HomeUncategorizedಸುದ್ದಿಯೇನೇ ಮನೋಲ್ಲಾಸಿನಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-1

ಸುದ್ದಿಯೇನೇ ಮನೋಲ್ಲಾಸಿನಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-1

- Advertisement -
- Advertisement -

ಆವಾಗಾವಾಗ ಕೆಲ ವ್ಯಕ್ತಿಗಳು, ಸ್ಥಳಗಳು, ವಿಷಯಗಳು ನಮ್ಮ ಮಾಧ್ಯಮಗಳಿಗೆ ಪ್ರಿಯವಾಗಿಬಿಡ್ತಾವ. ಬರೆ ಬರೆ ಅವೇ ಸುದ್ದಿ ಬರಲಿಕ್ಕೆ ಹತ್ತಿಬಿಡ್ತಾವು. ಒಬ್ಬರು ಬರಿತಾರ ಅಂತ ಇನ್ನೊಬ್ಬರು ಬರಿತಾರ. ಟ್ರೆಂಡ್ ಪ್ರಕಾರ ಸುದ್ದಿ ಮಾಡದೇ ಹೋದರೆ ಯಾರು ಏನು ತಿಳ್ಕೋತಾರೋ ಅಂತ ಎಲ್ಲಾರೂ ಕದ್ದು ಮುಚ್ಚಿ ಸುರುಮಾಡಿ ಆಮ್ಯಾಲೆ ಖುಲ್ಲಂ ಖುಲ್ಲಾ ಆಗಿ ಬರಿತಾರ.

ಇಂಥವರಿಗೆ ಮೀಡಿಯಾ ಡಾರ್ಲಿಂಗ್ ಅಂತ ಕರಿತಾರ. ಕನ್ನಡದೊಳಗ ಮಾಧ್ಯಮ ನಲ್ಲ ಅನ್ನಬಹುದೇನೋ. ಈಗ ಸದ್ಯಕ್ಕ ರಾಷ್ಟ್ರ ಮಟ್ಟದ ಮಾಧ್ಯಮ ನಲ್ಲ ಯಾರಪಾ ಅಂದ್ರ ಇಕ್ಬಾಲ್ ಸಿಂಗ್ ಚಹಲ್. ಮುಂಬೈ ಶಹರದೊಳಗ ಕೋವಿಡ್ ಮಹಾಮಾರಿಯನ್ನ ನಿಯಂತ್ರಣ ಮಾಡಿದ ಕೀರ್ತಿ ಇವರಿಗೆ ಹೋಗ್ತದ.

