Homeಅಂಕಣಗಳುಡೇಟಾಖೋಲಿ: ಮಾಧ್ಯಮ ನಲ್ಲರು - ಯಾರ ಕೆಲಸ ಏನು?

ಡೇಟಾಖೋಲಿ: ಮಾಧ್ಯಮ ನಲ್ಲರು – ಯಾರ ಕೆಲಸ ಏನು?

- Advertisement -
- Advertisement -

ಈ ವಾರ ಇಡೀ ಜಗತ್ತು ಶಾಂತಿ ಹಾಗೂ ಸಮೃದ್ಧಿಯಿಂದ ತುಂಬಿ ತುಳುಕುತ್ತಿದ್ದಾಗ ಒಂದು ಸುದ್ದಿ ಬಂತು. ಈಗಿನ ಕಾಲದ ಎಲ್ಲ ಒಳ್ಳೆ-ಕೆಟ್ಟ ಸುದ್ದಿಗಳಂತೆ ಅದು ಕೆಲವೇ ನಿಮಿಷದಾಗ ವೈರಲ್ ಆಗಿ ಹೋತು.

ಅದು ಯಾವುದಪಾ ಅಂದರ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ನಡುವೆ ಜಗಳ ಆಗಿ, ಅದರಾಗ ಕಿರಿಯ ಅಧಿಕಾರಿ ಒಬ್ಬರು ರಾಜೀನಾಮೆ ಕೊಟ್ಟು, ಕಡಿಕೆ ರಾಜ್ಯ ಸರಕಾರ ಇಬ್ಬರನ್ನೂ ವರ್ಗಾವಣೆ ಮಾಡಿದ ಸುದ್ದಿ.

ಅದರಾಗ ಹಿರಿಯ ಅಧಿಕಾರಿ, ’ಇದರ ಹಿಂದೆ ದೊಡ್ಡ ಪಿತೂರಿ ಐತಿ. ರಿಯಲ್ ಎಸ್ಟೇಟ್ ಮಾಫಿಯಾ ಎಲ್ಲ ಇದಕ್ಕ ಕಾರಣ. ನಮ್ಮ ನಡುವಿನ ಭಿನ್ನಾಭಿಪ್ರಾಯ ಎಲ್ಲ ಸಣ್ಣದು ಆಷ್ಟ. ಅದನ್ನ ನೆವ ಮಾಡಿಕೊಂಡು ನಮ್ಮನ್ನ ಇಲ್ಲಿಂದ ಹೊರಗ ಹಾಕಿದರು’ ಅನ್ನೋ ಅರ್ಥ ಬಾರೋ ಹಂಗ ಪ್ರತಿಕ್ರಿಯೆ ಕೊಟ್ಟರು.

