Homeಮುಖಪುಟವಿಚಾರಣೆ ಬಾಕಿಯಿರುವ ಆರೋಪಿಯನ್ನು ಮಾಧ್ಯಮಗಳು ಅಪರಾಧಿ-ನಿರಪರಾಧಿ ಎಂದು ಘೋಷಿಸುವಂತಿಲ್ಲ : ಕೇರಳ ಹೈಕೋರ್ಟ್

ವಿಚಾರಣೆ ಬಾಕಿಯಿರುವ ಆರೋಪಿಯನ್ನು ಮಾಧ್ಯಮಗಳು ಅಪರಾಧಿ-ನಿರಪರಾಧಿ ಎಂದು ಘೋಷಿಸುವಂತಿಲ್ಲ : ಕೇರಳ ಹೈಕೋರ್ಟ್

- Advertisement -
- Advertisement -

ವಿಚಾರಣೆ ಬಾಕಿ ಇರುವಾಗ ಆರೋಪಿಯನ್ನು ಅಪರಾಧಿ ಅಥವಾ ನಿರಪರಾಧಿ ಎಂದು ಘೋಷಿಸುವ ಮಾಧ್ಯಮಗಳ ಹೇಳಿಕೆಗಳು ಸಂವಿಧಾನದಲ್ಲಿ ಸಂರಕ್ಷಿತ ವಾಕ್ ಸ್ವಾತಂತ್ರ್ಯದಡಿ ಬರುವುದಿಲ್ಲ ಎಂದು ಕೇರಳ ಹೈಕೋರ್ಟ್ ಗುರುವಾರ (ನ.5) ಹೇಳಿದೆ.

ಆರೋಪಿಗಳು ತಮ್ಮ ಘನತೆಯ ಹಕ್ಕನ್ನು ಮಾಧ್ಯಮಗಳು ಉಲ್ಲಂಘಿಸಿವೆ ಎಂದು ಭಾವಿಸಿದರೆ, ಅವರು ಸಾಂವಿಧಾನಿಕ ನ್ಯಾಯಾಲಯದ ಮುಂದೆ ಪರಿಹಾರ ಪಡೆಯಬಹುದು ಎಂದು ಐವರು ನ್ಯಾಯಾಧೀಶರ ಪೀಠ ತಿಳಿಸಿದೆ.

ಮೇ 24, 2018 ರಂದು, ಹೈಕೋರ್ಟ್‌ನ ಪೂರ್ಣ ಪೀಠವು ಐವರು ನ್ಯಾಯಾಧೀಶರ ಪೀಠದ ಮುಂದೆ ಕಾನೂನು ಪ್ರಶ್ನೆಗಳ ಗುಚ್ಚವೊಂದನ್ನು ಉಲ್ಲೇಖಿಸಿತ್ತು. ಈ ಪ್ರಶ್ನೆಗಳು ಸಾಂವಿಧಾನಿಕ ತತ್ವಗಳ ಪ್ರಕಾರ ಮಾಧ್ಯಮವನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ನಿಯಮಗಳು ಸಾಕೇ? ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕು ನಾಗರಿಕರಿಗೆ ಇರುವ ರೀತಿಯಲ್ಲಿ ಮಾಧ್ಯಮಗಳಿಗೆ ಲಭ್ಯವಿದೆಯೇ? ಎಂಬುವುದನ್ನು ಒಳಗೊಂಡಿತ್ತು.

ಸಮರ್ಥ ಶಾಸಕಾಂಗ ಸಂಸ್ಥೆ ಮಾಡಿದ ಕಾನೂನನ್ನು ಹೊರತುಪಡಿಸಿ ಮಾಧ್ಯಮದ ವಾಕ್ ಸ್ವಾತಂತ್ರ್ಯದ ಹಕ್ಕನ್ನು ನಿರ್ಬಂಧಿಸಲು ಸಾಧ್ಯವಿಲ್ಲ. ಅಂತಹ ಸಂದರ್ಭಗಳಲ್ಲಿಯೂ ಸಂವಿಧಾನದ 19 (2) ಪರಿಚ್ಛೇದದಲ್ಲಿ ಉಲ್ಲೇಖಿಸಲಾದ ಆಧಾರದ ಮೇಲೆ ಮಾತ್ರ ಹಕ್ಕನ್ನು ನಿರ್ಬಂಧಿಸಬಹುದು ಎಂದು ಐವರು ನ್ಯಾಯಾಧೀಶರ ಪೀಠ ಹೇಳಿದೆ.

