Homeಮುಖಪುಟಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು: ರಾಹುಲ್ ಗಾಂಧಿ

ಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು: ರಾಹುಲ್ ಗಾಂಧಿ

ಇಂದು ನಾನು ಹೇಳುತ್ತಿದ್ದೇನೆ ನಮ್ಮ ದೇಶವು ಯುವಜನರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಿಲ್ಲ. ನೀವು ಇದನ್ನು ಒಪ್ಪದಿದ್ದರೆ ಆರು-ಏಳು ತಿಂಗಳು ಕಾಯಿರಿ" ಎಂದು ರಾಹುಲ್ ಎಚ್ಚರಿಸಿದ್ದಾರೆ.

- Advertisement -
- Advertisement -

ಮುಂಬರುವ ದಿನಗಳಲ್ಲಿ ಭಾರತವು ತನ್ನ ಯುವಜನರಿಗೆ ಉದ್ಯೋಗ ನೀಡಲು ಸಾಧ್ಯವಾಗುವುದಿಲ್ಲ ಎಂದು ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ. ಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು ಎಂದು ಅವರು ಹೇಳಿದರು.

ನರೇಂದ್ರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಮುಂದಿನ 6-7 ತಿಂಗಳಲ್ಲಿ ನಿರುದ್ಯೋಗ ಬಿಕ್ಕಟ್ಟು ಮನೆಯ ಬಾಗಿಲಿಗೆ ಬರಲಿದೆ. ಭಾರತವು ಯುವಜನರಿಗೆ ಉದ್ಯೋಗವನ್ನು ಒದಗಿಸಲು ಸಾಧ್ಯವಿಲ್ಲವೆಂಬುದು ಸ್ಪಷ್ಟವಾಗಿದೆ. 70 ವರ್ಷಗಳಲ್ಲಿ ನಮ್ಮ ದೇಶವು ಇಂಥ ಪರಿಸ್ಥಿತಿಯನ್ನು ಎದುರಿಸಿರಲಿಲ್ಲ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

“ಕೊರೊನಾದಿಂದ ಭಾರೀ ನಷ್ಟವಾಗಲಿದೆ ಎಂದು ನಾನು ದೇಶಕ್ಕೆ ಎಚ್ಚರಿಕೆ ನೀಡಿದಾಗ ಮಾಧ್ಯಮಗಳು ನನ್ನನ್ನು ಗೇಲಿ ಮಾಡಿದ್ದವು. ನೀವು ನನ್ನನ್ನು ನಂಬದಿದ್ದರೆ, ನನ್ನ ಮಾತನ್ನು ಕೇಳಬೇಡಿ. ಇಂದು ನಾನು ಹೇಳುತ್ತಿದ್ದೇನೆ ನಮ್ಮ ದೇಶವು ಯುವಜನರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಿಲ್ಲ. ನೀವು ಇದನ್ನು ಒಪ್ಪದಿದ್ದರೆ ಆರು-ಏಳು ತಿಂಗಳು ಕಾಯಿರಿ” ಎಂದು ಅವರು ಎಚ್ಚರಿಸಿದ್ದಾರೆ.

ಅಸಂಘಟಿತ ವಲಯದಲ್ಲಿ ಉದ್ಯೋಗ ನೀಡುವವರು ಆರ್ಥಿಕ ಬಿಕ್ಕಟ್ಟಿನಿಂದ ಮುಗ್ಗರಿಸಿರುವುದೇ ಇದಕ್ಕೆ ಕಾರಣ ಎಂದು ಅವರು ವಿವರಿಸಿದರು. “90% ಉದ್ಯೋಗವು ಅಸಂಘಟಿತ ವಲಯದಲ್ಲಿದೆ. ಪಿಎಂ ಮೋದಿ ಈ ವ್ಯವಸ್ಥೆಯನ್ನು ನಾಶಪಡಿಸಿದ್ದಾರೆ. ಕಂಪನಿಗಳು ಒಂದರ ನಂತರ ಒಂದರಂತೆ ಮುಚ್ಚುತ್ತಿರುವುದನ್ನು ನೀವು ನೋಡುತ್ತಿದ್ದೀರಿ. ಮೊರೊಟೋರಿಯಂ ಅವಧಿಯ ನಂತರ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್‌ಎಂಇ) ನಾಶವಾಗುತ್ತವೆ ಎಂದು ಹೇಳಿದರು.

