Homeಮುಖಪುಟಆರೋಪಿ ಬ್ರಿಜ್‌ಭೂಷಣ್‌ಗೆ ಮಾಧ್ಯಮಗಳು ಸಹಕರಿಸುತ್ತಿವೆ: ಪ್ರತಿಭಟನಾನಿರತ ಕುಸ್ತಿಪಟುಗಳ ಆರೋಪ

ಆರೋಪಿ ಬ್ರಿಜ್‌ಭೂಷಣ್‌ಗೆ ಮಾಧ್ಯಮಗಳು ಸಹಕರಿಸುತ್ತಿವೆ: ಪ್ರತಿಭಟನಾನಿರತ ಕುಸ್ತಿಪಟುಗಳ ಆರೋಪ

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ ವಿರುದ್ಧ ದೇಶದ ಅಗ್ರ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಮುಖ್ಯಸ್ಥ, ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ಮಾಧ್ಯಮಗಳು ಸಹಾಯ ಮಾಡುತ್ತಿವೆ; ನಮಗಿಂತ ಹೆಚ್ಚಾಗಿ ಆತನಿಗೆ ಸಹಕರಿಸುತ್ತಿವೆ ಎಂದು ಪ್ರತಿಭಟನಾನಿರತ ಕುಸ್ತಿಪಟುಗಳು ಭಾನುವಾರ ಆರೋಪಿಸಿದ್ದಾರೆ. “ಆರೋಪಿ ಬ್ರಿಜ್‌ ಭೂಷಣ್‌ ಮಾತನಾಡಲು ವೇದಿಕೆ ಕಲ್ಪಿಸಬಾರದು” ಎಂದು ಅವರು ಮನವಿ ಮಾಡಿದ್ದಾರೆ.

ಲೈಂಗಿಕ ಕಿರುಕುಳದ ಆರೋಪವನ್ನು ಬ್ರಿಜ್ ಭೂಷಣ್ ಮೇಲೆ ಮಹಿಳಾ ಕುಸ್ತಿಪಟುಗಳು ಮಾಡಿದ್ದಾರೆ. “ಈ ಆರೋಪಗಳ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದೇನೆ, ಕ್ರೀಡಾಪಟುಗಳ ಪ್ರತಿಭಟನೆಯು ರಾಜಕೀಯ ಪ್ರೇರಿತವಾಗಿದೆ” ಎಂದು ಬ್ರಿಜ್ ಭೂಷಣ್‌ ಹೇಳಿಕೆ ನೀಡಿದ್ದಾರೆ.

ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ 12 ವರ್ಷ ಪೂರೈಸಿರುವ, ಮತ್ತೆ ಪದಾಧಿಕಾರಿಯಾಗಲು ಅನರ್ಹರಾಗಿರುವ ಬಿಜೆಪಿ ಸಂಸದನ ವಿರುದ್ಧ ದೆಹಲಿ ಪೊಲೀಸರು ಪೋಕ್ಸೊ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎರಡು ಪ್ರಕರಣ ದಾಖಲಿಸಿದ್ದಾರೆ.

“ಮಾಧ್ಯಮವು ಆಟಗಾರರಿಗಿಂತ ಹೆಚ್ಚಾಗಿ ಬ್ರಿಜ್ ಭೂಷಣ್ ಅವರನ್ನು ಬೆಂಬಲಿಸುತ್ತಿದೆ. ನೀವು ಅವರ ಕ್ರಿಮಿನಲ್ ದಾಖಲೆಗಳನ್ನು ನೋಡುತ್ತೀರಿ. ಇಲ್ಲಿ ಕುಳಿತಿರುವ ಯಾವುದೇ ಆಟಗಾರ ಅಥವಾ ಇತರ ಕ್ರೀಡೆಗಳ ಆಟಗಾರರು ಕ್ರಿಮಿನಲ್ ದಾಖಲೆಯನ್ನು ಹೊಂದಿದ್ದಾರೆಯೇ?” ಎಂದು ಮಾಧ್ಯಮ ಸಂವಾದದ ವೇಳೆ ಕುಸ್ತಿಪಟು ಬಜರಂಗ್ ಪುನಿಯಾ ಪ್ರಶ್ನಿಸಿದ್ದಾರೆ.

