HomeUncategorizedಸುದ್ದಿಯೇನೇ ಮನೋಲ್ಲಾಸಿನಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-1

ಸುದ್ದಿಯೇನೇ ಮನೋಲ್ಲಾಸಿನಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-1

- Advertisement -
- Advertisement -

ಆವಾಗಾವಾಗ ಕೆಲ ವ್ಯಕ್ತಿಗಳು, ಸ್ಥಳಗಳು, ವಿಷಯಗಳು ನಮ್ಮ ಮಾಧ್ಯಮಗಳಿಗೆ ಪ್ರಿಯವಾಗಿಬಿಡ್ತಾವ. ಬರೆ ಬರೆ ಅವೇ ಸುದ್ದಿ ಬರಲಿಕ್ಕೆ ಹತ್ತಿಬಿಡ್ತಾವು. ಒಬ್ಬರು ಬರಿತಾರ ಅಂತ ಇನ್ನೊಬ್ಬರು ಬರಿತಾರ. ಟ್ರೆಂಡ್ ಪ್ರಕಾರ ಸುದ್ದಿ ಮಾಡದೇ ಹೋದರೆ ಯಾರು ಏನು ತಿಳ್ಕೋತಾರೋ ಅಂತ ಎಲ್ಲಾರೂ ಕದ್ದು ಮುಚ್ಚಿ ಸುರುಮಾಡಿ ಆಮ್ಯಾಲೆ ಖುಲ್ಲಂ ಖುಲ್ಲಾ ಆಗಿ ಬರಿತಾರ.

ಇಂಥವರಿಗೆ ಮೀಡಿಯಾ ಡಾರ್ಲಿಂಗ್ ಅಂತ ಕರಿತಾರ. ಕನ್ನಡದೊಳಗ ಮಾಧ್ಯಮ ನಲ್ಲ ಅನ್ನಬಹುದೇನೋ. ಈಗ ಸದ್ಯಕ್ಕ ರಾಷ್ಟ್ರ ಮಟ್ಟದ ಮಾಧ್ಯಮ ನಲ್ಲ ಯಾರಪಾ ಅಂದ್ರ ಇಕ್ಬಾಲ್ ಸಿಂಗ್ ಚಹಲ್. ಮುಂಬೈ ಶಹರದೊಳಗ ಕೋವಿಡ್ ಮಹಾಮಾರಿಯನ್ನ ನಿಯಂತ್ರಣ ಮಾಡಿದ ಕೀರ್ತಿ ಇವರಿಗೆ ಹೋಗ್ತದ.

