Homeಕರ್ನಾಟಕರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ...

ರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ ಸೂರ್ಯ

- Advertisement -
- Advertisement -

“ತನ್ನ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದು ಆಗಿದ್ದಕ್ಕೆ ಮನನೊಂದು ಹಾವೇರಿಯ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ನಿನ್ನೆ (ನ.7) ಕನ್ನಡದ ಕೆಲ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿತ್ತು. ಈ ಸುದ್ದಿಯನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಆದರೆ, ಅದು ಸುಳ್ಳು ಸುದ್ದಿ ಎಂದು ಹಾವೇರಿ ಪೊಲೀಸರು ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಸುದ್ದಿ ವೆಬ್‌ಸೈಟ್‌ಗಳಾದ ‘ಕನ್ನಡ ನ್ಯೂಸ್‌ ನೌ, ಕನ್ನಡ ದುನಿಯಾ, ಪಬ್ಲಿಕ್ ಟಿವಿ‘ ಸೇರಿದಂತೆ ಕೆಲ ಮಾಧ್ಯಮಗಳು ‘ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ನಮೂದು, ಹಾವೇರಿಯಲ್ಲಿ ಮನನೊಂದು ರೈತ ಆತ್ಮಹತ್ಯೆ’ ಎಂಬ ಶೀರ್ಷಿಕೆಗಳಲ್ಲಿ ಸುಳ್ಳು ಸುದ್ದಿ ಪ್ರಕಟಿಸಿತ್ತು.

ಈ ಪೈಕಿ ಕನ್ನಡ ದುನಿಯಾ ಪ್ರಕಟಿಸಿದ್ದ ಸುದ್ದಿಯ ಸ್ಕ್ರೀನ್ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ ಸಂಸದ ತೇಜಸ್ವಿ ಸೂರ್ಯ,”ತನ್ನ ಭೂಮಿಯನ್ನು ವಕ್ಫ್‌ ಕಬಳಿಸಿದೆ ಎಂದು ಗೊತ್ತಾಗಿ ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಝಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರನ್ನು ಓಲೈಸುವ ತರಾತುರಿಯಿಂದ ಕರ್ನಾಟಕ ಪ್ರತಿದಿನ ದುರಂತ ಪರಿಣಾಮಗಳನ್ನು ಎದುರಿಸುತ್ತಿದೆ” ಎಂದು ಬರೆದುಕೊಂಡಿದ್ದರು. ಪ್ರಸ್ತುತ ಈ ಪೋಸ್ಟ್‌ ಅನ್ನು ತೇಜಸ್ವಿ ಸೂರ್ಯ ಡಿಲಿಟ್ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೂ ಕೂಡ ಇದೇ ಸುಳ್ಳು ಸುದ್ದಿಯನ್ನು ಹಂಚಿಕೊಂಡಿದ್ದರು ಎಂದು ವರದಿಯಾಗಿದೆ. ಆದರೆ, ಅವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ನಮಗೆ ಆ ರೀತಿಯ ಪೋಸ್ಟ್‌ಗಳು ಕಂಡು ಬಂದಿಲ್ಲ.

