Homeಕರ್ನಾಟಕರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ...

ರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ ಸೂರ್ಯ

- Advertisement -
- Advertisement -

“ತನ್ನ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದು ಆಗಿದ್ದಕ್ಕೆ ಮನನೊಂದು ಹಾವೇರಿಯ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ನಿನ್ನೆ (ನ.7) ಕನ್ನಡದ ಕೆಲ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿತ್ತು. ಈ ಸುದ್ದಿಯನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಆದರೆ, ಅದು ಸುಳ್ಳು ಸುದ್ದಿ ಎಂದು ಹಾವೇರಿ ಪೊಲೀಸರು ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಸುದ್ದಿ ವೆಬ್‌ಸೈಟ್‌ಗಳಾದ ‘ಕನ್ನಡ ನ್ಯೂಸ್‌ ನೌ, ಕನ್ನಡ ದುನಿಯಾ, ಪಬ್ಲಿಕ್ ಟಿವಿ‘ ಸೇರಿದಂತೆ ಕೆಲ ಮಾಧ್ಯಮಗಳು ‘ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ನಮೂದು, ಹಾವೇರಿಯಲ್ಲಿ ಮನನೊಂದು ರೈತ ಆತ್ಮಹತ್ಯೆ’ ಎಂಬ ಶೀರ್ಷಿಕೆಗಳಲ್ಲಿ ಸುಳ್ಳು ಸುದ್ದಿ ಪ್ರಕಟಿಸಿತ್ತು.

ಈ ಪೈಕಿ ಕನ್ನಡ ದುನಿಯಾ ಪ್ರಕಟಿಸಿದ್ದ ಸುದ್ದಿಯ ಸ್ಕ್ರೀನ್ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ ಸಂಸದ ತೇಜಸ್ವಿ ಸೂರ್ಯ,”ತನ್ನ ಭೂಮಿಯನ್ನು ವಕ್ಫ್‌ ಕಬಳಿಸಿದೆ ಎಂದು ಗೊತ್ತಾಗಿ ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಝಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರನ್ನು ಓಲೈಸುವ ತರಾತುರಿಯಿಂದ ಕರ್ನಾಟಕ ಪ್ರತಿದಿನ ದುರಂತ ಪರಿಣಾಮಗಳನ್ನು ಎದುರಿಸುತ್ತಿದೆ” ಎಂದು ಬರೆದುಕೊಂಡಿದ್ದರು. ಪ್ರಸ್ತುತ ಈ ಪೋಸ್ಟ್‌ ಅನ್ನು ತೇಜಸ್ವಿ ಸೂರ್ಯ ಡಿಲಿಟ್ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೂ ಕೂಡ ಇದೇ ಸುಳ್ಳು ಸುದ್ದಿಯನ್ನು ಹಂಚಿಕೊಂಡಿದ್ದರು ಎಂದು ವರದಿಯಾಗಿದೆ. ಆದರೆ, ಅವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ನಮಗೆ ಆ ರೀತಿಯ ಪೋಸ್ಟ್‌ಗಳು ಕಂಡು ಬಂದಿಲ್ಲ.

