Homeಅಂಕಣಗಳುಡೇಟಾಖೋಲಿ: ಮಾಧ್ಯಮ ನಲ್ಲರು - ಯಾರ ಕೆಲಸ ಏನು?

ಡೇಟಾಖೋಲಿ: ಮಾಧ್ಯಮ ನಲ್ಲರು – ಯಾರ ಕೆಲಸ ಏನು?

- Advertisement -
- Advertisement -

ಈ ವಾರ ಇಡೀ ಜಗತ್ತು ಶಾಂತಿ ಹಾಗೂ ಸಮೃದ್ಧಿಯಿಂದ ತುಂಬಿ ತುಳುಕುತ್ತಿದ್ದಾಗ ಒಂದು ಸುದ್ದಿ ಬಂತು. ಈಗಿನ ಕಾಲದ ಎಲ್ಲ ಒಳ್ಳೆ-ಕೆಟ್ಟ ಸುದ್ದಿಗಳಂತೆ ಅದು ಕೆಲವೇ ನಿಮಿಷದಾಗ ವೈರಲ್ ಆಗಿ ಹೋತು.

ಅದು ಯಾವುದಪಾ ಅಂದರ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ನಡುವೆ ಜಗಳ ಆಗಿ, ಅದರಾಗ ಕಿರಿಯ ಅಧಿಕಾರಿ ಒಬ್ಬರು ರಾಜೀನಾಮೆ ಕೊಟ್ಟು, ಕಡಿಕೆ ರಾಜ್ಯ ಸರಕಾರ ಇಬ್ಬರನ್ನೂ ವರ್ಗಾವಣೆ ಮಾಡಿದ ಸುದ್ದಿ.

ಅದರಾಗ ಹಿರಿಯ ಅಧಿಕಾರಿ, ’ಇದರ ಹಿಂದೆ ದೊಡ್ಡ ಪಿತೂರಿ ಐತಿ. ರಿಯಲ್ ಎಸ್ಟೇಟ್ ಮಾಫಿಯಾ ಎಲ್ಲ ಇದಕ್ಕ ಕಾರಣ. ನಮ್ಮ ನಡುವಿನ ಭಿನ್ನಾಭಿಪ್ರಾಯ ಎಲ್ಲ ಸಣ್ಣದು ಆಷ್ಟ. ಅದನ್ನ ನೆವ ಮಾಡಿಕೊಂಡು ನಮ್ಮನ್ನ ಇಲ್ಲಿಂದ ಹೊರಗ ಹಾಕಿದರು’ ಅನ್ನೋ ಅರ್ಥ ಬಾರೋ ಹಂಗ ಪ್ರತಿಕ್ರಿಯೆ ಕೊಟ್ಟರು.

