HomeUncategorizedಸುದ್ದಿಯೇನೇ ಮನೋಲ್ಲಾಸಿನಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-1

ಸುದ್ದಿಯೇನೇ ಮನೋಲ್ಲಾಸಿನಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-1

- Advertisement -
- Advertisement -

ಆವಾಗಾವಾಗ ಕೆಲ ವ್ಯಕ್ತಿಗಳು, ಸ್ಥಳಗಳು, ವಿಷಯಗಳು ನಮ್ಮ ಮಾಧ್ಯಮಗಳಿಗೆ ಪ್ರಿಯವಾಗಿಬಿಡ್ತಾವ. ಬರೆ ಬರೆ ಅವೇ ಸುದ್ದಿ ಬರಲಿಕ್ಕೆ ಹತ್ತಿಬಿಡ್ತಾವು. ಒಬ್ಬರು ಬರಿತಾರ ಅಂತ ಇನ್ನೊಬ್ಬರು ಬರಿತಾರ. ಟ್ರೆಂಡ್ ಪ್ರಕಾರ ಸುದ್ದಿ ಮಾಡದೇ ಹೋದರೆ ಯಾರು ಏನು ತಿಳ್ಕೋತಾರೋ ಅಂತ ಎಲ್ಲಾರೂ ಕದ್ದು ಮುಚ್ಚಿ ಸುರುಮಾಡಿ ಆಮ್ಯಾಲೆ ಖುಲ್ಲಂ ಖುಲ್ಲಾ ಆಗಿ ಬರಿತಾರ.

ಇಂಥವರಿಗೆ ಮೀಡಿಯಾ ಡಾರ್ಲಿಂಗ್ ಅಂತ ಕರಿತಾರ. ಕನ್ನಡದೊಳಗ ಮಾಧ್ಯಮ ನಲ್ಲ ಅನ್ನಬಹುದೇನೋ. ಈಗ ಸದ್ಯಕ್ಕ ರಾಷ್ಟ್ರ ಮಟ್ಟದ ಮಾಧ್ಯಮ ನಲ್ಲ ಯಾರಪಾ ಅಂದ್ರ ಇಕ್ಬಾಲ್ ಸಿಂಗ್ ಚಹಲ್. ಮುಂಬೈ ಶಹರದೊಳಗ ಕೋವಿಡ್ ಮಹಾಮಾರಿಯನ್ನ ನಿಯಂತ್ರಣ ಮಾಡಿದ ಕೀರ್ತಿ ಇವರಿಗೆ ಹೋಗ್ತದ.

