Homeಕರ್ನಾಟಕಮಾಧ್ಯಮ ನಿರ್ಬಂಧ| ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಧರ್ಮಸ್ಥಳ ಹರ್ಷೇಂದ್ರ ಕುಮಾರ್

ಮಾಧ್ಯಮ ನಿರ್ಬಂಧ| ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಧರ್ಮಸ್ಥಳ ಹರ್ಷೇಂದ್ರ ಕುಮಾರ್

- Advertisement -
- Advertisement -

ಧರ್ಮಸ್ಥಳ ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ಧ ಅವಹೇಳನಕಾರಿ ವಿಷಯವನ್ನು ಪ್ರಕಟಿಸದಂತೆ ಯೂಟ್ಯೂಬ್ ಚಾನೆಲ್‌ಗೆ ವಿಧಿಸಿದ್ದ ನಿರ್ಬಂಧವನ್ನು ರದ್ದುಪಡಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್ ನಾಳೆ (ಆ.8) ಅರ್ಜಿ ವಿಚಾರಣೆ ನಡೆಸಲಿದೆ ಎಂದು livelaw.in ವರದಿ ಮಾಡಿದೆ.

ಧರ್ಮಸ್ಥಳ ದೇವಾಲಯದ ಅಧೀನ ಸಂಸ್ಥೆಯ ಕಾರ್ಯದರ್ಶಿಯಾಗಿರುವ ಹರ್ಷೇಂದ್ರ ಕುಮಾರ್ ಡಿ ಅವರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಶೇಷ ರಜಾ ಅವಧಿಯ ಅರ್ಜಿ ಸಲ್ಲಿಸಿದ್ದಾರೆ.

ಗುರುವಾರ (ಆ.7) ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ, ನ್ಯಾಯಮೂರ್ತಿಗಳಾದ ಎಸ್‌ಸಿ ಶರ್ಮಾ ಮತ್ತು ವಿನೋದ್ ಚಂದ್ರನ್ ಅವರ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿದ ಹರ್ಷೇಂದ್ರ ಕುಮಾರ್ ಪರ ವಕೀಲ, “ಹಲವಾರು ಯೂಟ್ಯೂಬ್ ಚಾನೆಲ್‌ಗಳು ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ದ ಅವಹೇಳನಕಾರಿ ವಿಷಯ ಪ್ರಸಾರ ಮಾಡುತ್ತಿವೆ” ಎಂದು ಹೇಳಿದರು.

“8 ಸಾವಿರ ಯೂಟ್ಯೂಬ್ ಚಾನೆಲ್‌ಗಳು ದೇವಸ್ಥಾನದ ಆಡಳಿತದ ವಿರುದ್ದ ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡುತ್ತಿವೆ. ಆದ್ದರಿಂದ, ಅರ್ಜಿಯನ್ನು ನಾಳೆ ವಿಚಾರಣೆಗೆ ಪರಿಗಣಿಸಿ” ಎಂದು ವಕೀಲ ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, “ಈ ವಿಷಯವನ್ನು ಈಗಾಗಲೇ ನಾಳೆಗೆ ಪಟ್ಟಿ ಮಾಡಲಾಗಿದೆ” ಎಂದರು.

ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ನೀಡಿದ ದೂರಿನ ತನಿಖೆಯನ್ನು ಎಸ್‌ಐಟಿ ತಂಡ ನಡೆಸುತ್ತಿದೆ. ಈ ವಿಷಯವನ್ನು ಮುಂದಿಟ್ಟುಕೊಂಡು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ದ ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಹರ್ಷೇಂದ್ರ ಕುಮಾರ್ ಡಿ ಬೆಂಗಳೂರಿನ ನ್ಯಾಯಾಲಯ ಮೊರೆ ಹೋಗಿದ್ದರು.

