Homeಕರ್ನಾಟಕರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ...

ರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ ಸೂರ್ಯ

- Advertisement -
- Advertisement -

“ತನ್ನ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದು ಆಗಿದ್ದಕ್ಕೆ ಮನನೊಂದು ಹಾವೇರಿಯ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ನಿನ್ನೆ (ನ.7) ಕನ್ನಡದ ಕೆಲ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿತ್ತು. ಈ ಸುದ್ದಿಯನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಆದರೆ, ಅದು ಸುಳ್ಳು ಸುದ್ದಿ ಎಂದು ಹಾವೇರಿ ಪೊಲೀಸರು ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಸುದ್ದಿ ವೆಬ್‌ಸೈಟ್‌ಗಳಾದ ‘ಕನ್ನಡ ನ್ಯೂಸ್‌ ನೌ, ಕನ್ನಡ ದುನಿಯಾ, ಪಬ್ಲಿಕ್ ಟಿವಿ‘ ಸೇರಿದಂತೆ ಕೆಲ ಮಾಧ್ಯಮಗಳು ‘ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ನಮೂದು, ಹಾವೇರಿಯಲ್ಲಿ ಮನನೊಂದು ರೈತ ಆತ್ಮಹತ್ಯೆ’ ಎಂಬ ಶೀರ್ಷಿಕೆಗಳಲ್ಲಿ ಸುಳ್ಳು ಸುದ್ದಿ ಪ್ರಕಟಿಸಿತ್ತು.

ಈ ಪೈಕಿ ಕನ್ನಡ ದುನಿಯಾ ಪ್ರಕಟಿಸಿದ್ದ ಸುದ್ದಿಯ ಸ್ಕ್ರೀನ್ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ ಸಂಸದ ತೇಜಸ್ವಿ ಸೂರ್ಯ,”ತನ್ನ ಭೂಮಿಯನ್ನು ವಕ್ಫ್‌ ಕಬಳಿಸಿದೆ ಎಂದು ಗೊತ್ತಾಗಿ ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಝಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರನ್ನು ಓಲೈಸುವ ತರಾತುರಿಯಿಂದ ಕರ್ನಾಟಕ ಪ್ರತಿದಿನ ದುರಂತ ಪರಿಣಾಮಗಳನ್ನು ಎದುರಿಸುತ್ತಿದೆ” ಎಂದು ಬರೆದುಕೊಂಡಿದ್ದರು. ಪ್ರಸ್ತುತ ಈ ಪೋಸ್ಟ್‌ ಅನ್ನು ತೇಜಸ್ವಿ ಸೂರ್ಯ ಡಿಲಿಟ್ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೂ ಕೂಡ ಇದೇ ಸುಳ್ಳು ಸುದ್ದಿಯನ್ನು ಹಂಚಿಕೊಂಡಿದ್ದರು ಎಂದು ವರದಿಯಾಗಿದೆ. ಆದರೆ, ಅವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ನಮಗೆ ಆ ರೀತಿಯ ಪೋಸ್ಟ್‌ಗಳು ಕಂಡು ಬಂದಿಲ್ಲ.

