Homeಅಂಕಣಗಳುಡೇಟಾಖೋಲಿ: ಮಾಧ್ಯಮ ನಲ್ಲರು - ಯಾರ ಕೆಲಸ ಏನು?

ಡೇಟಾಖೋಲಿ: ಮಾಧ್ಯಮ ನಲ್ಲರು – ಯಾರ ಕೆಲಸ ಏನು?

- Advertisement -
- Advertisement -

ಈ ವಾರ ಇಡೀ ಜಗತ್ತು ಶಾಂತಿ ಹಾಗೂ ಸಮೃದ್ಧಿಯಿಂದ ತುಂಬಿ ತುಳುಕುತ್ತಿದ್ದಾಗ ಒಂದು ಸುದ್ದಿ ಬಂತು. ಈಗಿನ ಕಾಲದ ಎಲ್ಲ ಒಳ್ಳೆ-ಕೆಟ್ಟ ಸುದ್ದಿಗಳಂತೆ ಅದು ಕೆಲವೇ ನಿಮಿಷದಾಗ ವೈರಲ್ ಆಗಿ ಹೋತು.

ಅದು ಯಾವುದಪಾ ಅಂದರ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ನಡುವೆ ಜಗಳ ಆಗಿ, ಅದರಾಗ ಕಿರಿಯ ಅಧಿಕಾರಿ ಒಬ್ಬರು ರಾಜೀನಾಮೆ ಕೊಟ್ಟು, ಕಡಿಕೆ ರಾಜ್ಯ ಸರಕಾರ ಇಬ್ಬರನ್ನೂ ವರ್ಗಾವಣೆ ಮಾಡಿದ ಸುದ್ದಿ.

ಅದರಾಗ ಹಿರಿಯ ಅಧಿಕಾರಿ, ’ಇದರ ಹಿಂದೆ ದೊಡ್ಡ ಪಿತೂರಿ ಐತಿ. ರಿಯಲ್ ಎಸ್ಟೇಟ್ ಮಾಫಿಯಾ ಎಲ್ಲ ಇದಕ್ಕ ಕಾರಣ. ನಮ್ಮ ನಡುವಿನ ಭಿನ್ನಾಭಿಪ್ರಾಯ ಎಲ್ಲ ಸಣ್ಣದು ಆಷ್ಟ. ಅದನ್ನ ನೆವ ಮಾಡಿಕೊಂಡು ನಮ್ಮನ್ನ ಇಲ್ಲಿಂದ ಹೊರಗ ಹಾಕಿದರು’ ಅನ್ನೋ ಅರ್ಥ ಬಾರೋ ಹಂಗ ಪ್ರತಿಕ್ರಿಯೆ ಕೊಟ್ಟರು.