ಅಲ್ಲಿಗೆ ಆ ಕತಿ ಮುಗೀತು. ಆದರ ಅದರಗಿಂತ ಕುತೂಹಲಕಾರಿಯಾಗಿದ್ದು ಯಾವುದು ಅಂದರ ಈ ವಿಷಯಕ್ಕ ಸಂಬಂಧ ಪಡದೇ ಇರುವ ಒಬ್ಬ ಐಪಿಎಸ್ಸು ಅಧಿಕಾರಿ ತಮ್ಮ ಫೇಸ್ಬುಕ್ ಗೋಡೆ ಮೇಲೆ ಒಂದು ಬರಹ ಬರದು ಹಾಕಿದರು. ಅದರಾಗ ಅವರು ಏನು ಹೇಳಿದರು ಅಂದರ ಕೆಲವು ಅಧಿಕಾರಿಗಳು ತಾವು ಸಿಂಗಮ್, ಸಿಂಹಿಣಿ ಅಂತ ಎಲ್ಲಾ ಪ್ರಚಾರ ಮಾಡಿಕೊಳತಾರ. ಇದು ಸರಿಯಲ್ಲ. ತಮ್ಮ ಕೆಲಸ ತಾವು ಸುಮ್ಮನೇ ಮಾಡಬೇಕು, ರಾಜಕೀಯದಿಂದ ಅವರು ದೂರ ಇರಬೇಕು, ಒಳ್ಳೆ ಕೆಲಸ ಮಾಡಿದರ ತಮ್ಮ ತಂಡಕ್ಕೆ ಅದರ ಶ್ರೇಯಸ್ಸು ಕೊಡಬೇಕು, ಕೆಟ್ಟ ಕೆಲಸ ಮಾಡಿದರ ಅದರ ತಪ್ಪು ಹೊರಲಿಕ್ಕೆ ತಯಾರು ಇರಬೇಕು, ಅನ್ನುವ ಮಾತು ಹೇಳಿದರು. ಮಜಾ ಅಂದರ ಈ ಅಧಿಕಾರಿ ಹುಬ್ಬಳ್ಳಿ- ಬೆಳಗಾವಿಯೊಳಗ ಕೆಲಸ ಮಾಡಿದಾಗ ಇದೆ ರೀತಿಯ ಮಾಧ್ಯಮ ಪ್ರಚಾರದ ಅನುಕೂಲ ಪಡೆದುಕೊಂಡಿದ್ರು. ಆ ಮಾತು ಬ್ಯಾರೆ.

ಇಲ್ಲಿ ಮುಖ್ಯವಾದ ವಿಷಯ ಏನು ಅಂದರ ನಮ್ಮ ಭವ್ಯ ಭಾರತದ ಮಾನ್ಯ ಮತದಾರ ಬಂಧುಗಳಿಗೆ ನಮ್ಮ ಘನ ಸರಕಾರದ ಒಳಗ ಯಾರಿಗೆ ಯಾವ ಕೆಲಸ, ಯಾವ ಜವಾಬುದಾರಿ ಅನ್ನೋದು ಸರಿಯಾಗಿ ಗೊತ್ತಿಲ್ಲ. ರಾಜಕಾರಣಿಯ ಕೆಲಸ ಏನು, ಅಧಿಕಾರಿಗಳ ಕೆಲಸ ಏನು ಅನ್ನೋದು ಗೊತ್ತಿಲ್ಲ.

PC : Wikipedia, (ಪ್ರತಾಪ್ ಸಿಂಗ್ ಖೈರೋಂ)

ಇದರ ಬಗ್ಗೆ ಒಂದು ರಸವತ್ತಾದ ಕತೆ ಇದೆ. ಪ್ರತಾಪ್ ಸಿಂಗ್ ಖೈರೋಂ ಅವರು 50ನೇ ದಶಕದೊಳಗ ಪಂಜಾಬ್‌ನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಆಗ ಒಬ್ಬ ದಕ್ಷಿಣ ಭಾರತ ಮೂಲದ ಐಎಎಸ್ ಅಧಿಕಾರಿ ಪಂಜಾಬಿನ ಮುಖ್ಯ ಕಾರ್ಯದರ್ಶಿ ಆಗಿದ್ದರು. ಮುಖ್ಯಮಂತ್ರಿ ಅವರು ಮುಖ್ಯ ಕಾರ್ಯದರ್ಶಿಯನ್ನು ಕೇಳಿದರಂತ – ಅಲ್ರೀ, ನಿಮ್ಮ ಕೆಲಸ ಏನು, ನನ್ನ ಕೆಲಸ ಏನು? ಅಂತ. ಆಗ ಆ ಐಎಎಸ್ ಅಧಿಕಾರಿ ಸರ್, ನಿಮ್ಮ ಕೆಲಸ ಸರಕಾರದ ಕಾನೂನು, ನೀತಿನಿಯಮ ರೂಪಿಸುವುದು. ನನ್ನ ಕೆಲಸ ದಿನನಿತ್ಯದ ಆಡಳಿತ ನಿರ್ವಹಣೆ ಮಾಡೋದು, ಅಂತ. ಹೌದಾ, ಹಂಗಾರ ನಾಳೆಯಿಂದ ನನ್ನ ಕೆಲಸ ನೀವು ಮಾಡ್ರಿ, ನಿಮ್ಮ ಕೆಲಸ ನಾನು ಮಾಡತೆನಿ ಅಂತ ಮುಖ್ಯಮಂತ್ರಿ ಅವರು ಮುಖ್ಯ ಕಾರ್ಯದರ್ಶಿ ಅವರಿಗೆ ಹೇಳಿದರಂತ.