ಮೊದಲಿಗೆ ಈ ಮುಂಬಯಿ ಮೂಲದ ಐಎಎಸ್ ಅಧಿಕಾರಿಯ ಬಗ್ಗೆ ಯಾರಿಗೂ ಗೊತ್ತಿರಲಿಲ್ಲಾ. ಎಂದಿನಂತೆ ನಮ್ಮ ರಾಷ್ಟ್ರಮಟ್ಟದ ಮಾಧ್ಯಮಗಳು ಅವರ ಕೆಲಸ ನೋಡಿದ್ದಿಲ್ಲಾ, ಸುದ್ದಿ ಮಾಡಿದ್ದಿಲ್ಲ. ಅವ್ರ ಕೆಲಸದ ಬಗ್ಗೆ ಅಂತರ ರಾಷ್ಟ್ರೀಯ ಮಾಧ್ಯಮದೊಳಗ ಬಂದಮ್ಯಾಲೆ ಯಾವನಲೇ ಇವ, ನಮಗ ಗೊತ್ತಿರಲಾರದ ಹಂಗ ಮುಂಬೈದಾಗ್ ಇರೋವ, ಅಂತ್ ಹೇಳಿ, ನಮ್ಮ ಪತ್ರಿಕೆಯವರು ಆ ಅಧಿಕಾರಿಯನ್ನ ಹುಡುಕಿಕೊಂಡು ಹೋಗಿ, ಮಾತಾಡಿ, ಸುದ್ದಿ ಮಾಡಿದರು. ಅದನ್ನು ನೋಡಿದ ಪಂಥ ಪ್ರಧಾನ ಸೇವಕರು ಹಾಗು ಅರ್ಥ ಸಚಿವರ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡೋ ಖಾಸಗಿ ಕಂಪನಿಯ ಪ್ರಸಾಧನ ತಜ್ಞರು ಆ ಸುದ್ದಿಯ ಜಾಡನ್ನು ಆಧರಿಸಿ ಪ್ರಧಾನ ಮಂತ್ರಿಯವರು, ಹಣಕಾಸು ಸಚಿವರು ಇಕ್ಬಾಲ್ ಸಿಂಗ್ ಅವರಿಗೆ ಅಭಿನಂದನೆ ಕೋರಿದ ಹಾಗೆ ಟ್ವೀಟ್ ಮಾಡಿದರು. ಆಮ್ಯಾಲೆ ಸುರುವಾತು, ಸುದ್ದಿಯ ಮ್ಯಾಲೆ ಸುದ್ದಿ. ಅದು ಸೋಶಿಯಲ್ ಮೀಡಿಯಾದೊಳಗೂ ಬಂತು, ಆಂಟಿಸೋಶಿಯಲ್ ಮೀಡಿಯಾದೊಳಗೂ ಬಂತು. ಕೆಲವರು ಇದನ್ನು ಮುಂಬೈ ಯಶಸ್ಸು ಅಂತ ಬರೆದರು, ಇನ್ನು ಕೆಲವರು ಮಹಾರಾಷ್ಟ್ರದ ಹೆಮ್ಮೆಯ ಪುತ್ರ ಅಂತ ಹಂಚಿಕೊಂಡರು. ಇನ್ನೂ ಕೆಲವರು ‘ಇಷ್ಟು ಒಳ್ಳೆ ಮನುಷ್ಯಾ ಇವಾ ಆಗಿದ್ದರ, ಇವನ ಹೆಸರು ಇಕ್ಬಾಲ್ ಅಂತ್ ಯಾಕ್ ಐತಿ? ಅವ್ರ ಅಪ್ಪಾ ಅವ್ವಗ ಹೆಸರು ಇಡುವ ಮುಂದ ತಿಳಿಯಲಿಲ್ಲೇನೋ ಅಂತ ಮುಗ್ಧ ಪ್ರಶ್ನೆ ಕೇಳಿಕೊಂಡರು.

ನಮ್ಮನ್ನು ನೋಡಿ ನಗುತ್ತಿದ್ದರೆ, ‘ಮುಂಬೈ ಮಾದರಿ’ಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ಇಷ್ಟಾಗಿಯೂ ಈ ಅಧಿಕಾರಿ ಮಾಡಿದ ಮ್ಯಾಜಿಕ್ ಏನು? ಕೋವಿಡ್ ರೋಗಿಗಳನ್ನು ಅವರವರ ಮನೆಬೀದಿ-ಬಡಾವಣೆಗಳಲ್ಲಿಯೇ ಪತ್ತೆ ಮಾಡಿ, ಅದರಲ್ಲಿ ಶೇ.90 ಜನ ತಮ್ಮ ತಮ್ಮ ಮನೆಯಲ್ಲಿಯೇ ಉಪಚಾರ ಪಡೆದು, ಇತರರು ಆಯಾ ವಾರ್ಡ್‌ನ ಕೋವಿಡ್ ಕಾಳಜಿ ಕೇಂದ್ರದೊಳಗ ಇರೋ ಹಂಗ ಮಾಡಿ, ಅದರೊಳಗೆ ಭಾರಿ ಭಯಾನಕ ಪ್ರಕರಣ ಮಾತ್ರ ಅಸ್ಪತ್ರೆಗೆ ಹೋಗೋ ಹಂಗ್ ನೋಡಿಕೊಂಡುಬಿಟ್ಟರು. ತಮ್ಮ ಕಚೇರಿಯ ವಾತ-ಪಿತ್ತ ಅನುಕೂಲಿತ ಕುರ್ಚೆ ಬಿಟ್ಟು ಏಳದ ಸರಕಾರಿ ಅಧಿಕಾರಿವೈದ್ಯರನ್ನ ರೋಗಿಗಳ ಮನೆಗೆ ಹೋಗುವ ಹಂಗ ಮಾಡಿದರು. ರಾಜ್ಯ-ಜಿಲ್ಲೆತಾಲೂಕು-ಗ್ರಾಮಮಟ್ಟದ ಕೆಲಸಗಳು ಆಯಾ ಮಟ್ಟದಲ್ಲಿಯೇ ಆಗ್ಬೇಕು. ಅರೋಗ್ಯ ಸೇವೆ ಸಹಿತ, ಗ್ರಾಮಮಟ್ಟದಿಂದ ಆರಂಭವಾಗಿ ತಾಲೂಕು-ಜಿಲ್ಲೆರಾಜ್ಯಮಟ್ಟಗಳಿಗೆ ಮುಟ್ಟಬೇಕು, ಅನಗತ್ಯವಾಗಿ ಯಾವ ಹಳ್ಳಿಯ ರೋಗಿಯೂ ಸಹಿತ ಜಿಲ್ಲೆ ಅಥವಾ ರಾಜ್ಯ ಮಟ್ಟದ ಆಸ್ಪತ್ರೆಗೆ ಹೋಗೋ ಪ್ರಸಂಗ ಬರಬಾರದು ಅಂತ ನೋಡಿಕೊಂಡರು. ನಮ್ಮ ರಾಜ್ಯದಲ್ಲೇ ಇದು ಸಾಧ್ಯ ಅದ ಏನು? ಹಳ್ಳಿಯ ಆಸ್ಪತ್ರೆಯೊಳಗ ರೈತರಿಗೆ ಒಂದು ಹಾವುಚೇಳು ಕಚ್ಚಿದರ ಕೊಡೋ ಔಷಧ ಇರೋದಿಲ್ಲ. ಎಲ್ಲದಕ್ಕೂ ದೊಡ್ಡಾಸ್ಪತ್ರೆಗೆ ಕಳಿಸೋ ದೊಡ್ಡ ರೋಗ ಹಳ್ಳಿ-ತಾಲೂಕು-ಜಿಲ್ಲಾ ಆಸ್ಪತ್ರೆ ವೈದ್ಯರಿಗೆ ಇರತದ.