ಅಲ್ಲಿಗೆ ಆ ಕತಿ ಮುಗೀತು. ಆದರ ಅದರಗಿಂತ ಕುತೂಹಲಕಾರಿಯಾಗಿದ್ದು ಯಾವುದು ಅಂದರ ಈ ವಿಷಯಕ್ಕ ಸಂಬಂಧ ಪಡದೇ ಇರುವ ಒಬ್ಬ ಐಪಿಎಸ್ಸು ಅಧಿಕಾರಿ ತಮ್ಮ ಫೇಸ್ಬುಕ್ ಗೋಡೆ ಮೇಲೆ ಒಂದು ಬರಹ ಬರದು ಹಾಕಿದರು. ಅದರಾಗ ಅವರು ಏನು ಹೇಳಿದರು ಅಂದರ ಕೆಲವು ಅಧಿಕಾರಿಗಳು ತಾವು ಸಿಂಗಮ್, ಸಿಂಹಿಣಿ ಅಂತ ಎಲ್ಲಾ ಪ್ರಚಾರ ಮಾಡಿಕೊಳತಾರ. ಇದು ಸರಿಯಲ್ಲ. ತಮ್ಮ ಕೆಲಸ ತಾವು ಸುಮ್ಮನೇ ಮಾಡಬೇಕು, ರಾಜಕೀಯದಿಂದ ಅವರು ದೂರ ಇರಬೇಕು, ಒಳ್ಳೆ ಕೆಲಸ ಮಾಡಿದರ ತಮ್ಮ ತಂಡಕ್ಕೆ ಅದರ ಶ್ರೇಯಸ್ಸು ಕೊಡಬೇಕು, ಕೆಟ್ಟ ಕೆಲಸ ಮಾಡಿದರ ಅದರ ತಪ್ಪು ಹೊರಲಿಕ್ಕೆ ತಯಾರು ಇರಬೇಕು, ಅನ್ನುವ ಮಾತು ಹೇಳಿದರು. ಮಜಾ ಅಂದರ ಈ ಅಧಿಕಾರಿ ಹುಬ್ಬಳ್ಳಿ- ಬೆಳಗಾವಿಯೊಳಗ ಕೆಲಸ ಮಾಡಿದಾಗ ಇದೆ ರೀತಿಯ ಮಾಧ್ಯಮ ಪ್ರಚಾರದ ಅನುಕೂಲ ಪಡೆದುಕೊಂಡಿದ್ರು. ಆ ಮಾತು ಬ್ಯಾರೆ.

ಇಲ್ಲಿ ಮುಖ್ಯವಾದ ವಿಷಯ ಏನು ಅಂದರ ನಮ್ಮ ಭವ್ಯ ಭಾರತದ ಮಾನ್ಯ ಮತದಾರ ಬಂಧುಗಳಿಗೆ ನಮ್ಮ ಘನ ಸರಕಾರದ ಒಳಗ ಯಾರಿಗೆ ಯಾವ ಕೆಲಸ, ಯಾವ ಜವಾಬುದಾರಿ ಅನ್ನೋದು ಸರಿಯಾಗಿ ಗೊತ್ತಿಲ್ಲ. ರಾಜಕಾರಣಿಯ ಕೆಲಸ ಏನು, ಅಧಿಕಾರಿಗಳ ಕೆಲಸ ಏನು ಅನ್ನೋದು ಗೊತ್ತಿಲ್ಲ.

PC : Wikipedia, (ಪ್ರತಾಪ್ ಸಿಂಗ್ ಖೈರೋಂ)

ಇದರ ಬಗ್ಗೆ ಒಂದು ರಸವತ್ತಾದ ಕತೆ ಇದೆ. ಪ್ರತಾಪ್ ಸಿಂಗ್ ಖೈರೋಂ ಅವರು 50ನೇ ದಶಕದೊಳಗ ಪಂಜಾಬ್‌ನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಆಗ ಒಬ್ಬ ದಕ್ಷಿಣ ಭಾರತ ಮೂಲದ ಐಎಎಸ್ ಅಧಿಕಾರಿ ಪಂಜಾಬಿನ ಮುಖ್ಯ ಕಾರ್ಯದರ್ಶಿ ಆಗಿದ್ದರು. ಮುಖ್ಯಮಂತ್ರಿ ಅವರು ಮುಖ್ಯ ಕಾರ್ಯದರ್ಶಿಯನ್ನು ಕೇಳಿದರಂತ – ಅಲ್ರೀ, ನಿಮ್ಮ ಕೆಲಸ ಏನು, ನನ್ನ ಕೆಲಸ ಏನು? ಅಂತ. ಆಗ ಆ ಐಎಎಸ್ ಅಧಿಕಾರಿ ಸರ್, ನಿಮ್ಮ ಕೆಲಸ ಸರಕಾರದ ಕಾನೂನು, ನೀತಿನಿಯಮ ರೂಪಿಸುವುದು. ನನ್ನ ಕೆಲಸ ದಿನನಿತ್ಯದ ಆಡಳಿತ ನಿರ್ವಹಣೆ ಮಾಡೋದು, ಅಂತ. ಹೌದಾ, ಹಂಗಾರ ನಾಳೆಯಿಂದ ನನ್ನ ಕೆಲಸ ನೀವು ಮಾಡ್ರಿ, ನಿಮ್ಮ ಕೆಲಸ ನಾನು ಮಾಡತೆನಿ ಅಂತ ಮುಖ್ಯಮಂತ್ರಿ ಅವರು ಮುಖ್ಯ ಕಾರ್ಯದರ್ಶಿ ಅವರಿಗೆ ಹೇಳಿದರಂತ.

