HomeUncategorizedಸುದ್ದಿಯೇನೇ ಮನೋಲ್ಲಾಸಿನಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-1

ಸುದ್ದಿಯೇನೇ ಮನೋಲ್ಲಾಸಿನಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-1

- Advertisement -
- Advertisement -

ಆವಾಗಾವಾಗ ಕೆಲ ವ್ಯಕ್ತಿಗಳು, ಸ್ಥಳಗಳು, ವಿಷಯಗಳು ನಮ್ಮ ಮಾಧ್ಯಮಗಳಿಗೆ ಪ್ರಿಯವಾಗಿಬಿಡ್ತಾವ. ಬರೆ ಬರೆ ಅವೇ ಸುದ್ದಿ ಬರಲಿಕ್ಕೆ ಹತ್ತಿಬಿಡ್ತಾವು. ಒಬ್ಬರು ಬರಿತಾರ ಅಂತ ಇನ್ನೊಬ್ಬರು ಬರಿತಾರ. ಟ್ರೆಂಡ್ ಪ್ರಕಾರ ಸುದ್ದಿ ಮಾಡದೇ ಹೋದರೆ ಯಾರು ಏನು ತಿಳ್ಕೋತಾರೋ ಅಂತ ಎಲ್ಲಾರೂ ಕದ್ದು ಮುಚ್ಚಿ ಸುರುಮಾಡಿ ಆಮ್ಯಾಲೆ ಖುಲ್ಲಂ ಖುಲ್ಲಾ ಆಗಿ ಬರಿತಾರ.

ಇಂಥವರಿಗೆ ಮೀಡಿಯಾ ಡಾರ್ಲಿಂಗ್ ಅಂತ ಕರಿತಾರ. ಕನ್ನಡದೊಳಗ ಮಾಧ್ಯಮ ನಲ್ಲ ಅನ್ನಬಹುದೇನೋ. ಈಗ ಸದ್ಯಕ್ಕ ರಾಷ್ಟ್ರ ಮಟ್ಟದ ಮಾಧ್ಯಮ ನಲ್ಲ ಯಾರಪಾ ಅಂದ್ರ ಇಕ್ಬಾಲ್ ಸಿಂಗ್ ಚಹಲ್. ಮುಂಬೈ ಶಹರದೊಳಗ ಕೋವಿಡ್ ಮಹಾಮಾರಿಯನ್ನ ನಿಯಂತ್ರಣ ಮಾಡಿದ ಕೀರ್ತಿ ಇವರಿಗೆ ಹೋಗ್ತದ.

