Homeಮುಖಪುಟಪ್ರಜಾಪ್ರಭುತ್ವ, ಸಂವಿಧಾನ, ಸತ್ಯವನ್ನು ರಕ್ಷಿಸಲು ಮಾಧ್ಯಮ ವಿಫಲವಾಗಿದೆ: ನ್ಯಾ. ಕುರಿಯನ್ ಜೋಸೆಫ್

ಪ್ರಜಾಪ್ರಭುತ್ವ, ಸಂವಿಧಾನ, ಸತ್ಯವನ್ನು ರಕ್ಷಿಸಲು ಮಾಧ್ಯಮ ವಿಫಲವಾಗಿದೆ: ನ್ಯಾ. ಕುರಿಯನ್ ಜೋಸೆಫ್

- Advertisement -
- Advertisement -

‘ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಸತ್ಯವನ್ನು ರಕ್ಷಿಸುವಲ್ಲಿ ಮಾಧ್ಯಮಗಳು ವಿಫಲವಾಗಿವೆ’ ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕ್ಯಾಂಪೇನ್ ಫಾರ್ ಜುಡಿಷಿಯಲ್ ಅಕೌಂಟೆಬಿಲಿಟಿ ಅಂಡ್ ರಿಫಾರ್ಮ್ಸ್ (ಸಿಜೆಎಆರ್) ದೆಹಲಿಯಲ್ಲಿ ಆಯೋಜಿಸಿದ್ದ ಸೆಮಿನಾರ್‌ನಲ್ಲಿ ಮಾತನಾಡಿದ ಅವರು, “ಸತ್ಯವನ್ನು ನಿರ್ಭೀತಿಯಿಂದ ಹೇಳಲು ಸಾಧ್ಯವಾಗುತ್ತಿಲ್ಲ. ಪ್ರಜಾಪ್ರಭುತ್ವಕ್ಕೆ ದೊಡ್ಡ ಹೊಡೆತವೆಂದರೆ ಸಂವಿಧಾನದ ನಾಲ್ಕನೇ ಸ್ತಂಭವು ದೇಶವನ್ನು ವಿಫಲಗೊಳಿಸಿದೆ” ಎಂದಿದ್ದಾರೆ.

“ಈ ಸಮ್ಮೇಳನಕ್ಕೂ ಮುನ್ನ ನಾವು ಕೆಲವು ವಿಷಯಗಳನ್ನು ಚರ್ಚಿಸಿದ್ದೇವೆ. ಆ ಎಲ್ಲಾ ವಿಷಯಗಳು ಕೆಲ ಡಿಜಿಟಲ್ ಮಾಧ್ಯಮಗಳು ಹೊರತುಪಡಿಸಿದರೆ, ಇತರ ಯಾವುದಾದರು ಮಾಧ್ಯಮಗಳಲ್ಲಿ ಪ್ರಕಟಗೊಂಡಿವೆಯಾ? ಯಾವುದಾದರು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಅವುಗಳನ್ನು ನೋಡಲು ಸಾಧ್ಯವಿದೆಯಾ?” ಎಂದು ಪ್ರಶ್ನಿಸಿದ್ದಾರೆ.

“ನಿರ್ಭೀತಿಯಿಂದ ಸತ್ಯ ಹೇಳಲು ಆಗುತ್ತಿಲ್ಲ. ಪ್ರಜಾಪ್ರಭುತ್ವಕ್ಕೆ ದೊಡ್ಡ ಹೊಡೆತವೆಂದರೆ ನಾಲ್ಕನೇ ಸ್ತಂಭವು ದೇಶವನ್ನು ವಿಫಲಗೊಳಿಸಿದೆ. ಮೊದಲ ಮೂರು ಸ್ತಂಭಗಳ ಬಗ್ಗೆ ಮರೆತುಬಿಡಿ. ನಾಲ್ಕನೇ ಸ್ತಂಭ ಮಾಧ್ಯಮವಾಗಿದ್ದು, ಅದು ಪ್ರಜಾಪ್ರಭುತ್ವವನ್ನು, ಸಂವಿಧಾನವನ್ನು ರಕ್ಷಿಸುವಲ್ಲಿ, ಸತ್ಯವನ್ನು ಸಮರ್ಥಿಸುವಲ್ಲಿ ವಿಫಲವಾಗಿದೆ” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ.

‘ಶಿಳ್ಳೆ ಹೊಡೆಯುವವರು’ ಪ್ರಸ್ತುತ ಭರವಸೆ ಎಂದ ಅವರು, ‘ಐದನೇ ಸ್ತಂಭ’ ಎಂದು ಕರೆಯಲ್ಪಡುವ ಶಿಳ್ಳೆ ಹೊಡೆಯುವವರನ್ನು(ವಿಸ್ಲ್-ಬ್ಲೋವರ್‌) ರಕ್ಷಿಸಲು ಕರೆ ನೀಡಿದ್ದಾರೆ.

“ಇತ್ತೀಚೆಗೆ ಶಿಳ್ಳೆ ಹೊಡೆಯಲೂ ಸಾಧ್ಯವಾಗುತ್ತಿಲ್ಲ. ಬಹುಶ ಕೋವಿಡ್ ಬಳಿಕ ಶ್ವಾಸಕೋಶಗಳ ಮೇಲೆ ಪರಿಣಾಮ ಬೀರಿರಬಹುದು. ಇಂದು ದೇಶದಲ್ಲಿ ಶ್ವಾಸಕೋಶಗಳಿಗೆ ಹಾನಿಯಾಗಿದೆ. ಹಾಗಾಗಿ, ಯಾರೂ ಶಿಳ್ಳೆ ಹೊಡೆಯುತ್ತಿಲ್ಲ. ಇದು ತುಂಬಾ ಅಪಾಯಕಾರಿ ಬೆಳವಣಿಗೆಯಾಗಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ನಾವು ಬೆಂಬಲಿಸಬೇಕು, ಎದ್ದು ನಿಲ್ಲಬೇಕು, ಮಾತನಾಡಬೇಕು, ಜಾಗರೂಕರಾಗಿರಬೇಕು. ದೇಶದಲ್ಲಿ ಉಳಿದಿರುವ ಕೆಲವೇ ಕೆಲವು ಶಿಳ್ಳೆ ಹೊಡೆಯುವವರಲ್ಲಿ ನಾವೂ ಒಂದಾಗಬೇಕು” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ: ತೀರ್ಪು ಪ್ರಶ್ನಿಸಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...