ಮೊದಲಿಗೆ ಈ ಮುಂಬಯಿ ಮೂಲದ ಐಎಎಸ್ ಅಧಿಕಾರಿಯ ಬಗ್ಗೆ ಯಾರಿಗೂ ಗೊತ್ತಿರಲಿಲ್ಲಾ. ಎಂದಿನಂತೆ ನಮ್ಮ ರಾಷ್ಟ್ರಮಟ್ಟದ ಮಾಧ್ಯಮಗಳು ಅವರ ಕೆಲಸ ನೋಡಿದ್ದಿಲ್ಲಾ, ಸುದ್ದಿ ಮಾಡಿದ್ದಿಲ್ಲ. ಅವ್ರ ಕೆಲಸದ ಬಗ್ಗೆ ಅಂತರ ರಾಷ್ಟ್ರೀಯ ಮಾಧ್ಯಮದೊಳಗ ಬಂದಮ್ಯಾಲೆ ಯಾವನಲೇ ಇವ, ನಮಗ ಗೊತ್ತಿರಲಾರದ ಹಂಗ ಮುಂಬೈದಾಗ್ ಇರೋವ, ಅಂತ್ ಹೇಳಿ, ನಮ್ಮ ಪತ್ರಿಕೆಯವರು ಆ ಅಧಿಕಾರಿಯನ್ನ ಹುಡುಕಿಕೊಂಡು ಹೋಗಿ, ಮಾತಾಡಿ, ಸುದ್ದಿ ಮಾಡಿದರು. ಅದನ್ನು ನೋಡಿದ ಪಂಥ ಪ್ರಧಾನ ಸೇವಕರು ಹಾಗು ಅರ್ಥ ಸಚಿವರ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡೋ ಖಾಸಗಿ ಕಂಪನಿಯ ಪ್ರಸಾಧನ ತಜ್ಞರು ಆ ಸುದ್ದಿಯ ಜಾಡನ್ನು ಆಧರಿಸಿ ಪ್ರಧಾನ ಮಂತ್ರಿಯವರು, ಹಣಕಾಸು ಸಚಿವರು ಇಕ್ಬಾಲ್ ಸಿಂಗ್ ಅವರಿಗೆ ಅಭಿನಂದನೆ ಕೋರಿದ ಹಾಗೆ ಟ್ವೀಟ್ ಮಾಡಿದರು. ಆಮ್ಯಾಲೆ ಸುರುವಾತು, ಸುದ್ದಿಯ ಮ್ಯಾಲೆ ಸುದ್ದಿ. ಅದು ಸೋಶಿಯಲ್ ಮೀಡಿಯಾದೊಳಗೂ ಬಂತು, ಆಂಟಿಸೋಶಿಯಲ್ ಮೀಡಿಯಾದೊಳಗೂ ಬಂತು. ಕೆಲವರು ಇದನ್ನು ಮುಂಬೈ ಯಶಸ್ಸು ಅಂತ ಬರೆದರು, ಇನ್ನು ಕೆಲವರು ಮಹಾರಾಷ್ಟ್ರದ ಹೆಮ್ಮೆಯ ಪುತ್ರ ಅಂತ ಹಂಚಿಕೊಂಡರು. ಇನ್ನೂ ಕೆಲವರು ‘ಇಷ್ಟು ಒಳ್ಳೆ ಮನುಷ್ಯಾ ಇವಾ ಆಗಿದ್ದರ, ಇವನ ಹೆಸರು ಇಕ್ಬಾಲ್ ಅಂತ್ ಯಾಕ್ ಐತಿ? ಅವ್ರ ಅಪ್ಪಾ ಅವ್ವಗ ಹೆಸರು ಇಡುವ ಮುಂದ ತಿಳಿಯಲಿಲ್ಲೇನೋ ಅಂತ ಮುಗ್ಧ ಪ್ರಶ್ನೆ ಕೇಳಿಕೊಂಡರು.

ನಮ್ಮನ್ನು ನೋಡಿ ನಗುತ್ತಿದ್ದರೆ, ‘ಮುಂಬೈ ಮಾದರಿ’ಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ಇಷ್ಟಾಗಿಯೂ ಈ ಅಧಿಕಾರಿ ಮಾಡಿದ ಮ್ಯಾಜಿಕ್ ಏನು? ಕೋವಿಡ್ ರೋಗಿಗಳನ್ನು ಅವರವರ ಮನೆಬೀದಿ-ಬಡಾವಣೆಗಳಲ್ಲಿಯೇ ಪತ್ತೆ ಮಾಡಿ, ಅದರಲ್ಲಿ ಶೇ.90 ಜನ ತಮ್ಮ ತಮ್ಮ ಮನೆಯಲ್ಲಿಯೇ ಉಪಚಾರ ಪಡೆದು, ಇತರರು ಆಯಾ ವಾರ್ಡ್‌ನ ಕೋವಿಡ್ ಕಾಳಜಿ ಕೇಂದ್ರದೊಳಗ ಇರೋ ಹಂಗ ಮಾಡಿ, ಅದರೊಳಗೆ ಭಾರಿ ಭಯಾನಕ ಪ್ರಕರಣ ಮಾತ್ರ ಅಸ್ಪತ್ರೆಗೆ ಹೋಗೋ ಹಂಗ್ ನೋಡಿಕೊಂಡುಬಿಟ್ಟರು. ತಮ್ಮ ಕಚೇರಿಯ ವಾತ-ಪಿತ್ತ ಅನುಕೂಲಿತ ಕುರ್ಚೆ ಬಿಟ್ಟು ಏಳದ ಸರಕಾರಿ ಅಧಿಕಾರಿವೈದ್ಯರನ್ನ ರೋಗಿಗಳ ಮನೆಗೆ ಹೋಗುವ ಹಂಗ ಮಾಡಿದರು. ರಾಜ್ಯ-ಜಿಲ್ಲೆತಾಲೂಕು-ಗ್ರಾಮಮಟ್ಟದ ಕೆಲಸಗಳು ಆಯಾ ಮಟ್ಟದಲ್ಲಿಯೇ ಆಗ್ಬೇಕು. ಅರೋಗ್ಯ ಸೇವೆ ಸಹಿತ, ಗ್ರಾಮಮಟ್ಟದಿಂದ ಆರಂಭವಾಗಿ ತಾಲೂಕು-ಜಿಲ್ಲೆರಾಜ್ಯಮಟ್ಟಗಳಿಗೆ ಮುಟ್ಟಬೇಕು, ಅನಗತ್ಯವಾಗಿ ಯಾವ ಹಳ್ಳಿಯ ರೋಗಿಯೂ ಸಹಿತ ಜಿಲ್ಲೆ ಅಥವಾ ರಾಜ್ಯ ಮಟ್ಟದ ಆಸ್ಪತ್ರೆಗೆ ಹೋಗೋ ಪ್ರಸಂಗ ಬರಬಾರದು ಅಂತ ನೋಡಿಕೊಂಡರು. ನಮ್ಮ ರಾಜ್ಯದಲ್ಲೇ ಇದು ಸಾಧ್ಯ ಅದ ಏನು? ಹಳ್ಳಿಯ ಆಸ್ಪತ್ರೆಯೊಳಗ ರೈತರಿಗೆ ಒಂದು ಹಾವುಚೇಳು ಕಚ್ಚಿದರ ಕೊಡೋ ಔಷಧ ಇರೋದಿಲ್ಲ. ಎಲ್ಲದಕ್ಕೂ ದೊಡ್ಡಾಸ್ಪತ್ರೆಗೆ ಕಳಿಸೋ ದೊಡ್ಡ ರೋಗ ಹಳ್ಳಿ-ತಾಲೂಕು-ಜಿಲ್ಲಾ ಆಸ್ಪತ್ರೆ ವೈದ್ಯರಿಗೆ ಇರತದ.

