Homeಮುಖಪುಟವಿಚಾರಣೆ ಬಾಕಿಯಿರುವ ಆರೋಪಿಯನ್ನು ಮಾಧ್ಯಮಗಳು ಅಪರಾಧಿ-ನಿರಪರಾಧಿ ಎಂದು ಘೋಷಿಸುವಂತಿಲ್ಲ : ಕೇರಳ ಹೈಕೋರ್ಟ್

ವಿಚಾರಣೆ ಬಾಕಿಯಿರುವ ಆರೋಪಿಯನ್ನು ಮಾಧ್ಯಮಗಳು ಅಪರಾಧಿ-ನಿರಪರಾಧಿ ಎಂದು ಘೋಷಿಸುವಂತಿಲ್ಲ : ಕೇರಳ ಹೈಕೋರ್ಟ್

- Advertisement -
- Advertisement -

ವಿಚಾರಣೆ ಬಾಕಿ ಇರುವಾಗ ಆರೋಪಿಯನ್ನು ಅಪರಾಧಿ ಅಥವಾ ನಿರಪರಾಧಿ ಎಂದು ಘೋಷಿಸುವ ಮಾಧ್ಯಮಗಳ ಹೇಳಿಕೆಗಳು ಸಂವಿಧಾನದಲ್ಲಿ ಸಂರಕ್ಷಿತ ವಾಕ್ ಸ್ವಾತಂತ್ರ್ಯದಡಿ ಬರುವುದಿಲ್ಲ ಎಂದು ಕೇರಳ ಹೈಕೋರ್ಟ್ ಗುರುವಾರ (ನ.5) ಹೇಳಿದೆ.

ಆರೋಪಿಗಳು ತಮ್ಮ ಘನತೆಯ ಹಕ್ಕನ್ನು ಮಾಧ್ಯಮಗಳು ಉಲ್ಲಂಘಿಸಿವೆ ಎಂದು ಭಾವಿಸಿದರೆ, ಅವರು ಸಾಂವಿಧಾನಿಕ ನ್ಯಾಯಾಲಯದ ಮುಂದೆ ಪರಿಹಾರ ಪಡೆಯಬಹುದು ಎಂದು ಐವರು ನ್ಯಾಯಾಧೀಶರ ಪೀಠ ತಿಳಿಸಿದೆ.

ಮೇ 24, 2018 ರಂದು, ಹೈಕೋರ್ಟ್‌ನ ಪೂರ್ಣ ಪೀಠವು ಐವರು ನ್ಯಾಯಾಧೀಶರ ಪೀಠದ ಮುಂದೆ ಕಾನೂನು ಪ್ರಶ್ನೆಗಳ ಗುಚ್ಚವೊಂದನ್ನು ಉಲ್ಲೇಖಿಸಿತ್ತು. ಈ ಪ್ರಶ್ನೆಗಳು ಸಾಂವಿಧಾನಿಕ ತತ್ವಗಳ ಪ್ರಕಾರ ಮಾಧ್ಯಮವನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ನಿಯಮಗಳು ಸಾಕೇ? ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕು ನಾಗರಿಕರಿಗೆ ಇರುವ ರೀತಿಯಲ್ಲಿ ಮಾಧ್ಯಮಗಳಿಗೆ ಲಭ್ಯವಿದೆಯೇ? ಎಂಬುವುದನ್ನು ಒಳಗೊಂಡಿತ್ತು.

ಸಮರ್ಥ ಶಾಸಕಾಂಗ ಸಂಸ್ಥೆ ಮಾಡಿದ ಕಾನೂನನ್ನು ಹೊರತುಪಡಿಸಿ ಮಾಧ್ಯಮದ ವಾಕ್ ಸ್ವಾತಂತ್ರ್ಯದ ಹಕ್ಕನ್ನು ನಿರ್ಬಂಧಿಸಲು ಸಾಧ್ಯವಿಲ್ಲ. ಅಂತಹ ಸಂದರ್ಭಗಳಲ್ಲಿಯೂ ಸಂವಿಧಾನದ 19 (2) ಪರಿಚ್ಛೇದದಲ್ಲಿ ಉಲ್ಲೇಖಿಸಲಾದ ಆಧಾರದ ಮೇಲೆ ಮಾತ್ರ ಹಕ್ಕನ್ನು ನಿರ್ಬಂಧಿಸಬಹುದು ಎಂದು ಐವರು ನ್ಯಾಯಾಧೀಶರ ಪೀಠ ಹೇಳಿದೆ.