ನಮ್ಮ ಸರಕಾರ ರೋಗಿಗಳನ್ನ ಗುಣ ಮಾಡೋ ಮೊದಲು ಇಂಥಹ ಆಸ್ಪತ್ರೆ ಹಾಗೂ ವೈದ್ಯರಿಗೆ ಔಷಧಿ ಕೊಡಬೇಕು. ‘ಎಲ್ಲಾ ರೋಗಕ್ಕೂ ಬೆಂಗಳೂರಿನಾಗ ಮಾತ್ರ ಔಷಧಿ ಅಂತ ನಂಬಿರುವ ಅಧಿಕಾರಿಮಂತ್ರಿಗಳನ್ನು ಮೊದಲಿಗೆ ಹಳ್ಳಿಯ ಆಸ್ಪತ್ರೆ ನೋಡಲಿಕ್ಕೆ ಕಳಿಸಬೇಕು.

ಇಲ್ಲೇ ಒಂದು ಸ್ವಲ್ಪ ಪಕ್ಕಕ್ಕೆ ಸರಿದು ಕರ್ಮಸಿದ್ಧಾಂತ ನೆನಪು ಮಾಡಿಕೊಳ್ಳೋಣ. ಭಾರತೀಯ ದರ್ಶನದ ಅನುಸಾರ ಒಂದು ಕೆಲಸವನ್ನು ‘ಯಾರು ಮಾಡಿದರು? ಅನ್ನುವುದು ಮುಖ್ಯ ಅಲ್ಲ. ‘ಯಾವ ಕೆಲಸ ಆತು?, ಅದರಿಂದ ಯಾರಿಗೆ ಅನುಕೂಲ ಆತು?, ಯಾರಿಗೆ ಅನಾನುಕೂಲ ಆತು? ಅನ್ನೋದು ಮುಖ್ಯ.

ಆದರೆ, ಪ್ರತಿ ಸಾರಿ ಆಗುವಂತೆ, ನಮ್ಮ ಮಾಧ್ಯಮಗಳು ಯಾರನ್ನೋ ಹೀರೋ ಮಾಡಲಿಕ್ಕೆ ಹೋಗಿ ‘ಯಾರು ಅನ್ನುವುದನ್ನು ದೊಡ್ಡದು ಮಾಡಿ, ‘ಏನು ಅನ್ನುವುದನ್ನು ಸಣ್ಣದು ಮಾಡಿಬಿಟ್ಟವು.

