Homeಕರ್ನಾಟಕಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ - ಸಿಎಂ ಸಿದ್ದರಾಮಯ್ಯ

ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಟಿವಿ, ಸೇರಿದಂತೆ ಇತರ ಮಾಧ್ಯಮಗಳನ್ನು ಅವಲೋಕನ ಮಾಡಿದಾಗ ಡಿಜಿಟಲ್ ಮಾಧ್ಯಮ ಹೆಚ್ಚು ಜನರಿಗೆ ಸತ್ಯವನ್ನು ತಿಳಿಸುವ ಪ್ರಯತ್ನ ಮಾಡುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಧ್ಯಮ ಬಹಳ ಪ್ರಭಲವಾದ ಅಸ್ತ್ರವಾಗಿದ್ದು, ಅದು ಧ್ವನಿ ಇಲ್ಲದವರ ಪರವಾಗಿ, ಓದಿ ಬರುವವರಿಗೂ ಮತ್ತು ಓದು ಬರದವರಿಗೆ ಧ್ವನಿಯಾಗಬೇಕು ಎಂದು ಅವರು ತಿಳಿಸಿದರು. ಬೇರೆ ಮಾಧ್ಯಮಗಳಿಗೆ

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಇದೆ. ಈ ಅಸಮಾನತೆ ಯಾಕೆ ಬಂತು? ಸುಮ್ಮ ಸುಮ್ಮನೆ ಅಸಮಾನತೆ ಬಂದಿಲ್ಲ. ನನ್ನ ಪ್ರಕಾರ, ಜಾತಿ ವ್ಯವಸ್ಥೆಯೆ ಇದಕ್ಕೆ ಮೂಲಕ ಕಾರಣ. ಜಾತಿ ವ್ಯವಸ್ಥೆ ಇಲ್ಲದೆ ಹೋಗಿದ್ದರೆ, ಇಷ್ಟೊಂದು ಅಸಮಾನತೆ ಬರಲು ಸಾಧ್ಯವಿರಲಿಲ್ಲ. ಜಾತಿ ಕಾರಣಕ್ಕೆ ಅನೇಕ ಶತಮಾನಗಳ ಕಾಲ ಶೂದ್ರರು, ಮಹಿಳೆಯರು ಮತ್ತು ದಲಿತರು ಅಸಮಾನತೆಗೆ ಒಳಗಾದರು” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಮ್ಮ ಸಮಾಜ ಮತ್ತು ದೇಶ ಹೇಗಿರಬೇಕು ಹಾಗೂ ದೇಶದ ಗುರಿ ಹೇಗಿರಬೇಕು ಎಂದು ನಾವು ಸಂವಿಧಾನದಲ್ಲಿ ಒಂದು ಚೌಕಟ್ಟು ರಚಿಸಿದ್ದೇವೆ. ಹೆಣ್ಮಕ್ಕಳಿಗೆ ಬಸವಣ್ಣ ಅವರ ಕಾಲದ ನಂತರ ಸಮಾನ ಅವಕಾಶ ಸಿಕ್ಕಲು ಪ್ರಾರಂಭವಾಯಿತು. ನಮ್ಮ ಜಾತಿ ವ್ಯವಸ್ಥೆಯಲ್ಲಿ ಒಬ್ಬ ವ್ಯಕ್ತಿಯ ಸಾಮಾಜಿಕ ಸ್ಥಾನಮಾನ ಅಳೆಯುತ್ತಾ ಇದ್ದಿದ್ದು ಜಾತಿ ಆಧಾರದಲ್ಲಿ. ಅವರ ಪ್ರತಿಭೆ ಮತ್ತು ವ್ಯಕ್ತಿತ್ವಕ್ಕೆ ಯಾವುದೆ ಬೆಲೆ ಇರಲಿಲ್ಲ. ಜಾತಿಯ ಆಧಾರದಲ್ಲಿ ಅವರ ಸ್ಥಾನಮಾನ ಅಳೆಯುತ್ತಿದ್ದರು” ಎಂದು ಹೇಳಿದರು.

