Homeಮುಖಪುಟಆರೋಪಿ ಬ್ರಿಜ್‌ಭೂಷಣ್‌ಗೆ ಮಾಧ್ಯಮಗಳು ಸಹಕರಿಸುತ್ತಿವೆ: ಪ್ರತಿಭಟನಾನಿರತ ಕುಸ್ತಿಪಟುಗಳ ಆರೋಪ

ಆರೋಪಿ ಬ್ರಿಜ್‌ಭೂಷಣ್‌ಗೆ ಮಾಧ್ಯಮಗಳು ಸಹಕರಿಸುತ್ತಿವೆ: ಪ್ರತಿಭಟನಾನಿರತ ಕುಸ್ತಿಪಟುಗಳ ಆರೋಪ

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ ವಿರುದ್ಧ ದೇಶದ ಅಗ್ರ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಮುಖ್ಯಸ್ಥ, ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ಮಾಧ್ಯಮಗಳು ಸಹಾಯ ಮಾಡುತ್ತಿವೆ; ನಮಗಿಂತ ಹೆಚ್ಚಾಗಿ ಆತನಿಗೆ ಸಹಕರಿಸುತ್ತಿವೆ ಎಂದು ಪ್ರತಿಭಟನಾನಿರತ ಕುಸ್ತಿಪಟುಗಳು ಭಾನುವಾರ ಆರೋಪಿಸಿದ್ದಾರೆ. “ಆರೋಪಿ ಬ್ರಿಜ್‌ ಭೂಷಣ್‌ ಮಾತನಾಡಲು ವೇದಿಕೆ ಕಲ್ಪಿಸಬಾರದು” ಎಂದು ಅವರು ಮನವಿ ಮಾಡಿದ್ದಾರೆ.

ಲೈಂಗಿಕ ಕಿರುಕುಳದ ಆರೋಪವನ್ನು ಬ್ರಿಜ್ ಭೂಷಣ್ ಮೇಲೆ ಮಹಿಳಾ ಕುಸ್ತಿಪಟುಗಳು ಮಾಡಿದ್ದಾರೆ. “ಈ ಆರೋಪಗಳ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದೇನೆ, ಕ್ರೀಡಾಪಟುಗಳ ಪ್ರತಿಭಟನೆಯು ರಾಜಕೀಯ ಪ್ರೇರಿತವಾಗಿದೆ” ಎಂದು ಬ್ರಿಜ್ ಭೂಷಣ್‌ ಹೇಳಿಕೆ ನೀಡಿದ್ದಾರೆ.

ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ 12 ವರ್ಷ ಪೂರೈಸಿರುವ, ಮತ್ತೆ ಪದಾಧಿಕಾರಿಯಾಗಲು ಅನರ್ಹರಾಗಿರುವ ಬಿಜೆಪಿ ಸಂಸದನ ವಿರುದ್ಧ ದೆಹಲಿ ಪೊಲೀಸರು ಪೋಕ್ಸೊ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎರಡು ಪ್ರಕರಣ ದಾಖಲಿಸಿದ್ದಾರೆ.

“ಮಾಧ್ಯಮವು ಆಟಗಾರರಿಗಿಂತ ಹೆಚ್ಚಾಗಿ ಬ್ರಿಜ್ ಭೂಷಣ್ ಅವರನ್ನು ಬೆಂಬಲಿಸುತ್ತಿದೆ. ನೀವು ಅವರ ಕ್ರಿಮಿನಲ್ ದಾಖಲೆಗಳನ್ನು ನೋಡುತ್ತೀರಿ. ಇಲ್ಲಿ ಕುಳಿತಿರುವ ಯಾವುದೇ ಆಟಗಾರ ಅಥವಾ ಇತರ ಕ್ರೀಡೆಗಳ ಆಟಗಾರರು ಕ್ರಿಮಿನಲ್ ದಾಖಲೆಯನ್ನು ಹೊಂದಿದ್ದಾರೆಯೇ?” ಎಂದು ಮಾಧ್ಯಮ ಸಂವಾದದ ವೇಳೆ ಕುಸ್ತಿಪಟು ಬಜರಂಗ್ ಪುನಿಯಾ ಪ್ರಶ್ನಿಸಿದ್ದಾರೆ.