ಇಕ್ಬಾಲ್ ಸಿಂಗ್ ಅವರು ಮಾಡಿದ ಕೆಲಸ ಯಾವುದು? ಅದರ ಹಿಂದಿನ ನೀತಿ-ನಿಯಮ ಯಾವುವು? ಅವುಗಳಿಂದ ಬೇರೆ ಯಾರು ಯಾವ ಪಾಠ ಕಲಿಯಬಹುದು? ಮುಂಬೈಯಲ್ಲಿ ಸಲ್ಲಿದ್ದು ಇನ್ನೆಲ್ಲಿ ಸಲ್ಲುವುದು ಅನ್ನುವುದನ್ನು ವಿಚಾರ ಮಾಡಲಿಕ್ಕೆ ಹೋಗಲೇ ಇಲ್ಲ.

ಇಷ್ಟಕ್ಕೂ ಅವರು ಮಾಡಿದ್ದೂ ಮ್ಯಾಜಿಕ್ ಅಲ್ಲ. ಅದು ನಮ್ಮ ಸಂವಿಧಾನದ ಮೂಲ ತತ್ವ ಗಳಲ್ಲಿ ಒಂದು. ಅದನ್ನು ಎಲ್ಲಾ ಅಧಿಕಾರಿಗಳು, ರಾಜಕಾರಣಿಗಳು, ನೀತಿ ನಿರೂಪಕರು, ಜಾರಿ ಮಾಡುವ ಸಿಬ್ಬಂದಿಗಳು, ಎಲ್ಲರೂ ಪಾಲಿಸಲೇಬೇಕಾದದ್ದು. ಈ ದಂಡಪಿಂಡಗಳು ಉಪಯೋಗಿಸಬೇಕಾಗಿದ್ದ, ಆದರೆ ಬಳಸದೆ ಬಿಟ್ಟ ಮಂತ್ರ ದಂಡದ ಹೆಸರು ‘ವಿಕೇಂದ್ರೀಕರಣ.

‘ಹಿಂಗ ಅಂದ್ರ ಅದರಾಗ ಹೊಸಾದು ಏನು ಐತಿ? ನಮ್ಮ ಮಧ್ಯದ ‘ಗೋಡ್ಬೋಲೆ ಅಂದ್ರೆ ಬರೀ ಒಳ್ಳೊಳ್ಳೆ ಮಾತಾಡುವ ಕೆ.ಎಸ್ ಈಶ್ವರಪ್ಪ ಅವರು ಹಿರೆತನ ಮಾಡುವ ಸಚಿವಾಲಯ ಅದೇ ಅಲ್ಲವೇ? ವಿಕೇಂದ್ರೀಕರಣ ಅಂದ್ರೆ ಈ ಉದ್ಯೋಗ ಖಾತ್ರಿ ಯೋಜನೆ, ಗ್ರಾಮ ಪಂಚಾಯತಿಯವರು ಮನೆ ಹಂಚುವುದು, ಊರ ಹೊರಗಡೆ ದೊಡ್ಡ ದೊಡ್ಡ ಸ್ವಾಗತ ಕಮಾನು ಕಟ್ಟುವುದು, ಅಷ್ಟೇ ಅಲ್ಲವೇ? ಅಂತ ನೀವು ಕೇಳಬಹುದು.

ಇದು ವಿಕೇಂದ್ರೀಕರಣ ಅನ್ನುವ ವಿಚಾರದ ಕೇವಲ ಒಂದು ಭಾಗ ಅಷ್ಟೇ. ಇದನ್ನು ಹಂತಹಂತವಾಗಿ, ಸರಿಯಾಗಿ ತಿಳಿದುಕೊಳ್ಳೋಣ. ಇದರ ಮೊದಲ ಭಾಗವಾಗಿ ಬೇರೆ ಬೇರೆ ದೇಶಗಳಲ್ಲಿ, ಅಂದ್ರೆ ಉದ್ಯೋಗ ಖಾತ್ರಿಯಂಥಾ ಯೋಜನೆಗಳು ಇರಲಾರದ ದೇಶಗಳಲ್ಲಿ, ಮನೆ ಹಂಚಿಕೆ ಮಾಡದ, ಸ್ವಾಗತ ಕಮಾನು ಕಟ್ಟಲಾರದ ದೇಶಗಳಲ್ಲಿ ಈ ಪರಿಸ್ಥಿತಿ ಹೆಂಗ್ ಐತಿ? ಇದನ್ನ ನೋಡೋಣ.

