Homeಅಂಕಣಗಳುಡೇಟಾಖೋಲಿ: ಮಾಧ್ಯಮ ನಲ್ಲರು - ಯಾರ ಕೆಲಸ ಏನು?

ಡೇಟಾಖೋಲಿ: ಮಾಧ್ಯಮ ನಲ್ಲರು – ಯಾರ ಕೆಲಸ ಏನು?

- Advertisement -
- Advertisement -

ಈ ವಾರ ಇಡೀ ಜಗತ್ತು ಶಾಂತಿ ಹಾಗೂ ಸಮೃದ್ಧಿಯಿಂದ ತುಂಬಿ ತುಳುಕುತ್ತಿದ್ದಾಗ ಒಂದು ಸುದ್ದಿ ಬಂತು. ಈಗಿನ ಕಾಲದ ಎಲ್ಲ ಒಳ್ಳೆ-ಕೆಟ್ಟ ಸುದ್ದಿಗಳಂತೆ ಅದು ಕೆಲವೇ ನಿಮಿಷದಾಗ ವೈರಲ್ ಆಗಿ ಹೋತು.

ಅದು ಯಾವುದಪಾ ಅಂದರ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ನಡುವೆ ಜಗಳ ಆಗಿ, ಅದರಾಗ ಕಿರಿಯ ಅಧಿಕಾರಿ ಒಬ್ಬರು ರಾಜೀನಾಮೆ ಕೊಟ್ಟು, ಕಡಿಕೆ ರಾಜ್ಯ ಸರಕಾರ ಇಬ್ಬರನ್ನೂ ವರ್ಗಾವಣೆ ಮಾಡಿದ ಸುದ್ದಿ.

ಅದರಾಗ ಹಿರಿಯ ಅಧಿಕಾರಿ, ’ಇದರ ಹಿಂದೆ ದೊಡ್ಡ ಪಿತೂರಿ ಐತಿ. ರಿಯಲ್ ಎಸ್ಟೇಟ್ ಮಾಫಿಯಾ ಎಲ್ಲ ಇದಕ್ಕ ಕಾರಣ. ನಮ್ಮ ನಡುವಿನ ಭಿನ್ನಾಭಿಪ್ರಾಯ ಎಲ್ಲ ಸಣ್ಣದು ಆಷ್ಟ. ಅದನ್ನ ನೆವ ಮಾಡಿಕೊಂಡು ನಮ್ಮನ್ನ ಇಲ್ಲಿಂದ ಹೊರಗ ಹಾಕಿದರು’ ಅನ್ನೋ ಅರ್ಥ ಬಾರೋ ಹಂಗ ಪ್ರತಿಕ್ರಿಯೆ ಕೊಟ್ಟರು.