ಮೊದಲಿಗೆ ಈ ಮುಂಬಯಿ ಮೂಲದ ಐಎಎಸ್ ಅಧಿಕಾರಿಯ ಬಗ್ಗೆ ಯಾರಿಗೂ ಗೊತ್ತಿರಲಿಲ್ಲಾ. ಎಂದಿನಂತೆ ನಮ್ಮ ರಾಷ್ಟ್ರಮಟ್ಟದ ಮಾಧ್ಯಮಗಳು ಅವರ ಕೆಲಸ ನೋಡಿದ್ದಿಲ್ಲಾ, ಸುದ್ದಿ ಮಾಡಿದ್ದಿಲ್ಲ. ಅವ್ರ ಕೆಲಸದ ಬಗ್ಗೆ ಅಂತರ ರಾಷ್ಟ್ರೀಯ ಮಾಧ್ಯಮದೊಳಗ ಬಂದಮ್ಯಾಲೆ ಯಾವನಲೇ ಇವ, ನಮಗ ಗೊತ್ತಿರಲಾರದ ಹಂಗ ಮುಂಬೈದಾಗ್ ಇರೋವ, ಅಂತ್ ಹೇಳಿ, ನಮ್ಮ ಪತ್ರಿಕೆಯವರು ಆ ಅಧಿಕಾರಿಯನ್ನ ಹುಡುಕಿಕೊಂಡು ಹೋಗಿ, ಮಾತಾಡಿ, ಸುದ್ದಿ ಮಾಡಿದರು. ಅದನ್ನು ನೋಡಿದ ಪಂಥ ಪ್ರಧಾನ ಸೇವಕರು ಹಾಗು ಅರ್ಥ ಸಚಿವರ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡೋ ಖಾಸಗಿ ಕಂಪನಿಯ ಪ್ರಸಾಧನ ತಜ್ಞರು ಆ ಸುದ್ದಿಯ ಜಾಡನ್ನು ಆಧರಿಸಿ ಪ್ರಧಾನ ಮಂತ್ರಿಯವರು, ಹಣಕಾಸು ಸಚಿವರು ಇಕ್ಬಾಲ್ ಸಿಂಗ್ ಅವರಿಗೆ ಅಭಿನಂದನೆ ಕೋರಿದ ಹಾಗೆ ಟ್ವೀಟ್ ಮಾಡಿದರು. ಆಮ್ಯಾಲೆ ಸುರುವಾತು, ಸುದ್ದಿಯ ಮ್ಯಾಲೆ ಸುದ್ದಿ. ಅದು ಸೋಶಿಯಲ್ ಮೀಡಿಯಾದೊಳಗೂ ಬಂತು, ಆಂಟಿಸೋಶಿಯಲ್ ಮೀಡಿಯಾದೊಳಗೂ ಬಂತು. ಕೆಲವರು ಇದನ್ನು ಮುಂಬೈ ಯಶಸ್ಸು ಅಂತ ಬರೆದರು, ಇನ್ನು ಕೆಲವರು ಮಹಾರಾಷ್ಟ್ರದ ಹೆಮ್ಮೆಯ ಪುತ್ರ ಅಂತ ಹಂಚಿಕೊಂಡರು. ಇನ್ನೂ ಕೆಲವರು ‘ಇಷ್ಟು ಒಳ್ಳೆ ಮನುಷ್ಯಾ ಇವಾ ಆಗಿದ್ದರ, ಇವನ ಹೆಸರು ಇಕ್ಬಾಲ್ ಅಂತ್ ಯಾಕ್ ಐತಿ? ಅವ್ರ ಅಪ್ಪಾ ಅವ್ವಗ ಹೆಸರು ಇಡುವ ಮುಂದ ತಿಳಿಯಲಿಲ್ಲೇನೋ ಅಂತ ಮುಗ್ಧ ಪ್ರಶ್ನೆ ಕೇಳಿಕೊಂಡರು.

ನಮ್ಮನ್ನು ನೋಡಿ ನಗುತ್ತಿದ್ದರೆ, ‘ಮುಂಬೈ ಮಾದರಿ’ಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ಇಷ್ಟಾಗಿಯೂ ಈ ಅಧಿಕಾರಿ ಮಾಡಿದ ಮ್ಯಾಜಿಕ್ ಏನು? ಕೋವಿಡ್ ರೋಗಿಗಳನ್ನು ಅವರವರ ಮನೆಬೀದಿ-ಬಡಾವಣೆಗಳಲ್ಲಿಯೇ ಪತ್ತೆ ಮಾಡಿ, ಅದರಲ್ಲಿ ಶೇ.90 ಜನ ತಮ್ಮ ತಮ್ಮ ಮನೆಯಲ್ಲಿಯೇ ಉಪಚಾರ ಪಡೆದು, ಇತರರು ಆಯಾ ವಾರ್ಡ್‌ನ ಕೋವಿಡ್ ಕಾಳಜಿ ಕೇಂದ್ರದೊಳಗ ಇರೋ ಹಂಗ ಮಾಡಿ, ಅದರೊಳಗೆ ಭಾರಿ ಭಯಾನಕ ಪ್ರಕರಣ ಮಾತ್ರ ಅಸ್ಪತ್ರೆಗೆ ಹೋಗೋ ಹಂಗ್ ನೋಡಿಕೊಂಡುಬಿಟ್ಟರು. ತಮ್ಮ ಕಚೇರಿಯ ವಾತ-ಪಿತ್ತ ಅನುಕೂಲಿತ ಕುರ್ಚೆ ಬಿಟ್ಟು ಏಳದ ಸರಕಾರಿ ಅಧಿಕಾರಿವೈದ್ಯರನ್ನ ರೋಗಿಗಳ ಮನೆಗೆ ಹೋಗುವ ಹಂಗ ಮಾಡಿದರು. ರಾಜ್ಯ-ಜಿಲ್ಲೆತಾಲೂಕು-ಗ್ರಾಮಮಟ್ಟದ ಕೆಲಸಗಳು ಆಯಾ ಮಟ್ಟದಲ್ಲಿಯೇ ಆಗ್ಬೇಕು. ಅರೋಗ್ಯ ಸೇವೆ ಸಹಿತ, ಗ್ರಾಮಮಟ್ಟದಿಂದ ಆರಂಭವಾಗಿ ತಾಲೂಕು-ಜಿಲ್ಲೆರಾಜ್ಯಮಟ್ಟಗಳಿಗೆ ಮುಟ್ಟಬೇಕು, ಅನಗತ್ಯವಾಗಿ ಯಾವ ಹಳ್ಳಿಯ ರೋಗಿಯೂ ಸಹಿತ ಜಿಲ್ಲೆ ಅಥವಾ ರಾಜ್ಯ ಮಟ್ಟದ ಆಸ್ಪತ್ರೆಗೆ ಹೋಗೋ ಪ್ರಸಂಗ ಬರಬಾರದು ಅಂತ ನೋಡಿಕೊಂಡರು. ನಮ್ಮ ರಾಜ್ಯದಲ್ಲೇ ಇದು ಸಾಧ್ಯ ಅದ ಏನು? ಹಳ್ಳಿಯ ಆಸ್ಪತ್ರೆಯೊಳಗ ರೈತರಿಗೆ ಒಂದು ಹಾವುಚೇಳು ಕಚ್ಚಿದರ ಕೊಡೋ ಔಷಧ ಇರೋದಿಲ್ಲ. ಎಲ್ಲದಕ್ಕೂ ದೊಡ್ಡಾಸ್ಪತ್ರೆಗೆ ಕಳಿಸೋ ದೊಡ್ಡ ರೋಗ ಹಳ್ಳಿ-ತಾಲೂಕು-ಜಿಲ್ಲಾ ಆಸ್ಪತ್ರೆ ವೈದ್ಯರಿಗೆ ಇರತದ.