ಅಲ್ಲಿಗೆ ಆ ಕತಿ ಮುಗೀತು. ಆದರ ಅದರಗಿಂತ ಕುತೂಹಲಕಾರಿಯಾಗಿದ್ದು ಯಾವುದು ಅಂದರ ಈ ವಿಷಯಕ್ಕ ಸಂಬಂಧ ಪಡದೇ ಇರುವ ಒಬ್ಬ ಐಪಿಎಸ್ಸು ಅಧಿಕಾರಿ ತಮ್ಮ ಫೇಸ್ಬುಕ್ ಗೋಡೆ ಮೇಲೆ ಒಂದು ಬರಹ ಬರದು ಹಾಕಿದರು. ಅದರಾಗ ಅವರು ಏನು ಹೇಳಿದರು ಅಂದರ ಕೆಲವು ಅಧಿಕಾರಿಗಳು ತಾವು ಸಿಂಗಮ್, ಸಿಂಹಿಣಿ ಅಂತ ಎಲ್ಲಾ ಪ್ರಚಾರ ಮಾಡಿಕೊಳತಾರ. ಇದು ಸರಿಯಲ್ಲ. ತಮ್ಮ ಕೆಲಸ ತಾವು ಸುಮ್ಮನೇ ಮಾಡಬೇಕು, ರಾಜಕೀಯದಿಂದ ಅವರು ದೂರ ಇರಬೇಕು, ಒಳ್ಳೆ ಕೆಲಸ ಮಾಡಿದರ ತಮ್ಮ ತಂಡಕ್ಕೆ ಅದರ ಶ್ರೇಯಸ್ಸು ಕೊಡಬೇಕು, ಕೆಟ್ಟ ಕೆಲಸ ಮಾಡಿದರ ಅದರ ತಪ್ಪು ಹೊರಲಿಕ್ಕೆ ತಯಾರು ಇರಬೇಕು, ಅನ್ನುವ ಮಾತು ಹೇಳಿದರು. ಮಜಾ ಅಂದರ ಈ ಅಧಿಕಾರಿ ಹುಬ್ಬಳ್ಳಿ- ಬೆಳಗಾವಿಯೊಳಗ ಕೆಲಸ ಮಾಡಿದಾಗ ಇದೆ ರೀತಿಯ ಮಾಧ್ಯಮ ಪ್ರಚಾರದ ಅನುಕೂಲ ಪಡೆದುಕೊಂಡಿದ್ರು. ಆ ಮಾತು ಬ್ಯಾರೆ.

ಇಲ್ಲಿ ಮುಖ್ಯವಾದ ವಿಷಯ ಏನು ಅಂದರ ನಮ್ಮ ಭವ್ಯ ಭಾರತದ ಮಾನ್ಯ ಮತದಾರ ಬಂಧುಗಳಿಗೆ ನಮ್ಮ ಘನ ಸರಕಾರದ ಒಳಗ ಯಾರಿಗೆ ಯಾವ ಕೆಲಸ, ಯಾವ ಜವಾಬುದಾರಿ ಅನ್ನೋದು ಸರಿಯಾಗಿ ಗೊತ್ತಿಲ್ಲ. ರಾಜಕಾರಣಿಯ ಕೆಲಸ ಏನು, ಅಧಿಕಾರಿಗಳ ಕೆಲಸ ಏನು ಅನ್ನೋದು ಗೊತ್ತಿಲ್ಲ.

PC : Wikipedia, (ಪ್ರತಾಪ್ ಸಿಂಗ್ ಖೈರೋಂ)

ಇದರ ಬಗ್ಗೆ ಒಂದು ರಸವತ್ತಾದ ಕತೆ ಇದೆ. ಪ್ರತಾಪ್ ಸಿಂಗ್ ಖೈರೋಂ ಅವರು 50ನೇ ದಶಕದೊಳಗ ಪಂಜಾಬ್‌ನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಆಗ ಒಬ್ಬ ದಕ್ಷಿಣ ಭಾರತ ಮೂಲದ ಐಎಎಸ್ ಅಧಿಕಾರಿ ಪಂಜಾಬಿನ ಮುಖ್ಯ ಕಾರ್ಯದರ್ಶಿ ಆಗಿದ್ದರು. ಮುಖ್ಯಮಂತ್ರಿ ಅವರು ಮುಖ್ಯ ಕಾರ್ಯದರ್ಶಿಯನ್ನು ಕೇಳಿದರಂತ – ಅಲ್ರೀ, ನಿಮ್ಮ ಕೆಲಸ ಏನು, ನನ್ನ ಕೆಲಸ ಏನು? ಅಂತ. ಆಗ ಆ ಐಎಎಸ್ ಅಧಿಕಾರಿ ಸರ್, ನಿಮ್ಮ ಕೆಲಸ ಸರಕಾರದ ಕಾನೂನು, ನೀತಿನಿಯಮ ರೂಪಿಸುವುದು. ನನ್ನ ಕೆಲಸ ದಿನನಿತ್ಯದ ಆಡಳಿತ ನಿರ್ವಹಣೆ ಮಾಡೋದು, ಅಂತ. ಹೌದಾ, ಹಂಗಾರ ನಾಳೆಯಿಂದ ನನ್ನ ಕೆಲಸ ನೀವು ಮಾಡ್ರಿ, ನಿಮ್ಮ ಕೆಲಸ ನಾನು ಮಾಡತೆನಿ ಅಂತ ಮುಖ್ಯಮಂತ್ರಿ ಅವರು ಮುಖ್ಯ ಕಾರ್ಯದರ್ಶಿ ಅವರಿಗೆ ಹೇಳಿದರಂತ.