ಖೈರೋಂ ಅವರು ಪ್ರಾಮಾಣಿಕರು, ಸರಳ ಮನುಷ್ಯರು. ಹಿಂಗಾಗಿ ಅವರು ಅಧಿಕಾರಿನ ಕರೆದು ಮಾತಾಡಿದರು. ಬ್ಯಾರೆ ರಾಜಕಾರಣಿಗಳು ಸಹಿತ ಇದೆ ಕೆಲಸ ಮಾಡ್ತಾ ಇದಾರೆ, ಅದರ ಅದನ್ನ ಮುಕ್ತವಾಗಿ ಒಪ್ಪಿಕೊಳ್ಳೋದಿಲ್ಲ.

ಈಗ ಮತ್ತ ನಮ್ಮ ರಾಜ್ಯದ ಅಧಿಕಾರಿಗಳಿಗೆ ಬರೋಣ. ಮೈಸೂರಿನ ಇಬ್ಬರು ಅಧಿಕಾರಿಗಳು ಜಗಳ ಅಡಿದರ, ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಚಾಮರಾಜನಗರದ ಜಿಲ್ಲಾಧಿಕಾರಿಗೆ ಭಿನ್ನಾಭಿಪ್ರಾಯ ಬಂದರ, ಅವರ ಮ್ಯಾಲೆ ಒಬ್ಬ ಪ್ರಾದೇಶಿಕ ಆಯುಕ್ತ ಅಂತ ಒಬ್ಬ ಅಧಿಕಾರಿ ಇದ್ದ ಇರತಾನ. ಆ ಪುಣ್ಯಾತ್ಮ ಈ ಅಧಿಕಾರಿಗಳ ಮೇಲೆ ನಿಗರಾಣಿ ವಹಿಸಿ ಅವರು ಸರಿಯಾಗಿ ಕೆಲಸ ಮಾಡುವ ಹಂಗ ಯಾಕ್ ಮಾಡಲಿಲ್ಲ ಅಂತ ಯಾವ ಮಾಧ್ಯಮದವರು ಕೇಳಲಿಲ್ಲ, ರಾಜಕಾರಣಿನು ಕೇಳಲಿಲ್ಲ.

ಯಾಕೆ ಅಂದ್ರ ಮಾಧ್ಯಮದವರಿಗೆ ಸಹಿತ ಯಾರದ್ದು ಯಾವ ಕೆಲಸ ಅಂತ ಹೇಳಿ ಸರಿಯಾಗಿ ಗೊತ್ತಿಲ್ಲ. ಅಥವಾ ಗೊತ್ತಿದರೂ, ಟಿಆರ್‌ಪಿ ಆಸೆಗೆ, ಮಾರುಕಟ್ಟೆ, ಜಾಹೀರಾತು ಆಸೆಗೆ, ಅವರು ಬಹು ಚರ್ಚಿತ ವಿಷಯಗಳನ್ನ ತೋರಿಸ್ತಾರ ಹೊರತು, ಕೇಳಲೇಬೇಕಾದ ಪ್ರಶ್ನೆ ಕೇಳಿ, ಸರಿಯಾದ ಉತ್ತರ ಹುಡುಕುವ ಪ್ರಯತ್ನ ಮಾಡೋದಿಲ್ಲ.