ನಮ್ಮ ಸರಕಾರ ರೋಗಿಗಳನ್ನ ಗುಣ ಮಾಡೋ ಮೊದಲು ಇಂಥಹ ಆಸ್ಪತ್ರೆ ಹಾಗೂ ವೈದ್ಯರಿಗೆ ಔಷಧಿ ಕೊಡಬೇಕು. ‘ಎಲ್ಲಾ ರೋಗಕ್ಕೂ ಬೆಂಗಳೂರಿನಾಗ ಮಾತ್ರ ಔಷಧಿ ಅಂತ ನಂಬಿರುವ ಅಧಿಕಾರಿಮಂತ್ರಿಗಳನ್ನು ಮೊದಲಿಗೆ ಹಳ್ಳಿಯ ಆಸ್ಪತ್ರೆ ನೋಡಲಿಕ್ಕೆ ಕಳಿಸಬೇಕು.

ಇಲ್ಲೇ ಒಂದು ಸ್ವಲ್ಪ ಪಕ್ಕಕ್ಕೆ ಸರಿದು ಕರ್ಮಸಿದ್ಧಾಂತ ನೆನಪು ಮಾಡಿಕೊಳ್ಳೋಣ. ಭಾರತೀಯ ದರ್ಶನದ ಅನುಸಾರ ಒಂದು ಕೆಲಸವನ್ನು ‘ಯಾರು ಮಾಡಿದರು? ಅನ್ನುವುದು ಮುಖ್ಯ ಅಲ್ಲ. ‘ಯಾವ ಕೆಲಸ ಆತು?, ಅದರಿಂದ ಯಾರಿಗೆ ಅನುಕೂಲ ಆತು?, ಯಾರಿಗೆ ಅನಾನುಕೂಲ ಆತು? ಅನ್ನೋದು ಮುಖ್ಯ.

ಆದರೆ, ಪ್ರತಿ ಸಾರಿ ಆಗುವಂತೆ, ನಮ್ಮ ಮಾಧ್ಯಮಗಳು ಯಾರನ್ನೋ ಹೀರೋ ಮಾಡಲಿಕ್ಕೆ ಹೋಗಿ ‘ಯಾರು ಅನ್ನುವುದನ್ನು ದೊಡ್ಡದು ಮಾಡಿ, ‘ಏನು ಅನ್ನುವುದನ್ನು ಸಣ್ಣದು ಮಾಡಿಬಿಟ್ಟವು.