ಮೊದಲಿಗೆ ಈ ಮುಂಬಯಿ ಮೂಲದ ಐಎಎಸ್ ಅಧಿಕಾರಿಯ ಬಗ್ಗೆ ಯಾರಿಗೂ ಗೊತ್ತಿರಲಿಲ್ಲಾ. ಎಂದಿನಂತೆ ನಮ್ಮ ರಾಷ್ಟ್ರಮಟ್ಟದ ಮಾಧ್ಯಮಗಳು ಅವರ ಕೆಲಸ ನೋಡಿದ್ದಿಲ್ಲಾ, ಸುದ್ದಿ ಮಾಡಿದ್ದಿಲ್ಲ. ಅವ್ರ ಕೆಲಸದ ಬಗ್ಗೆ ಅಂತರ ರಾಷ್ಟ್ರೀಯ ಮಾಧ್ಯಮದೊಳಗ ಬಂದಮ್ಯಾಲೆ ಯಾವನಲೇ ಇವ, ನಮಗ ಗೊತ್ತಿರಲಾರದ ಹಂಗ ಮುಂಬೈದಾಗ್ ಇರೋವ, ಅಂತ್ ಹೇಳಿ, ನಮ್ಮ ಪತ್ರಿಕೆಯವರು ಆ ಅಧಿಕಾರಿಯನ್ನ ಹುಡುಕಿಕೊಂಡು ಹೋಗಿ, ಮಾತಾಡಿ, ಸುದ್ದಿ ಮಾಡಿದರು. ಅದನ್ನು ನೋಡಿದ ಪಂಥ ಪ್ರಧಾನ ಸೇವಕರು ಹಾಗು ಅರ್ಥ ಸಚಿವರ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡೋ ಖಾಸಗಿ ಕಂಪನಿಯ ಪ್ರಸಾಧನ ತಜ್ಞರು ಆ ಸುದ್ದಿಯ ಜಾಡನ್ನು ಆಧರಿಸಿ ಪ್ರಧಾನ ಮಂತ್ರಿಯವರು, ಹಣಕಾಸು ಸಚಿವರು ಇಕ್ಬಾಲ್ ಸಿಂಗ್ ಅವರಿಗೆ ಅಭಿನಂದನೆ ಕೋರಿದ ಹಾಗೆ ಟ್ವೀಟ್ ಮಾಡಿದರು. ಆಮ್ಯಾಲೆ ಸುರುವಾತು, ಸುದ್ದಿಯ ಮ್ಯಾಲೆ ಸುದ್ದಿ. ಅದು ಸೋಶಿಯಲ್ ಮೀಡಿಯಾದೊಳಗೂ ಬಂತು, ಆಂಟಿಸೋಶಿಯಲ್ ಮೀಡಿಯಾದೊಳಗೂ ಬಂತು. ಕೆಲವರು ಇದನ್ನು ಮುಂಬೈ ಯಶಸ್ಸು ಅಂತ ಬರೆದರು, ಇನ್ನು ಕೆಲವರು ಮಹಾರಾಷ್ಟ್ರದ ಹೆಮ್ಮೆಯ ಪುತ್ರ ಅಂತ ಹಂಚಿಕೊಂಡರು. ಇನ್ನೂ ಕೆಲವರು ‘ಇಷ್ಟು ಒಳ್ಳೆ ಮನುಷ್ಯಾ ಇವಾ ಆಗಿದ್ದರ, ಇವನ ಹೆಸರು ಇಕ್ಬಾಲ್ ಅಂತ್ ಯಾಕ್ ಐತಿ? ಅವ್ರ ಅಪ್ಪಾ ಅವ್ವಗ ಹೆಸರು ಇಡುವ ಮುಂದ ತಿಳಿಯಲಿಲ್ಲೇನೋ ಅಂತ ಮುಗ್ಧ ಪ್ರಶ್ನೆ ಕೇಳಿಕೊಂಡರು.

ನಮ್ಮನ್ನು ನೋಡಿ ನಗುತ್ತಿದ್ದರೆ, ‘ಮುಂಬೈ ಮಾದರಿ’ಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ಇಷ್ಟಾಗಿಯೂ ಈ ಅಧಿಕಾರಿ ಮಾಡಿದ ಮ್ಯಾಜಿಕ್ ಏನು? ಕೋವಿಡ್ ರೋಗಿಗಳನ್ನು ಅವರವರ ಮನೆಬೀದಿ-ಬಡಾವಣೆಗಳಲ್ಲಿಯೇ ಪತ್ತೆ ಮಾಡಿ, ಅದರಲ್ಲಿ ಶೇ.90 ಜನ ತಮ್ಮ ತಮ್ಮ ಮನೆಯಲ್ಲಿಯೇ ಉಪಚಾರ ಪಡೆದು, ಇತರರು ಆಯಾ ವಾರ್ಡ್‌ನ ಕೋವಿಡ್ ಕಾಳಜಿ ಕೇಂದ್ರದೊಳಗ ಇರೋ ಹಂಗ ಮಾಡಿ, ಅದರೊಳಗೆ ಭಾರಿ ಭಯಾನಕ ಪ್ರಕರಣ ಮಾತ್ರ ಅಸ್ಪತ್ರೆಗೆ ಹೋಗೋ ಹಂಗ್ ನೋಡಿಕೊಂಡುಬಿಟ್ಟರು. ತಮ್ಮ ಕಚೇರಿಯ ವಾತ-ಪಿತ್ತ ಅನುಕೂಲಿತ ಕುರ್ಚೆ ಬಿಟ್ಟು ಏಳದ ಸರಕಾರಿ ಅಧಿಕಾರಿವೈದ್ಯರನ್ನ ರೋಗಿಗಳ ಮನೆಗೆ ಹೋಗುವ ಹಂಗ ಮಾಡಿದರು. ರಾಜ್ಯ-ಜಿಲ್ಲೆತಾಲೂಕು-ಗ್ರಾಮಮಟ್ಟದ ಕೆಲಸಗಳು ಆಯಾ ಮಟ್ಟದಲ್ಲಿಯೇ ಆಗ್ಬೇಕು. ಅರೋಗ್ಯ ಸೇವೆ ಸಹಿತ, ಗ್ರಾಮಮಟ್ಟದಿಂದ ಆರಂಭವಾಗಿ ತಾಲೂಕು-ಜಿಲ್ಲೆರಾಜ್ಯಮಟ್ಟಗಳಿಗೆ ಮುಟ್ಟಬೇಕು, ಅನಗತ್ಯವಾಗಿ ಯಾವ ಹಳ್ಳಿಯ ರೋಗಿಯೂ ಸಹಿತ ಜಿಲ್ಲೆ ಅಥವಾ ರಾಜ್ಯ ಮಟ್ಟದ ಆಸ್ಪತ್ರೆಗೆ ಹೋಗೋ ಪ್ರಸಂಗ ಬರಬಾರದು ಅಂತ ನೋಡಿಕೊಂಡರು. ನಮ್ಮ ರಾಜ್ಯದಲ್ಲೇ ಇದು ಸಾಧ್ಯ ಅದ ಏನು? ಹಳ್ಳಿಯ ಆಸ್ಪತ್ರೆಯೊಳಗ ರೈತರಿಗೆ ಒಂದು ಹಾವುಚೇಳು ಕಚ್ಚಿದರ ಕೊಡೋ ಔಷಧ ಇರೋದಿಲ್ಲ. ಎಲ್ಲದಕ್ಕೂ ದೊಡ್ಡಾಸ್ಪತ್ರೆಗೆ ಕಳಿಸೋ ದೊಡ್ಡ ರೋಗ ಹಳ್ಳಿ-ತಾಲೂಕು-ಜಿಲ್ಲಾ ಆಸ್ಪತ್ರೆ ವೈದ್ಯರಿಗೆ ಇರತದ.

