Homeಮುಖಪುಟಬಿಜೆಪಿ ಆಡಳಿತದಲ್ಲಿ ಮಾಧ್ಯಮಗಳ ಸ್ವಾತಂತ್ರ್ಯ ಕಣ್ಮರೆಯಾಗಿದೆ: ಪಿಣರಾಯಿ ವಿಜಯನ್

ಬಿಜೆಪಿ ಆಡಳಿತದಲ್ಲಿ ಮಾಧ್ಯಮಗಳ ಸ್ವಾತಂತ್ರ್ಯ ಕಣ್ಮರೆಯಾಗಿದೆ: ಪಿಣರಾಯಿ ವಿಜಯನ್

- Advertisement -
- Advertisement -

ಬಿಜೆಪಿ ಆಡಳಿತದಲ್ಲಿ ಮಾಧ್ಯಮಗಳ ಸ್ವಾತಂತ್ರ್ಯ ಕಣ್ಮರೆಯಾಗಿದೆ, ಸಂಘ ಪರಿವಾರವು ತಮ್ಮ ಆಡಳಿತವನ್ನು ಹೊಗಳದ ಮಾದ್ಯಮಗಳನ್ನು ನಿರಂತರವಾಗಿ ಗುರಿಯಾಗಿಸುತ್ತದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಬಿಬಿಸಿಯ ಭಾರತೀಯ ನ್ಯೂಸ್ ರೂಂ ಕಾರ್ಯಾಚರಣೆಯನ್ನು ನಿಲ್ಲಿಸಿದೆ ಎಂಬ ಸುದ್ದಿ ವರದಿಗಳಿಗೆ ಅವರು ಪ್ರತಿಕ್ರಿಯಿಸಿದ ಪಿಣರಾಯ್‌ ವಿಜಯನ್‌, ಬ್ರಿಟನ್ ಮೂಲದ ಸುದ್ದಿಸಂಸ್ಥೆ ಬಿಬಿಸಿ ಭಾರತದಲ್ಲಿನ ತನ್ನ ಕಚೇರಿಗೆ ಬೀಗ ಹಾಕಬೇಕಾಯಿತು. ಆದಾಯ ತೆರಿಗೆ ಇಲಾಖೆಯ ನಿರಂತರ ಪ್ರತೀಕಾರದ ಕ್ರಮಗಳಿಂದಾಗಿ ಬಿಬಿಸಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲು ಒತ್ತಾಯಿಸಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಮಾಧ್ಯಮ ಸ್ವಾತಂತ್ರ್ಯ ಕಣ್ಮರೆಯಾಗಿದೆ, ಸಂಘ ಪರಿವಾರವು, ಬಿಜೆಪಿ ಆಡಳಿತವನ್ನು ಹಾಡಿ ಹೊಗಳದ ಮಾಧ್ಯಮಗಳನ್ನು ನಿರಂತರವಾಗಿ ಗುರಿಯಾಗಿಸುತ್ತದೆ. ಚುನಾವಣೆಯು ಅಂತಹ ಸಮಸ್ಯೆಗಳನ್ನು ಪರಿಹರಿಸಲು ಇರುವ ಒಂದು ಸದವಕಾಶವಾಗಿದೆ ಎಂದು ಹೇಳಿದ್ದಾರೆ.

ಸರ್ವಾಧಿಕಾರಿ ಆಡಳಿತಗಳು ಯಾವಾಗಲೂ ಮಾಧ್ಯಮವನ್ನು ನಿಯಂತ್ರಿಸಲು ಪ್ರಯತ್ನಿಸುತ್ತವೆ ಮತ್ತು ಭಾರತದ ತುರ್ತು ಪರಿಸ್ಥಿತಿಯ ಸ್ಮರಣೀಯ ಲಕ್ಷಣಗಳು ಬಿಜೆಪಿ ಆಡಳಿತದಲ್ಲಿ ಮರುಕಳಿಸುತ್ತಿವೆ. 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು ನಿರಂತರವಾಗಿ ಕುಸಿಯುತ್ತಿದೆ. ಪ್ಯಾರಿಸ್ ಮೂಲದ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್‌ನ 2023ರ ವರದಿಯ ಪ್ರಕಾರ, ಭಾರತದ ಪತ್ರಿಕಾ ಸ್ವಾತಂತ್ರ್ಯ ಶ್ರೇಯಾಂಕವು 180 ದೇಶಗಳಲ್ಲಿ 150ರಿಂದ 161ಕ್ಕೆ ಇಳಿದಿದೆ ಎಂದು  ಹೇಳಿದ್ದಾರೆ.

ಸಂಘಪರಿವಾರದ ವಿರುದ್ಧ ವರದಿ ಮಾಡುವ ಧೈರ್ಯ ತೋರುವ ಪತ್ರಕರ್ತರ ಮೇಲೆ ನಿರಂತರ ದಾಳಿ ನಡೆಸುತ್ತಿರುವುದಕ್ಕೆ ರಾಷ್ಟ್ರ ಸಾಕ್ಷಿಯಾಗಿದೆ. ವಿಜಯನ್ ಅವರು 2020ರಲ್ಲಿ ದೆಹಲಿ ಗಲಭೆಗಳ ಬಗ್ಗೆ ಪ್ರಸಾರ ಮಾಡಿದ್ದಕ್ಕೆ ಕೇರಳದ ಎರಡು ಸುದ್ದಿವಾಹಿನಿಗಳ ಪರವಾನಗಿಯನ್ನು ರದ್ದುಗೊಳಿಸಿದ ಘಟನೆಯನ್ನು ಉಲ್ಲೇಖಿಸಿದ್ದಾರೆ. ಸರ್ವಾಧಿಕಾರಿ ಸರ್ಕಾರಗಳು ಮಾಧ್ಯಮಗಳನ್ನು ತನ್ನ ಮುಷ್ಠಿಯಲ್ಲಿ ಇಟ್ಟುಕೊಳ್ಳಲು ಸದಾ ಪ್ರಯತ್ನಿಸುತ್ತವೆ. ಕೇಂದ್ರ ಸರ್ಕಾರದ ಆಡಳಿತ ವೈಖರಿಯನ್ನು ಹಾಡಿ ಹೊಗಳದ ಮಾಧ್ಯಮಗಳನ್ನು ನಿರ್ದಾಕ್ಷಿಣ್ಯವಾಗಿ ಗುರಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬ: ಕೇಂದ್ರದಿಂದ ಪ್ರತಿಕ್ರಿಯೆ ಕೋರಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...