COVID-19 ವಿರುದ್ಧದ ದೇಶದ ಹೋರಾಟದ ನಡುವೆ ಕಂಪನಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಾಣಿಜ್ಯ ಬ್ಯಾಂಕುಗಳು ಮತ್ತು ಬ್ಯಾಂಕೇತರ ಹಣಕಾಸು ಉದ್ಯಮಗಳಿಗೆ ಸಾಲ ಮರುಪಾವತಿಯನ್ನು 6 ತಿಂಗಳವರೆಗೆ ನಿಷೇಧಿಸಿತ್ತು. ಆದರೆ, ಈ ನಿಷೇಧದಿಂದ ಉದ್ಯಮಗಳಿಗೆ ಯಾವುದೇ ಉಪಯೋಗವಿಲ್ಲ. ಇಂತಹ ಸಂದರ್ಭದಲ್ಲಿ ಬಡ್ಡಿ ಸಾಲ ನೀಡುವುದು ಸರ್ಕಾರದ ಕೆಲಸವಲ್ಲ ಎಂದಿದ್ದಾರೆ.

ವೈರಸ್ ಹರಡುವಿಕೆಯನ್ನು ನಿಧಾನಗೊಳಿಸಲು ವಿಸ್ತೃತ ಲಾಕ್‌ಡೌನ್‌ನಿಂದ ಅನೇಕ ವ್ಯವಹಾರಗಳಿಗೆ ದೊಡ್ಡ ಹೊಡೆತ ಬಿದ್ದಿದೆ. ಕಳೆದ ನಾಲ್ಕು ತಿಂಗಳಲ್ಲಿ ಸುಮಾರು ಎರಡು ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ನಿರುದ್ಯೋಗದ ಬಗ್ಗೆ ಸತ್ಯವನ್ನು ದೇಶದಿಂದ ಮರೆಮಾಡಲು ಸಾಧ್ಯವಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.

2 ಕೋಟಿ ಕುಟುಂಬಗಳ ಭವಿಷ್ಯವು ಕತ್ತಲೆಯಲ್ಲಿದೆ. ಫೇಸ್‌ಬುಕ್‌ನಲ್ಲಿ ನಕಲಿ ಸುದ್ದಿ ಮತ್ತು ದ್ವೇಷವನ್ನು ಹರಡುವ ಮೂಲಕ ನಿರುದ್ಯೋಗ ಮತ್ತು ಆರ್ಥಿಕತೆಯ ವಿನಾಶದ ಬಗ್ಗೆ ಸತ್ಯವನ್ನು ದೇಶದಿಂದ ಮರೆಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕೆಲವು ಬಿಜೆಪಿ ನಾಯಕರ ಪೋಸ್ಟ್‌ಗಳಿಗೆ ದ್ವೇಷ ಭಾಷಣ ನಿಯಮಗಳನ್ನು ಅನ್ವಯಿಸುವುದನ್ನು ಹಿರಿಯ ಫೇಸ್‌ಬುಕ್ ಅಧಿಕಾರಿಗಳು ವಿರೋಧಿಸಿದ್ದಾರೆ ಎಂದು ವಾಲ್ ಸ್ಟ್ರೀಟ್ ಜರ್ನಲ್ (ಡಬ್ಲ್ಯುಎಸ್‌ಜೆ) ವರದಿಯನ್ನು ಅವರು ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...