“ನಮಗೆ ರಾಜಕೀಯ ಪ್ರಜಾಪ್ರತಭುತ್ವ ಸಿಕ್ಕಿದೆ. ಆದರೆ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಬುತ್ವ ಸಿಕ್ಕಿಲ್ಲ. ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ, ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಬುತ್ವ ಸಿಗಬೇಕು ನಾವು ಸಮಾನತೆಯ, ಜಾತಿ ರಹಿತವಾದ, ಕಂದಾಚಾರ ಮತ್ತು ಮೌಢ್ಯ ರಹಿತ ಸಮಾಜ ನಿರ್ಮಿಸಬೇಕು. ಅವಕಾಶ ವಂಚಿತ ಸಮುದಾಯಕ್ಕೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುವವರೆಗೆ ಸಮಸಮಾಜ ನಿರ್ಮಿಸಲು ಅಸಾಧ್ಯ” ಎಂದು ಅವರು ತಿಳಿಸಿದರು.

“ಬಸವಣ್ನ ಶತಮಾನಗಳ ಹಿಂದೆಯೆ ಇವ ನಮ್ಮವ ಎಂದು ಹೇಳಿದ್ದ. ಆದರೆ ಜನರು ಮೌಢ್ಯವನ್ನು, ಕಂದಾಚಾರವನ್ನು ಇನ್ನೂ ಬಿಟ್ಟಿಲ್ಲ. ಯಾಕೆಂದರೆ ನಮಗೆ ಸಿಕ್ಕ ಜ್ಞಾನವು ಗುಣಮಟ್ಟದ ಶಿಕ್ಷಣ ಮತ್ತು ವೈಜ್ಞಾನಿಕತೆಯದ್ದಲ್ಲ. ಹಾಗಾಗಿ ಅದು ಇನ್ನೂ ಹಾಗೆ ಇದೆ. ಗುಣಮಟ್ಟದ ಶಿಕ್ಷಣ ಮತ್ತು ವೈಜ್ಞಾನಿಕತೆಯ ಶಿಕ್ಷಣ ಸಿಕ್ಕರೆ ನಾವು ವಿಚಾರವಂತರು ಆಗುತ್ತೇವೆ ಮತ್ತು ಸಮಸಮಾಜ ನಿರ್ಮಾಣ ಸಾಧ್ಯ. ಇಷ್ಟೆಲ್ಲ ಶಿಕ್ಷಣ ಆದರೂ ಕೂಡಾ ಜನರು ಕರ್ಮ ಸಿದ್ದಾಂತವನ್ನು ತಿರಸ್ಕರಿಸುತ್ತಿಲ್ಲ. ಬಡತನ, ಸಂಕಷ್ಟಗಳಿಗೆ ನಮ್ಮ ಜನರು ಹಿಂದಿನ ಜನ್ಮದ ಕತೆ ಹೇಳುತ್ತಾರೆ. ಇದನ್ನು ಅಸ್ತ್ರವಾಗಿಟ್ಟು ಕೊಂಡು ಅವರನ್ನು ಶೋಷಣೆ ಮಾಡಲಾಗುತ್ತದೆ” ಎಂದು ಸಿದ್ದರಾಮಯ್ಯ ಹೇಳಿದರು.

“ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ನಾನು ನಂಬಿಕೆ ಇಟ್ಟಿದ್ದೇನೆ. ಹಾಗಾಗಿಯೆ ನನಗೆ ಬಯ್ಯುವ ಯಾವುದೇ ಮಾಧ್ಯಮಗಳಿಗೆ ಯಾಕೆ ಹೀಗೆ ಮಾಡುತ್ತೀರಿ ಎಂದು ಕೇಳುತ್ತಿಲ್ಲ. ಈ ಮಾಧ್ಯಮಗಳು ನನ್ನ ಬಗ್ಗೆ ದುರುದ್ದೇಶದಿಂದ ಬರೆದಿದ್ದರೆ, ಸುಳ್ಳು ಬರೆದರೆ ಅದನ್ನು ಓದುಗರು ಖಂಡಿಸಬೇಕು. ಫೇಕ್ ನ್ಯೂಸ್ ವಿರುದ್ಧ ಕೇಸ್ ಹಾಕಿ ಎಂದು ಹೇಳಿದ್ದೇನೆ. ಒಬ್ಬ ವ್ಯಕ್ತಿಯನ್ನು ತೇಜೋವಧೆ ಮಾಡುವುದು ತುಂಬಾ ಕೆಟ್ಟದು. ಈಗ ತನಿಖಾ ಜರ್ನಲಿಸಂ ಹೋಗಿಯೆ ಬಿಟ್ಟಿದೆ. ಯಾವುದೆ ವಿಚಾರವನ್ನು ನೋಡದರೆ ವರದಿ ಮಾಡಲಾಗುತ್ತಿದೆ” ಎಂದು ಅವರು ಹೇಳಿದರು. ಬೇರೆ ಮಾಧ್ಯಮಗಳಿಗೆ

“ಕೊನೆಯಲ್ಲಿ ನಾವು ಸಂವಿಧಾನದ ಧ್ಯೇಯ ಮತ್ತು ಗುರಿಗಳನ್ನು ತಲುಪಬೇಕಿದೆ. ಈ ಗುರಿಗಳನ್ನು ತಲುಪದೆ ಹೋದರೆ ಹೇಗೆ? ಸಂವಿಧಾನವನ್ನು ವಿರೋಧ ಮಾಡುವರು ಇದ್ದಾರೆ ಮತ್ತು ಪರವಾಗಿ ಇರುವವರೂ ಇದ್ದಾರೆ. ನಮ್ಮ ಹಕ್ಕುಗಳನ್ನು ಮಾತ್ರ ನಾವು ಕೇಳುತ್ತೇವೆ ಆದರೆ, ನಮ್ಮ ಕರ್ತವ್ಯಗಳನ್ನು ಮರೆತು ಬಿಟ್ಟಿದ್ದೇವೆ. ನಾವು ಬರಿಯ ಹಕ್ಕುಗಳನ್ನು ಮಾತ್ರ ಕೇಳುವುದಲ್ಲ, ಕರ್ತವ್ಯಗಳನ್ನು ಕೂಡಾ ಪಾಲಿಸಬೇಕು” ಎಂದು ಅವರು ಹೇಳಿದರು.

ಬಿಜೆಪಿ ಮತ್ತು ಮೋದಿ ವಿರುದ್ಧ ವಾಗ್ದಾಳಿ

“ನಾನು ಮುಖ್ಯಮಂತ್ರಿ ಆಗಿದ್ದು ದೊಡ್ಡ ವಿಚಾರವಲ್ಲ. ಸಂವಿಧಾನದ ಆಶಯದಂತೆ ನಡೆದುಕೊಂಡಿದ್ದೇವೆಯೆ ಅಥವಾ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ ಎಂಬುವುದು ಬಹಳ ಮುಖ್ಯ ವಿಚಾರವಾಗಿದೆ. 2013-18ರ ವೇಳೆ ನಾವು ನೀಡಿದ್ದ ಹೆಚ್ಚಿನ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ಇದೇ ವೇಳೆ ಬಿಜೆಪಿ 600 ಭರವಸೆ ನೀಡಿತ್ತು, ಆದರೆ ಅವರು 10% ಭರವಸೆ ಕೂಡಾ ಈಡೇರಿಸಿಲ್ಲ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

“ಇತಿಹಾಸದಲ್ಲೆ ಕರ್ನಾಟಕದಲ್ಲಿ ಬಿಜೆಪಿ ಜನರ ಆಶಿರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ಭ್ರಷ್ಟಾಚಾರ ಮತ್ತು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಮಹಾರಾಷ್ಟ್ರ ಚುನಾವಣೆ ವೇಳೆ ನಾನು ಕೋಟ್ಯಾಂತರ ರೂ. ಹಣ ಎಕ್ಸೇಂಜ್ ಮಾಡಿದ್ದೇನೆ ಎಂದು ಪ್ರಧಾನಿ ಆರೋಪಿಸಿದ್ದರು. ನಾನು ಹಾಗೆ ಮಾಡಿದ್ದು ಸಾಬೀತಾದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದೇನೆ. ಇದನ್ನೆಲ್ಲಾ ಮಾಧ್ಯಮ ತೋರಿಸಬವೇಕು ಅಲ್ಲವೆ” ಎಂದು ಕೇಳಿದರು.