ನಮ್ಮ ಸರಕಾರ ರೋಗಿಗಳನ್ನ ಗುಣ ಮಾಡೋ ಮೊದಲು ಇಂಥಹ ಆಸ್ಪತ್ರೆ ಹಾಗೂ ವೈದ್ಯರಿಗೆ ಔಷಧಿ ಕೊಡಬೇಕು. ‘ಎಲ್ಲಾ ರೋಗಕ್ಕೂ ಬೆಂಗಳೂರಿನಾಗ ಮಾತ್ರ ಔಷಧಿ ಅಂತ ನಂಬಿರುವ ಅಧಿಕಾರಿಮಂತ್ರಿಗಳನ್ನು ಮೊದಲಿಗೆ ಹಳ್ಳಿಯ ಆಸ್ಪತ್ರೆ ನೋಡಲಿಕ್ಕೆ ಕಳಿಸಬೇಕು.

ಇಲ್ಲೇ ಒಂದು ಸ್ವಲ್ಪ ಪಕ್ಕಕ್ಕೆ ಸರಿದು ಕರ್ಮಸಿದ್ಧಾಂತ ನೆನಪು ಮಾಡಿಕೊಳ್ಳೋಣ. ಭಾರತೀಯ ದರ್ಶನದ ಅನುಸಾರ ಒಂದು ಕೆಲಸವನ್ನು ‘ಯಾರು ಮಾಡಿದರು? ಅನ್ನುವುದು ಮುಖ್ಯ ಅಲ್ಲ. ‘ಯಾವ ಕೆಲಸ ಆತು?, ಅದರಿಂದ ಯಾರಿಗೆ ಅನುಕೂಲ ಆತು?, ಯಾರಿಗೆ ಅನಾನುಕೂಲ ಆತು? ಅನ್ನೋದು ಮುಖ್ಯ.

ಆದರೆ, ಪ್ರತಿ ಸಾರಿ ಆಗುವಂತೆ, ನಮ್ಮ ಮಾಧ್ಯಮಗಳು ಯಾರನ್ನೋ ಹೀರೋ ಮಾಡಲಿಕ್ಕೆ ಹೋಗಿ ‘ಯಾರು ಅನ್ನುವುದನ್ನು ದೊಡ್ಡದು ಮಾಡಿ, ‘ಏನು ಅನ್ನುವುದನ್ನು ಸಣ್ಣದು ಮಾಡಿಬಿಟ್ಟವು.

