Homeಅಂತರಾಷ್ಟ್ರೀಯCNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ.

ಪ್ಯಾಲೆಸ್ತೀನ್‌ನ ತಯಾಸಿರ್ ಗ್ರಾಮದ ಬಳಿ ಇಸ್ರೇಲಿ ವಸಾಹತುಗಾರರು ನಡೆಸಿದ ದಾಳಿ ಮತ್ತು ಅಕ್ರಮ ಹೊರಠಾಣೆ ನಿರ್ಮಾಣದ ನಂತರದ ಪರಿಸ್ಥಿತಿಯ ಬಗ್ಗೆ ಗುರುವಾರ (ಮಾ.26) ವರದಿ ಮಾಡುತ್ತಿದ್ದ ಸಿಎನ್‌ಎನ್ ತಂಡವನ್ನು ಇಸ್ರೇಲಿ ಸೈನಿಕರು ಬಂಧಿಸಿದ್ದಾರೆ ಎಂದು ಶನಿವಾರ (ಮಾ.28) ಎಫ್‌ಪಿಎ ಹೇಳಿದೆ.

ಇಸ್ರೇಲಿ ಸೈನಿಕರು ಪ್ಯಾಲೆಸ್ತೀನಿಯನ್ನರ ಮೇಲೆ ಆಕ್ರಮಣಕಾರಿ ಧೋರಣೆ ತೋರಿದ್ದು, ಪತ್ರಕರ್ತರು ತಮ್ಮ ಗುರುತನ್ನು ತಿಳಿಸಿದ ನಂತರವೂ ಅವರತ್ತ ಬಂದೂಕು ತೋರಿಸಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇಸ್ರೇಲಿ ರಕ್ಷಣಾ ಪಡೆಯ (ಐಡಿಎಫ್‌) ಸೈನಿಕನೊಬ್ಬ ಸಿಎನ್‌ಎನ್‌ ಫೋಟೋ ಜರ್ನಲಿಸ್ಟ್ ಸಿರಿಲ್ ಥಿಯೋಫಿಲೋಸ್ ಅವರ ಕುತ್ತಿಗೆ ಪಟ್ಟಿ ಹಿಡಿದು ನೆಲಕ್ಕೆ ತಳ್ಳಿದ್ದಲ್ಲದೆ, ಅವರ ಕ್ಯಾಮರಾವನ್ನೂ ಹಾನಿಗೊಳಿಸಿದ್ದಾನೆ ಎನ್ನಲಾಗಿದೆ.

ಸಿಎನ್‌ಎನ್ ತನ್ನದೇ ವರದಿಯಲ್ಲಿ ಈ ಘಟನೆಯ ವಿವರಗಳನ್ನು ದೃಢಪಡಿಸಿದ್ದು, ಫೋಟೋ ಜರ್ನಲಿಸ್ಟ್ ಅನ್ನು ಸಿರಿಲ್ ಥಿಯೋಫಿಲೋಸ್ ಎಂದು ಹೇಳಿದೆ.

ಸಿಎನ್‌ಎನ್‌ ತಂಡವು ತಯಾಸಿರ್ ಗ್ರಾಮದಲ್ಲಿ ವಸಾಹತುಗಾರರ ಹಿಂಸಾಚಾರವನ್ನು ದಾಖಲಿಸುತ್ತಿತ್ತು. ವರದಿಗಾರ ಜೆರೆಮಿ ಡೈಮಂಡ್ ಪ್ರಕಾರ, ಸೈನಿಕರು ವಸಾಹತುಗಾರರನ್ನು ತಡೆಯುವ ಬದಲು ಪತ್ರಕರ್ತರನ್ನೇ ಗುರಿಯಾಗಿಸಿಕೊಂಡಿದ್ದಾರೆ.

ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿರುವ ಎಫ್‌ಪಿಎ “ಇದು ಅಚಾತುರ್ಯದಿಂದ ನಡೆದ ದಾಳಿಯಲ್ಲ. ಪತ್ರಕರ್ತರು ಎಂದು ಗೊತ್ತಾದ ಮೇಲೂ ಉದ್ದೇಶಪೂರ್ವಕವಾಗಿ ಹಿಂಸಾತ್ಮಕ ಹಲ್ಲೆ ನಡೆಸಲಾಗಿದೆ. ಇದು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ನೇರ ದಾಳಿಯಾಗಿದೆ ಎಂದಿದೆ.

ಇಸ್ರೇಲಿ ಸೈನಿಕರ ಬಲಪ್ರಯೋಗವು ಅತಿಯಾದದ್ದು ಮತ್ತು ಅಪಾಯಕಾರಿಯಾಗಿತ್ತು. ಪತ್ರಕರ್ತರು ಮತ್ತು ನಾಗರಿಕರತ್ತ ಬಂದೂಕುಗಳನ್ನು ತೋರಿಸುವುದು, ಕ್ಯಾಮರಾಮ್ಯಾನ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವುದು ಮತ್ತು ಸಿಬ್ಬಂದಿಯನ್ನು ಬಂಧಿಸಿರುವುದು ಎಲ್ಲಾ ಮಿತಿಗಳನ್ನು ಮೀರಿದ ಕ್ರಮಗಳಾಗಿವೆ ಎಂದು ಹೇಳಿದೆ.