ಟೋಕಿಯೊ ಕ್ರೀಡಾಕೂಟದ ಕಂಚಿನ ಪದಕ ವಿಜೇತರಾದ ಅವರು, “ಈ ದೇಶದಲ್ಲಿ ಸಂಸದರಾಗುವುದಕ್ಕಿಂತ ಒಲಿಂಪಿಕ್ ಪದಕವನ್ನು ಗೆಲ್ಲುವುದು ಹೆಚ್ಚು ಕಷ್ಟ” ಎಂಬ ಸಂದೇಶವನ್ನು ರವಾನಿಸಲು ಪ್ರಯತ್ನಿಸಿದ್ದಾರೆ.

“ಆಟಗಾರರು ದೇಶಕ್ಕಾಗಿ ಪದಕಗಳನ್ನು ಗೆಲ್ಲುತ್ತಾರೆ, ಆದರೆ ಇವರು (ಬ್ರಿಜ್ ಭೂಷಣ್) ಪದಕ ವಿಜೇತರನ್ನು ಪ್ರಶ್ನಿಸುತ್ತಿದ್ದಾರೆ. ಈ ದೇಶದಲ್ಲಿ ಎಷ್ಟು ಜನರು ಸಂಸದರಾಗುತ್ತಾರೆ ಮತ್ತು ಎಷ್ಟು ಜನರು ಒಲಿಂಪಿಕ್ ಪದಕಗಳನ್ನು ಗೆದ್ದಿದ್ದಾರೆ? ಇಲ್ಲಿಯವರೆಗೆ, ಒಲಿಂಪಿಕ್ ಪದಕ ವಿಜೇತರು ಅಷ್ಟೇನೂ ಇಲ್ಲ, ಆದರೆ ಸಾವಿರಾರು ಜನರು ಸಂಸದರಾಗಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ಕುಸ್ತಿಪಟುಗಳು ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಬ್ರಿಜ್ ಭೂಷಣ್ ಆರೋಪ ನಿರಾಧಾರ ಎಂದು ಡಬಲ್ ವರ್ಲ್ಡ್ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ತಿಳಿಸಿದ್ದಾರೆ.

“ನಾವು ಯಾವುದೇ ರಾಜಕೀಯದಲ್ಲಿ ತೊಡಗಿಸಿಕೊಂಡಿಲ್ಲ, ನಾವು ಹೃದಯದಿಂದ ನೇರವಾಗಿ ಮಾತನಾಡುತ್ತೇವೆ ಮತ್ತು ಅದು ಬೆಸೆಯುತ್ತಿದೆ, ಅದಕ್ಕಾಗಿಯೇ ಇಲ್ಲಿ ಅನೇಕ ಜನರು ನಮ್ಮ ಬೆಂಬಲಕ್ಕೆ ಕುಳಿತಿದ್ದಾರೆ. ಬ್ರಿಜ್ ಭೂಷಣ್ ಮಾತನಾಡಲು ವೇದಿಕೆಯನ್ನು ನೀಡಬೇಡಿ” ಎಂದು ಅವರು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

“ಅಂತಹ ಕ್ರಿಮಿನಲ್‌ಗೆ ನೀವು ವೇದಿಕೆಯನ್ನು ಹೇಗೆ ನೀಡುತ್ತೀರಿ ಎಂದು ನಾನು ಪ್ರಶ್ನಿಸುತ್ತೇನೆ. ನೀವೇ ಕೇಳಿಕೊಳ್ಳಿ. ನೀವು ಅದನ್ನು ಮಾಡದಿದ್ದರೆ ಅರ್ಧದಷ್ಟು ಸಮಸ್ಯೆಗಳು ಪರಿಹಾರವಾಗುತ್ತವೆ. ಆ ವ್ಯಕ್ತಿ ಇನ್ನೂ ನಗು ಮುಖದಿಂದ ಹೇಳುತ್ತಿದ್ದಾನೆ. ಅವನ ಅಹಂಕಾರವು ದೊಡ್ಡದಾಗಿದೆ. ರಾವಣನಿಗಿಂತ ಬ್ರಿಜ್‌ ಭೂಷಣ್ ಅಹಂಕಾರ ದೊಡ್ಡದಾಗಿದೆ” ಎಂದು ಟೀಕಿಸಿದ್ದಾರೆ.

