HomeUncategorizedಗಾಝಾದಲ್ಲಿನ ಪತ್ರಕರ್ತರಿಗೆ ಒಗ್ಗಟ್ಟು ಪ್ರದರ್ಶಿಸಿ ಪತ್ರ ಬರೆದ ಮಾದ್ಯಮ ಸಂಸ್ಥೆಗಳು

ಗಾಝಾದಲ್ಲಿನ ಪತ್ರಕರ್ತರಿಗೆ ಒಗ್ಗಟ್ಟು ಪ್ರದರ್ಶಿಸಿ ಪತ್ರ ಬರೆದ ಮಾದ್ಯಮ ಸಂಸ್ಥೆಗಳು

- Advertisement -
- Advertisement -

ಗಾಝಾದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿ 30ಕ್ಕೂ ಹೆಚ್ಚು ಸುದ್ದಿ ಸಂಸ್ಥೆಗಳು ಪತ್ರಬರೆದಿದ್ದು, ಪತ್ರಕರ್ತರ ರಕ್ಷಣೆ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯಲು ಕರೆ ನೀಡಿವೆ.

ಪತ್ರಕರ್ತರನ್ನು ರಕ್ಷಿಸುವ ಸಮಿತಿಯ(CPJ) ಪತ್ರಕ್ಕೆ ಜಾಗತಿಕ ಸುದ್ದಿ ಸಂಸ್ಥೆಗಳಾದ AFP, AP ಮತ್ತು ರಾಯಿಟರ್ಸ್ ಮತ್ತು ಗಾರ್ಡಿಯನ್, ನ್ಯೂಯಾರ್ಕ್ ಟೈಮ್ಸ್, BBC ನ್ಯೂಸ್ ಮತ್ತು ಇಸ್ರೇಲ್‌ನ ಹಾರೆಟ್ಜ್ ಸೇರಿದಂತೆ ಇತರ ಪ್ರಮುಖ 36ಕ್ಕೂ ಅಧಿಕ ಸುದ್ದಿ ಮಾಧ್ಯಮಗಳು ಸಹಿ ಹಾಕಿ ಒಗ್ಗಟ್ಟನ್ನು ಪ್ರದರ್ಶಿಸಿದೆ.

ಇಸ್ರೇಲ್‌- ಹಮಾಸ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಸುಮಾರು ಐದು ತಿಂಗಳಿನಿಂದ ಗಾಝಾದಲ್ಲಿ ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಭೀತಿಯಿಂದ ಕೆಲಸ ಮಾಡುತ್ತಿದ್ದಾರೆ. ಸಿಪಿಜೆ ಪ್ರಕಾರ, ಗಾಜಾದಲ್ಲಿ ಕನಿಷ್ಠ 89 ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಯುದ್ಧದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಅದರಲ್ಲಿ ಹೆಚ್ಚಿನವರು ಪ್ಯಾಲೆಸ್ತೀನ್‌ ಪತ್ರಕರ್ತರು ಎನ್ನುವುದನ್ನು ಇಸ್ರೇಲ್‌ ಬಹಿರಂಗಪಡಿಸಿದೆ.

AFP ಪ್ರಕಾರ, ಇಸ್ರೇಲ್ ಮೇಲೆ ಹಮಾಸ್ ದಾಳಿಯಲ್ಲಿ 1,160 ಜನರು ಮೃತಪಟ್ಟಿದ್ದಾರೆ. ಗಾಝಾ ಆರೋಗ್ಯ ಸಚಿವಾಲಯದ ಪ್ರಕಾರ ಇಸ್ರೇಲ್‌ ನಡೆಸಿದ ಹತ್ಯಾಕಾಂಡಕ್ಕೆ ಗಾಝಾದಲ್ಲಿ 30,035 ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅದರಲ್ಲಿ ಹೆಚ್ಚಿನವರು ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ.

ಪತ್ರಕರ್ತರು ನಾಗರಿಕರಾಗಿದ್ದಾರೆ. ಇಸ್ರೇಲ್‌ ಅಧಿಕಾರಿಗಳು ಅಂತರಾಷ್ಟ್ರೀಯ ಕಾನೂನಿನ ಪ್ರಕಾರ ಪತ್ರಕರ್ತರನ್ನು ಯುದ್ಧೇತರರಾಗಿ ರಕ್ಷಿಸಬೇಕು ಎಂದು ಪತ್ರವು ಹೇಳಿದ್ದು, ಪತ್ರಕ್ಕೆ ಅಸೋಸಿಯೇಷನ್ ​​ಫಾರ್ ಇಂಟರ್ನ್ಯಾಷನಲ್ ಬ್ರಾಡ್‌ಕಾಸ್ಟರ್ಸ್ ಮತ್ತು ವರ್ಲ್ಡ್ ಅಸೋಸಿಯೇಶನ್ ಆಫ್ ನ್ಯೂಸ್ ಪೇಪರ್ಸ್ ಮತ್ತು ನ್ಯೂಸ್ ಪಬ್ಲಿಷರ್ಸ್ (WAN-IFRA) ಸಹಿ ಮಾಡಿದೆ. ದೀರ್ಘಕಾಲದ ಯಾವುದೇ ಕಾನೂನು ಉಲ್ಲಂಘನೆಗಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಒಗ್ಗಟ್ಟಿನ ಪ್ರದರ್ಶನದಲ್ಲಿ ಹೆಚ್ಚಿನ ಸಂಸ್ಥೆಗಳು ಭಾಗವಹಿಸಲು ಸ್ವಾಗತಾರ್ಹ ಎಂದು ಸಿಪಿಜೆಯ ಮುಖ್ಯ ಕಾರ್ಯನಿರ್ವಾಹಕ ಗಿನ್ಸ್‌ಬರ್ಗ್ ಹೇಳಿದ್ದಾರೆ. ಅಂತರಾಷ್ಟ್ರೀಯ ಪತ್ರಿಕಾ ಸಮುದಾಯ ನಮ್ಮ ಪ್ಯಾಲೆಸ್ತೀನ್‌  ಸಹೋದ್ಯೋಗಿಗಳೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ನಾವು ತೋರಿಸುವುದು ಮುಖ್ಯ ಎಂದು ಅವರು ಹೇಳಿದ್ದಾರೆ.

ಪತ್ರದಲ್ಲಿ ಇಸ್ರೇಲ್‌ನ್ನು ಒಮ್ಮೆ ಮಾತ್ರ ಉಲ್ಲೇಖಿಸಲಾಗಿದೆ. ಗಾಝಾದಲ್ಲಿ ಪತ್ರಕರ್ತರಿಗೆ ಹೆಚ್ಚಿನ ಪ್ರವೇಶ ಅವಕಾಶಕ್ಕೆ  ಸಿಪಿಜೆ ಪ್ರತಿಪಾದಿಸಿದ್ದು, ಈ ವಿಚಾರದಲ್ಲಿ ಒಗ್ಗಟ್ಟಿನ ಅಗತ್ಯವಿದೆ ಎಂದು ಗಿನ್ಸ್‌ಬರ್ಗ್ ಹೇಳಿದ್ದಾರೆ.

ಇದನ್ನು ಓದಿ: FACT CHECK: ಬಿಜೆಪಿ ಆರೋಪಿಸಿದಂತೆ ‘ಹಿಂದೂ ದೇವಾಲಯಗಳ ಹಣ’ವನ್ನು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬಳಸಲಾಗುತ್ತಿದೆಯಾ? ‘ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ಮಸೂದೆ’ ಕುರಿತ ವಾಸ್ತವಾಂಶಗಳೇನು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...