ನಮ್ಮ ದೋಸ್ತ್ ಡೊನಾಲ್ಡ್ ಕೆಂಪಣ್ಣನವರು ಅಮೆರಿಕ ಅಧ್ಯಕ್ಷರಾಗಿದ್ದ ಕಾಲದಲ್ಲಿ ಒಂದು ಮುಂಜಾವಿನಲ್ಲಿ ಎದ್ದು ಕತ್ತಿ ಝಳಪಿಸಿ ಒಂದು ಮಾತು ಹೇಳಿದರು. ಇಂಗ್ಲಂಡ್‌ನಿಂದ ಬಂದ ವಲಸಿಗರು ಕಟ್ಟಿದ ಈ ದೇಶದಲ್ಲಿ, ಜಗತ್ತಿನ 220 ದೇಶಗಳಿಂದ ಕೆಲಸಗಾರರು ಬಂದು ದುಡಿದು ಶ್ರೀಮಂತಗೊಳಿಸಿದ ಅಮೆರಿಕ ದೇಶದ ಒಳಗೆ ೨೫ ದೇಶಗಳಿಂದ ವಲಸಿಗರು ಬರಬಾರದು ಅಂತ ನಾನು ಒಂದು ಅಭೂತಪೂರ್ವ ಆದೇಶ ಜಾರಿ ಮಾಡಿಬಿಡ್ತೇನೆ ಅಂತ ಹೂಂಕರಿಸಿದರು. ಆ ನನ್‌ಮಗ ಒಬಾಮ ಎಡಗೈನಲ್ಲಿ ಸಹಿ ಮಾಡ್ತಾ ಇದ್ದ, ಅದಕ್ಕೆ ನಾನು ಬಲಗೈನಲ್ಲಿ ಸಹಿ ಮಾಡಿಬಿಡ್ತೇನೆ, ಅಂತ ಮಾಡೇಬಿಟ್ಟರು.

ಅವು ಬಹುತೇಕ ಮುಸ್ಲಿಂ ದೇಶಗಳು ಇದ್ದವು. ಹೀಗಾಗಿ ಮುಸಲ್ಮಾನರ ಮೇಲೆ ದ್ವೇಷ ಇದ್ದ ಅನೇಕರಿಗೆ ಡೊನಾಲ್ಡ್ ಅಪ್ಪನವರು ರಾತ್ರೋ ರಾತ್ರಿ ಹೀರೋ ಆಗಿ ಬಿಟ್ಟರು. ಕೆಲವರು ಅತೀವ ಆಸಕ್ತರು ಉತ್ತರ ಭಾರತದ ಹಳ್ಳಿ ಒಂದರ ಹೆಸರು ಬದಲಿ ಮಾಡಿ ಡೊನಾಲ್ಡ್ ಅಪ್ಪನವರ ಹೆಸರು ಇಟ್ಟರು. ಅವರ ಹೆಸರಿನಲ್ಲಿ ಪೂಜೆ, ಪುನಸ್ಕಾರ ಎಲ್ಲಾ ಮಾಡಿಸಿಬಿಟ್ಟರು.

ಆದ್ರೆ ಈ ಆದೇಶ ಹೊರಬಿದ್ದ ಒಂದೇ ತಿಂಗಳಿನಲ್ಲಿ ಅದು ರದ್ದು ಆಗಿಹೋತು. ಅದನ್ನ ರದ್ದು ಮಾಡಿದ್ದೂ ಯಾರಪ ಅಂದರ, ಒಬ್ಬ ಜಿಲ್ಲಾ ನ್ಯಾಯಾಧೀಶರು. ಸರ್ವೋಚ್ಚ ನ್ಯಾಯಾಲಯ, ಉಚ್ಚ ನ್ಯಾಯಾಲಯದ ಜಡ್ಜ್ ಸಾಹೇಬರು ಅಲ್ಲ. ಬರೆ ಕೌಂಟಿ ಅಂದ್ರ ಜಿಲ್ಲಾ ನ್ಯಾಯಾಧೀಶರು. ಅನೇಕರ ಕನಸಿನ ನಾಡಾದ ಅಮೆರಿಕದಾಗ ಅಧಿಕಾರದ ಶಾಖೆ ಪ್ರಶಾಖೆಗಳು ಹೆಂಗ ಹಬ್ಬಿಕೊಂಡುಬಿಟ್ಟಾವು ಅನ್ನೋದು ಇದರಿಂದ ಸ್ವಲ್ಪ ತಿಳಿಯಬಹುದು.

ಅಲ್ಲವೇ ಮನೋಲ್ಲಾಸಿನಿ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...