Homeಕರ್ನಾಟಕಮಾಧ್ಯಮ ನಿರ್ಬಂಧ| ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಧರ್ಮಸ್ಥಳ ಹರ್ಷೇಂದ್ರ ಕುಮಾರ್

ಮಾಧ್ಯಮ ನಿರ್ಬಂಧ| ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಧರ್ಮಸ್ಥಳ ಹರ್ಷೇಂದ್ರ ಕುಮಾರ್

- Advertisement -
- Advertisement -

ಧರ್ಮಸ್ಥಳ ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ಧ ಅವಹೇಳನಕಾರಿ ವಿಷಯವನ್ನು ಪ್ರಕಟಿಸದಂತೆ ಯೂಟ್ಯೂಬ್ ಚಾನೆಲ್‌ಗೆ ವಿಧಿಸಿದ್ದ ನಿರ್ಬಂಧವನ್ನು ರದ್ದುಪಡಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್ ನಾಳೆ (ಆ.8) ಅರ್ಜಿ ವಿಚಾರಣೆ ನಡೆಸಲಿದೆ ಎಂದು livelaw.in ವರದಿ ಮಾಡಿದೆ.

ಧರ್ಮಸ್ಥಳ ದೇವಾಲಯದ ಅಧೀನ ಸಂಸ್ಥೆಯ ಕಾರ್ಯದರ್ಶಿಯಾಗಿರುವ ಹರ್ಷೇಂದ್ರ ಕುಮಾರ್ ಡಿ ಅವರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಶೇಷ ರಜಾ ಅವಧಿಯ ಅರ್ಜಿ ಸಲ್ಲಿಸಿದ್ದಾರೆ.

ಗುರುವಾರ (ಆ.7) ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ, ನ್ಯಾಯಮೂರ್ತಿಗಳಾದ ಎಸ್‌ಸಿ ಶರ್ಮಾ ಮತ್ತು ವಿನೋದ್ ಚಂದ್ರನ್ ಅವರ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿದ ಹರ್ಷೇಂದ್ರ ಕುಮಾರ್ ಪರ ವಕೀಲ, “ಹಲವಾರು ಯೂಟ್ಯೂಬ್ ಚಾನೆಲ್‌ಗಳು ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ದ ಅವಹೇಳನಕಾರಿ ವಿಷಯ ಪ್ರಸಾರ ಮಾಡುತ್ತಿವೆ” ಎಂದು ಹೇಳಿದರು.

“8 ಸಾವಿರ ಯೂಟ್ಯೂಬ್ ಚಾನೆಲ್‌ಗಳು ದೇವಸ್ಥಾನದ ಆಡಳಿತದ ವಿರುದ್ದ ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡುತ್ತಿವೆ. ಆದ್ದರಿಂದ, ಅರ್ಜಿಯನ್ನು ನಾಳೆ ವಿಚಾರಣೆಗೆ ಪರಿಗಣಿಸಿ” ಎಂದು ವಕೀಲ ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, “ಈ ವಿಷಯವನ್ನು ಈಗಾಗಲೇ ನಾಳೆಗೆ ಪಟ್ಟಿ ಮಾಡಲಾಗಿದೆ” ಎಂದರು.

ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ನೀಡಿದ ದೂರಿನ ತನಿಖೆಯನ್ನು ಎಸ್‌ಐಟಿ ತಂಡ ನಡೆಸುತ್ತಿದೆ. ಈ ವಿಷಯವನ್ನು ಮುಂದಿಟ್ಟುಕೊಂಡು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ದ ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಹರ್ಷೇಂದ್ರ ಕುಮಾರ್ ಡಿ ಬೆಂಗಳೂರಿನ ನ್ಯಾಯಾಲಯ ಮೊರೆ ಹೋಗಿದ್ದರು.

ನ್ಯಾಯಾಲಯ ಯೂಟ್ಯೂಬ್ ಚಾನೆಲ್‌ಗಳು ಸೇರಿದಂತೆ ಮಾಧ್ಯಮಗಳು ಧರ್ಮಸ್ಥಳ ದೇವಾಲಯ ಮತ್ತು ಅದರ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸದಂತೆ ನಿರ್ಬಂಧ (ಗ್ಯಾಗ್ ಆರ್ಡರ್) ವಿಧಿಸಿತ್ತು. ಈ ನಿರ್ಬಂಧವನ್ನು ಆಗಸ್ಟ್ 1ರಂದು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

ಬೆಂಗಳೂರು ನ್ಯಾಯಾಲಯದ ಆದೇಶದ ರದ್ದುಗೊಳಿಸುವ ವೇಳೆ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು,”ವಿಚಾರಣಾ ನ್ಯಾಯಾಲಯವು ಯಾವುದೇ ಆಪಾದಿತ ಮಾನನಷ್ಟ ವಿಷಯವನ್ನು ಆಧರಿಸಿ ಆದೇಶ ನೀಡಿಲ್ಲ. ‘ಕಡ್ಡಾಯ ವ್ಯಾಪಕ ತಡೆಯಾಜ್ಞೆ ನೀಡಿದೆ’ ಎಂಬುವುದನ್ನು ಗಮನಿಸಿತ್ತು. ಈ ಆದೇಶವು ಎಷ್ಟು ವಿಶಾಲವಾಗಿದೆಯೆಂದರೆ, ಪ್ರತಿವಾದಿ ಹರ್ಷೇಂದ್ರ ಕುಮಾರ್ ಡಿ, ಅವರ ಕುಟುಂಬ ಅಥವಾ ಧರ್ಮಸ್ಥಳ ಸ್ಥಳದ ವಿರುದ್ಧ ಯಾವುದೇ ವಿಷಯಗಳನ್ನು ಮಾತನಾಡದಂತೆ ಬೆದರಿಕೆಯೊಡ್ಡುತ್ತದೆ” ಎಂದಿತ್ತು.

ನಿರ್ದಿಷ್ಟವಾಗಿ ‘ಕುಡ್ಲ ರಾಂಪೇಜ್’ ಯೂಟ್ಯೂಬ್ ಚಾನೆಲ್‌ ಮೇಲಿನ ನಿರ್ಬಂಧ ತೆರವು ಪ್ರಶ್ನಿಸಿ ಹರ್ಷೇಂದ್ರ ಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಆದರೆ, ಹರ್ಷೇಂದ್ರ ಕುಮಾರ್ ಪರ ವಕೀಲರು 8 ಸಾವಿರ ಯೂಟ್ಯೂಬ್ ಚಾನೆಲ್‌ಗಳು ಅವಹೇಳನಕಾರಿ ವಿಷಯ ಪ್ರಸಾರ ಮಾಡುತ್ತಿವೆ ಎಂದು ಸಿಜೆಐ ಪೀಠದ ಮುಂದೆ ಹೇಳಿದ್ದಾರೆ. ಹಾಗಾಗಿ, ಕುಡ್ಲ ರಾಂಪೇಜ್ ವಿರುದ್ದ ಮಾತ್ರ ಹರ್ಷೇಂದ್ರ ಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರಾ? ಎಲ್ಲಾ ಮಾಧ್ಯಮಗಳ ವಿರುದ್ದ ಅರ್ಜಿ ಸಲ್ಲಿಸಿದ್ದಾರಾ? ಎಂಬುವುದು ನಮಗೆ ಸ್ಪಷ್ಟವಾಗಿಲ್ಲ.

Courtesy : livelaw.in

ಸುಳ್ಳು ಸುದ್ದಿ ಪ್ರಸಾರ ಆರೋಪ: ಸುವರ್ಣ ನ್ಯೂಸ್‌ನ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...