ಖೈರೋಂ ಅವರು ಪ್ರಾಮಾಣಿಕರು, ಸರಳ ಮನುಷ್ಯರು. ಹಿಂಗಾಗಿ ಅವರು ಅಧಿಕಾರಿನ ಕರೆದು ಮಾತಾಡಿದರು. ಬ್ಯಾರೆ ರಾಜಕಾರಣಿಗಳು ಸಹಿತ ಇದೆ ಕೆಲಸ ಮಾಡ್ತಾ ಇದಾರೆ, ಅದರ ಅದನ್ನ ಮುಕ್ತವಾಗಿ ಒಪ್ಪಿಕೊಳ್ಳೋದಿಲ್ಲ.

ಈಗ ಮತ್ತ ನಮ್ಮ ರಾಜ್ಯದ ಅಧಿಕಾರಿಗಳಿಗೆ ಬರೋಣ. ಮೈಸೂರಿನ ಇಬ್ಬರು ಅಧಿಕಾರಿಗಳು ಜಗಳ ಅಡಿದರ, ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಚಾಮರಾಜನಗರದ ಜಿಲ್ಲಾಧಿಕಾರಿಗೆ ಭಿನ್ನಾಭಿಪ್ರಾಯ ಬಂದರ, ಅವರ ಮ್ಯಾಲೆ ಒಬ್ಬ ಪ್ರಾದೇಶಿಕ ಆಯುಕ್ತ ಅಂತ ಒಬ್ಬ ಅಧಿಕಾರಿ ಇದ್ದ ಇರತಾನ. ಆ ಪುಣ್ಯಾತ್ಮ ಈ ಅಧಿಕಾರಿಗಳ ಮೇಲೆ ನಿಗರಾಣಿ ವಹಿಸಿ ಅವರು ಸರಿಯಾಗಿ ಕೆಲಸ ಮಾಡುವ ಹಂಗ ಯಾಕ್ ಮಾಡಲಿಲ್ಲ ಅಂತ ಯಾವ ಮಾಧ್ಯಮದವರು ಕೇಳಲಿಲ್ಲ, ರಾಜಕಾರಣಿನು ಕೇಳಲಿಲ್ಲ.

ಯಾಕೆ ಅಂದ್ರ ಮಾಧ್ಯಮದವರಿಗೆ ಸಹಿತ ಯಾರದ್ದು ಯಾವ ಕೆಲಸ ಅಂತ ಹೇಳಿ ಸರಿಯಾಗಿ ಗೊತ್ತಿಲ್ಲ. ಅಥವಾ ಗೊತ್ತಿದರೂ, ಟಿಆರ್‌ಪಿ ಆಸೆಗೆ, ಮಾರುಕಟ್ಟೆ, ಜಾಹೀರಾತು ಆಸೆಗೆ, ಅವರು ಬಹು ಚರ್ಚಿತ ವಿಷಯಗಳನ್ನ ತೋರಿಸ್ತಾರ ಹೊರತು, ಕೇಳಲೇಬೇಕಾದ ಪ್ರಶ್ನೆ ಕೇಳಿ, ಸರಿಯಾದ ಉತ್ತರ ಹುಡುಕುವ ಪ್ರಯತ್ನ ಮಾಡೋದಿಲ್ಲ.