ನ್ಯಾಯಾಲಯ ಯೂಟ್ಯೂಬ್ ಚಾನೆಲ್‌ಗಳು ಸೇರಿದಂತೆ ಮಾಧ್ಯಮಗಳು ಧರ್ಮಸ್ಥಳ ದೇವಾಲಯ ಮತ್ತು ಅದರ ಆಡಳಿತ ನೋಡಿಕೊಳ್ಳುತ್ತಿರುವ ಕುಟುಂಬದ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸದಂತೆ ನಿರ್ಬಂಧ (ಗ್ಯಾಗ್ ಆರ್ಡರ್) ವಿಧಿಸಿತ್ತು. ಈ ನಿರ್ಬಂಧವನ್ನು ಆಗಸ್ಟ್ 1ರಂದು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

ಬೆಂಗಳೂರು ನ್ಯಾಯಾಲಯದ ಆದೇಶದ ರದ್ದುಗೊಳಿಸುವ ವೇಳೆ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು,”ವಿಚಾರಣಾ ನ್ಯಾಯಾಲಯವು ಯಾವುದೇ ಆಪಾದಿತ ಮಾನನಷ್ಟ ವಿಷಯವನ್ನು ಆಧರಿಸಿ ಆದೇಶ ನೀಡಿಲ್ಲ. ‘ಕಡ್ಡಾಯ ವ್ಯಾಪಕ ತಡೆಯಾಜ್ಞೆ ನೀಡಿದೆ’ ಎಂಬುವುದನ್ನು ಗಮನಿಸಿತ್ತು. ಈ ಆದೇಶವು ಎಷ್ಟು ವಿಶಾಲವಾಗಿದೆಯೆಂದರೆ, ಪ್ರತಿವಾದಿ ಹರ್ಷೇಂದ್ರ ಕುಮಾರ್ ಡಿ, ಅವರ ಕುಟುಂಬ ಅಥವಾ ಧರ್ಮಸ್ಥಳ ಸ್ಥಳದ ವಿರುದ್ಧ ಯಾವುದೇ ವಿಷಯಗಳನ್ನು ಮಾತನಾಡದಂತೆ ಬೆದರಿಕೆಯೊಡ್ಡುತ್ತದೆ” ಎಂದಿತ್ತು.

ನಿರ್ದಿಷ್ಟವಾಗಿ ‘ಕುಡ್ಲ ರಾಂಪೇಜ್’ ಯೂಟ್ಯೂಬ್ ಚಾನೆಲ್‌ ಮೇಲಿನ ನಿರ್ಬಂಧ ತೆರವು ಪ್ರಶ್ನಿಸಿ ಹರ್ಷೇಂದ್ರ ಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಆದರೆ, ಹರ್ಷೇಂದ್ರ ಕುಮಾರ್ ಪರ ವಕೀಲರು 8 ಸಾವಿರ ಯೂಟ್ಯೂಬ್ ಚಾನೆಲ್‌ಗಳು ಅವಹೇಳನಕಾರಿ ವಿಷಯ ಪ್ರಸಾರ ಮಾಡುತ್ತಿವೆ ಎಂದು ಸಿಜೆಐ ಪೀಠದ ಮುಂದೆ ಹೇಳಿದ್ದಾರೆ. ಹಾಗಾಗಿ, ಕುಡ್ಲ ರಾಂಪೇಜ್ ವಿರುದ್ದ ಮಾತ್ರ ಹರ್ಷೇಂದ್ರ ಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರಾ? ಎಲ್ಲಾ ಮಾಧ್ಯಮಗಳ ವಿರುದ್ದ ಅರ್ಜಿ ಸಲ್ಲಿಸಿದ್ದಾರಾ? ಎಂಬುವುದು ನಮಗೆ ಸ್ಪಷ್ಟವಾಗಿಲ್ಲ.

Courtesy : livelaw.in

ಸುಳ್ಳು ಸುದ್ದಿ ಪ್ರಸಾರ ಆರೋಪ: ಸುವರ್ಣ ನ್ಯೂಸ್‌ನ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...