ಖೈರೋಂ ಅವರು ಪ್ರಾಮಾಣಿಕರು, ಸರಳ ಮನುಷ್ಯರು. ಹಿಂಗಾಗಿ ಅವರು ಅಧಿಕಾರಿನ ಕರೆದು ಮಾತಾಡಿದರು. ಬ್ಯಾರೆ ರಾಜಕಾರಣಿಗಳು ಸಹಿತ ಇದೆ ಕೆಲಸ ಮಾಡ್ತಾ ಇದಾರೆ, ಅದರ ಅದನ್ನ ಮುಕ್ತವಾಗಿ ಒಪ್ಪಿಕೊಳ್ಳೋದಿಲ್ಲ.

ಈಗ ಮತ್ತ ನಮ್ಮ ರಾಜ್ಯದ ಅಧಿಕಾರಿಗಳಿಗೆ ಬರೋಣ. ಮೈಸೂರಿನ ಇಬ್ಬರು ಅಧಿಕಾರಿಗಳು ಜಗಳ ಅಡಿದರ, ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಚಾಮರಾಜನಗರದ ಜಿಲ್ಲಾಧಿಕಾರಿಗೆ ಭಿನ್ನಾಭಿಪ್ರಾಯ ಬಂದರ, ಅವರ ಮ್ಯಾಲೆ ಒಬ್ಬ ಪ್ರಾದೇಶಿಕ ಆಯುಕ್ತ ಅಂತ ಒಬ್ಬ ಅಧಿಕಾರಿ ಇದ್ದ ಇರತಾನ. ಆ ಪುಣ್ಯಾತ್ಮ ಈ ಅಧಿಕಾರಿಗಳ ಮೇಲೆ ನಿಗರಾಣಿ ವಹಿಸಿ ಅವರು ಸರಿಯಾಗಿ ಕೆಲಸ ಮಾಡುವ ಹಂಗ ಯಾಕ್ ಮಾಡಲಿಲ್ಲ ಅಂತ ಯಾವ ಮಾಧ್ಯಮದವರು ಕೇಳಲಿಲ್ಲ, ರಾಜಕಾರಣಿನು ಕೇಳಲಿಲ್ಲ.

ಯಾಕೆ ಅಂದ್ರ ಮಾಧ್ಯಮದವರಿಗೆ ಸಹಿತ ಯಾರದ್ದು ಯಾವ ಕೆಲಸ ಅಂತ ಹೇಳಿ ಸರಿಯಾಗಿ ಗೊತ್ತಿಲ್ಲ. ಅಥವಾ ಗೊತ್ತಿದರೂ, ಟಿಆರ್‌ಪಿ ಆಸೆಗೆ, ಮಾರುಕಟ್ಟೆ, ಜಾಹೀರಾತು ಆಸೆಗೆ, ಅವರು ಬಹು ಚರ್ಚಿತ ವಿಷಯಗಳನ್ನ ತೋರಿಸ್ತಾರ ಹೊರತು, ಕೇಳಲೇಬೇಕಾದ ಪ್ರಶ್ನೆ ಕೇಳಿ, ಸರಿಯಾದ ಉತ್ತರ ಹುಡುಕುವ ಪ್ರಯತ್ನ ಮಾಡೋದಿಲ್ಲ.