ಸುಳ್ಳು ಸುದ್ದಿ ಪೊಲೀಸರಿಂದ ಸ್ಪಷ್ಟನೆ

ಮಾಧ್ಯಮಗಳು ಪ್ರಕಟಿಸಿದ ಮತ್ತು ತೇಜಸ್ವಿ ಸೂರ್ಯ ಹಂಚಿಕೊಂಡಿದ್ದ ಸುದ್ದಿ ಸುಳ್ಳು ಎಂಬುವುದನ್ನು ಹಾವೇರಿ ಜಿಲ್ಲಾ ಪೊಲೀಸ್ ಫ್ಯಾಕ್ಟ್‌ಚೆಕ್ ಮೂಲಕ ಸ್ಪಷ್ಟಪಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್ಪಿ, “07.11.2024 ರಂದು ಕನ್ನಡ ನ್ಯೂಸ್ ನೌ ಎಂಬ ಹೆಸರಿನ ಡಿಜಿಟಲ್ ನ್ಯೂಸ್‌ನಲ್ಲಿ ಹಾವೇರಿ ಜಿಲ್ಲೆಯ ಹರಣಗಿ ಗ್ರಾಮದ ರೈತ ಚನ್ನಪ್ಪ ಎಂಬುವವರ ಪುತ್ರ ರುದ್ರಪ್ಪ ಎಂಬ ರೈತ, 8 ವರ್ಷಗಳ ಹಿಂದೆ 4 ಎಕರೆ ಹೊಲದ ಪಹಣಿಯಲ್ಲಿ ವಕ್ಫ್ ಹೆಸರು ಬಂದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಹಾವೇರಿ ರೈತರು ಆರೋಪಿಸಿದ್ದಾರೆಂದು ವರದಿ ಪ್ರಕಟ ಮಾಡಿರುತ್ತಾರೆ. ಆದರೆ, ಮೃತ ರುದ್ರಪ್ಪ ತಂದೆ ಚನ್ನಪ್ಪ ಬಾಳಿಕಾಯಿ ಇತನು ತಮ್ಮ ಆಸ್ತಿಯ ಪಹಣಿಯಲ್ಲಿ ವಕ್ಫ್ ಎಂದು ನಮೂದು ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಯಾವುದೇ ರೀತಿ ಪ್ರಕರಣ ದಾಖಲಾಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

“ದಿನಾಂಕ 06.01.2022 ರಂದು ಚನ್ನಪ್ಪ ಬಾಳಿಕಾಯಿ ಅವರ ಮಗ ರುದ್ರಪ್ಪ ಐಸಿಐಸಿಐ ಬ್ಯಾಂಕ್ ಹಾವೇರಿ ಶಾಖೆಯಲ್ಲಿ 3 ಲಕ್ಷ ಹಾಗೂ ಖಾಸಗಿಯಾಗಿ 4 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದು, ಅತೀ ಹೆಚ್ಚು ಮಳೆಯಾಗಿ ಬೆಳೆ ಹಾನಿಯಾಗಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಅವರ ತಂದೆ ಚನ್ನಪ್ಪ ಬಾಳಿಕಾಯಿ ದೂರು ನೀಡಿದ್ದು, ಆಡೂರ ಪೊಲೀಸ್ ಠಾಣೆ ಯುಡಿಆರ್ ಸಂಖ್ಯೆ: 03/2022, ಕಲಂ: 174 ಸಿಆರ್‌ಪಿಸಿ ಪ್ರಕಾರ ಯುಡಿಆ‌ರ್ ದಾಖಲಿಸಿಕೊಳ್ಳಲಾಗಿದೆ. ಅದರಲ್ಲಿ ತಮ್ಮ ಆಸ್ತಿಯಲ್ಲಿ ವಕ್ಫ್ ಎಂದು ನಮೂದಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಯಾವುದೇ ರೀತಿ ನಮೂದಿಸಿರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಮೃತರ ಬಗ್ಗೆ ಆಡೂರ ಪಿಎಸ್‌ಐ ರವರು ತನಿಖೆ ಕೈಗೊಂಡು, ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಸಾಕ್ಷಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ಹಾನಗಲ್ ತಹಶೀಲ್ದಾರ್‌ರಿಗೆ ಸಲ್ಲಿಸಿರುತ್ತಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ” ಎಂದು ಫ್ಯಾಕ್ಟ್ ಚೆಕ್ ಪ್ರಕಟಣೆಯಲ್ಲಿ ಎಸ್ಪಿ ತಿಳಿಸಿದ್ದಾರೆ.

ಪೊಲೀಸರ ಈ ಪ್ರಕಟಣೆಯಿಂದ ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಂಚಿಕೊಂಡಿರುವುದು ಖಚಿತವಾಗಿದೆ. ಹಾಗಾಗಿ, ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಸಾಗರ | ಆರ್‌ಎಸ್‌ಎಸ್‌ ಮುಖಂಡ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...