ವಿಧಿ 19(2) ಪ್ರಕಾರ, ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತ್ವ, ವಿದೇಶಗಳೊಂದಿಗೆ ಸೌಹಾರ್ದ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆ ಇತ್ಯಾದಿ ಕಾರಣಗಳಿಗೆ ಸರ್ಕಾರವು ವಾಕ್ ಸ್ವಾತಂತ್ರ್ಯವನ್ನು ನಿರ್ಬಂಧಿಸಬಹುದು. ಆದರೂ, ವಿಚಾರಣಾಧೀನ ಆರೋಪಿಯನ್ನು ಅಪರಾಧಿ ಅಥವಾ ನಿರಪರಾಧಿ ಎಂದು ಘೋಷಿಸುವ ಮಾಧ್ಯಮಗಳ ಹೇಳಿಕೆಗಳೂ ಕೂಡ ಸಂವಿಧಾನ ವಿಧಿ 19(1) (ಎ) ಅಡಿ ಖಾತರಿಪಡಿಸಿರುವ ರಕ್ಷಣೆಯನ್ನು ಪಡೆಯುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಅಪರಾಧಿ ಅಥವಾ ನಿರಪರಾಧಿ ಎಂಬ ಆದೇಶವನ್ನು ನ್ಯಾಯಾಂಗ ಪ್ರಾಧಿಕಾರ ಮಾತ್ರ ನೀಡಬೇಕು ಎಂದು ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿ ಎ.ಕೆ.ಜಯಶಂಕರನ್ ನಂಬಿಯಾರ್ ನೇತೃತ್ವದ ಪೀಠವು, ಶಂಕಿತರ ವಿರುದ್ಧ ಆರೋಪ ಹೊರಿಸುವ ಮುನ್ನವೇ ಮಾಧ್ಯಮಗಳ ವಿಚಾರಣೆ ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸುತ್ತದೆ ಎಂದು ಹೇಳಿದೆ. ಇತ್ತೀಚಿನ ದಿನಗಳಲ್ಲಿ, ಟಿವಿ ಚಾನೆಲ್‌ಗಳಲ್ಲಿ ಹಾಲಿ ನಡೆಯುವ ಕ್ರಿಮಿನಲ್ ತನಿಖೆಗಳು ಮತ್ತುಬಾಕಿ ಉಳಿದಿರುವ ಸಾರ್ವಜನಿಕ ಹಿತಾಸಕ್ತಿ ಕ್ರಿಮಿನಲ್ ವಿಚಾರಣೆಗಳ ಕುರಿತು ಪ್ರೈಮ್ ಟೈಮ್‌ನಲ್ಲಿ ತೀವ್ರವಾದ ಚರ್ಚೆಗಳನ್ನು ಪ್ರಾರಂಭಿಸುವುದನ್ನು ನಾವು ನೋಡುತ್ತಿದ್ದೇವೆ. ಆರೋಪಿ ಅಪರಾಧಿ ಎಂದು ಸಾಬೀತಾಗುವವರೆಗೆ ಆತ ನಿರಪರಾಧಿ ಎಂಬ ಕಾನೂನಿನ ಪರಿಗಣನೆಯನ್ನು ಕಡೆಗಣಿಸುವುದು ಮಾಧ್ಯಮಗಳಿಗೆ ಅಭ್ಯಾಸವಾಗಿಬಿಟ್ಟಿದೆ ಎಂದಿದೆ.

ಇದನ್ನೂ ಓದಿ : ‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...