“ಸುಪ್ರೀಂ ಕೋರ್ಟ್ ಆದೇಶದ ಮೂಲಕ ಅವರು ಕಳಂಕ ರಹಿತರಾಗಿ ಹೊರಬಂದರೆ, ನೀವು ಅವರಿಗೆ ಹಾರ ಹಾಕಬಹುದು. ಆದರೆ ಈಗಲೂ ಹಾರ ಹಾಕುತ್ತಿದ್ದಾರೆ, ಅವರು ಏನು ಮಾಡಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

“ನಾವು ಪದಕಗಳನ್ನು ಗೆದ್ದಾಗ, ನಮಗೆ ಹಾರ ಹಾಕಲಾಗುತ್ತದೆ. ಅವರು ಮಹಿಳಾ ಕ್ರೀಡಾಪಟುಗಳನ್ನು ಶೋಷಿಸಿದ್ದಾರೆ, ಆದರೆ ಅವರನ್ನು ಸನ್ಮಾನಿಸಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪ್ರತಿಭಟನೆ ಪರ ನಿಲ್ಲದಿದ್ದರೂ ಪರವಾಗಿಲ್ಲ ದುರ್ಬಲಗೊಳಿಸದಿರು: ಬಬಿತಾ ಫೋಗಟ್‌ಗೆ ವಿನೇಶ್ ಫೋಗಟ್ ತಾಕೀತು

“ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಅನ್ನು ವಶಪಡಿಸಿಕೊಳ್ಳಲು ಬಯಸುತ್ತಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಯ ಹಿಂದೆ ಒಂದೇ ಕುಟುಂಬ (ಫೋಗಟ್ಸ್) ಇದೆ” ಎಂದು ಬ್ರಿಜ್ ಭೂಷಣ್ ದೂರಿದ್ದಾರೆ.

ಒಲಂಪಿಕ್‌ ಪದಕ ವಿಜೇತ ಕುಸ್ತಿಪಟು ಭಜರಂಗ್ ಪೂನಿಯಾ ಇದಕ್ಕೆ ಪ್ರತಿಕ್ರಿಯಿಸಿ, “ನೀವು ಡಬ್ಲ್ಯುಎಫ್‌ಐನಲ್ಲಿ ಇರಬೇಕಾದರೆ, ನೀವು ರಾಜ್ಯ ಅಸೋಸಿಯೇಷನ್‌ನ ಸದಸ್ಯರಾಗಿರಬೇಕು. ನಮಗೆ ಡಬ್ಲ್ಯುಎಫ್‌ಐ ನಿಯಂತ್ರಣ ಬೇಡ. ಅವರ ಮಗ ಯುಪಿ ಅಸೋಸಿಯೇಷನ್‌ನ ಅಧ್ಯಕ್ಷರಾಗಿದ್ದಾರೆ. ಅವರ ಅಳಿಯ ಕೂಡ ರಾಜ್ಯ ಸಂಘದ ಸದಸ್ಯರಾಗಿದ್ದಾರೆ. ಅವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಅಧಿಕಾರಿಗಳು ಸಹಕಾರ ನೀಡುತ್ತಿಲ್ಲ ಎಂದು ಕುಸ್ತಿಪಟುಗಳು ದೂರಿದ್ದು, ರಾತ್ರಿ ವೇಳೆ ವಿದ್ಯುತ್, ನೀರು ಪೂರೈಕೆ ಸ್ಥಗಿತಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...