ಸುಳ್ಳು ಸುದ್ದಿ ಪೊಲೀಸರಿಂದ ಸ್ಪಷ್ಟನೆ

ಮಾಧ್ಯಮಗಳು ಪ್ರಕಟಿಸಿದ ಮತ್ತು ತೇಜಸ್ವಿ ಸೂರ್ಯ ಹಂಚಿಕೊಂಡಿದ್ದ ಸುದ್ದಿ ಸುಳ್ಳು ಎಂಬುವುದನ್ನು ಹಾವೇರಿ ಜಿಲ್ಲಾ ಪೊಲೀಸ್ ಫ್ಯಾಕ್ಟ್‌ಚೆಕ್ ಮೂಲಕ ಸ್ಪಷ್ಟಪಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್ಪಿ, “07.11.2024 ರಂದು ಕನ್ನಡ ನ್ಯೂಸ್ ನೌ ಎಂಬ ಹೆಸರಿನ ಡಿಜಿಟಲ್ ನ್ಯೂಸ್‌ನಲ್ಲಿ ಹಾವೇರಿ ಜಿಲ್ಲೆಯ ಹರಣಗಿ ಗ್ರಾಮದ ರೈತ ಚನ್ನಪ್ಪ ಎಂಬುವವರ ಪುತ್ರ ರುದ್ರಪ್ಪ ಎಂಬ ರೈತ, 8 ವರ್ಷಗಳ ಹಿಂದೆ 4 ಎಕರೆ ಹೊಲದ ಪಹಣಿಯಲ್ಲಿ ವಕ್ಫ್ ಹೆಸರು ಬಂದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಹಾವೇರಿ ರೈತರು ಆರೋಪಿಸಿದ್ದಾರೆಂದು ವರದಿ ಪ್ರಕಟ ಮಾಡಿರುತ್ತಾರೆ. ಆದರೆ, ಮೃತ ರುದ್ರಪ್ಪ ತಂದೆ ಚನ್ನಪ್ಪ ಬಾಳಿಕಾಯಿ ಇತನು ತಮ್ಮ ಆಸ್ತಿಯ ಪಹಣಿಯಲ್ಲಿ ವಕ್ಫ್ ಎಂದು ನಮೂದು ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಯಾವುದೇ ರೀತಿ ಪ್ರಕರಣ ದಾಖಲಾಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

“ದಿನಾಂಕ 06.01.2022 ರಂದು ಚನ್ನಪ್ಪ ಬಾಳಿಕಾಯಿ ಅವರ ಮಗ ರುದ್ರಪ್ಪ ಐಸಿಐಸಿಐ ಬ್ಯಾಂಕ್ ಹಾವೇರಿ ಶಾಖೆಯಲ್ಲಿ 3 ಲಕ್ಷ ಹಾಗೂ ಖಾಸಗಿಯಾಗಿ 4 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದು, ಅತೀ ಹೆಚ್ಚು ಮಳೆಯಾಗಿ ಬೆಳೆ ಹಾನಿಯಾಗಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಅವರ ತಂದೆ ಚನ್ನಪ್ಪ ಬಾಳಿಕಾಯಿ ದೂರು ನೀಡಿದ್ದು, ಆಡೂರ ಪೊಲೀಸ್ ಠಾಣೆ ಯುಡಿಆರ್ ಸಂಖ್ಯೆ: 03/2022, ಕಲಂ: 174 ಸಿಆರ್‌ಪಿಸಿ ಪ್ರಕಾರ ಯುಡಿಆ‌ರ್ ದಾಖಲಿಸಿಕೊಳ್ಳಲಾಗಿದೆ. ಅದರಲ್ಲಿ ತಮ್ಮ ಆಸ್ತಿಯಲ್ಲಿ ವಕ್ಫ್ ಎಂದು ನಮೂದಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಯಾವುದೇ ರೀತಿ ನಮೂದಿಸಿರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಮೃತರ ಬಗ್ಗೆ ಆಡೂರ ಪಿಎಸ್‌ಐ ರವರು ತನಿಖೆ ಕೈಗೊಂಡು, ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಸಾಕ್ಷಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ಹಾನಗಲ್ ತಹಶೀಲ್ದಾರ್‌ರಿಗೆ ಸಲ್ಲಿಸಿರುತ್ತಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ” ಎಂದು ಫ್ಯಾಕ್ಟ್ ಚೆಕ್ ಪ್ರಕಟಣೆಯಲ್ಲಿ ಎಸ್ಪಿ ತಿಳಿಸಿದ್ದಾರೆ.

ಪೊಲೀಸರ ಈ ಪ್ರಕಟಣೆಯಿಂದ ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಂಚಿಕೊಂಡಿರುವುದು ಖಚಿತವಾಗಿದೆ. ಹಾಗಾಗಿ, ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಸಾಗರ | ಆರ್‌ಎಸ್‌ಎಸ್‌ ಮುಖಂಡ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...