ಇಕ್ಬಾಲ್ ಸಿಂಗ್ ಅವರು ಮಾಡಿದ ಕೆಲಸ ಯಾವುದು? ಅದರ ಹಿಂದಿನ ನೀತಿ-ನಿಯಮ ಯಾವುವು? ಅವುಗಳಿಂದ ಬೇರೆ ಯಾರು ಯಾವ ಪಾಠ ಕಲಿಯಬಹುದು? ಮುಂಬೈಯಲ್ಲಿ ಸಲ್ಲಿದ್ದು ಇನ್ನೆಲ್ಲಿ ಸಲ್ಲುವುದು ಅನ್ನುವುದನ್ನು ವಿಚಾರ ಮಾಡಲಿಕ್ಕೆ ಹೋಗಲೇ ಇಲ್ಲ.

ಇಷ್ಟಕ್ಕೂ ಅವರು ಮಾಡಿದ್ದೂ ಮ್ಯಾಜಿಕ್ ಅಲ್ಲ. ಅದು ನಮ್ಮ ಸಂವಿಧಾನದ ಮೂಲ ತತ್ವ ಗಳಲ್ಲಿ ಒಂದು. ಅದನ್ನು ಎಲ್ಲಾ ಅಧಿಕಾರಿಗಳು, ರಾಜಕಾರಣಿಗಳು, ನೀತಿ ನಿರೂಪಕರು, ಜಾರಿ ಮಾಡುವ ಸಿಬ್ಬಂದಿಗಳು, ಎಲ್ಲರೂ ಪಾಲಿಸಲೇಬೇಕಾದದ್ದು. ಈ ದಂಡಪಿಂಡಗಳು ಉಪಯೋಗಿಸಬೇಕಾಗಿದ್ದ, ಆದರೆ ಬಳಸದೆ ಬಿಟ್ಟ ಮಂತ್ರ ದಂಡದ ಹೆಸರು ‘ವಿಕೇಂದ್ರೀಕರಣ.

‘ಹಿಂಗ ಅಂದ್ರ ಅದರಾಗ ಹೊಸಾದು ಏನು ಐತಿ? ನಮ್ಮ ಮಧ್ಯದ ‘ಗೋಡ್ಬೋಲೆ ಅಂದ್ರೆ ಬರೀ ಒಳ್ಳೊಳ್ಳೆ ಮಾತಾಡುವ ಕೆ.ಎಸ್ ಈಶ್ವರಪ್ಪ ಅವರು ಹಿರೆತನ ಮಾಡುವ ಸಚಿವಾಲಯ ಅದೇ ಅಲ್ಲವೇ? ವಿಕೇಂದ್ರೀಕರಣ ಅಂದ್ರೆ ಈ ಉದ್ಯೋಗ ಖಾತ್ರಿ ಯೋಜನೆ, ಗ್ರಾಮ ಪಂಚಾಯತಿಯವರು ಮನೆ ಹಂಚುವುದು, ಊರ ಹೊರಗಡೆ ದೊಡ್ಡ ದೊಡ್ಡ ಸ್ವಾಗತ ಕಮಾನು ಕಟ್ಟುವುದು, ಅಷ್ಟೇ ಅಲ್ಲವೇ? ಅಂತ ನೀವು ಕೇಳಬಹುದು.

ಇದು ವಿಕೇಂದ್ರೀಕರಣ ಅನ್ನುವ ವಿಚಾರದ ಕೇವಲ ಒಂದು ಭಾಗ ಅಷ್ಟೇ. ಇದನ್ನು ಹಂತಹಂತವಾಗಿ, ಸರಿಯಾಗಿ ತಿಳಿದುಕೊಳ್ಳೋಣ. ಇದರ ಮೊದಲ ಭಾಗವಾಗಿ ಬೇರೆ ಬೇರೆ ದೇಶಗಳಲ್ಲಿ, ಅಂದ್ರೆ ಉದ್ಯೋಗ ಖಾತ್ರಿಯಂಥಾ ಯೋಜನೆಗಳು ಇರಲಾರದ ದೇಶಗಳಲ್ಲಿ, ಮನೆ ಹಂಚಿಕೆ ಮಾಡದ, ಸ್ವಾಗತ ಕಮಾನು ಕಟ್ಟಲಾರದ ದೇಶಗಳಲ್ಲಿ ಈ ಪರಿಸ್ಥಿತಿ ಹೆಂಗ್ ಐತಿ? ಇದನ್ನ ನೋಡೋಣ.

