ ಪಡೆಯ (ಐಡಿಎಫ್‌) ಸೈನಿಕನೊಬ್ಬ ಸಿಎನ್‌ಎನ್‌ ಫೋಟೋ ಜರ್ನಲಿಸ್ಟ್ ಸಿರಿಲ್ ಥಿಯೋಫಿಲೋಸ್ ಅವರ ಕುತ್ತಿಗೆ ಪಟ್ಟಿ ಹಿಡಿದು ನೆಲಕ್ಕೆ ತಳ್ಳಿದ್ದಲ್ಲದೆ, ಅವರ ಕ್ಯಾಮರಾವನ್ನೂ ಹಾನಿಗೊಳಿಸಿದ್ದಾನೆ ಎನ್ನಲಾಗಿದೆ.

ಸಿಎನ್‌ಎನ್ ತನ್ನದೇ ವರದಿಯಲ್ಲಿ ಈ ಘಟನೆಯ ವಿವರಗಳನ್ನು ದೃಢಪಡಿಸಿದ್ದು, ಫೋಟೋ ಜರ್ನಲಿಸ್ಟ್ ಅನ್ನು ಸಿರಿಲ್ ಥಿಯೋಫಿಲೋಸ್ ಎಂದು ಹೇಳಿದೆ.

ಸಿಎನ್‌ಎನ್‌ ತಂಡವು ತಯಾಸಿರ್ ಗ್ರಾಮದಲ್ಲಿ ವಸಾಹತುಗಾರರ ಹಿಂಸಾಚಾರವನ್ನು ದಾಖಲಿಸುತ್ತಿತ್ತು. ವರದಿಗಾರ ಜೆರೆಮಿ ಡೈಮಂಡ್ ಪ್ರಕಾರ, ಸೈನಿಕರು ವಸಾಹತುಗಾರರನ್ನು ತಡೆಯುವ ಬದಲು ಪತ್ರಕರ್ತರನ್ನೇ ಗುರಿಯಾಗಿಸಿಕೊಂಡಿದ್ದಾರೆ.

ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿರುವ ಎಫ್‌ಪಿಎ “ಇದು ಅಚಾತುರ್ಯದಿಂದ ನಡೆದ ದಾಳಿಯಲ್ಲ. ಪತ್ರಕರ್ತರು ಎಂದು ಗೊತ್ತಾದ ಮೇಲೂ ಉದ್ದೇಶಪೂರ್ವಕವಾಗಿ ಹಿಂಸಾತ್ಮಕ ಹಲ್ಲೆ ನಡೆಸಲಾಗಿದೆ. ಇದು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ನೇರ ದಾಳಿಯಾಗಿದೆ ಎಂದಿದೆ.

ಇಸ್ರೇಲಿ ಸೈನಿಕರ ಬಲಪ್ರಯೋಗವು ಅತಿಯಾದದ್ದು ಮತ್ತು ಅಪಾಯಕಾರಿಯಾಗಿತ್ತು. ಪತ್ರಕರ್ತರು ಮತ್ತು ನಾಗರಿಕರತ್ತ ಬಂದೂಕುಗಳನ್ನು ತೋರಿಸುವುದು, ಕ್ಯಾಮರಾಮ್ಯಾನ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವುದು ಮತ್ತು ಸಿಬ್ಬಂದಿಯನ್ನು ಬಂಧಿಸಿರುವುದು ಎಲ್ಲಾ ಮಿತಿಗಳನ್ನು ಮೀರಿದ ಕ್ರಮಗಳಾಗಿವೆ ಎಂದು ಹೇಳಿದೆ.

ಇಂತಹ ವರ್ತನೆಯು ಮಾಧ್ಯಮಗಳ ಬಗ್ಗೆ ಇರುವ ಆಳವಾದ ಆತಂಕಕಾರಿ ದ್ವೇಷದ ಪ್ರವೃತ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ಇದನ್ನು ಯಾವುದೇ ಸಂದರ್ಭದಲ್ಲೂ ಸಹಿಸಲು ಸಾಧ್ಯವಿಲ್ಲ ಎಂದು ಖಂಡಿಸಿದೆ.