ಅಲ್ಲಿಗೆ ಆ ಕತಿ ಮುಗೀತು. ಆದರ ಅದರಗಿಂತ ಕುತೂಹಲಕಾರಿಯಾಗಿದ್ದು ಯಾವುದು ಅಂದರ ಈ ವಿಷಯಕ್ಕ ಸಂಬಂಧ ಪಡದೇ ಇರುವ ಒಬ್ಬ ಐಪಿಎಸ್ಸು ಅಧಿಕಾರಿ ತಮ್ಮ ಫೇಸ್ಬುಕ್ ಗೋಡೆ ಮೇಲೆ ಒಂದು ಬರಹ ಬರದು ಹಾಕಿದರು. ಅದರಾಗ ಅವರು ಏನು ಹೇಳಿದರು ಅಂದರ ಕೆಲವು ಅಧಿಕಾರಿಗಳು ತಾವು ಸಿಂಗಮ್, ಸಿಂಹಿಣಿ ಅಂತ ಎಲ್ಲಾ ಪ್ರಚಾರ ಮಾಡಿಕೊಳತಾರ. ಇದು ಸರಿಯಲ್ಲ. ತಮ್ಮ ಕೆಲಸ ತಾವು ಸುಮ್ಮನೇ ಮಾಡಬೇಕು, ರಾಜಕೀಯದಿಂದ ಅವರು ದೂರ ಇರಬೇಕು, ಒಳ್ಳೆ ಕೆಲಸ ಮಾಡಿದರ ತಮ್ಮ ತಂಡಕ್ಕೆ ಅದರ ಶ್ರೇಯಸ್ಸು ಕೊಡಬೇಕು, ಕೆಟ್ಟ ಕೆಲಸ ಮಾಡಿದರ ಅದರ ತಪ್ಪು ಹೊರಲಿಕ್ಕೆ ತಯಾರು ಇರಬೇಕು, ಅನ್ನುವ ಮಾತು ಹೇಳಿದರು. ಮಜಾ ಅಂದರ ಈ ಅಧಿಕಾರಿ ಹುಬ್ಬಳ್ಳಿ- ಬೆಳಗಾವಿಯೊಳಗ ಕೆಲಸ ಮಾಡಿದಾಗ ಇದೆ ರೀತಿಯ ಮಾಧ್ಯಮ ಪ್ರಚಾರದ ಅನುಕೂಲ ಪಡೆದುಕೊಂಡಿದ್ರು. ಆ ಮಾತು ಬ್ಯಾರೆ.

ಇಲ್ಲಿ ಮುಖ್ಯವಾದ ವಿಷಯ ಏನು ಅಂದರ ನಮ್ಮ ಭವ್ಯ ಭಾರತದ ಮಾನ್ಯ ಮತದಾರ ಬಂಧುಗಳಿಗೆ ನಮ್ಮ ಘನ ಸರಕಾರದ ಒಳಗ ಯಾರಿಗೆ ಯಾವ ಕೆಲಸ, ಯಾವ ಜವಾಬುದಾರಿ ಅನ್ನೋದು ಸರಿಯಾಗಿ ಗೊತ್ತಿಲ್ಲ. ರಾಜಕಾರಣಿಯ ಕೆಲಸ ಏನು, ಅಧಿಕಾರಿಗಳ ಕೆಲಸ ಏನು ಅನ್ನೋದು ಗೊತ್ತಿಲ್ಲ.

PC : Wikipedia, (ಪ್ರತಾಪ್ ಸಿಂಗ್ ಖೈರೋಂ)

ಇದರ ಬಗ್ಗೆ ಒಂದು ರಸವತ್ತಾದ ಕತೆ ಇದೆ. ಪ್ರತಾಪ್ ಸಿಂಗ್ ಖೈರೋಂ ಅವರು 50ನೇ ದಶಕದೊಳಗ ಪಂಜಾಬ್‌ನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಆಗ ಒಬ್ಬ ದಕ್ಷಿಣ ಭಾರತ ಮೂಲದ ಐಎಎಸ್ ಅಧಿಕಾರಿ ಪಂಜಾಬಿನ ಮುಖ್ಯ ಕಾರ್ಯದರ್ಶಿ ಆಗಿದ್ದರು. ಮುಖ್ಯಮಂತ್ರಿ ಅವರು ಮುಖ್ಯ ಕಾರ್ಯದರ್ಶಿಯನ್ನು ಕೇಳಿದರಂತ – ಅಲ್ರೀ, ನಿಮ್ಮ ಕೆಲಸ ಏನು, ನನ್ನ ಕೆಲಸ ಏನು? ಅಂತ. ಆಗ ಆ ಐಎಎಸ್ ಅಧಿಕಾರಿ ಸರ್, ನಿಮ್ಮ ಕೆಲಸ ಸರಕಾರದ ಕಾನೂನು, ನೀತಿನಿಯಮ ರೂಪಿಸುವುದು. ನನ್ನ ಕೆಲಸ ದಿನನಿತ್ಯದ ಆಡಳಿತ ನಿರ್ವಹಣೆ ಮಾಡೋದು, ಅಂತ. ಹೌದಾ, ಹಂಗಾರ ನಾಳೆಯಿಂದ ನನ್ನ ಕೆಲಸ ನೀವು ಮಾಡ್ರಿ, ನಿಮ್ಮ ಕೆಲಸ ನಾನು ಮಾಡತೆನಿ ಅಂತ ಮುಖ್ಯಮಂತ್ರಿ ಅವರು ಮುಖ್ಯ ಕಾರ್ಯದರ್ಶಿ ಅವರಿಗೆ ಹೇಳಿದರಂತ.