ಟೋಕಿಯೊ ಕ್ರೀಡಾಕೂಟದ ಕಂಚಿನ ಪದಕ ವಿಜೇತರಾದ ಅವರು, “ಈ ದೇಶದಲ್ಲಿ ಸಂಸದರಾಗುವುದಕ್ಕಿಂತ ಒಲಿಂಪಿಕ್ ಪದಕವನ್ನು ಗೆಲ್ಲುವುದು ಹೆಚ್ಚು ಕಷ್ಟ” ಎಂಬ ಸಂದೇಶವನ್ನು ರವಾನಿಸಲು ಪ್ರಯತ್ನಿಸಿದ್ದಾರೆ.

“ಆಟಗಾರರು ದೇಶಕ್ಕಾಗಿ ಪದಕಗಳನ್ನು ಗೆಲ್ಲುತ್ತಾರೆ, ಆದರೆ ಇವರು (ಬ್ರಿಜ್ ಭೂಷಣ್) ಪದಕ ವಿಜೇತರನ್ನು ಪ್ರಶ್ನಿಸುತ್ತಿದ್ದಾರೆ. ಈ ದೇಶದಲ್ಲಿ ಎಷ್ಟು ಜನರು ಸಂಸದರಾಗುತ್ತಾರೆ ಮತ್ತು ಎಷ್ಟು ಜನರು ಒಲಿಂಪಿಕ್ ಪದಕಗಳನ್ನು ಗೆದ್ದಿದ್ದಾರೆ? ಇಲ್ಲಿಯವರೆಗೆ, ಒಲಿಂಪಿಕ್ ಪದಕ ವಿಜೇತರು ಅಷ್ಟೇನೂ ಇಲ್ಲ, ಆದರೆ ಸಾವಿರಾರು ಜನರು ಸಂಸದರಾಗಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ಕುಸ್ತಿಪಟುಗಳು ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಬ್ರಿಜ್ ಭೂಷಣ್ ಆರೋಪ ನಿರಾಧಾರ ಎಂದು ಡಬಲ್ ವರ್ಲ್ಡ್ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ತಿಳಿಸಿದ್ದಾರೆ.

“ನಾವು ಯಾವುದೇ ರಾಜಕೀಯದಲ್ಲಿ ತೊಡಗಿಸಿಕೊಂಡಿಲ್ಲ, ನಾವು ಹೃದಯದಿಂದ ನೇರವಾಗಿ ಮಾತನಾಡುತ್ತೇವೆ ಮತ್ತು ಅದು ಬೆಸೆಯುತ್ತಿದೆ, ಅದಕ್ಕಾಗಿಯೇ ಇಲ್ಲಿ ಅನೇಕ ಜನರು ನಮ್ಮ ಬೆಂಬಲಕ್ಕೆ ಕುಳಿತಿದ್ದಾರೆ. ಬ್ರಿಜ್ ಭೂಷಣ್ ಮಾತನಾಡಲು ವೇದಿಕೆಯನ್ನು ನೀಡಬೇಡಿ” ಎಂದು ಅವರು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

“ಅಂತಹ ಕ್ರಿಮಿನಲ್‌ಗೆ ನೀವು ವೇದಿಕೆಯನ್ನು ಹೇಗೆ ನೀಡುತ್ತೀರಿ ಎಂದು ನಾನು ಪ್ರಶ್ನಿಸುತ್ತೇನೆ. ನೀವೇ ಕೇಳಿಕೊಳ್ಳಿ. ನೀವು ಅದನ್ನು ಮಾಡದಿದ್ದರೆ ಅರ್ಧದಷ್ಟು ಸಮಸ್ಯೆಗಳು ಪರಿಹಾರವಾಗುತ್ತವೆ. ಆ ವ್ಯಕ್ತಿ ಇನ್ನೂ ನಗು ಮುಖದಿಂದ ಹೇಳುತ್ತಿದ್ದಾನೆ. ಅವನ ಅಹಂಕಾರವು ದೊಡ್ಡದಾಗಿದೆ. ರಾವಣನಿಗಿಂತ ಬ್ರಿಜ್‌ ಭೂಷಣ್ ಅಹಂಕಾರ ದೊಡ್ಡದಾಗಿದೆ” ಎಂದು ಟೀಕಿಸಿದ್ದಾರೆ.

