Homeಕರ್ನಾಟಕರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ...

ರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ ಸೂರ್ಯ

- Advertisement -
- Advertisement -

“ತನ್ನ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದು ಆಗಿದ್ದಕ್ಕೆ ಮನನೊಂದು ಹಾವೇರಿಯ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ನಿನ್ನೆ (ನ.7) ಕನ್ನಡದ ಕೆಲ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿತ್ತು. ಈ ಸುದ್ದಿಯನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಆದರೆ, ಅದು ಸುಳ್ಳು ಸುದ್ದಿ ಎಂದು ಹಾವೇರಿ ಪೊಲೀಸರು ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಸುದ್ದಿ ವೆಬ್‌ಸೈಟ್‌ಗಳಾದ ‘ಕನ್ನಡ ನ್ಯೂಸ್‌ ನೌ, ಕನ್ನಡ ದುನಿಯಾ, ಪಬ್ಲಿಕ್ ಟಿವಿ‘ ಸೇರಿದಂತೆ ಕೆಲ ಮಾಧ್ಯಮಗಳು ‘ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ನಮೂದು, ಹಾವೇರಿಯಲ್ಲಿ ಮನನೊಂದು ರೈತ ಆತ್ಮಹತ್ಯೆ’ ಎಂಬ ಶೀರ್ಷಿಕೆಗಳಲ್ಲಿ ಸುಳ್ಳು ಸುದ್ದಿ ಪ್ರಕಟಿಸಿತ್ತು.

ಈ ಪೈಕಿ ಕನ್ನಡ ದುನಿಯಾ ಪ್ರಕಟಿಸಿದ್ದ ಸುದ್ದಿಯ ಸ್ಕ್ರೀನ್ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ ಸಂಸದ ತೇಜಸ್ವಿ ಸೂರ್ಯ,”ತನ್ನ ಭೂಮಿಯನ್ನು ವಕ್ಫ್‌ ಕಬಳಿಸಿದೆ ಎಂದು ಗೊತ್ತಾಗಿ ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಝಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರನ್ನು ಓಲೈಸುವ ತರಾತುರಿಯಿಂದ ಕರ್ನಾಟಕ ಪ್ರತಿದಿನ ದುರಂತ ಪರಿಣಾಮಗಳನ್ನು ಎದುರಿಸುತ್ತಿದೆ” ಎಂದು ಬರೆದುಕೊಂಡಿದ್ದರು. ಪ್ರಸ್ತುತ ಈ ಪೋಸ್ಟ್‌ ಅನ್ನು ತೇಜಸ್ವಿ ಸೂರ್ಯ ಡಿಲಿಟ್ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೂ ಕೂಡ ಇದೇ ಸುಳ್ಳು ಸುದ್ದಿಯನ್ನು ಹಂಚಿಕೊಂಡಿದ್ದರು ಎಂದು ವರದಿಯಾಗಿದೆ. ಆದರೆ, ಅವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ನಮಗೆ ಆ ರೀತಿಯ ಪೋಸ್ಟ್‌ಗಳು ಕಂಡು ಬಂದಿಲ್ಲ.