ಇಸ್ರೇಲಿ ಮಿಲಿಟರಿಯು ಈ ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದು, ಸೈನಿಕರ ಈ ವರ್ತನೆಯು ಐಡಿಎಫ್ ಮೌಲ್ಯಗಳಿಗೆ ವಿರುದ್ಧವಾದುದು ಎಂದು ಹೇಳಿದೆ.

“ಈ ಘಟನೆಯಲ್ಲಿ ಸೈನಿಕರ ನಡವಳಿಕೆ ಮತ್ತು ಹೇಳಿಕೆಗಳು ಐಡಿಎಫ್ ಅನ್ನು ಪ್ರತಿನಿಧಿಸುವುದಿಲ್ಲ. ಇದು ಐಡಿಎಫ್ ಸೈನಿಕರಿಂದ ನಿರೀಕ್ಷಿಸುವ ಶಿಸ್ತಿಗೆ ವಿರುದ್ಧವಾಗಿದೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುವುದು” ಎಂದು ಐಡಿಎಫ್‌ ವಕ್ತಾರ ಲೆಫ್ಟಿನೆಂಟ್ ಕರ್ನಲ್ ನಾದವ್ ಶೋಶಾನಿ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮುಂದುವರಿದು, “ನಾನು ಖಾಸಗಿಯಾಗಿ ಕ್ಷಮೆಯಾಚಿಸಿದ್ದೇನೆ. ಮತ್ತೆ ಹೇಳುತ್ತಿದ್ದೇನೆ, ಇದು ಸಂಭವಿಸಬಾರದಿತ್ತು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ನಮ್ಮ ಕೆಲಸ, ಅದರಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಅವಕಾಶ ನೀಡುವುದೂ ಸೇರಿದೆ” ಎಂದಿದ್ದಾರೆ.

ಈ ತಿಂಗಳಲ್ಲಿ ಸಿಎನ್‌ಎನ್‌ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ದಾಳಿ ನಡೆಸಿದ ಎರಡನೇ ಪ್ರಕರಣ ಇದಾಗಿದೆ.

ಕೆಲವು ದಿನಗಳ ಹಿಂದೆ ರಂಝಾನ್ ತಿಂಗಳಲ್ಲಿ, ಪೂರ್ವ ಜೆರುಸಲೇಂನ ಓಲ್ಡ್‌ ಸಿಟಿಯ ಗೋಡೆಗಳ ಹೊರಗೆ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಬಗ್ಗೆ ವರದಿ ಮಾಡುತ್ತಿದ್ದಾಗ ಪತ್ರಕರ್ತರ ಮೇಲೆ ದಾಳಿ ಮಾಡಲಾಗಿತ್ತು.

ಇಸ್ರೇಲಿ ಪೊಲೀಸ್ ಅಧಿಕಾರಿಗಳು ನಡೆಸಿದ ಅಪ್ರೊಚೋದಿತ ದಾಳಿಯಿಂದ ಸಿಎನ್‌ಎನ್ ಪ್ರೊಡ್ಯೂಸರ್ ಒಬ್ಬರ ಮಣಿಕಟ್ಟು ಮುರಿದಿತ್ತು.

ಅಕ್ಟೋಬರ್ 2025ರಲ್ಲಿ ಗಾಝಾ ಕದನ ವಿರಾಮವಾದರೂ, ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲಿ ಸೈನಿಕರು ದೌರ್ಜನ್ಯ ಮುಂದುವರಿಸಿದ್ದಾರೆ. ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭವಾದಾಗಿನಿಂದ, ಇಸ್ರೇಲಿ ವಸಾಹತುಗಾರರಿಂದ ಪ್ಯಾಲೆಸ್ತೀನಿಯರ ಮೇಲೆ ಪ್ರಾಣಹಾನಿ ಉಂಟುಮಾಡುವ ಹೊಸ ಸರಣಿ ದಾಳಿಗಳು ನಡೆಯುತ್ತಿವೆ. ಇಸ್ರೇಲಿ ಸೈನಿಕರು ಇದನ್ನು ತಡೆಯುವ ಬದಲು, ದಾಳಿಕೋರರನ್ನು ಪ್ರಚೋದಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...