HomeUncategorizedಸುದ್ದಿಯೇನೇ ಮನೋಲ್ಲಾಸಿನಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-1

ಸುದ್ದಿಯೇನೇ ಮನೋಲ್ಲಾಸಿನಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-1

- Advertisement -
- Advertisement -

ಆವಾಗಾವಾಗ ಕೆಲ ವ್ಯಕ್ತಿಗಳು, ಸ್ಥಳಗಳು, ವಿಷಯಗಳು ನಮ್ಮ ಮಾಧ್ಯಮಗಳಿಗೆ ಪ್ರಿಯವಾಗಿಬಿಡ್ತಾವ. ಬರೆ ಬರೆ ಅವೇ ಸುದ್ದಿ ಬರಲಿಕ್ಕೆ ಹತ್ತಿಬಿಡ್ತಾವು. ಒಬ್ಬರು ಬರಿತಾರ ಅಂತ ಇನ್ನೊಬ್ಬರು ಬರಿತಾರ. ಟ್ರೆಂಡ್ ಪ್ರಕಾರ ಸುದ್ದಿ ಮಾಡದೇ ಹೋದರೆ ಯಾರು ಏನು ತಿಳ್ಕೋತಾರೋ ಅಂತ ಎಲ್ಲಾರೂ ಕದ್ದು ಮುಚ್ಚಿ ಸುರುಮಾಡಿ ಆಮ್ಯಾಲೆ ಖುಲ್ಲಂ ಖುಲ್ಲಾ ಆಗಿ ಬರಿತಾರ.

ಇಂಥವರಿಗೆ ಮೀಡಿಯಾ ಡಾರ್ಲಿಂಗ್ ಅಂತ ಕರಿತಾರ. ಕನ್ನಡದೊಳಗ ಮಾಧ್ಯಮ ನಲ್ಲ ಅನ್ನಬಹುದೇನೋ. ಈಗ ಸದ್ಯಕ್ಕ ರಾಷ್ಟ್ರ ಮಟ್ಟದ ಮಾಧ್ಯಮ ನಲ್ಲ ಯಾರಪಾ ಅಂದ್ರ ಇಕ್ಬಾಲ್ ಸಿಂಗ್ ಚಹಲ್. ಮುಂಬೈ ಶಹರದೊಳಗ ಕೋವಿಡ್ ಮಹಾಮಾರಿಯನ್ನ ನಿಯಂತ್ರಣ ಮಾಡಿದ ಕೀರ್ತಿ ಇವರಿಗೆ ಹೋಗ್ತದ.