ಈ ರೀತಿಯ ಸುದ್ದಿ ಅಥವಾ ಚರ್ಚೆ, ಜನರಿಗೆ ಬೇಕೋ ಬೇಡವೋ? ಪ್ರತಿ ದಿನ ಮುಂಜಾನೆದೊಳಗಿನ ಸುದ್ದಿಯ ಹೆಡ್‌ಲೈನ್ ಓದಿ ಪೇಪರ್ ಮುಚ್ಚಿ ಇಡುವ ನಮ್ಮ ಜನರಿಗೆ ಸುದ್ದಿಯ ಅಳಕ್ಕೆ ಹೋಗೋದು ಬೇಕೋ ಬ್ಯಾಡವೋ?

ಇದರಾಗ ನಾಯಕರ ತಪ್ಪೂ ಐತಿ. ಈಗಿನ ನಾಯಕರು ಮುಂದಿನ ಚುನಾವಣೆ ಬಗ್ಗೆ ಮಾತ್ರ ವಿಚಾರ ಮಾಡತಾರ ಹೊರತು ಅವರಿಗೆ ಬೇರೆ ಮುಂದಾಲೋಚನೆ, ದೂರದೃಷ್ಟಿತ್ವ ಅನ್ನೋದು ಇರೋದಿಲ್ಲ.

ಬಹಳ ಹಿಂದೆ ರಾಮಚಂದ್ರಪ್ಪ ಅಂತ ಬೆಂಗಳೂರಿನ ಮೇಯರ್ ಇದ್ದರು. ಅವರು ಜಾಸ್ತಿ ಓದಿರಲಿಲ್ಲ, ಆದ್ದರಿಂದ ಅವರನ್ನ ಬೆಂಗಳೂರಿನ ಕೆಲವು ಪತ್ರಕರ್ತರು ಮೇಯರ್ ಮುತ್ತಣ್ಣ ಅಂತ ಕರಿತಿದ್ದರು. ಅವರು ಬಹಳ ಸರಳ ಭಾಷೆಯೊಳಗ ಭಾಷಣ ಮಾಡ್ತಿದ್ದರು. ಪಾಲಿಕೆಯ ಆಯುಕ್ತರು ಬದಲಾವಣೆ ಆದಾಗ ಅವರು ಒಂದು ಸ್ವಾಗತ ಭಾಷಣ ಮಾಡಿದ್ದರು. ಅದರಲ್ಲಿ ಒಂದು ಮರೆಯಲಾರದಂತಹ ಮಾತು ಹೇಳಿದರು.

’ನೋಡಿ ಸ್ವಾಮಿ, ನಮ್ಮ ಅಧಿಕಾರಿಗಳು ಕುದುರೆಗಳು ಇದ್ದಂತೆ. ಅವರು ಯಾವ ದಿಕ್ಕಿನಲ್ಲಿ ಓಡುತ್ತಾರೆ ಅನ್ನುವುದು ಅವರನ್ನು ಓಡಿಸುವ ಸವಾರರ ಮೇಲೆ ಇರುತ್ತದೆ. ಆಯುಕ್ತರು ಸವಾರರು ಇದ್ದಂತೆ. ನೀವು ಒಳ್ಳೆಯವರಾದರೆ, ಅವರು ಒಳ್ಳೆಯವರು’, ಅಂತ ಹೇಳಿ ಮಾತು ಮುಗಿಸಿದ್ದರು.

ಈ ರೀತಿಯ ಸ್ಪಷ್ಟತೆ ಈಗಿನ ನಾಯಕರಲ್ಲಿ ಬಂದರೆ, ಅದು ಜನರಿಗೆ ತಿಳಿದರೆ, ಆಡಳಿತ ಅನ್ನುವುದು ಸರಿಯಾದ ದಾರಿಯಲ್ಲಿ ನಡೆದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...