ಸುಳ್ಳು ಸುದ್ದಿ ಪೊಲೀಸರಿಂದ ಸ್ಪಷ್ಟನೆ

ಮಾಧ್ಯಮಗಳು ಪ್ರಕಟಿಸಿದ ಮತ್ತು ತೇಜಸ್ವಿ ಸೂರ್ಯ ಹಂಚಿಕೊಂಡಿದ್ದ ಸುದ್ದಿ ಸುಳ್ಳು ಎಂಬುವುದನ್ನು ಹಾವೇರಿ ಜಿಲ್ಲಾ ಪೊಲೀಸ್ ಫ್ಯಾಕ್ಟ್‌ಚೆಕ್ ಮೂಲಕ ಸ್ಪಷ್ಟಪಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್ಪಿ, “07.11.2024 ರಂದು ಕನ್ನಡ ನ್ಯೂಸ್ ನೌ ಎಂಬ ಹೆಸರಿನ ಡಿಜಿಟಲ್ ನ್ಯೂಸ್‌ನಲ್ಲಿ ಹಾವೇರಿ ಜಿಲ್ಲೆಯ ಹರಣಗಿ ಗ್ರಾಮದ ರೈತ ಚನ್ನಪ್ಪ ಎಂಬುವವರ ಪುತ್ರ ರುದ್ರಪ್ಪ ಎಂಬ ರೈತ, 8 ವರ್ಷಗಳ ಹಿಂದೆ 4 ಎಕರೆ ಹೊಲದ ಪಹಣಿಯಲ್ಲಿ ವಕ್ಫ್ ಹೆಸರು ಬಂದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಹಾವೇರಿ ರೈತರು ಆರೋಪಿಸಿದ್ದಾರೆಂದು ವರದಿ ಪ್ರಕಟ ಮಾಡಿರುತ್ತಾರೆ. ಆದರೆ, ಮೃತ ರುದ್ರಪ್ಪ ತಂದೆ ಚನ್ನಪ್ಪ ಬಾಳಿಕಾಯಿ ಇತನು ತಮ್ಮ ಆಸ್ತಿಯ ಪಹಣಿಯಲ್ಲಿ ವಕ್ಫ್ ಎಂದು ನಮೂದು ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಯಾವುದೇ ರೀತಿ ಪ್ರಕರಣ ದಾಖಲಾಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

“ದಿನಾಂಕ 06.01.2022 ರಂದು ಚನ್ನಪ್ಪ ಬಾಳಿಕಾಯಿ ಅವರ ಮಗ ರುದ್ರಪ್ಪ ಐಸಿಐಸಿಐ ಬ್ಯಾಂಕ್ ಹಾವೇರಿ ಶಾಖೆಯಲ್ಲಿ 3 ಲಕ್ಷ ಹಾಗೂ ಖಾಸಗಿಯಾಗಿ 4 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದು, ಅತೀ ಹೆಚ್ಚು ಮಳೆಯಾಗಿ ಬೆಳೆ ಹಾನಿಯಾಗಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಅವರ ತಂದೆ ಚನ್ನಪ್ಪ ಬಾಳಿಕಾಯಿ ದೂರು ನೀಡಿದ್ದು, ಆಡೂರ ಪೊಲೀಸ್ ಠಾಣೆ ಯುಡಿಆರ್ ಸಂಖ್ಯೆ: 03/2022, ಕಲಂ: 174 ಸಿಆರ್‌ಪಿಸಿ ಪ್ರಕಾರ ಯುಡಿಆ‌ರ್ ದಾಖಲಿಸಿಕೊಳ್ಳಲಾಗಿದೆ. ಅದರಲ್ಲಿ ತಮ್ಮ ಆಸ್ತಿಯಲ್ಲಿ ವಕ್ಫ್ ಎಂದು ನಮೂದಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಯಾವುದೇ ರೀತಿ ನಮೂದಿಸಿರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಮೃತರ ಬಗ್ಗೆ ಆಡೂರ ಪಿಎಸ್‌ಐ ರವರು ತನಿಖೆ ಕೈಗೊಂಡು, ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಸಾಕ್ಷಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ಹಾನಗಲ್ ತಹಶೀಲ್ದಾರ್‌ರಿಗೆ ಸಲ್ಲಿಸಿರುತ್ತಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ” ಎಂದು ಫ್ಯಾಕ್ಟ್ ಚೆಕ್ ಪ್ರಕಟಣೆಯಲ್ಲಿ ಎಸ್ಪಿ ತಿಳಿಸಿದ್ದಾರೆ.

ಪೊಲೀಸರ ಈ ಪ್ರಕಟಣೆಯಿಂದ ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಂಚಿಕೊಂಡಿರುವುದು ಖಚಿತವಾಗಿದೆ. ಹಾಗಾಗಿ, ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಸಾಗರ | ಆರ್‌ಎಸ್‌ಎಸ್‌ ಮುಖಂಡ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...