ಇಂತಹ ವರ್ತನೆಯು ಮಾಧ್ಯಮಗಳ ಬಗ್ಗೆ ಇರುವ ಆಳವಾದ ಆತಂಕಕಾರಿ ದ್ವೇಷದ ಪ್ರವೃತ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ಇದನ್ನು ಯಾವುದೇ ಸಂದರ್ಭದಲ್ಲೂ ಸಹಿಸಲು ಸಾಧ್ಯವಿಲ್ಲ ಎಂದು ಖಂಡಿಸಿದೆ.

ಇಸ್ರೇಲಿ ಮಿಲಿಟರಿಯು ಈ ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದು, ಸೈನಿಕರ ಈ ವರ್ತನೆಯು ಐಡಿಎಫ್ ಮೌಲ್ಯಗಳಿಗೆ ವಿರುದ್ಧವಾದುದು ಎಂದು ಹೇಳಿದೆ.

“ಈ ಘಟನೆಯಲ್ಲಿ ಸೈನಿಕರ ನಡವಳಿಕೆ ಮತ್ತು ಹೇಳಿಕೆಗಳು ಐಡಿಎಫ್ ಅನ್ನು ಪ್ರತಿನಿಧಿಸುವುದಿಲ್ಲ. ಇದು ಐಡಿಎಫ್ ಸೈನಿಕರಿಂದ ನಿರೀಕ್ಷಿಸುವ ಶಿಸ್ತಿಗೆ ವಿರುದ್ಧವಾಗಿದೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುವುದು” ಎಂದು ಐಡಿಎಫ್‌ ವಕ್ತಾರ ಲೆಫ್ಟಿನೆಂಟ್ ಕರ್ನಲ್ ನಾದವ್ ಶೋಶಾನಿ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮುಂದುವರಿದು, “ನಾನು ಖಾಸಗಿಯಾಗಿ ಕ್ಷಮೆಯಾಚಿಸಿದ್ದೇನೆ. ಮತ್ತೆ ಹೇಳುತ್ತಿದ್ದೇನೆ, ಇದು ಸಂಭವಿಸಬಾರದಿತ್ತು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ನಮ್ಮ ಕೆಲಸ, ಅದರಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಅವಕಾಶ ನೀಡುವುದೂ ಸೇರಿದೆ” ಎಂದಿದ್ದಾರೆ.

ಈ ತಿಂಗಳಲ್ಲಿ ಸಿಎನ್‌ಎನ್‌ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ದಾಳಿ ನಡೆಸಿದ ಎರಡನೇ ಪ್ರಕರಣ ಇದಾಗಿದೆ.

ಕೆಲವು ದಿನಗಳ ಹಿಂದೆ ರಂಝಾನ್ ತಿಂಗಳಲ್ಲಿ, ಪೂರ್ವ ಜೆರುಸಲೇಂನ ಓಲ್ಡ್‌ ಸಿಟಿಯ ಗೋಡೆಗಳ ಹೊರಗೆ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಬಗ್ಗೆ ವರದಿ ಮಾಡುತ್ತಿದ್ದಾಗ ಪತ್ರಕರ್ತರ ಮೇಲೆ ದಾಳಿ ಮಾಡಲಾಗಿತ್ತು.

ಇಸ್ರೇಲಿ ಪೊಲೀಸ್ ಅಧಿಕಾರಿಗಳು ನಡೆಸಿದ ಅಪ್ರೊಚೋದಿತ ದಾಳಿಯಿಂದ ಸಿಎನ್‌ಎನ್ ಪ್ರೊಡ್ಯೂಸರ್ ಒಬ್ಬರ ಮಣಿಕಟ್ಟು ಮುರಿದಿತ್ತು.

ಅಕ್ಟೋಬರ್ 2025ರಲ್ಲಿ ಗಾಝಾ ಕದನ ವಿರಾಮವಾದರೂ, ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲಿ ಸೈನಿಕರು ದೌರ್ಜನ್ಯ ಮುಂದುವರಿಸಿದ್ದಾರೆ. ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭವಾದಾಗಿನಿಂದ, ಇಸ್ರೇಲಿ ವಸಾಹತುಗಾರರಿಂದ ಪ್ಯಾಲೆಸ್ತೀನಿಯರ ಮೇಲೆ ಪ್ರಾಣಹಾನಿ ಉಂಟುಮಾಡುವ ಹೊಸ ಸರಣಿ ದಾಳಿಗಳು ನಡೆಯುತ್ತಿವೆ. ಇಸ್ರೇಲಿ ಸೈನಿಕರು ಇದನ್ನು ತಡೆಯುವ ಬದಲು, ದಾಳಿಕೋರರನ್ನು ಪ್ರಚೋದಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...