Homeಮುಖಪುಟವಿಚಾರಣೆ ಬಾಕಿಯಿರುವ ಆರೋಪಿಯನ್ನು ಮಾಧ್ಯಮಗಳು ಅಪರಾಧಿ-ನಿರಪರಾಧಿ ಎಂದು ಘೋಷಿಸುವಂತಿಲ್ಲ : ಕೇರಳ ಹೈಕೋರ್ಟ್

ವಿಚಾರಣೆ ಬಾಕಿಯಿರುವ ಆರೋಪಿಯನ್ನು ಮಾಧ್ಯಮಗಳು ಅಪರಾಧಿ-ನಿರಪರಾಧಿ ಎಂದು ಘೋಷಿಸುವಂತಿಲ್ಲ : ಕೇರಳ ಹೈಕೋರ್ಟ್

- Advertisement -
- Advertisement -

ವಿಚಾರಣೆ ಬಾಕಿ ಇರುವಾಗ ಆರೋಪಿಯನ್ನು ಅಪರಾಧಿ ಅಥವಾ ನಿರಪರಾಧಿ ಎಂದು ಘೋಷಿಸುವ ಮಾಧ್ಯಮಗಳ ಹೇಳಿಕೆಗಳು ಸಂವಿಧಾನದಲ್ಲಿ ಸಂರಕ್ಷಿತ ವಾಕ್ ಸ್ವಾತಂತ್ರ್ಯದಡಿ ಬರುವುದಿಲ್ಲ ಎಂದು ಕೇರಳ ಹೈಕೋರ್ಟ್ ಗುರುವಾರ (ನ.5) ಹೇಳಿದೆ.

ಆರೋಪಿಗಳು ತಮ್ಮ ಘನತೆಯ ಹಕ್ಕನ್ನು ಮಾಧ್ಯಮಗಳು ಉಲ್ಲಂಘಿಸಿವೆ ಎಂದು ಭಾವಿಸಿದರೆ, ಅವರು ಸಾಂವಿಧಾನಿಕ ನ್ಯಾಯಾಲಯದ ಮುಂದೆ ಪರಿಹಾರ ಪಡೆಯಬಹುದು ಎಂದು ಐವರು ನ್ಯಾಯಾಧೀಶರ ಪೀಠ ತಿಳಿಸಿದೆ.

ಮೇ 24, 2018 ರಂದು, ಹೈಕೋರ್ಟ್‌ನ ಪೂರ್ಣ ಪೀಠವು ಐವರು ನ್ಯಾಯಾಧೀಶರ ಪೀಠದ ಮುಂದೆ ಕಾನೂನು ಪ್ರಶ್ನೆಗಳ ಗುಚ್ಚವೊಂದನ್ನು ಉಲ್ಲೇಖಿಸಿತ್ತು. ಈ ಪ್ರಶ್ನೆಗಳು ಸಾಂವಿಧಾನಿಕ ತತ್ವಗಳ ಪ್ರಕಾರ ಮಾಧ್ಯಮವನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ನಿಯಮಗಳು ಸಾಕೇ? ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕು ನಾಗರಿಕರಿಗೆ ಇರುವ ರೀತಿಯಲ್ಲಿ ಮಾಧ್ಯಮಗಳಿಗೆ ಲಭ್ಯವಿದೆಯೇ? ಎಂಬುವುದನ್ನು ಒಳಗೊಂಡಿತ್ತು.

ಸಮರ್ಥ ಶಾಸಕಾಂಗ ಸಂಸ್ಥೆ ಮಾಡಿದ ಕಾನೂನನ್ನು ಹೊರತುಪಡಿಸಿ ಮಾಧ್ಯಮದ ವಾಕ್ ಸ್ವಾತಂತ್ರ್ಯದ ಹಕ್ಕನ್ನು ನಿರ್ಬಂಧಿಸಲು ಸಾಧ್ಯವಿಲ್ಲ. ಅಂತಹ ಸಂದರ್ಭಗಳಲ್ಲಿಯೂ ಸಂವಿಧಾನದ 19 (2) ಪರಿಚ್ಛೇದದಲ್ಲಿ ಉಲ್ಲೇಖಿಸಲಾದ ಆಧಾರದ ಮೇಲೆ ಮಾತ್ರ ಹಕ್ಕನ್ನು ನಿರ್ಬಂಧಿಸಬಹುದು ಎಂದು ಐವರು ನ್ಯಾಯಾಧೀಶರ ಪೀಠ ಹೇಳಿದೆ.

