Homeಮುಖಪುಟಪ್ರಜಾಪ್ರಭುತ್ವ, ಸಂವಿಧಾನ, ಸತ್ಯವನ್ನು ರಕ್ಷಿಸಲು ಮಾಧ್ಯಮ ವಿಫಲವಾಗಿದೆ: ನ್ಯಾ. ಕುರಿಯನ್ ಜೋಸೆಫ್

ಪ್ರಜಾಪ್ರಭುತ್ವ, ಸಂವಿಧಾನ, ಸತ್ಯವನ್ನು ರಕ್ಷಿಸಲು ಮಾಧ್ಯಮ ವಿಫಲವಾಗಿದೆ: ನ್ಯಾ. ಕುರಿಯನ್ ಜೋಸೆಫ್

- Advertisement -
- Advertisement -

‘ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಸತ್ಯವನ್ನು ರಕ್ಷಿಸುವಲ್ಲಿ ಮಾಧ್ಯಮಗಳು ವಿಫಲವಾಗಿವೆ’ ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕ್ಯಾಂಪೇನ್ ಫಾರ್ ಜುಡಿಷಿಯಲ್ ಅಕೌಂಟೆಬಿಲಿಟಿ ಅಂಡ್ ರಿಫಾರ್ಮ್ಸ್ (ಸಿಜೆಎಆರ್) ದೆಹಲಿಯಲ್ಲಿ ಆಯೋಜಿಸಿದ್ದ ಸೆಮಿನಾರ್‌ನಲ್ಲಿ ಮಾತನಾಡಿದ ಅವರು, “ಸತ್ಯವನ್ನು ನಿರ್ಭೀತಿಯಿಂದ ಹೇಳಲು ಸಾಧ್ಯವಾಗುತ್ತಿಲ್ಲ. ಪ್ರಜಾಪ್ರಭುತ್ವಕ್ಕೆ ದೊಡ್ಡ ಹೊಡೆತವೆಂದರೆ ಸಂವಿಧಾನದ ನಾಲ್ಕನೇ ಸ್ತಂಭವು ದೇಶವನ್ನು ವಿಫಲಗೊಳಿಸಿದೆ” ಎಂದಿದ್ದಾರೆ.

“ಈ ಸಮ್ಮೇಳನಕ್ಕೂ ಮುನ್ನ ನಾವು ಕೆಲವು ವಿಷಯಗಳನ್ನು ಚರ್ಚಿಸಿದ್ದೇವೆ. ಆ ಎಲ್ಲಾ ವಿಷಯಗಳು ಕೆಲ ಡಿಜಿಟಲ್ ಮಾಧ್ಯಮಗಳು ಹೊರತುಪಡಿಸಿದರೆ, ಇತರ ಯಾವುದಾದರು ಮಾಧ್ಯಮಗಳಲ್ಲಿ ಪ್ರಕಟಗೊಂಡಿವೆಯಾ? ಯಾವುದಾದರು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಅವುಗಳನ್ನು ನೋಡಲು ಸಾಧ್ಯವಿದೆಯಾ?” ಎಂದು ಪ್ರಶ್ನಿಸಿದ್ದಾರೆ.

“ನಿರ್ಭೀತಿಯಿಂದ ಸತ್ಯ ಹೇಳಲು ಆಗುತ್ತಿಲ್ಲ. ಪ್ರಜಾಪ್ರಭುತ್ವಕ್ಕೆ ದೊಡ್ಡ ಹೊಡೆತವೆಂದರೆ ನಾಲ್ಕನೇ ಸ್ತಂಭವು ದೇಶವನ್ನು ವಿಫಲಗೊಳಿಸಿದೆ. ಮೊದಲ ಮೂರು ಸ್ತಂಭಗಳ ಬಗ್ಗೆ ಮರೆತುಬಿಡಿ. ನಾಲ್ಕನೇ ಸ್ತಂಭ ಮಾಧ್ಯಮವಾಗಿದ್ದು, ಅದು ಪ್ರಜಾಪ್ರಭುತ್ವವನ್ನು, ಸಂವಿಧಾನವನ್ನು ರಕ್ಷಿಸುವಲ್ಲಿ, ಸತ್ಯವನ್ನು ಸಮರ್ಥಿಸುವಲ್ಲಿ ವಿಫಲವಾಗಿದೆ” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ.

‘ಶಿಳ್ಳೆ ಹೊಡೆಯುವವರು’ ಪ್ರಸ್ತುತ ಭರವಸೆ ಎಂದ ಅವರು, ‘ಐದನೇ ಸ್ತಂಭ’ ಎಂದು ಕರೆಯಲ್ಪಡುವ ಶಿಳ್ಳೆ ಹೊಡೆಯುವವರನ್ನು(ವಿಸ್ಲ್-ಬ್ಲೋವರ್‌) ರಕ್ಷಿಸಲು ಕರೆ ನೀಡಿದ್ದಾರೆ.

“ಇತ್ತೀಚೆಗೆ ಶಿಳ್ಳೆ ಹೊಡೆಯಲೂ ಸಾಧ್ಯವಾಗುತ್ತಿಲ್ಲ. ಬಹುಶ ಕೋವಿಡ್ ಬಳಿಕ ಶ್ವಾಸಕೋಶಗಳ ಮೇಲೆ ಪರಿಣಾಮ ಬೀರಿರಬಹುದು. ಇಂದು ದೇಶದಲ್ಲಿ ಶ್ವಾಸಕೋಶಗಳಿಗೆ ಹಾನಿಯಾಗಿದೆ. ಹಾಗಾಗಿ, ಯಾರೂ ಶಿಳ್ಳೆ ಹೊಡೆಯುತ್ತಿಲ್ಲ. ಇದು ತುಂಬಾ ಅಪಾಯಕಾರಿ ಬೆಳವಣಿಗೆಯಾಗಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ನಾವು ಬೆಂಬಲಿಸಬೇಕು, ಎದ್ದು ನಿಲ್ಲಬೇಕು, ಮಾತನಾಡಬೇಕು, ಜಾಗರೂಕರಾಗಿರಬೇಕು. ದೇಶದಲ್ಲಿ ಉಳಿದಿರುವ ಕೆಲವೇ ಕೆಲವು ಶಿಳ್ಳೆ ಹೊಡೆಯುವವರಲ್ಲಿ ನಾವೂ ಒಂದಾಗಬೇಕು” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ: ತೀರ್ಪು ಪ್ರಶ್ನಿಸಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...