ನಮ್ಮ ಸರಕಾರ ರೋಗಿಗಳನ್ನ ಗುಣ ಮಾಡೋ ಮೊದಲು ಇಂಥಹ ಆಸ್ಪತ್ರೆ ಹಾಗೂ ವೈದ್ಯರಿಗೆ ಔಷಧಿ ಕೊಡಬೇಕು. ‘ಎಲ್ಲಾ ರೋಗಕ್ಕೂ ಬೆಂಗಳೂರಿನಾಗ ಮಾತ್ರ ಔಷಧಿ ಅಂತ ನಂಬಿರುವ ಅಧಿಕಾರಿಮಂತ್ರಿಗಳನ್ನು ಮೊದಲಿಗೆ ಹಳ್ಳಿಯ ಆಸ್ಪತ್ರೆ ನೋಡಲಿಕ್ಕೆ ಕಳಿಸಬೇಕು.

ಇಲ್ಲೇ ಒಂದು ಸ್ವಲ್ಪ ಪಕ್ಕಕ್ಕೆ ಸರಿದು ಕರ್ಮಸಿದ್ಧಾಂತ ನೆನಪು ಮಾಡಿಕೊಳ್ಳೋಣ. ಭಾರತೀಯ ದರ್ಶನದ ಅನುಸಾರ ಒಂದು ಕೆಲಸವನ್ನು ‘ಯಾರು ಮಾಡಿದರು? ಅನ್ನುವುದು ಮುಖ್ಯ ಅಲ್ಲ. ‘ಯಾವ ಕೆಲಸ ಆತು?, ಅದರಿಂದ ಯಾರಿಗೆ ಅನುಕೂಲ ಆತು?, ಯಾರಿಗೆ ಅನಾನುಕೂಲ ಆತು? ಅನ್ನೋದು ಮುಖ್ಯ.

ಆದರೆ, ಪ್ರತಿ ಸಾರಿ ಆಗುವಂತೆ, ನಮ್ಮ ಮಾಧ್ಯಮಗಳು ಯಾರನ್ನೋ ಹೀರೋ ಮಾಡಲಿಕ್ಕೆ ಹೋಗಿ ‘ಯಾರು ಅನ್ನುವುದನ್ನು ದೊಡ್ಡದು ಮಾಡಿ, ‘ಏನು ಅನ್ನುವುದನ್ನು ಸಣ್ಣದು ಮಾಡಿಬಿಟ್ಟವು.

