Homeಮುಖಪುಟಪ್ರಜಾಪ್ರಭುತ್ವ, ಸಂವಿಧಾನ, ಸತ್ಯವನ್ನು ರಕ್ಷಿಸಲು ಮಾಧ್ಯಮ ವಿಫಲವಾಗಿದೆ: ನ್ಯಾ. ಕುರಿಯನ್ ಜೋಸೆಫ್

ಪ್ರಜಾಪ್ರಭುತ್ವ, ಸಂವಿಧಾನ, ಸತ್ಯವನ್ನು ರಕ್ಷಿಸಲು ಮಾಧ್ಯಮ ವಿಫಲವಾಗಿದೆ: ನ್ಯಾ. ಕುರಿಯನ್ ಜೋಸೆಫ್

- Advertisement -
- Advertisement -

‘ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಸತ್ಯವನ್ನು ರಕ್ಷಿಸುವಲ್ಲಿ ಮಾಧ್ಯಮಗಳು ವಿಫಲವಾಗಿವೆ’ ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕ್ಯಾಂಪೇನ್ ಫಾರ್ ಜುಡಿಷಿಯಲ್ ಅಕೌಂಟೆಬಿಲಿಟಿ ಅಂಡ್ ರಿಫಾರ್ಮ್ಸ್ (ಸಿಜೆಎಆರ್) ದೆಹಲಿಯಲ್ಲಿ ಆಯೋಜಿಸಿದ್ದ ಸೆಮಿನಾರ್‌ನಲ್ಲಿ ಮಾತನಾಡಿದ ಅವರು, “ಸತ್ಯವನ್ನು ನಿರ್ಭೀತಿಯಿಂದ ಹೇಳಲು ಸಾಧ್ಯವಾಗುತ್ತಿಲ್ಲ. ಪ್ರಜಾಪ್ರಭುತ್ವಕ್ಕೆ ದೊಡ್ಡ ಹೊಡೆತವೆಂದರೆ ಸಂವಿಧಾನದ ನಾಲ್ಕನೇ ಸ್ತಂಭವು ದೇಶವನ್ನು ವಿಫಲಗೊಳಿಸಿದೆ” ಎಂದಿದ್ದಾರೆ.

“ಈ ಸಮ್ಮೇಳನಕ್ಕೂ ಮುನ್ನ ನಾವು ಕೆಲವು ವಿಷಯಗಳನ್ನು ಚರ್ಚಿಸಿದ್ದೇವೆ. ಆ ಎಲ್ಲಾ ವಿಷಯಗಳು ಕೆಲ ಡಿಜಿಟಲ್ ಮಾಧ್ಯಮಗಳು ಹೊರತುಪಡಿಸಿದರೆ, ಇತರ ಯಾವುದಾದರು ಮಾಧ್ಯಮಗಳಲ್ಲಿ ಪ್ರಕಟಗೊಂಡಿವೆಯಾ? ಯಾವುದಾದರು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಅವುಗಳನ್ನು ನೋಡಲು ಸಾಧ್ಯವಿದೆಯಾ?” ಎಂದು ಪ್ರಶ್ನಿಸಿದ್ದಾರೆ.

“ನಿರ್ಭೀತಿಯಿಂದ ಸತ್ಯ ಹೇಳಲು ಆಗುತ್ತಿಲ್ಲ. ಪ್ರಜಾಪ್ರಭುತ್ವಕ್ಕೆ ದೊಡ್ಡ ಹೊಡೆತವೆಂದರೆ ನಾಲ್ಕನೇ ಸ್ತಂಭವು ದೇಶವನ್ನು ವಿಫಲಗೊಳಿಸಿದೆ. ಮೊದಲ ಮೂರು ಸ್ತಂಭಗಳ ಬಗ್ಗೆ ಮರೆತುಬಿಡಿ. ನಾಲ್ಕನೇ ಸ್ತಂಭ ಮಾಧ್ಯಮವಾಗಿದ್ದು, ಅದು ಪ್ರಜಾಪ್ರಭುತ್ವವನ್ನು, ಸಂವಿಧಾನವನ್ನು ರಕ್ಷಿಸುವಲ್ಲಿ, ಸತ್ಯವನ್ನು ಸಮರ್ಥಿಸುವಲ್ಲಿ ವಿಫಲವಾಗಿದೆ” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ.

‘ಶಿಳ್ಳೆ ಹೊಡೆಯುವವರು’ ಪ್ರಸ್ತುತ ಭರವಸೆ ಎಂದ ಅವರು, ‘ಐದನೇ ಸ್ತಂಭ’ ಎಂದು ಕರೆಯಲ್ಪಡುವ ಶಿಳ್ಳೆ ಹೊಡೆಯುವವರನ್ನು(ವಿಸ್ಲ್-ಬ್ಲೋವರ್‌) ರಕ್ಷಿಸಲು ಕರೆ ನೀಡಿದ್ದಾರೆ.

“ಇತ್ತೀಚೆಗೆ ಶಿಳ್ಳೆ ಹೊಡೆಯಲೂ ಸಾಧ್ಯವಾಗುತ್ತಿಲ್ಲ. ಬಹುಶ ಕೋವಿಡ್ ಬಳಿಕ ಶ್ವಾಸಕೋಶಗಳ ಮೇಲೆ ಪರಿಣಾಮ ಬೀರಿರಬಹುದು. ಇಂದು ದೇಶದಲ್ಲಿ ಶ್ವಾಸಕೋಶಗಳಿಗೆ ಹಾನಿಯಾಗಿದೆ. ಹಾಗಾಗಿ, ಯಾರೂ ಶಿಳ್ಳೆ ಹೊಡೆಯುತ್ತಿಲ್ಲ. ಇದು ತುಂಬಾ ಅಪಾಯಕಾರಿ ಬೆಳವಣಿಗೆಯಾಗಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ನಾವು ಬೆಂಬಲಿಸಬೇಕು, ಎದ್ದು ನಿಲ್ಲಬೇಕು, ಮಾತನಾಡಬೇಕು, ಜಾಗರೂಕರಾಗಿರಬೇಕು. ದೇಶದಲ್ಲಿ ಉಳಿದಿರುವ ಕೆಲವೇ ಕೆಲವು ಶಿಳ್ಳೆ ಹೊಡೆಯುವವರಲ್ಲಿ ನಾವೂ ಒಂದಾಗಬೇಕು” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ: ತೀರ್ಪು ಪ್ರಶ್ನಿಸಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...