ಈ ರೀತಿಯ ಸುದ್ದಿ ಅಥವಾ ಚರ್ಚೆ, ಜನರಿಗೆ ಬೇಕೋ ಬೇಡವೋ? ಪ್ರತಿ ದಿನ ಮುಂಜಾನೆದೊಳಗಿನ ಸುದ್ದಿಯ ಹೆಡ್‌ಲೈನ್ ಓದಿ ಪೇಪರ್ ಮುಚ್ಚಿ ಇಡುವ ನಮ್ಮ ಜನರಿಗೆ ಸುದ್ದಿಯ ಅಳಕ್ಕೆ ಹೋಗೋದು ಬೇಕೋ ಬ್ಯಾಡವೋ?

ಇದರಾಗ ನಾಯಕರ ತಪ್ಪೂ ಐತಿ. ಈಗಿನ ನಾಯಕರು ಮುಂದಿನ ಚುನಾವಣೆ ಬಗ್ಗೆ ಮಾತ್ರ ವಿಚಾರ ಮಾಡತಾರ ಹೊರತು ಅವರಿಗೆ ಬೇರೆ ಮುಂದಾಲೋಚನೆ, ದೂರದೃಷ್ಟಿತ್ವ ಅನ್ನೋದು ಇರೋದಿಲ್ಲ.

ಬಹಳ ಹಿಂದೆ ರಾಮಚಂದ್ರಪ್ಪ ಅಂತ ಬೆಂಗಳೂರಿನ ಮೇಯರ್ ಇದ್ದರು. ಅವರು ಜಾಸ್ತಿ ಓದಿರಲಿಲ್ಲ, ಆದ್ದರಿಂದ ಅವರನ್ನ ಬೆಂಗಳೂರಿನ ಕೆಲವು ಪತ್ರಕರ್ತರು ಮೇಯರ್ ಮುತ್ತಣ್ಣ ಅಂತ ಕರಿತಿದ್ದರು. ಅವರು ಬಹಳ ಸರಳ ಭಾಷೆಯೊಳಗ ಭಾಷಣ ಮಾಡ್ತಿದ್ದರು. ಪಾಲಿಕೆಯ ಆಯುಕ್ತರು ಬದಲಾವಣೆ ಆದಾಗ ಅವರು ಒಂದು ಸ್ವಾಗತ ಭಾಷಣ ಮಾಡಿದ್ದರು. ಅದರಲ್ಲಿ ಒಂದು ಮರೆಯಲಾರದಂತಹ ಮಾತು ಹೇಳಿದರು.

’ನೋಡಿ ಸ್ವಾಮಿ, ನಮ್ಮ ಅಧಿಕಾರಿಗಳು ಕುದುರೆಗಳು ಇದ್ದಂತೆ. ಅವರು ಯಾವ ದಿಕ್ಕಿನಲ್ಲಿ ಓಡುತ್ತಾರೆ ಅನ್ನುವುದು ಅವರನ್ನು ಓಡಿಸುವ ಸವಾರರ ಮೇಲೆ ಇರುತ್ತದೆ. ಆಯುಕ್ತರು ಸವಾರರು ಇದ್ದಂತೆ. ನೀವು ಒಳ್ಳೆಯವರಾದರೆ, ಅವರು ಒಳ್ಳೆಯವರು’, ಅಂತ ಹೇಳಿ ಮಾತು ಮುಗಿಸಿದ್ದರು.

ಈ ರೀತಿಯ ಸ್ಪಷ್ಟತೆ ಈಗಿನ ನಾಯಕರಲ್ಲಿ ಬಂದರೆ, ಅದು ಜನರಿಗೆ ತಿಳಿದರೆ, ಆಡಳಿತ ಅನ್ನುವುದು ಸರಿಯಾದ ದಾರಿಯಲ್ಲಿ ನಡೆದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...