ಇಕ್ಬಾಲ್ ಸಿಂಗ್ ಅವರು ಮಾಡಿದ ಕೆಲಸ ಯಾವುದು? ಅದರ ಹಿಂದಿನ ನೀತಿ-ನಿಯಮ ಯಾವುವು? ಅವುಗಳಿಂದ ಬೇರೆ ಯಾರು ಯಾವ ಪಾಠ ಕಲಿಯಬಹುದು? ಮುಂಬೈಯಲ್ಲಿ ಸಲ್ಲಿದ್ದು ಇನ್ನೆಲ್ಲಿ ಸಲ್ಲುವುದು ಅನ್ನುವುದನ್ನು ವಿಚಾರ ಮಾಡಲಿಕ್ಕೆ ಹೋಗಲೇ ಇಲ್ಲ.

ಇಷ್ಟಕ್ಕೂ ಅವರು ಮಾಡಿದ್ದೂ ಮ್ಯಾಜಿಕ್ ಅಲ್ಲ. ಅದು ನಮ್ಮ ಸಂವಿಧಾನದ ಮೂಲ ತತ್ವ ಗಳಲ್ಲಿ ಒಂದು. ಅದನ್ನು ಎಲ್ಲಾ ಅಧಿಕಾರಿಗಳು, ರಾಜಕಾರಣಿಗಳು, ನೀತಿ ನಿರೂಪಕರು, ಜಾರಿ ಮಾಡುವ ಸಿಬ್ಬಂದಿಗಳು, ಎಲ್ಲರೂ ಪಾಲಿಸಲೇಬೇಕಾದದ್ದು. ಈ ದಂಡಪಿಂಡಗಳು ಉಪಯೋಗಿಸಬೇಕಾಗಿದ್ದ, ಆದರೆ ಬಳಸದೆ ಬಿಟ್ಟ ಮಂತ್ರ ದಂಡದ ಹೆಸರು ‘ವಿಕೇಂದ್ರೀಕರಣ.

‘ಹಿಂಗ ಅಂದ್ರ ಅದರಾಗ ಹೊಸಾದು ಏನು ಐತಿ? ನಮ್ಮ ಮಧ್ಯದ ‘ಗೋಡ್ಬೋಲೆ ಅಂದ್ರೆ ಬರೀ ಒಳ್ಳೊಳ್ಳೆ ಮಾತಾಡುವ ಕೆ.ಎಸ್ ಈಶ್ವರಪ್ಪ ಅವರು ಹಿರೆತನ ಮಾಡುವ ಸಚಿವಾಲಯ ಅದೇ ಅಲ್ಲವೇ? ವಿಕೇಂದ್ರೀಕರಣ ಅಂದ್ರೆ ಈ ಉದ್ಯೋಗ ಖಾತ್ರಿ ಯೋಜನೆ, ಗ್ರಾಮ ಪಂಚಾಯತಿಯವರು ಮನೆ ಹಂಚುವುದು, ಊರ ಹೊರಗಡೆ ದೊಡ್ಡ ದೊಡ್ಡ ಸ್ವಾಗತ ಕಮಾನು ಕಟ್ಟುವುದು, ಅಷ್ಟೇ ಅಲ್ಲವೇ? ಅಂತ ನೀವು ಕೇಳಬಹುದು.

ಇದು ವಿಕೇಂದ್ರೀಕರಣ ಅನ್ನುವ ವಿಚಾರದ ಕೇವಲ ಒಂದು ಭಾಗ ಅಷ್ಟೇ. ಇದನ್ನು ಹಂತಹಂತವಾಗಿ, ಸರಿಯಾಗಿ ತಿಳಿದುಕೊಳ್ಳೋಣ. ಇದರ ಮೊದಲ ಭಾಗವಾಗಿ ಬೇರೆ ಬೇರೆ ದೇಶಗಳಲ್ಲಿ, ಅಂದ್ರೆ ಉದ್ಯೋಗ ಖಾತ್ರಿಯಂಥಾ ಯೋಜನೆಗಳು ಇರಲಾರದ ದೇಶಗಳಲ್ಲಿ, ಮನೆ ಹಂಚಿಕೆ ಮಾಡದ, ಸ್ವಾಗತ ಕಮಾನು ಕಟ್ಟಲಾರದ ದೇಶಗಳಲ್ಲಿ ಈ ಪರಿಸ್ಥಿತಿ ಹೆಂಗ್ ಐತಿ? ಇದನ್ನ ನೋಡೋಣ.