ಇಕ್ಬಾಲ್ ಸಿಂಗ್ ಅವರು ಮಾಡಿದ ಕೆಲಸ ಯಾವುದು? ಅದರ ಹಿಂದಿನ ನೀತಿ-ನಿಯಮ ಯಾವುವು? ಅವುಗಳಿಂದ ಬೇರೆ ಯಾರು ಯಾವ ಪಾಠ ಕಲಿಯಬಹುದು? ಮುಂಬೈಯಲ್ಲಿ ಸಲ್ಲಿದ್ದು ಇನ್ನೆಲ್ಲಿ ಸಲ್ಲುವುದು ಅನ್ನುವುದನ್ನು ವಿಚಾರ ಮಾಡಲಿಕ್ಕೆ ಹೋಗಲೇ ಇಲ್ಲ.

ಇಷ್ಟಕ್ಕೂ ಅವರು ಮಾಡಿದ್ದೂ ಮ್ಯಾಜಿಕ್ ಅಲ್ಲ. ಅದು ನಮ್ಮ ಸಂವಿಧಾನದ ಮೂಲ ತತ್ವ ಗಳಲ್ಲಿ ಒಂದು. ಅದನ್ನು ಎಲ್ಲಾ ಅಧಿಕಾರಿಗಳು, ರಾಜಕಾರಣಿಗಳು, ನೀತಿ ನಿರೂಪಕರು, ಜಾರಿ ಮಾಡುವ ಸಿಬ್ಬಂದಿಗಳು, ಎಲ್ಲರೂ ಪಾಲಿಸಲೇಬೇಕಾದದ್ದು. ಈ ದಂಡಪಿಂಡಗಳು ಉಪಯೋಗಿಸಬೇಕಾಗಿದ್ದ, ಆದರೆ ಬಳಸದೆ ಬಿಟ್ಟ ಮಂತ್ರ ದಂಡದ ಹೆಸರು ‘ವಿಕೇಂದ್ರೀಕರಣ.

‘ಹಿಂಗ ಅಂದ್ರ ಅದರಾಗ ಹೊಸಾದು ಏನು ಐತಿ? ನಮ್ಮ ಮಧ್ಯದ ‘ಗೋಡ್ಬೋಲೆ ಅಂದ್ರೆ ಬರೀ ಒಳ್ಳೊಳ್ಳೆ ಮಾತಾಡುವ ಕೆ.ಎಸ್ ಈಶ್ವರಪ್ಪ ಅವರು ಹಿರೆತನ ಮಾಡುವ ಸಚಿವಾಲಯ ಅದೇ ಅಲ್ಲವೇ? ವಿಕೇಂದ್ರೀಕರಣ ಅಂದ್ರೆ ಈ ಉದ್ಯೋಗ ಖಾತ್ರಿ ಯೋಜನೆ, ಗ್ರಾಮ ಪಂಚಾಯತಿಯವರು ಮನೆ ಹಂಚುವುದು, ಊರ ಹೊರಗಡೆ ದೊಡ್ಡ ದೊಡ್ಡ ಸ್ವಾಗತ ಕಮಾನು ಕಟ್ಟುವುದು, ಅಷ್ಟೇ ಅಲ್ಲವೇ? ಅಂತ ನೀವು ಕೇಳಬಹುದು.

ಇದು ವಿಕೇಂದ್ರೀಕರಣ ಅನ್ನುವ ವಿಚಾರದ ಕೇವಲ ಒಂದು ಭಾಗ ಅಷ್ಟೇ. ಇದನ್ನು ಹಂತಹಂತವಾಗಿ, ಸರಿಯಾಗಿ ತಿಳಿದುಕೊಳ್ಳೋಣ. ಇದರ ಮೊದಲ ಭಾಗವಾಗಿ ಬೇರೆ ಬೇರೆ ದೇಶಗಳಲ್ಲಿ, ಅಂದ್ರೆ ಉದ್ಯೋಗ ಖಾತ್ರಿಯಂಥಾ ಯೋಜನೆಗಳು ಇರಲಾರದ ದೇಶಗಳಲ್ಲಿ, ಮನೆ ಹಂಚಿಕೆ ಮಾಡದ, ಸ್ವಾಗತ ಕಮಾನು ಕಟ್ಟಲಾರದ ದೇಶಗಳಲ್ಲಿ ಈ ಪರಿಸ್ಥಿತಿ ಹೆಂಗ್ ಐತಿ? ಇದನ್ನ ನೋಡೋಣ.

