Homeಕರ್ನಾಟಕರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ...

ರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ ಸೂರ್ಯ

- Advertisement -
- Advertisement -

“ತನ್ನ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದು ಆಗಿದ್ದಕ್ಕೆ ಮನನೊಂದು ಹಾವೇರಿಯ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ನಿನ್ನೆ (ನ.7) ಕನ್ನಡದ ಕೆಲ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿತ್ತು. ಈ ಸುದ್ದಿಯನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಆದರೆ, ಅದು ಸುಳ್ಳು ಸುದ್ದಿ ಎಂದು ಹಾವೇರಿ ಪೊಲೀಸರು ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಸುದ್ದಿ ವೆಬ್‌ಸೈಟ್‌ಗಳಾದ ‘ಕನ್ನಡ ನ್ಯೂಸ್‌ ನೌ, ಕನ್ನಡ ದುನಿಯಾ, ಪಬ್ಲಿಕ್ ಟಿವಿ‘ ಸೇರಿದಂತೆ ಕೆಲ ಮಾಧ್ಯಮಗಳು ‘ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ನಮೂದು, ಹಾವೇರಿಯಲ್ಲಿ ಮನನೊಂದು ರೈತ ಆತ್ಮಹತ್ಯೆ’ ಎಂಬ ಶೀರ್ಷಿಕೆಗಳಲ್ಲಿ ಸುಳ್ಳು ಸುದ್ದಿ ಪ್ರಕಟಿಸಿತ್ತು.

ಈ ಪೈಕಿ ಕನ್ನಡ ದುನಿಯಾ ಪ್ರಕಟಿಸಿದ್ದ ಸುದ್ದಿಯ ಸ್ಕ್ರೀನ್ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ ಸಂಸದ ತೇಜಸ್ವಿ ಸೂರ್ಯ,”ತನ್ನ ಭೂಮಿಯನ್ನು ವಕ್ಫ್‌ ಕಬಳಿಸಿದೆ ಎಂದು ಗೊತ್ತಾಗಿ ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಝಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರನ್ನು ಓಲೈಸುವ ತರಾತುರಿಯಿಂದ ಕರ್ನಾಟಕ ಪ್ರತಿದಿನ ದುರಂತ ಪರಿಣಾಮಗಳನ್ನು ಎದುರಿಸುತ್ತಿದೆ” ಎಂದು ಬರೆದುಕೊಂಡಿದ್ದರು. ಪ್ರಸ್ತುತ ಈ ಪೋಸ್ಟ್‌ ಅನ್ನು ತೇಜಸ್ವಿ ಸೂರ್ಯ ಡಿಲಿಟ್ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೂ ಕೂಡ ಇದೇ ಸುಳ್ಳು ಸುದ್ದಿಯನ್ನು ಹಂಚಿಕೊಂಡಿದ್ದರು ಎಂದು ವರದಿಯಾಗಿದೆ. ಆದರೆ, ಅವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ನಮಗೆ ಆ ರೀತಿಯ ಪೋಸ್ಟ್‌ಗಳು ಕಂಡು ಬಂದಿಲ್ಲ.