ಮೊದಲಿಗೆ ಈ ಮುಂಬಯಿ ಮೂಲದ ಐಎಎಸ್ ಅಧಿಕಾರಿಯ ಬಗ್ಗೆ ಯಾರಿಗೂ ಗೊತ್ತಿರಲಿಲ್ಲಾ. ಎಂದಿನಂತೆ ನಮ್ಮ ರಾಷ್ಟ್ರಮಟ್ಟದ ಮಾಧ್ಯಮಗಳು ಅವರ ಕೆಲಸ ನೋಡಿದ್ದಿಲ್ಲಾ, ಸುದ್ದಿ ಮಾಡಿದ್ದಿಲ್ಲ. ಅವ್ರ ಕೆಲಸದ ಬಗ್ಗೆ ಅಂತರ ರಾಷ್ಟ್ರೀಯ ಮಾಧ್ಯಮದೊಳಗ ಬಂದಮ್ಯಾಲೆ ಯಾವನಲೇ ಇವ, ನಮಗ ಗೊತ್ತಿರಲಾರದ ಹಂಗ ಮುಂಬೈದಾಗ್ ಇರೋವ, ಅಂತ್ ಹೇಳಿ, ನಮ್ಮ ಪತ್ರಿಕೆಯವರು ಆ ಅಧಿಕಾರಿಯನ್ನ ಹುಡುಕಿಕೊಂಡು ಹೋಗಿ, ಮಾತಾಡಿ, ಸುದ್ದಿ ಮಾಡಿದರು. ಅದನ್ನು ನೋಡಿದ ಪಂಥ ಪ್ರಧಾನ ಸೇವಕರು ಹಾಗು ಅರ್ಥ ಸಚಿವರ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡೋ ಖಾಸಗಿ ಕಂಪನಿಯ ಪ್ರಸಾಧನ ತಜ್ಞರು ಆ ಸುದ್ದಿಯ ಜಾಡನ್ನು ಆಧರಿಸಿ ಪ್ರಧಾನ ಮಂತ್ರಿಯವರು, ಹಣಕಾಸು ಸಚಿವರು ಇಕ್ಬಾಲ್ ಸಿಂಗ್ ಅವರಿಗೆ ಅಭಿನಂದನೆ ಕೋರಿದ ಹಾಗೆ ಟ್ವೀಟ್ ಮಾಡಿದರು. ಆಮ್ಯಾಲೆ ಸುರುವಾತು, ಸುದ್ದಿಯ ಮ್ಯಾಲೆ ಸುದ್ದಿ. ಅದು ಸೋಶಿಯಲ್ ಮೀಡಿಯಾದೊಳಗೂ ಬಂತು, ಆಂಟಿಸೋಶಿಯಲ್ ಮೀಡಿಯಾದೊಳಗೂ ಬಂತು. ಕೆಲವರು ಇದನ್ನು ಮುಂಬೈ ಯಶಸ್ಸು ಅಂತ ಬರೆದರು, ಇನ್ನು ಕೆಲವರು ಮಹಾರಾಷ್ಟ್ರದ ಹೆಮ್ಮೆಯ ಪುತ್ರ ಅಂತ ಹಂಚಿಕೊಂಡರು. ಇನ್ನೂ ಕೆಲವರು ‘ಇಷ್ಟು ಒಳ್ಳೆ ಮನುಷ್ಯಾ ಇವಾ ಆಗಿದ್ದರ, ಇವನ ಹೆಸರು ಇಕ್ಬಾಲ್ ಅಂತ್ ಯಾಕ್ ಐತಿ? ಅವ್ರ ಅಪ್ಪಾ ಅವ್ವಗ ಹೆಸರು ಇಡುವ ಮುಂದ ತಿಳಿಯಲಿಲ್ಲೇನೋ ಅಂತ ಮುಗ್ಧ ಪ್ರಶ್ನೆ ಕೇಳಿಕೊಂಡರು.

ನಮ್ಮನ್ನು ನೋಡಿ ನಗುತ್ತಿದ್ದರೆ, ‘ಮುಂಬೈ ಮಾದರಿ’ಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ಇಷ್ಟಾಗಿಯೂ ಈ ಅಧಿಕಾರಿ ಮಾಡಿದ ಮ್ಯಾಜಿಕ್ ಏನು? ಕೋವಿಡ್ ರೋಗಿಗಳನ್ನು ಅವರವರ ಮನೆಬೀದಿ-ಬಡಾವಣೆಗಳಲ್ಲಿಯೇ ಪತ್ತೆ ಮಾಡಿ, ಅದರಲ್ಲಿ ಶೇ.90 ಜನ ತಮ್ಮ ತಮ್ಮ ಮನೆಯಲ್ಲಿಯೇ ಉಪಚಾರ ಪಡೆದು, ಇತರರು ಆಯಾ ವಾರ್ಡ್‌ನ ಕೋವಿಡ್ ಕಾಳಜಿ ಕೇಂದ್ರದೊಳಗ ಇರೋ ಹಂಗ ಮಾಡಿ, ಅದರೊಳಗೆ ಭಾರಿ ಭಯಾನಕ ಪ್ರಕರಣ ಮಾತ್ರ ಅಸ್ಪತ್ರೆಗೆ ಹೋಗೋ ಹಂಗ್ ನೋಡಿಕೊಂಡುಬಿಟ್ಟರು. ತಮ್ಮ ಕಚೇರಿಯ ವಾತ-ಪಿತ್ತ ಅನುಕೂಲಿತ ಕುರ್ಚೆ ಬಿಟ್ಟು ಏಳದ ಸರಕಾರಿ ಅಧಿಕಾರಿವೈದ್ಯರನ್ನ ರೋಗಿಗಳ ಮನೆಗೆ ಹೋಗುವ ಹಂಗ ಮಾಡಿದರು. ರಾಜ್ಯ-ಜಿಲ್ಲೆತಾಲೂಕು-ಗ್ರಾಮಮಟ್ಟದ ಕೆಲಸಗಳು ಆಯಾ ಮಟ್ಟದಲ್ಲಿಯೇ ಆಗ್ಬೇಕು. ಅರೋಗ್ಯ ಸೇವೆ ಸಹಿತ, ಗ್ರಾಮಮಟ್ಟದಿಂದ ಆರಂಭವಾಗಿ ತಾಲೂಕು-ಜಿಲ್ಲೆರಾಜ್ಯಮಟ್ಟಗಳಿಗೆ ಮುಟ್ಟಬೇಕು, ಅನಗತ್ಯವಾಗಿ ಯಾವ ಹಳ್ಳಿಯ ರೋಗಿಯೂ ಸಹಿತ ಜಿಲ್ಲೆ ಅಥವಾ ರಾಜ್ಯ ಮಟ್ಟದ ಆಸ್ಪತ್ರೆಗೆ ಹೋಗೋ ಪ್ರಸಂಗ ಬರಬಾರದು ಅಂತ ನೋಡಿಕೊಂಡರು. ನಮ್ಮ ರಾಜ್ಯದಲ್ಲೇ ಇದು ಸಾಧ್ಯ ಅದ ಏನು? ಹಳ್ಳಿಯ ಆಸ್ಪತ್ರೆಯೊಳಗ ರೈತರಿಗೆ ಒಂದು ಹಾವುಚೇಳು ಕಚ್ಚಿದರ ಕೊಡೋ ಔಷಧ ಇರೋದಿಲ್ಲ. ಎಲ್ಲದಕ್ಕೂ ದೊಡ್ಡಾಸ್ಪತ್ರೆಗೆ ಕಳಿಸೋ ದೊಡ್ಡ ರೋಗ ಹಳ್ಳಿ-ತಾಲೂಕು-ಜಿಲ್ಲಾ ಆಸ್ಪತ್ರೆ ವೈದ್ಯರಿಗೆ ಇರತದ.