ವಿಧಿ 19(2) ಪ್ರಕಾರ, ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತ್ವ, ವಿದೇಶಗಳೊಂದಿಗೆ ಸೌಹಾರ್ದ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆ ಇತ್ಯಾದಿ ಕಾರಣಗಳಿಗೆ ಸರ್ಕಾರವು ವಾಕ್ ಸ್ವಾತಂತ್ರ್ಯವನ್ನು ನಿರ್ಬಂಧಿಸಬಹುದು. ಆದರೂ, ವಿಚಾರಣಾಧೀನ ಆರೋಪಿಯನ್ನು ಅಪರಾಧಿ ಅಥವಾ ನಿರಪರಾಧಿ ಎಂದು ಘೋಷಿಸುವ ಮಾಧ್ಯಮಗಳ ಹೇಳಿಕೆಗಳೂ ಕೂಡ ಸಂವಿಧಾನ ವಿಧಿ 19(1) (ಎ) ಅಡಿ ಖಾತರಿಪಡಿಸಿರುವ ರಕ್ಷಣೆಯನ್ನು ಪಡೆಯುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಅಪರಾಧಿ ಅಥವಾ ನಿರಪರಾಧಿ ಎಂಬ ಆದೇಶವನ್ನು ನ್ಯಾಯಾಂಗ ಪ್ರಾಧಿಕಾರ ಮಾತ್ರ ನೀಡಬೇಕು ಎಂದು ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿ ಎ.ಕೆ.ಜಯಶಂಕರನ್ ನಂಬಿಯಾರ್ ನೇತೃತ್ವದ ಪೀಠವು, ಶಂಕಿತರ ವಿರುದ್ಧ ಆರೋಪ ಹೊರಿಸುವ ಮುನ್ನವೇ ಮಾಧ್ಯಮಗಳ ವಿಚಾರಣೆ ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸುತ್ತದೆ ಎಂದು ಹೇಳಿದೆ. ಇತ್ತೀಚಿನ ದಿನಗಳಲ್ಲಿ, ಟಿವಿ ಚಾನೆಲ್‌ಗಳಲ್ಲಿ ಹಾಲಿ ನಡೆಯುವ ಕ್ರಿಮಿನಲ್ ತನಿಖೆಗಳು ಮತ್ತುಬಾಕಿ ಉಳಿದಿರುವ ಸಾರ್ವಜನಿಕ ಹಿತಾಸಕ್ತಿ ಕ್ರಿಮಿನಲ್ ವಿಚಾರಣೆಗಳ ಕುರಿತು ಪ್ರೈಮ್ ಟೈಮ್‌ನಲ್ಲಿ ತೀವ್ರವಾದ ಚರ್ಚೆಗಳನ್ನು ಪ್ರಾರಂಭಿಸುವುದನ್ನು ನಾವು ನೋಡುತ್ತಿದ್ದೇವೆ. ಆರೋಪಿ ಅಪರಾಧಿ ಎಂದು ಸಾಬೀತಾಗುವವರೆಗೆ ಆತ ನಿರಪರಾಧಿ ಎಂಬ ಕಾನೂನಿನ ಪರಿಗಣನೆಯನ್ನು ಕಡೆಗಣಿಸುವುದು ಮಾಧ್ಯಮಗಳಿಗೆ ಅಭ್ಯಾಸವಾಗಿಬಿಟ್ಟಿದೆ ಎಂದಿದೆ.

ಇದನ್ನೂ ಓದಿ : ‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....