ವಿಧಿ 19(2) ಪ್ರಕಾರ, ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತ್ವ, ವಿದೇಶಗಳೊಂದಿಗೆ ಸೌಹಾರ್ದ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆ ಇತ್ಯಾದಿ ಕಾರಣಗಳಿಗೆ ಸರ್ಕಾರವು ವಾಕ್ ಸ್ವಾತಂತ್ರ್ಯವನ್ನು ನಿರ್ಬಂಧಿಸಬಹುದು. ಆದರೂ, ವಿಚಾರಣಾಧೀನ ಆರೋಪಿಯನ್ನು ಅಪರಾಧಿ ಅಥವಾ ನಿರಪರಾಧಿ ಎಂದು ಘೋಷಿಸುವ ಮಾಧ್ಯಮಗಳ ಹೇಳಿಕೆಗಳೂ ಕೂಡ ಸಂವಿಧಾನ ವಿಧಿ 19(1) (ಎ) ಅಡಿ ಖಾತರಿಪಡಿಸಿರುವ ರಕ್ಷಣೆಯನ್ನು ಪಡೆಯುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಅಪರಾಧಿ ಅಥವಾ ನಿರಪರಾಧಿ ಎಂಬ ಆದೇಶವನ್ನು ನ್ಯಾಯಾಂಗ ಪ್ರಾಧಿಕಾರ ಮಾತ್ರ ನೀಡಬೇಕು ಎಂದು ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿ ಎ.ಕೆ.ಜಯಶಂಕರನ್ ನಂಬಿಯಾರ್ ನೇತೃತ್ವದ ಪೀಠವು, ಶಂಕಿತರ ವಿರುದ್ಧ ಆರೋಪ ಹೊರಿಸುವ ಮುನ್ನವೇ ಮಾಧ್ಯಮಗಳ ವಿಚಾರಣೆ ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸುತ್ತದೆ ಎಂದು ಹೇಳಿದೆ. ಇತ್ತೀಚಿನ ದಿನಗಳಲ್ಲಿ, ಟಿವಿ ಚಾನೆಲ್‌ಗಳಲ್ಲಿ ಹಾಲಿ ನಡೆಯುವ ಕ್ರಿಮಿನಲ್ ತನಿಖೆಗಳು ಮತ್ತುಬಾಕಿ ಉಳಿದಿರುವ ಸಾರ್ವಜನಿಕ ಹಿತಾಸಕ್ತಿ ಕ್ರಿಮಿನಲ್ ವಿಚಾರಣೆಗಳ ಕುರಿತು ಪ್ರೈಮ್ ಟೈಮ್‌ನಲ್ಲಿ ತೀವ್ರವಾದ ಚರ್ಚೆಗಳನ್ನು ಪ್ರಾರಂಭಿಸುವುದನ್ನು ನಾವು ನೋಡುತ್ತಿದ್ದೇವೆ. ಆರೋಪಿ ಅಪರಾಧಿ ಎಂದು ಸಾಬೀತಾಗುವವರೆಗೆ ಆತ ನಿರಪರಾಧಿ ಎಂಬ ಕಾನೂನಿನ ಪರಿಗಣನೆಯನ್ನು ಕಡೆಗಣಿಸುವುದು ಮಾಧ್ಯಮಗಳಿಗೆ ಅಭ್ಯಾಸವಾಗಿಬಿಟ್ಟಿದೆ ಎಂದಿದೆ.

ಇದನ್ನೂ ಓದಿ : ‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...