“ಗಂಡ – ಹೆಂಡತಿ ಜಗಳ ಆಡಿದರೆ ಅದಕ್ಕೂ ರಾಜ್ಯಕ್ಕೂ, ರಾಜ್ಯದ ಜನರಿಗೂ ಏನಾದರೂ ಸಂಬಂಧ ಇದೆಯೆ? ಆದರೆ, ಮಾಧ್ಯಮಗಳು ಅದನ್ನೆ ತೋರಿಸುತ್ತಿವೆ. ಮಾಧ್ಯಮಗಳು ಜನರ ನಾಡಿ ಮಿಡಿತ ಗೊತ್ತಿಲ್ಲದೆ ಮಾತನಾಡುತ್ತವೆ. ಇತ್ತಿಚೆಗೆ ನಡೆದ ಉಪ ಚುನಾವಣೆಯಲ್ಲಿ ಮತ್ತು ಈ ಹಿಂದಿನ ವಿಧಾನಸಭೆ ಚುನಾವಣೆ ಸಮಯದಲ್ಲಿ ಕೂಡಾ ಮಾಧ್ಯಮಗಳು ತಪ್ಪಾಗಿ ಹೇಳಿತ್ತು. ಸರ್ಕಾರದ ವಿರುದ್ಧ ಬರಿ ಅಪಪ್ರಚಾರ ಮಾಡಲಾಗುತ್ತಿತ್ತು. ಆದರೆ ಜನರಿಗೆ ಸತ್ಯ ಏನೆಂದು ಗೊತ್ತಾಯಿತು. ಹಾಗಾಗಿಯೆ ಕುಟಿಲ ಮತ್ತು ದುಷ್ಟ ಪ್ರಯತ್ನಗಳು ಈಡೇರಿಲ್ಲ” ಎಂದು ಅವರು ಹೇಳಿದರು. ಬೇರೆ ಮಾಧ್ಯಮಗಳಿಗೆ

“ಮಾಧ್ಯಮಗಳು ಜನರಿಗೆ ಸತ್ಯವನ್ನು ಮುಟ್ಟಿಸುವ ಪ್ರಯತ್ನ ಮಾಡಬೇಕು. ನಮ್ಮ ಐದು ಗ್ಯಾರೆಂಟಿಗಳಿಂದ ಜನರಿಗೆ ಉಪಯೋಗ ಆಗುತ್ತಿದೆ ಅಲ್ಲವೆ? ಕೆಲವೊಂದು ಮಾಧ್ಯಮಗಳು ಜನರಿಗೆ ಅದು ಉಪಯೋಗ ಆಗುತ್ತಿವೆ ಎಂದು ಹೇಳುತ್ತಿವೆ, ಆದರೆ ಕೆಲವೊಂದು ಮಾಧ್ಯಮಗಳು ಸುಳ್ಳು ಹೇಳುತ್ತಿವೆ. ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ತುಂಬದೆ ಹೋದರೆ ಅವರರಿಗೆ ರಾಜಕೀಯ ಶಕ್ತಿ ಬರಲು ಸಾಧ್ಯವಿಲ್ಲ.” ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂಓದಿ: ಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ – ದಿ ವೈರ್ ಸಂಪಾದಕಿ ಸೀಮಾ ಚಿಸ್ತಿ ಪ್ರಶ್ನೆ

ಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ – ದಿ ವೈರ್ ಸಂಪಾದಕಿ ಸೀಮಾ ಚಿಸ್ತಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...