ಈ ರೀತಿಯ ಸುದ್ದಿ ಅಥವಾ ಚರ್ಚೆ, ಜನರಿಗೆ ಬೇಕೋ ಬೇಡವೋ? ಪ್ರತಿ ದಿನ ಮುಂಜಾನೆದೊಳಗಿನ ಸುದ್ದಿಯ ಹೆಡ್‌ಲೈನ್ ಓದಿ ಪೇಪರ್ ಮುಚ್ಚಿ ಇಡುವ ನಮ್ಮ ಜನರಿಗೆ ಸುದ್ದಿಯ ಅಳಕ್ಕೆ ಹೋಗೋದು ಬೇಕೋ ಬ್ಯಾಡವೋ?

ಇದರಾಗ ನಾಯಕರ ತಪ್ಪೂ ಐತಿ. ಈಗಿನ ನಾಯಕರು ಮುಂದಿನ ಚುನಾವಣೆ ಬಗ್ಗೆ ಮಾತ್ರ ವಿಚಾರ ಮಾಡತಾರ ಹೊರತು ಅವರಿಗೆ ಬೇರೆ ಮುಂದಾಲೋಚನೆ, ದೂರದೃಷ್ಟಿತ್ವ ಅನ್ನೋದು ಇರೋದಿಲ್ಲ.

ಬಹಳ ಹಿಂದೆ ರಾಮಚಂದ್ರಪ್ಪ ಅಂತ ಬೆಂಗಳೂರಿನ ಮೇಯರ್ ಇದ್ದರು. ಅವರು ಜಾಸ್ತಿ ಓದಿರಲಿಲ್ಲ, ಆದ್ದರಿಂದ ಅವರನ್ನ ಬೆಂಗಳೂರಿನ ಕೆಲವು ಪತ್ರಕರ್ತರು ಮೇಯರ್ ಮುತ್ತಣ್ಣ ಅಂತ ಕರಿತಿದ್ದರು. ಅವರು ಬಹಳ ಸರಳ ಭಾಷೆಯೊಳಗ ಭಾಷಣ ಮಾಡ್ತಿದ್ದರು. ಪಾಲಿಕೆಯ ಆಯುಕ್ತರು ಬದಲಾವಣೆ ಆದಾಗ ಅವರು ಒಂದು ಸ್ವಾಗತ ಭಾಷಣ ಮಾಡಿದ್ದರು. ಅದರಲ್ಲಿ ಒಂದು ಮರೆಯಲಾರದಂತಹ ಮಾತು ಹೇಳಿದರು.

’ನೋಡಿ ಸ್ವಾಮಿ, ನಮ್ಮ ಅಧಿಕಾರಿಗಳು ಕುದುರೆಗಳು ಇದ್ದಂತೆ. ಅವರು ಯಾವ ದಿಕ್ಕಿನಲ್ಲಿ ಓಡುತ್ತಾರೆ ಅನ್ನುವುದು ಅವರನ್ನು ಓಡಿಸುವ ಸವಾರರ ಮೇಲೆ ಇರುತ್ತದೆ. ಆಯುಕ್ತರು ಸವಾರರು ಇದ್ದಂತೆ. ನೀವು ಒಳ್ಳೆಯವರಾದರೆ, ಅವರು ಒಳ್ಳೆಯವರು’, ಅಂತ ಹೇಳಿ ಮಾತು ಮುಗಿಸಿದ್ದರು.

ಈ ರೀತಿಯ ಸ್ಪಷ್ಟತೆ ಈಗಿನ ನಾಯಕರಲ್ಲಿ ಬಂದರೆ, ಅದು ಜನರಿಗೆ ತಿಳಿದರೆ, ಆಡಳಿತ ಅನ್ನುವುದು ಸರಿಯಾದ ದಾರಿಯಲ್ಲಿ ನಡೆದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...