ನಮ್ಮ ದೋಸ್ತ್ ಡೊನಾಲ್ಡ್ ಕೆಂಪಣ್ಣನವರು ಅಮೆರಿಕ ಅಧ್ಯಕ್ಷರಾಗಿದ್ದ ಕಾಲದಲ್ಲಿ ಒಂದು ಮುಂಜಾವಿನಲ್ಲಿ ಎದ್ದು ಕತ್ತಿ ಝಳಪಿಸಿ ಒಂದು ಮಾತು ಹೇಳಿದರು. ಇಂಗ್ಲಂಡ್‌ನಿಂದ ಬಂದ ವಲಸಿಗರು ಕಟ್ಟಿದ ಈ ದೇಶದಲ್ಲಿ, ಜಗತ್ತಿನ 220 ದೇಶಗಳಿಂದ ಕೆಲಸಗಾರರು ಬಂದು ದುಡಿದು ಶ್ರೀಮಂತಗೊಳಿಸಿದ ಅಮೆರಿಕ ದೇಶದ ಒಳಗೆ ೨೫ ದೇಶಗಳಿಂದ ವಲಸಿಗರು ಬರಬಾರದು ಅಂತ ನಾನು ಒಂದು ಅಭೂತಪೂರ್ವ ಆದೇಶ ಜಾರಿ ಮಾಡಿಬಿಡ್ತೇನೆ ಅಂತ ಹೂಂಕರಿಸಿದರು. ಆ ನನ್‌ಮಗ ಒಬಾಮ ಎಡಗೈನಲ್ಲಿ ಸಹಿ ಮಾಡ್ತಾ ಇದ್ದ, ಅದಕ್ಕೆ ನಾನು ಬಲಗೈನಲ್ಲಿ ಸಹಿ ಮಾಡಿಬಿಡ್ತೇನೆ, ಅಂತ ಮಾಡೇಬಿಟ್ಟರು.

ಅವು ಬಹುತೇಕ ಮುಸ್ಲಿಂ ದೇಶಗಳು ಇದ್ದವು. ಹೀಗಾಗಿ ಮುಸಲ್ಮಾನರ ಮೇಲೆ ದ್ವೇಷ ಇದ್ದ ಅನೇಕರಿಗೆ ಡೊನಾಲ್ಡ್ ಅಪ್ಪನವರು ರಾತ್ರೋ ರಾತ್ರಿ ಹೀರೋ ಆಗಿ ಬಿಟ್ಟರು. ಕೆಲವರು ಅತೀವ ಆಸಕ್ತರು ಉತ್ತರ ಭಾರತದ ಹಳ್ಳಿ ಒಂದರ ಹೆಸರು ಬದಲಿ ಮಾಡಿ ಡೊನಾಲ್ಡ್ ಅಪ್ಪನವರ ಹೆಸರು ಇಟ್ಟರು. ಅವರ ಹೆಸರಿನಲ್ಲಿ ಪೂಜೆ, ಪುನಸ್ಕಾರ ಎಲ್ಲಾ ಮಾಡಿಸಿಬಿಟ್ಟರು.

ಆದ್ರೆ ಈ ಆದೇಶ ಹೊರಬಿದ್ದ ಒಂದೇ ತಿಂಗಳಿನಲ್ಲಿ ಅದು ರದ್ದು ಆಗಿಹೋತು. ಅದನ್ನ ರದ್ದು ಮಾಡಿದ್ದೂ ಯಾರಪ ಅಂದರ, ಒಬ್ಬ ಜಿಲ್ಲಾ ನ್ಯಾಯಾಧೀಶರು. ಸರ್ವೋಚ್ಚ ನ್ಯಾಯಾಲಯ, ಉಚ್ಚ ನ್ಯಾಯಾಲಯದ ಜಡ್ಜ್ ಸಾಹೇಬರು ಅಲ್ಲ. ಬರೆ ಕೌಂಟಿ ಅಂದ್ರ ಜಿಲ್ಲಾ ನ್ಯಾಯಾಧೀಶರು. ಅನೇಕರ ಕನಸಿನ ನಾಡಾದ ಅಮೆರಿಕದಾಗ ಅಧಿಕಾರದ ಶಾಖೆ ಪ್ರಶಾಖೆಗಳು ಹೆಂಗ ಹಬ್ಬಿಕೊಂಡುಬಿಟ್ಟಾವು ಅನ್ನೋದು ಇದರಿಂದ ಸ್ವಲ್ಪ ತಿಳಿಯಬಹುದು.

ಅಲ್ಲವೇ ಮನೋಲ್ಲಾಸಿನಿ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...