ಸುಳ್ಳು ಸುದ್ದಿ ಪೊಲೀಸರಿಂದ ಸ್ಪಷ್ಟನೆ

ಮಾಧ್ಯಮಗಳು ಪ್ರಕಟಿಸಿದ ಮತ್ತು ತೇಜಸ್ವಿ ಸೂರ್ಯ ಹಂಚಿಕೊಂಡಿದ್ದ ಸುದ್ದಿ ಸುಳ್ಳು ಎಂಬುವುದನ್ನು ಹಾವೇರಿ ಜಿಲ್ಲಾ ಪೊಲೀಸ್ ಫ್ಯಾಕ್ಟ್‌ಚೆಕ್ ಮೂಲಕ ಸ್ಪಷ್ಟಪಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್ಪಿ, “07.11.2024 ರಂದು ಕನ್ನಡ ನ್ಯೂಸ್ ನೌ ಎಂಬ ಹೆಸರಿನ ಡಿಜಿಟಲ್ ನ್ಯೂಸ್‌ನಲ್ಲಿ ಹಾವೇರಿ ಜಿಲ್ಲೆಯ ಹರಣಗಿ ಗ್ರಾಮದ ರೈತ ಚನ್ನಪ್ಪ ಎಂಬುವವರ ಪುತ್ರ ರುದ್ರಪ್ಪ ಎಂಬ ರೈತ, 8 ವರ್ಷಗಳ ಹಿಂದೆ 4 ಎಕರೆ ಹೊಲದ ಪಹಣಿಯಲ್ಲಿ ವಕ್ಫ್ ಹೆಸರು ಬಂದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಹಾವೇರಿ ರೈತರು ಆರೋಪಿಸಿದ್ದಾರೆಂದು ವರದಿ ಪ್ರಕಟ ಮಾಡಿರುತ್ತಾರೆ. ಆದರೆ, ಮೃತ ರುದ್ರಪ್ಪ ತಂದೆ ಚನ್ನಪ್ಪ ಬಾಳಿಕಾಯಿ ಇತನು ತಮ್ಮ ಆಸ್ತಿಯ ಪಹಣಿಯಲ್ಲಿ ವಕ್ಫ್ ಎಂದು ನಮೂದು ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಯಾವುದೇ ರೀತಿ ಪ್ರಕರಣ ದಾಖಲಾಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

“ದಿನಾಂಕ 06.01.2022 ರಂದು ಚನ್ನಪ್ಪ ಬಾಳಿಕಾಯಿ ಅವರ ಮಗ ರುದ್ರಪ್ಪ ಐಸಿಐಸಿಐ ಬ್ಯಾಂಕ್ ಹಾವೇರಿ ಶಾಖೆಯಲ್ಲಿ 3 ಲಕ್ಷ ಹಾಗೂ ಖಾಸಗಿಯಾಗಿ 4 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದು, ಅತೀ ಹೆಚ್ಚು ಮಳೆಯಾಗಿ ಬೆಳೆ ಹಾನಿಯಾಗಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಅವರ ತಂದೆ ಚನ್ನಪ್ಪ ಬಾಳಿಕಾಯಿ ದೂರು ನೀಡಿದ್ದು, ಆಡೂರ ಪೊಲೀಸ್ ಠಾಣೆ ಯುಡಿಆರ್ ಸಂಖ್ಯೆ: 03/2022, ಕಲಂ: 174 ಸಿಆರ್‌ಪಿಸಿ ಪ್ರಕಾರ ಯುಡಿಆ‌ರ್ ದಾಖಲಿಸಿಕೊಳ್ಳಲಾಗಿದೆ. ಅದರಲ್ಲಿ ತಮ್ಮ ಆಸ್ತಿಯಲ್ಲಿ ವಕ್ಫ್ ಎಂದು ನಮೂದಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಯಾವುದೇ ರೀತಿ ನಮೂದಿಸಿರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಮೃತರ ಬಗ್ಗೆ ಆಡೂರ ಪಿಎಸ್‌ಐ ರವರು ತನಿಖೆ ಕೈಗೊಂಡು, ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಸಾಕ್ಷಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ಹಾನಗಲ್ ತಹಶೀಲ್ದಾರ್‌ರಿಗೆ ಸಲ್ಲಿಸಿರುತ್ತಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ” ಎಂದು ಫ್ಯಾಕ್ಟ್ ಚೆಕ್ ಪ್ರಕಟಣೆಯಲ್ಲಿ ಎಸ್ಪಿ ತಿಳಿಸಿದ್ದಾರೆ.

ಪೊಲೀಸರ ಈ ಪ್ರಕಟಣೆಯಿಂದ ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಂಚಿಕೊಂಡಿರುವುದು ಖಚಿತವಾಗಿದೆ. ಹಾಗಾಗಿ, ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಸಾಗರ | ಆರ್‌ಎಸ್‌ಎಸ್‌ ಮುಖಂಡ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...