ಸುಳ್ಳು ಸುದ್ದಿ ಪೊಲೀಸರಿಂದ ಸ್ಪಷ್ಟನೆ

ಮಾಧ್ಯಮಗಳು ಪ್ರಕಟಿಸಿದ ಮತ್ತು ತೇಜಸ್ವಿ ಸೂರ್ಯ ಹಂಚಿಕೊಂಡಿದ್ದ ಸುದ್ದಿ ಸುಳ್ಳು ಎಂಬುವುದನ್ನು ಹಾವೇರಿ ಜಿಲ್ಲಾ ಪೊಲೀಸ್ ಫ್ಯಾಕ್ಟ್‌ಚೆಕ್ ಮೂಲಕ ಸ್ಪಷ್ಟಪಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್ಪಿ, “07.11.2024 ರಂದು ಕನ್ನಡ ನ್ಯೂಸ್ ನೌ ಎಂಬ ಹೆಸರಿನ ಡಿಜಿಟಲ್ ನ್ಯೂಸ್‌ನಲ್ಲಿ ಹಾವೇರಿ ಜಿಲ್ಲೆಯ ಹರಣಗಿ ಗ್ರಾಮದ ರೈತ ಚನ್ನಪ್ಪ ಎಂಬುವವರ ಪುತ್ರ ರುದ್ರಪ್ಪ ಎಂಬ ರೈತ, 8 ವರ್ಷಗಳ ಹಿಂದೆ 4 ಎಕರೆ ಹೊಲದ ಪಹಣಿಯಲ್ಲಿ ವಕ್ಫ್ ಹೆಸರು ಬಂದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಹಾವೇರಿ ರೈತರು ಆರೋಪಿಸಿದ್ದಾರೆಂದು ವರದಿ ಪ್ರಕಟ ಮಾಡಿರುತ್ತಾರೆ. ಆದರೆ, ಮೃತ ರುದ್ರಪ್ಪ ತಂದೆ ಚನ್ನಪ್ಪ ಬಾಳಿಕಾಯಿ ಇತನು ತಮ್ಮ ಆಸ್ತಿಯ ಪಹಣಿಯಲ್ಲಿ ವಕ್ಫ್ ಎಂದು ನಮೂದು ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಯಾವುದೇ ರೀತಿ ಪ್ರಕರಣ ದಾಖಲಾಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

“ದಿನಾಂಕ 06.01.2022 ರಂದು ಚನ್ನಪ್ಪ ಬಾಳಿಕಾಯಿ ಅವರ ಮಗ ರುದ್ರಪ್ಪ ಐಸಿಐಸಿಐ ಬ್ಯಾಂಕ್ ಹಾವೇರಿ ಶಾಖೆಯಲ್ಲಿ 3 ಲಕ್ಷ ಹಾಗೂ ಖಾಸಗಿಯಾಗಿ 4 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದು, ಅತೀ ಹೆಚ್ಚು ಮಳೆಯಾಗಿ ಬೆಳೆ ಹಾನಿಯಾಗಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಅವರ ತಂದೆ ಚನ್ನಪ್ಪ ಬಾಳಿಕಾಯಿ ದೂರು ನೀಡಿದ್ದು, ಆಡೂರ ಪೊಲೀಸ್ ಠಾಣೆ ಯುಡಿಆರ್ ಸಂಖ್ಯೆ: 03/2022, ಕಲಂ: 174 ಸಿಆರ್‌ಪಿಸಿ ಪ್ರಕಾರ ಯುಡಿಆ‌ರ್ ದಾಖಲಿಸಿಕೊಳ್ಳಲಾಗಿದೆ. ಅದರಲ್ಲಿ ತಮ್ಮ ಆಸ್ತಿಯಲ್ಲಿ ವಕ್ಫ್ ಎಂದು ನಮೂದಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಯಾವುದೇ ರೀತಿ ನಮೂದಿಸಿರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಮೃತರ ಬಗ್ಗೆ ಆಡೂರ ಪಿಎಸ್‌ಐ ರವರು ತನಿಖೆ ಕೈಗೊಂಡು, ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಸಾಕ್ಷಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ಹಾನಗಲ್ ತಹಶೀಲ್ದಾರ್‌ರಿಗೆ ಸಲ್ಲಿಸಿರುತ್ತಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ” ಎಂದು ಫ್ಯಾಕ್ಟ್ ಚೆಕ್ ಪ್ರಕಟಣೆಯಲ್ಲಿ ಎಸ್ಪಿ ತಿಳಿಸಿದ್ದಾರೆ.

ಪೊಲೀಸರ ಈ ಪ್ರಕಟಣೆಯಿಂದ ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಂಚಿಕೊಂಡಿರುವುದು ಖಚಿತವಾಗಿದೆ. ಹಾಗಾಗಿ, ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಸಾಗರ | ಆರ್‌ಎಸ್‌ಎಸ್‌ ಮುಖಂಡ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...