ನಮ್ಮ ದೋಸ್ತ್ ಡೊನಾಲ್ಡ್ ಕೆಂಪಣ್ಣನವರು ಅಮೆರಿಕ ಅಧ್ಯಕ್ಷರಾಗಿದ್ದ ಕಾಲದಲ್ಲಿ ಒಂದು ಮುಂಜಾವಿನಲ್ಲಿ ಎದ್ದು ಕತ್ತಿ ಝಳಪಿಸಿ ಒಂದು ಮಾತು ಹೇಳಿದರು. ಇಂಗ್ಲಂಡ್‌ನಿಂದ ಬಂದ ವಲಸಿಗರು ಕಟ್ಟಿದ ಈ ದೇಶದಲ್ಲಿ, ಜಗತ್ತಿನ 220 ದೇಶಗಳಿಂದ ಕೆಲಸಗಾರರು ಬಂದು ದುಡಿದು ಶ್ರೀಮಂತಗೊಳಿಸಿದ ಅಮೆರಿಕ ದೇಶದ ಒಳಗೆ ೨೫ ದೇಶಗಳಿಂದ ವಲಸಿಗರು ಬರಬಾರದು ಅಂತ ನಾನು ಒಂದು ಅಭೂತಪೂರ್ವ ಆದೇಶ ಜಾರಿ ಮಾಡಿಬಿಡ್ತೇನೆ ಅಂತ ಹೂಂಕರಿಸಿದರು. ಆ ನನ್‌ಮಗ ಒಬಾಮ ಎಡಗೈನಲ್ಲಿ ಸಹಿ ಮಾಡ್ತಾ ಇದ್ದ, ಅದಕ್ಕೆ ನಾನು ಬಲಗೈನಲ್ಲಿ ಸಹಿ ಮಾಡಿಬಿಡ್ತೇನೆ, ಅಂತ ಮಾಡೇಬಿಟ್ಟರು.

ಅವು ಬಹುತೇಕ ಮುಸ್ಲಿಂ ದೇಶಗಳು ಇದ್ದವು. ಹೀಗಾಗಿ ಮುಸಲ್ಮಾನರ ಮೇಲೆ ದ್ವೇಷ ಇದ್ದ ಅನೇಕರಿಗೆ ಡೊನಾಲ್ಡ್ ಅಪ್ಪನವರು ರಾತ್ರೋ ರಾತ್ರಿ ಹೀರೋ ಆಗಿ ಬಿಟ್ಟರು. ಕೆಲವರು ಅತೀವ ಆಸಕ್ತರು ಉತ್ತರ ಭಾರತದ ಹಳ್ಳಿ ಒಂದರ ಹೆಸರು ಬದಲಿ ಮಾಡಿ ಡೊನಾಲ್ಡ್ ಅಪ್ಪನವರ ಹೆಸರು ಇಟ್ಟರು. ಅವರ ಹೆಸರಿನಲ್ಲಿ ಪೂಜೆ, ಪುನಸ್ಕಾರ ಎಲ್ಲಾ ಮಾಡಿಸಿಬಿಟ್ಟರು.

ಆದ್ರೆ ಈ ಆದೇಶ ಹೊರಬಿದ್ದ ಒಂದೇ ತಿಂಗಳಿನಲ್ಲಿ ಅದು ರದ್ದು ಆಗಿಹೋತು. ಅದನ್ನ ರದ್ದು ಮಾಡಿದ್ದೂ ಯಾರಪ ಅಂದರ, ಒಬ್ಬ ಜಿಲ್ಲಾ ನ್ಯಾಯಾಧೀಶರು. ಸರ್ವೋಚ್ಚ ನ್ಯಾಯಾಲಯ, ಉಚ್ಚ ನ್ಯಾಯಾಲಯದ ಜಡ್ಜ್ ಸಾಹೇಬರು ಅಲ್ಲ. ಬರೆ ಕೌಂಟಿ ಅಂದ್ರ ಜಿಲ್ಲಾ ನ್ಯಾಯಾಧೀಶರು. ಅನೇಕರ ಕನಸಿನ ನಾಡಾದ ಅಮೆರಿಕದಾಗ ಅಧಿಕಾರದ ಶಾಖೆ ಪ್ರಶಾಖೆಗಳು ಹೆಂಗ ಹಬ್ಬಿಕೊಂಡುಬಿಟ್ಟಾವು ಅನ್ನೋದು ಇದರಿಂದ ಸ್ವಲ್ಪ ತಿಳಿಯಬಹುದು.

ಅಲ್ಲವೇ ಮನೋಲ್ಲಾಸಿನಿ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...