ಖೈರೋಂ ಅವರು ಪ್ರಾಮಾಣಿಕರು, ಸರಳ ಮನುಷ್ಯರು. ಹಿಂಗಾಗಿ ಅವರು ಅಧಿಕಾರಿನ ಕರೆದು ಮಾತಾಡಿದರು. ಬ್ಯಾರೆ ರಾಜಕಾರಣಿಗಳು ಸಹಿತ ಇದೆ ಕೆಲಸ ಮಾಡ್ತಾ ಇದಾರೆ, ಅದರ ಅದನ್ನ ಮುಕ್ತವಾಗಿ ಒಪ್ಪಿಕೊಳ್ಳೋದಿಲ್ಲ.

ಈಗ ಮತ್ತ ನಮ್ಮ ರಾಜ್ಯದ ಅಧಿಕಾರಿಗಳಿಗೆ ಬರೋಣ. ಮೈಸೂರಿನ ಇಬ್ಬರು ಅಧಿಕಾರಿಗಳು ಜಗಳ ಅಡಿದರ, ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಚಾಮರಾಜನಗರದ ಜಿಲ್ಲಾಧಿಕಾರಿಗೆ ಭಿನ್ನಾಭಿಪ್ರಾಯ ಬಂದರ, ಅವರ ಮ್ಯಾಲೆ ಒಬ್ಬ ಪ್ರಾದೇಶಿಕ ಆಯುಕ್ತ ಅಂತ ಒಬ್ಬ ಅಧಿಕಾರಿ ಇದ್ದ ಇರತಾನ. ಆ ಪುಣ್ಯಾತ್ಮ ಈ ಅಧಿಕಾರಿಗಳ ಮೇಲೆ ನಿಗರಾಣಿ ವಹಿಸಿ ಅವರು ಸರಿಯಾಗಿ ಕೆಲಸ ಮಾಡುವ ಹಂಗ ಯಾಕ್ ಮಾಡಲಿಲ್ಲ ಅಂತ ಯಾವ ಮಾಧ್ಯಮದವರು ಕೇಳಲಿಲ್ಲ, ರಾಜಕಾರಣಿನು ಕೇಳಲಿಲ್ಲ.

ಯಾಕೆ ಅಂದ್ರ ಮಾಧ್ಯಮದವರಿಗೆ ಸಹಿತ ಯಾರದ್ದು ಯಾವ ಕೆಲಸ ಅಂತ ಹೇಳಿ ಸರಿಯಾಗಿ ಗೊತ್ತಿಲ್ಲ. ಅಥವಾ ಗೊತ್ತಿದರೂ, ಟಿಆರ್‌ಪಿ ಆಸೆಗೆ, ಮಾರುಕಟ್ಟೆ, ಜಾಹೀರಾತು ಆಸೆಗೆ, ಅವರು ಬಹು ಚರ್ಚಿತ ವಿಷಯಗಳನ್ನ ತೋರಿಸ್ತಾರ ಹೊರತು, ಕೇಳಲೇಬೇಕಾದ ಪ್ರಶ್ನೆ ಕೇಳಿ, ಸರಿಯಾದ ಉತ್ತರ ಹುಡುಕುವ ಪ್ರಯತ್ನ ಮಾಡೋದಿಲ್ಲ.

