HomeUncategorizedಗಾಝಾದಲ್ಲಿನ ಪತ್ರಕರ್ತರಿಗೆ ಒಗ್ಗಟ್ಟು ಪ್ರದರ್ಶಿಸಿ ಪತ್ರ ಬರೆದ ಮಾದ್ಯಮ ಸಂಸ್ಥೆಗಳು

ಗಾಝಾದಲ್ಲಿನ ಪತ್ರಕರ್ತರಿಗೆ ಒಗ್ಗಟ್ಟು ಪ್ರದರ್ಶಿಸಿ ಪತ್ರ ಬರೆದ ಮಾದ್ಯಮ ಸಂಸ್ಥೆಗಳು

- Advertisement -
- Advertisement -

ಗಾಝಾದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿ 30ಕ್ಕೂ ಹೆಚ್ಚು ಸುದ್ದಿ ಸಂಸ್ಥೆಗಳು ಪತ್ರಬರೆದಿದ್ದು, ಪತ್ರಕರ್ತರ ರಕ್ಷಣೆ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯಲು ಕರೆ ನೀಡಿವೆ.

ಪತ್ರಕರ್ತರನ್ನು ರಕ್ಷಿಸುವ ಸಮಿತಿಯ(CPJ) ಪತ್ರಕ್ಕೆ ಜಾಗತಿಕ ಸುದ್ದಿ ಸಂಸ್ಥೆಗಳಾದ AFP, AP ಮತ್ತು ರಾಯಿಟರ್ಸ್ ಮತ್ತು ಗಾರ್ಡಿಯನ್, ನ್ಯೂಯಾರ್ಕ್ ಟೈಮ್ಸ್, BBC ನ್ಯೂಸ್ ಮತ್ತು ಇಸ್ರೇಲ್‌ನ ಹಾರೆಟ್ಜ್ ಸೇರಿದಂತೆ ಇತರ ಪ್ರಮುಖ 36ಕ್ಕೂ ಅಧಿಕ ಸುದ್ದಿ ಮಾಧ್ಯಮಗಳು ಸಹಿ ಹಾಕಿ ಒಗ್ಗಟ್ಟನ್ನು ಪ್ರದರ್ಶಿಸಿದೆ.

ಇಸ್ರೇಲ್‌- ಹಮಾಸ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಸುಮಾರು ಐದು ತಿಂಗಳಿನಿಂದ ಗಾಝಾದಲ್ಲಿ ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಭೀತಿಯಿಂದ ಕೆಲಸ ಮಾಡುತ್ತಿದ್ದಾರೆ. ಸಿಪಿಜೆ ಪ್ರಕಾರ, ಗಾಜಾದಲ್ಲಿ ಕನಿಷ್ಠ 89 ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಯುದ್ಧದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಅದರಲ್ಲಿ ಹೆಚ್ಚಿನವರು ಪ್ಯಾಲೆಸ್ತೀನ್‌ ಪತ್ರಕರ್ತರು ಎನ್ನುವುದನ್ನು ಇಸ್ರೇಲ್‌ ಬಹಿರಂಗಪಡಿಸಿದೆ.

AFP ಪ್ರಕಾರ, ಇಸ್ರೇಲ್ ಮೇಲೆ ಹಮಾಸ್ ದಾಳಿಯಲ್ಲಿ 1,160 ಜನರು ಮೃತಪಟ್ಟಿದ್ದಾರೆ. ಗಾಝಾ ಆರೋಗ್ಯ ಸಚಿವಾಲಯದ ಪ್ರಕಾರ ಇಸ್ರೇಲ್‌ ನಡೆಸಿದ ಹತ್ಯಾಕಾಂಡಕ್ಕೆ ಗಾಝಾದಲ್ಲಿ 30,035 ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅದರಲ್ಲಿ ಹೆಚ್ಚಿನವರು ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ.

ಪತ್ರಕರ್ತರು ನಾಗರಿಕರಾಗಿದ್ದಾರೆ. ಇಸ್ರೇಲ್‌ ಅಧಿಕಾರಿಗಳು ಅಂತರಾಷ್ಟ್ರೀಯ ಕಾನೂನಿನ ಪ್ರಕಾರ ಪತ್ರಕರ್ತರನ್ನು ಯುದ್ಧೇತರರಾಗಿ ರಕ್ಷಿಸಬೇಕು ಎಂದು ಪತ್ರವು ಹೇಳಿದ್ದು, ಪತ್ರಕ್ಕೆ ಅಸೋಸಿಯೇಷನ್ ​​ಫಾರ್ ಇಂಟರ್ನ್ಯಾಷನಲ್ ಬ್ರಾಡ್‌ಕಾಸ್ಟರ್ಸ್ ಮತ್ತು ವರ್ಲ್ಡ್ ಅಸೋಸಿಯೇಶನ್ ಆಫ್ ನ್ಯೂಸ್ ಪೇಪರ್ಸ್ ಮತ್ತು ನ್ಯೂಸ್ ಪಬ್ಲಿಷರ್ಸ್ (WAN-IFRA) ಸಹಿ ಮಾಡಿದೆ. ದೀರ್ಘಕಾಲದ ಯಾವುದೇ ಕಾನೂನು ಉಲ್ಲಂಘನೆಗಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಒಗ್ಗಟ್ಟಿನ ಪ್ರದರ್ಶನದಲ್ಲಿ ಹೆಚ್ಚಿನ ಸಂಸ್ಥೆಗಳು ಭಾಗವಹಿಸಲು ಸ್ವಾಗತಾರ್ಹ ಎಂದು ಸಿಪಿಜೆಯ ಮುಖ್ಯ ಕಾರ್ಯನಿರ್ವಾಹಕ ಗಿನ್ಸ್‌ಬರ್ಗ್ ಹೇಳಿದ್ದಾರೆ. ಅಂತರಾಷ್ಟ್ರೀಯ ಪತ್ರಿಕಾ ಸಮುದಾಯ ನಮ್ಮ ಪ್ಯಾಲೆಸ್ತೀನ್‌  ಸಹೋದ್ಯೋಗಿಗಳೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ನಾವು ತೋರಿಸುವುದು ಮುಖ್ಯ ಎಂದು ಅವರು ಹೇಳಿದ್ದಾರೆ.

ಪತ್ರದಲ್ಲಿ ಇಸ್ರೇಲ್‌ನ್ನು ಒಮ್ಮೆ ಮಾತ್ರ ಉಲ್ಲೇಖಿಸಲಾಗಿದೆ. ಗಾಝಾದಲ್ಲಿ ಪತ್ರಕರ್ತರಿಗೆ ಹೆಚ್ಚಿನ ಪ್ರವೇಶ ಅವಕಾಶಕ್ಕೆ  ಸಿಪಿಜೆ ಪ್ರತಿಪಾದಿಸಿದ್ದು, ಈ ವಿಚಾರದಲ್ಲಿ ಒಗ್ಗಟ್ಟಿನ ಅಗತ್ಯವಿದೆ ಎಂದು ಗಿನ್ಸ್‌ಬರ್ಗ್ ಹೇಳಿದ್ದಾರೆ.

ಇದನ್ನು ಓದಿ: FACT CHECK: ಬಿಜೆಪಿ ಆರೋಪಿಸಿದಂತೆ ‘ಹಿಂದೂ ದೇವಾಲಯಗಳ ಹಣ’ವನ್ನು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬಳಸಲಾಗುತ್ತಿದೆಯಾ? ‘ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ಮಸೂದೆ’ ಕುರಿತ ವಾಸ್ತವಾಂಶಗಳೇನು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...