ನಮ್ಮ ಸರಕಾರ ರೋಗಿಗಳನ್ನ ಗುಣ ಮಾಡೋ ಮೊದಲು ಇಂಥಹ ಆಸ್ಪತ್ರೆ ಹಾಗೂ ವೈದ್ಯರಿಗೆ ಔಷಧಿ ಕೊಡಬೇಕು. ‘ಎಲ್ಲಾ ರೋಗಕ್ಕೂ ಬೆಂಗಳೂರಿನಾಗ ಮಾತ್ರ ಔಷಧಿ ಅಂತ ನಂಬಿರುವ ಅಧಿಕಾರಿಮಂತ್ರಿಗಳನ್ನು ಮೊದಲಿಗೆ ಹಳ್ಳಿಯ ಆಸ್ಪತ್ರೆ ನೋಡಲಿಕ್ಕೆ ಕಳಿಸಬೇಕು.

ಇಲ್ಲೇ ಒಂದು ಸ್ವಲ್ಪ ಪಕ್ಕಕ್ಕೆ ಸರಿದು ಕರ್ಮಸಿದ್ಧಾಂತ ನೆನಪು ಮಾಡಿಕೊಳ್ಳೋಣ. ಭಾರತೀಯ ದರ್ಶನದ ಅನುಸಾರ ಒಂದು ಕೆಲಸವನ್ನು ‘ಯಾರು ಮಾಡಿದರು? ಅನ್ನುವುದು ಮುಖ್ಯ ಅಲ್ಲ. ‘ಯಾವ ಕೆಲಸ ಆತು?, ಅದರಿಂದ ಯಾರಿಗೆ ಅನುಕೂಲ ಆತು?, ಯಾರಿಗೆ ಅನಾನುಕೂಲ ಆತು? ಅನ್ನೋದು ಮುಖ್ಯ.

ಆದರೆ, ಪ್ರತಿ ಸಾರಿ ಆಗುವಂತೆ, ನಮ್ಮ ಮಾಧ್ಯಮಗಳು ಯಾರನ್ನೋ ಹೀರೋ ಮಾಡಲಿಕ್ಕೆ ಹೋಗಿ ‘ಯಾರು ಅನ್ನುವುದನ್ನು ದೊಡ್ಡದು ಮಾಡಿ, ‘ಏನು ಅನ್ನುವುದನ್ನು ಸಣ್ಣದು ಮಾಡಿಬಿಟ್ಟವು.