ಈ ರೀತಿಯ ಸುದ್ದಿ ಅಥವಾ ಚರ್ಚೆ, ಜನರಿಗೆ ಬೇಕೋ ಬೇಡವೋ? ಪ್ರತಿ ದಿನ ಮುಂಜಾನೆದೊಳಗಿನ ಸುದ್ದಿಯ ಹೆಡ್‌ಲೈನ್ ಓದಿ ಪೇಪರ್ ಮುಚ್ಚಿ ಇಡುವ ನಮ್ಮ ಜನರಿಗೆ ಸುದ್ದಿಯ ಅಳಕ್ಕೆ ಹೋಗೋದು ಬೇಕೋ ಬ್ಯಾಡವೋ?

ಇದರಾಗ ನಾಯಕರ ತಪ್ಪೂ ಐತಿ. ಈಗಿನ ನಾಯಕರು ಮುಂದಿನ ಚುನಾವಣೆ ಬಗ್ಗೆ ಮಾತ್ರ ವಿಚಾರ ಮಾಡತಾರ ಹೊರತು ಅವರಿಗೆ ಬೇರೆ ಮುಂದಾಲೋಚನೆ, ದೂರದೃಷ್ಟಿತ್ವ ಅನ್ನೋದು ಇರೋದಿಲ್ಲ.

ಬಹಳ ಹಿಂದೆ ರಾಮಚಂದ್ರಪ್ಪ ಅಂತ ಬೆಂಗಳೂರಿನ ಮೇಯರ್ ಇದ್ದರು. ಅವರು ಜಾಸ್ತಿ ಓದಿರಲಿಲ್ಲ, ಆದ್ದರಿಂದ ಅವರನ್ನ ಬೆಂಗಳೂರಿನ ಕೆಲವು ಪತ್ರಕರ್ತರು ಮೇಯರ್ ಮುತ್ತಣ್ಣ ಅಂತ ಕರಿತಿದ್ದರು. ಅವರು ಬಹಳ ಸರಳ ಭಾಷೆಯೊಳಗ ಭಾಷಣ ಮಾಡ್ತಿದ್ದರು. ಪಾಲಿಕೆಯ ಆಯುಕ್ತರು ಬದಲಾವಣೆ ಆದಾಗ ಅವರು ಒಂದು ಸ್ವಾಗತ ಭಾಷಣ ಮಾಡಿದ್ದರು. ಅದರಲ್ಲಿ ಒಂದು ಮರೆಯಲಾರದಂತಹ ಮಾತು ಹೇಳಿದರು.

’ನೋಡಿ ಸ್ವಾಮಿ, ನಮ್ಮ ಅಧಿಕಾರಿಗಳು ಕುದುರೆಗಳು ಇದ್ದಂತೆ. ಅವರು ಯಾವ ದಿಕ್ಕಿನಲ್ಲಿ ಓಡುತ್ತಾರೆ ಅನ್ನುವುದು ಅವರನ್ನು ಓಡಿಸುವ ಸವಾರರ ಮೇಲೆ ಇರುತ್ತದೆ. ಆಯುಕ್ತರು ಸವಾರರು ಇದ್ದಂತೆ. ನೀವು ಒಳ್ಳೆಯವರಾದರೆ, ಅವರು ಒಳ್ಳೆಯವರು’, ಅಂತ ಹೇಳಿ ಮಾತು ಮುಗಿಸಿದ್ದರು.

ಈ ರೀತಿಯ ಸ್ಪಷ್ಟತೆ ಈಗಿನ ನಾಯಕರಲ್ಲಿ ಬಂದರೆ, ಅದು ಜನರಿಗೆ ತಿಳಿದರೆ, ಆಡಳಿತ ಅನ್ನುವುದು ಸರಿಯಾದ ದಾರಿಯಲ್ಲಿ ನಡೆದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...