“ಸುಪ್ರೀಂ ಕೋರ್ಟ್ ಆದೇಶದ ಮೂಲಕ ಅವರು ಕಳಂಕ ರಹಿತರಾಗಿ ಹೊರಬಂದರೆ, ನೀವು ಅವರಿಗೆ ಹಾರ ಹಾಕಬಹುದು. ಆದರೆ ಈಗಲೂ ಹಾರ ಹಾಕುತ್ತಿದ್ದಾರೆ, ಅವರು ಏನು ಮಾಡಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

“ನಾವು ಪದಕಗಳನ್ನು ಗೆದ್ದಾಗ, ನಮಗೆ ಹಾರ ಹಾಕಲಾಗುತ್ತದೆ. ಅವರು ಮಹಿಳಾ ಕ್ರೀಡಾಪಟುಗಳನ್ನು ಶೋಷಿಸಿದ್ದಾರೆ, ಆದರೆ ಅವರನ್ನು ಸನ್ಮಾನಿಸಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪ್ರತಿಭಟನೆ ಪರ ನಿಲ್ಲದಿದ್ದರೂ ಪರವಾಗಿಲ್ಲ ದುರ್ಬಲಗೊಳಿಸದಿರು: ಬಬಿತಾ ಫೋಗಟ್‌ಗೆ ವಿನೇಶ್ ಫೋಗಟ್ ತಾಕೀತು

“ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಅನ್ನು ವಶಪಡಿಸಿಕೊಳ್ಳಲು ಬಯಸುತ್ತಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಯ ಹಿಂದೆ ಒಂದೇ ಕುಟುಂಬ (ಫೋಗಟ್ಸ್) ಇದೆ” ಎಂದು ಬ್ರಿಜ್ ಭೂಷಣ್ ದೂರಿದ್ದಾರೆ.

ಒಲಂಪಿಕ್‌ ಪದಕ ವಿಜೇತ ಕುಸ್ತಿಪಟು ಭಜರಂಗ್ ಪೂನಿಯಾ ಇದಕ್ಕೆ ಪ್ರತಿಕ್ರಿಯಿಸಿ, “ನೀವು ಡಬ್ಲ್ಯುಎಫ್‌ಐನಲ್ಲಿ ಇರಬೇಕಾದರೆ, ನೀವು ರಾಜ್ಯ ಅಸೋಸಿಯೇಷನ್‌ನ ಸದಸ್ಯರಾಗಿರಬೇಕು. ನಮಗೆ ಡಬ್ಲ್ಯುಎಫ್‌ಐ ನಿಯಂತ್ರಣ ಬೇಡ. ಅವರ ಮಗ ಯುಪಿ ಅಸೋಸಿಯೇಷನ್‌ನ ಅಧ್ಯಕ್ಷರಾಗಿದ್ದಾರೆ. ಅವರ ಅಳಿಯ ಕೂಡ ರಾಜ್ಯ ಸಂಘದ ಸದಸ್ಯರಾಗಿದ್ದಾರೆ. ಅವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಅಧಿಕಾರಿಗಳು ಸಹಕಾರ ನೀಡುತ್ತಿಲ್ಲ ಎಂದು ಕುಸ್ತಿಪಟುಗಳು ದೂರಿದ್ದು, ರಾತ್ರಿ ವೇಳೆ ವಿದ್ಯುತ್, ನೀರು ಪೂರೈಕೆ ಸ್ಥಗಿತಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...