Homeಮುಖಪುಟಬಿಜೆಪಿ ಆಡಳಿತದಲ್ಲಿ ಮಾಧ್ಯಮಗಳ ಸ್ವಾತಂತ್ರ್ಯ ಕಣ್ಮರೆಯಾಗಿದೆ: ಪಿಣರಾಯಿ ವಿಜಯನ್

ಬಿಜೆಪಿ ಆಡಳಿತದಲ್ಲಿ ಮಾಧ್ಯಮಗಳ ಸ್ವಾತಂತ್ರ್ಯ ಕಣ್ಮರೆಯಾಗಿದೆ: ಪಿಣರಾಯಿ ವಿಜಯನ್

- Advertisement -
- Advertisement -

ಬಿಜೆಪಿ ಆಡಳಿತದಲ್ಲಿ ಮಾಧ್ಯಮಗಳ ಸ್ವಾತಂತ್ರ್ಯ ಕಣ್ಮರೆಯಾಗಿದೆ, ಸಂಘ ಪರಿವಾರವು ತಮ್ಮ ಆಡಳಿತವನ್ನು ಹೊಗಳದ ಮಾದ್ಯಮಗಳನ್ನು ನಿರಂತರವಾಗಿ ಗುರಿಯಾಗಿಸುತ್ತದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಬಿಬಿಸಿಯ ಭಾರತೀಯ ನ್ಯೂಸ್ ರೂಂ ಕಾರ್ಯಾಚರಣೆಯನ್ನು ನಿಲ್ಲಿಸಿದೆ ಎಂಬ ಸುದ್ದಿ ವರದಿಗಳಿಗೆ ಅವರು ಪ್ರತಿಕ್ರಿಯಿಸಿದ ಪಿಣರಾಯ್‌ ವಿಜಯನ್‌, ಬ್ರಿಟನ್ ಮೂಲದ ಸುದ್ದಿಸಂಸ್ಥೆ ಬಿಬಿಸಿ ಭಾರತದಲ್ಲಿನ ತನ್ನ ಕಚೇರಿಗೆ ಬೀಗ ಹಾಕಬೇಕಾಯಿತು. ಆದಾಯ ತೆರಿಗೆ ಇಲಾಖೆಯ ನಿರಂತರ ಪ್ರತೀಕಾರದ ಕ್ರಮಗಳಿಂದಾಗಿ ಬಿಬಿಸಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲು ಒತ್ತಾಯಿಸಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಮಾಧ್ಯಮ ಸ್ವಾತಂತ್ರ್ಯ ಕಣ್ಮರೆಯಾಗಿದೆ, ಸಂಘ ಪರಿವಾರವು, ಬಿಜೆಪಿ ಆಡಳಿತವನ್ನು ಹಾಡಿ ಹೊಗಳದ ಮಾಧ್ಯಮಗಳನ್ನು ನಿರಂತರವಾಗಿ ಗುರಿಯಾಗಿಸುತ್ತದೆ. ಚುನಾವಣೆಯು ಅಂತಹ ಸಮಸ್ಯೆಗಳನ್ನು ಪರಿಹರಿಸಲು ಇರುವ ಒಂದು ಸದವಕಾಶವಾಗಿದೆ ಎಂದು ಹೇಳಿದ್ದಾರೆ.

ಸರ್ವಾಧಿಕಾರಿ ಆಡಳಿತಗಳು ಯಾವಾಗಲೂ ಮಾಧ್ಯಮವನ್ನು ನಿಯಂತ್ರಿಸಲು ಪ್ರಯತ್ನಿಸುತ್ತವೆ ಮತ್ತು ಭಾರತದ ತುರ್ತು ಪರಿಸ್ಥಿತಿಯ ಸ್ಮರಣೀಯ ಲಕ್ಷಣಗಳು ಬಿಜೆಪಿ ಆಡಳಿತದಲ್ಲಿ ಮರುಕಳಿಸುತ್ತಿವೆ. 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು ನಿರಂತರವಾಗಿ ಕುಸಿಯುತ್ತಿದೆ. ಪ್ಯಾರಿಸ್ ಮೂಲದ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್‌ನ 2023ರ ವರದಿಯ ಪ್ರಕಾರ, ಭಾರತದ ಪತ್ರಿಕಾ ಸ್ವಾತಂತ್ರ್ಯ ಶ್ರೇಯಾಂಕವು 180 ದೇಶಗಳಲ್ಲಿ 150ರಿಂದ 161ಕ್ಕೆ ಇಳಿದಿದೆ ಎಂದು  ಹೇಳಿದ್ದಾರೆ.

ಸಂಘಪರಿವಾರದ ವಿರುದ್ಧ ವರದಿ ಮಾಡುವ ಧೈರ್ಯ ತೋರುವ ಪತ್ರಕರ್ತರ ಮೇಲೆ ನಿರಂತರ ದಾಳಿ ನಡೆಸುತ್ತಿರುವುದಕ್ಕೆ ರಾಷ್ಟ್ರ ಸಾಕ್ಷಿಯಾಗಿದೆ. ವಿಜಯನ್ ಅವರು 2020ರಲ್ಲಿ ದೆಹಲಿ ಗಲಭೆಗಳ ಬಗ್ಗೆ ಪ್ರಸಾರ ಮಾಡಿದ್ದಕ್ಕೆ ಕೇರಳದ ಎರಡು ಸುದ್ದಿವಾಹಿನಿಗಳ ಪರವಾನಗಿಯನ್ನು ರದ್ದುಗೊಳಿಸಿದ ಘಟನೆಯನ್ನು ಉಲ್ಲೇಖಿಸಿದ್ದಾರೆ. ಸರ್ವಾಧಿಕಾರಿ ಸರ್ಕಾರಗಳು ಮಾಧ್ಯಮಗಳನ್ನು ತನ್ನ ಮುಷ್ಠಿಯಲ್ಲಿ ಇಟ್ಟುಕೊಳ್ಳಲು ಸದಾ ಪ್ರಯತ್ನಿಸುತ್ತವೆ. ಕೇಂದ್ರ ಸರ್ಕಾರದ ಆಡಳಿತ ವೈಖರಿಯನ್ನು ಹಾಡಿ ಹೊಗಳದ ಮಾಧ್ಯಮಗಳನ್ನು ನಿರ್ದಾಕ್ಷಿಣ್ಯವಾಗಿ ಗುರಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬ: ಕೇಂದ್ರದಿಂದ ಪ್ರತಿಕ್ರಿಯೆ ಕೋರಿದ ಸುಪ್ರೀಂಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...