ಇಕ್ಬಾಲ್ ಸಿಂಗ್ ಅವರು ಮಾಡಿದ ಕೆಲಸ ಯಾವುದು? ಅದರ ಹಿಂದಿನ ನೀತಿ-ನಿಯಮ ಯಾವುವು? ಅವುಗಳಿಂದ ಬೇರೆ ಯಾರು ಯಾವ ಪಾಠ ಕಲಿಯಬಹುದು? ಮುಂಬೈಯಲ್ಲಿ ಸಲ್ಲಿದ್ದು ಇನ್ನೆಲ್ಲಿ ಸಲ್ಲುವುದು ಅನ್ನುವುದನ್ನು ವಿಚಾರ ಮಾಡಲಿಕ್ಕೆ ಹೋಗಲೇ ಇಲ್ಲ.

ಇಷ್ಟಕ್ಕೂ ಅವರು ಮಾಡಿದ್ದೂ ಮ್ಯಾಜಿಕ್ ಅಲ್ಲ. ಅದು ನಮ್ಮ ಸಂವಿಧಾನದ ಮೂಲ ತತ್ವ ಗಳಲ್ಲಿ ಒಂದು. ಅದನ್ನು ಎಲ್ಲಾ ಅಧಿಕಾರಿಗಳು, ರಾಜಕಾರಣಿಗಳು, ನೀತಿ ನಿರೂಪಕರು, ಜಾರಿ ಮಾಡುವ ಸಿಬ್ಬಂದಿಗಳು, ಎಲ್ಲರೂ ಪಾಲಿಸಲೇಬೇಕಾದದ್ದು. ಈ ದಂಡಪಿಂಡಗಳು ಉಪಯೋಗಿಸಬೇಕಾಗಿದ್ದ, ಆದರೆ ಬಳಸದೆ ಬಿಟ್ಟ ಮಂತ್ರ ದಂಡದ ಹೆಸರು ‘ವಿಕೇಂದ್ರೀಕರಣ.

‘ಹಿಂಗ ಅಂದ್ರ ಅದರಾಗ ಹೊಸಾದು ಏನು ಐತಿ? ನಮ್ಮ ಮಧ್ಯದ ‘ಗೋಡ್ಬೋಲೆ ಅಂದ್ರೆ ಬರೀ ಒಳ್ಳೊಳ್ಳೆ ಮಾತಾಡುವ ಕೆ.ಎಸ್ ಈಶ್ವರಪ್ಪ ಅವರು ಹಿರೆತನ ಮಾಡುವ ಸಚಿವಾಲಯ ಅದೇ ಅಲ್ಲವೇ? ವಿಕೇಂದ್ರೀಕರಣ ಅಂದ್ರೆ ಈ ಉದ್ಯೋಗ ಖಾತ್ರಿ ಯೋಜನೆ, ಗ್ರಾಮ ಪಂಚಾಯತಿಯವರು ಮನೆ ಹಂಚುವುದು, ಊರ ಹೊರಗಡೆ ದೊಡ್ಡ ದೊಡ್ಡ ಸ್ವಾಗತ ಕಮಾನು ಕಟ್ಟುವುದು, ಅಷ್ಟೇ ಅಲ್ಲವೇ? ಅಂತ ನೀವು ಕೇಳಬಹುದು.

ಇದು ವಿಕೇಂದ್ರೀಕರಣ ಅನ್ನುವ ವಿಚಾರದ ಕೇವಲ ಒಂದು ಭಾಗ ಅಷ್ಟೇ. ಇದನ್ನು ಹಂತಹಂತವಾಗಿ, ಸರಿಯಾಗಿ ತಿಳಿದುಕೊಳ್ಳೋಣ. ಇದರ ಮೊದಲ ಭಾಗವಾಗಿ ಬೇರೆ ಬೇರೆ ದೇಶಗಳಲ್ಲಿ, ಅಂದ್ರೆ ಉದ್ಯೋಗ ಖಾತ್ರಿಯಂಥಾ ಯೋಜನೆಗಳು ಇರಲಾರದ ದೇಶಗಳಲ್ಲಿ, ಮನೆ ಹಂಚಿಕೆ ಮಾಡದ, ಸ್ವಾಗತ ಕಮಾನು ಕಟ್ಟಲಾರದ ದೇಶಗಳಲ್ಲಿ ಈ ಪರಿಸ್ಥಿತಿ ಹೆಂಗ್ ಐತಿ? ಇದನ್ನ ನೋಡೋಣ.