ನಮ್ಮ ದೋಸ್ತ್ ಡೊನಾಲ್ಡ್ ಕೆಂಪಣ್ಣನವರು ಅಮೆರಿಕ ಅಧ್ಯಕ್ಷರಾಗಿದ್ದ ಕಾಲದಲ್ಲಿ ಒಂದು ಮುಂಜಾವಿನಲ್ಲಿ ಎದ್ದು ಕತ್ತಿ ಝಳಪಿಸಿ ಒಂದು ಮಾತು ಹೇಳಿದರು. ಇಂಗ್ಲಂಡ್‌ನಿಂದ ಬಂದ ವಲಸಿಗರು ಕಟ್ಟಿದ ಈ ದೇಶದಲ್ಲಿ, ಜಗತ್ತಿನ 220 ದೇಶಗಳಿಂದ ಕೆಲಸಗಾರರು ಬಂದು ದುಡಿದು ಶ್ರೀಮಂತಗೊಳಿಸಿದ ಅಮೆರಿಕ ದೇಶದ ಒಳಗೆ ೨೫ ದೇಶಗಳಿಂದ ವಲಸಿಗರು ಬರಬಾರದು ಅಂತ ನಾನು ಒಂದು ಅಭೂತಪೂರ್ವ ಆದೇಶ ಜಾರಿ ಮಾಡಿಬಿಡ್ತೇನೆ ಅಂತ ಹೂಂಕರಿಸಿದರು. ಆ ನನ್‌ಮಗ ಒಬಾಮ ಎಡಗೈನಲ್ಲಿ ಸಹಿ ಮಾಡ್ತಾ ಇದ್ದ, ಅದಕ್ಕೆ ನಾನು ಬಲಗೈನಲ್ಲಿ ಸಹಿ ಮಾಡಿಬಿಡ್ತೇನೆ, ಅಂತ ಮಾಡೇಬಿಟ್ಟರು.

ಅವು ಬಹುತೇಕ ಮುಸ್ಲಿಂ ದೇಶಗಳು ಇದ್ದವು. ಹೀಗಾಗಿ ಮುಸಲ್ಮಾನರ ಮೇಲೆ ದ್ವೇಷ ಇದ್ದ ಅನೇಕರಿಗೆ ಡೊನಾಲ್ಡ್ ಅಪ್ಪನವರು ರಾತ್ರೋ ರಾತ್ರಿ ಹೀರೋ ಆಗಿ ಬಿಟ್ಟರು. ಕೆಲವರು ಅತೀವ ಆಸಕ್ತರು ಉತ್ತರ ಭಾರತದ ಹಳ್ಳಿ ಒಂದರ ಹೆಸರು ಬದಲಿ ಮಾಡಿ ಡೊನಾಲ್ಡ್ ಅಪ್ಪನವರ ಹೆಸರು ಇಟ್ಟರು. ಅವರ ಹೆಸರಿನಲ್ಲಿ ಪೂಜೆ, ಪುನಸ್ಕಾರ ಎಲ್ಲಾ ಮಾಡಿಸಿಬಿಟ್ಟರು.

ಆದ್ರೆ ಈ ಆದೇಶ ಹೊರಬಿದ್ದ ಒಂದೇ ತಿಂಗಳಿನಲ್ಲಿ ಅದು ರದ್ದು ಆಗಿಹೋತು. ಅದನ್ನ ರದ್ದು ಮಾಡಿದ್ದೂ ಯಾರಪ ಅಂದರ, ಒಬ್ಬ ಜಿಲ್ಲಾ ನ್ಯಾಯಾಧೀಶರು. ಸರ್ವೋಚ್ಚ ನ್ಯಾಯಾಲಯ, ಉಚ್ಚ ನ್ಯಾಯಾಲಯದ ಜಡ್ಜ್ ಸಾಹೇಬರು ಅಲ್ಲ. ಬರೆ ಕೌಂಟಿ ಅಂದ್ರ ಜಿಲ್ಲಾ ನ್ಯಾಯಾಧೀಶರು. ಅನೇಕರ ಕನಸಿನ ನಾಡಾದ ಅಮೆರಿಕದಾಗ ಅಧಿಕಾರದ ಶಾಖೆ ಪ್ರಶಾಖೆಗಳು ಹೆಂಗ ಹಬ್ಬಿಕೊಂಡುಬಿಟ್ಟಾವು ಅನ್ನೋದು ಇದರಿಂದ ಸ್ವಲ್ಪ ತಿಳಿಯಬಹುದು.

ಅಲ್ಲವೇ ಮನೋಲ್ಲಾಸಿನಿ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...