ನಮ್ಮ ದೋಸ್ತ್ ಡೊನಾಲ್ಡ್ ಕೆಂಪಣ್ಣನವರು ಅಮೆರಿಕ ಅಧ್ಯಕ್ಷರಾಗಿದ್ದ ಕಾಲದಲ್ಲಿ ಒಂದು ಮುಂಜಾವಿನಲ್ಲಿ ಎದ್ದು ಕತ್ತಿ ಝಳಪಿಸಿ ಒಂದು ಮಾತು ಹೇಳಿದರು. ಇಂಗ್ಲಂಡ್‌ನಿಂದ ಬಂದ ವಲಸಿಗರು ಕಟ್ಟಿದ ಈ ದೇಶದಲ್ಲಿ, ಜಗತ್ತಿನ 220 ದೇಶಗಳಿಂದ ಕೆಲಸಗಾರರು ಬಂದು ದುಡಿದು ಶ್ರೀಮಂತಗೊಳಿಸಿದ ಅಮೆರಿಕ ದೇಶದ ಒಳಗೆ ೨೫ ದೇಶಗಳಿಂದ ವಲಸಿಗರು ಬರಬಾರದು ಅಂತ ನಾನು ಒಂದು ಅಭೂತಪೂರ್ವ ಆದೇಶ ಜಾರಿ ಮಾಡಿಬಿಡ್ತೇನೆ ಅಂತ ಹೂಂಕರಿಸಿದರು. ಆ ನನ್‌ಮಗ ಒಬಾಮ ಎಡಗೈನಲ್ಲಿ ಸಹಿ ಮಾಡ್ತಾ ಇದ್ದ, ಅದಕ್ಕೆ ನಾನು ಬಲಗೈನಲ್ಲಿ ಸಹಿ ಮಾಡಿಬಿಡ್ತೇನೆ, ಅಂತ ಮಾಡೇಬಿಟ್ಟರು.

ಅವು ಬಹುತೇಕ ಮುಸ್ಲಿಂ ದೇಶಗಳು ಇದ್ದವು. ಹೀಗಾಗಿ ಮುಸಲ್ಮಾನರ ಮೇಲೆ ದ್ವೇಷ ಇದ್ದ ಅನೇಕರಿಗೆ ಡೊನಾಲ್ಡ್ ಅಪ್ಪನವರು ರಾತ್ರೋ ರಾತ್ರಿ ಹೀರೋ ಆಗಿ ಬಿಟ್ಟರು. ಕೆಲವರು ಅತೀವ ಆಸಕ್ತರು ಉತ್ತರ ಭಾರತದ ಹಳ್ಳಿ ಒಂದರ ಹೆಸರು ಬದಲಿ ಮಾಡಿ ಡೊನಾಲ್ಡ್ ಅಪ್ಪನವರ ಹೆಸರು ಇಟ್ಟರು. ಅವರ ಹೆಸರಿನಲ್ಲಿ ಪೂಜೆ, ಪುನಸ್ಕಾರ ಎಲ್ಲಾ ಮಾಡಿಸಿಬಿಟ್ಟರು.

ಆದ್ರೆ ಈ ಆದೇಶ ಹೊರಬಿದ್ದ ಒಂದೇ ತಿಂಗಳಿನಲ್ಲಿ ಅದು ರದ್ದು ಆಗಿಹೋತು. ಅದನ್ನ ರದ್ದು ಮಾಡಿದ್ದೂ ಯಾರಪ ಅಂದರ, ಒಬ್ಬ ಜಿಲ್ಲಾ ನ್ಯಾಯಾಧೀಶರು. ಸರ್ವೋಚ್ಚ ನ್ಯಾಯಾಲಯ, ಉಚ್ಚ ನ್ಯಾಯಾಲಯದ ಜಡ್ಜ್ ಸಾಹೇಬರು ಅಲ್ಲ. ಬರೆ ಕೌಂಟಿ ಅಂದ್ರ ಜಿಲ್ಲಾ ನ್ಯಾಯಾಧೀಶರು. ಅನೇಕರ ಕನಸಿನ ನಾಡಾದ ಅಮೆರಿಕದಾಗ ಅಧಿಕಾರದ ಶಾಖೆ ಪ್ರಶಾಖೆಗಳು ಹೆಂಗ ಹಬ್ಬಿಕೊಂಡುಬಿಟ್ಟಾವು ಅನ್ನೋದು ಇದರಿಂದ ಸ್ವಲ್ಪ ತಿಳಿಯಬಹುದು.

ಅಲ್ಲವೇ ಮನೋಲ್ಲಾಸಿನಿ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...