Homeಕರ್ನಾಟಕಆದೇಶ ಅರಿಯದೆ ಮಕ್ಕಳ ಮೇಲೆ ಮಾಧ್ಯಮಗಳ ಸವಾರಿ: ಅಧಿಕಾರಿಗಳ ಬೇಸರ

ಆದೇಶ ಅರಿಯದೆ ಮಕ್ಕಳ ಮೇಲೆ ಮಾಧ್ಯಮಗಳ ಸವಾರಿ: ಅಧಿಕಾರಿಗಳ ಬೇಸರ

- Advertisement -
- Advertisement -

ಹಿಜಾಬ್‌ ಕೇಸರಿ ವಿವಾದದ ಬೆನ್ನಲ್ಲೇ ಮೂರು ದಿನಗಳ ರಜೆಯ ಬಳಿಕ ರಾಜ್ಯದ ಪ್ರೌಢಶಾಲೆಗಳು ಸೋಮವಾರ ಮತ್ತೆ ಆರಂಭವಾದವು. ಶಾಲೆಗಳ ಮುಂದೆ ಹೋಗಿ ಕ್ಯಾಮೆರಾ ಹಿಡಿದು ನಿಂತ ಮಾಧ್ಯಮ ಪ್ರತಿನಿಧಿಗಳು, ಮುಖ್ಯವಾಹಿನಿ ದೃಶ್ಯ ಮಾಧ್ಯಮಗಳ ಸಂಪಾದಕರು ಮಕ್ಕಳ ಮೇಲೆ ದ್ವೇಷವನ್ನೇ ಹರಿಬಿಡಲು ಯತ್ನಿಸಿದ್ದಾರೆ.

ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿಗಳನ್ನು ಗೇಟ್‌ಗಳ ಬಳಿಯೇ ಶಾಲಾ ಆಡಳಿತ ಮಂಡಳಿ ತಡೆಯಿತು. ಹಿಜಾಬ್‌ ಬಿಚ್ಚಿಸಲಾಯಿತು. ಶಿಕ್ಷಕಿಯೊಬ್ಬರು ಬುರ್ಕಾವನ್ನು ಸಾರ್ವಜನಿಕವಾಗಿ ತೆಗೆದ ವಿಡಿಯೊ ವೈರಲ್ ಆಗಿದೆ.

ಕಾಲೇಜು ಮಟ್ಟದಲ್ಲಿದ್ದ ಹಿಜಾಬ್‌ – ಕೇಸರಿ ಶಾಲು ವಿವಾದ, ಪ್ರೌಢಶಾಲೆಗಳಿಗೂ ಹಬ್ಬಿಸಲು ಮಾಧ್ಯಮಗಳು ಯತ್ನಿಸಿದಂತೆ ಕಾಣುತ್ತಿವೆ. ಪೂರ್ವ ಸಿದ್ಧತಾ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯರನ್ನು ತಡೆಯುವಲ್ಲಿ ಮಾಧ್ಯಮಗಳ ಪಾತ್ರವೂ ಆಗಾಧವಾಗಿದೆ. ಕ್ಯಾಮೆರಾ ಹಿಡಿದು ನಿಂತು ಸೌಹಾರ್ದತೆಯನ್ನು ಕದಡಲು ಯತ್ನಿಸಿರುವುದು ಕಂಡು ಬಂದಿದೆ.

ಮಾಧ್ಯಮಗಳಲ್ಲಿ ಬಂದ ಕೆಲವು ವರದಿಗಳು

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಜಾಬ್‌‌ ತೆಗೆಯಲು ನಿರಾಕರಿಸಿ ಇಬ್ಬರು ವಿದ್ಯಾರ್ಥಿನಿಯರು ಮನೆಗೆ ವಾಪಸಾದರು.

ಚಿಕ್ಕಮಗಳೂರು ತಾಲ್ಲೂಕಿನ ಇಂದಾವರ ಶಾಲೆಯಲ್ಲಿ ಹಿಜಾಬ್‌ ನಿಷೇಧ. ವಿದ್ಯಾರ್ಥಿನಿಯರು ವೇಲ್‌ಅನ್ನೇ ತಲೆಯ ಮೇಲೆ ಧರಿಸಿದ್ದರು. ಹಿಜಾಬ್‌ ಅಲ್ಲ ಇದು ವೇಲ್‌ ಎಂದು ಹೇಳುತ್ತಿರುವ ವಿದ್ಯಾರ್ಥಿನಿಯರಿಗೆ ಮಾಧ್ಯಮವೊಂದರ ವರದಿಗಾರ, “ಕೋರ್ಟ್ ಆದೇಶ ಇದೆಯಮ್ಮ. ಧರಿಸಿ ಬರಬಾರದೆಂದು. ನಿಮಗೆ ತಿಳಿದಿಲ್ಲವಾ?” ಎಂದು ಕೇಳುತ್ತಾರೆ. “ನಮಗೆ ಎಜುಕೇಷನ್‌ ಹಾಗೂ ಹಿಜಾಬ್‌ ಎರಡೂ ಬೇಕು” ಎಂದು ಎಂಟನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ಹೇಳುತ್ತಾರೆ.

ಶಿಕಾರಿಪುರದ ಮೌಲಾನಾ ಹಜಾದ್ ಶಾಲೆಯಲ್ಲಿ ಹೈಡ್ರಾಮಾ ಎಂದು ಕನ್ನಡದ ಮುಖ್ಯವಾಹಿನಿ ದೃಶ್ಯಮಾಧ್ಯಮದ ಸಂಪಾದಕರೊಬ್ಬರು ಪ್ರೈಮ್‌ಟೈಮ್‌ನಲ್ಲಿ ಹೇಳುತ್ತಾರೆ. ಜೊತೆಗೆ ವಿದ್ಯಾರ್ಥಿಗಳಿಗೆ ಧರ್ಮ ಬೋಧನೆ ಮಾಡುತ್ತಾರೆ.

ಯಾದಗಿರಿ ನಗರದ ಸರ್ಕಾರಿ ಉರ್ದು ಹೈಸ್ಕೂಲ್‌ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿದ್ದರೆಂದು ಅಡ್ಡಿಪಡಿಸಲಾಯಿತು. ಪ್ರಾಂಶುಪಾಲರು ಹಿಜಾಬ್‌ ಧರಿಸಿದ್ದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದ್ದನ್ನು ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದ ಗಲಿಬಿಲಿಯಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ಡಿಡಿಪಿಐ ಶಾಂತಗೌಡ ಪಾಟೀಲ್‌, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಅವರು ಶಾಲೆಗೆ ಆಗಮಿಸಿ ಹಿಜಾಬ್‌ ಹಾಕಿಸಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.

ಆದೇಶ ಅರಿಯದ ಅಧಿಕಾರಿಗಳು, ಮಾಧ್ಯಮಗಳು?

ಪುಟಾಣಿ ಮಕ್ಕಳ ಮೇಲೆ ಕ್ಯಾಮೆರಾ ದಾಳಿ ಒಂದೆಡೆಯಾದರೆ ಮತ್ತೊಂದೆಡೆ ಹೈಕೋರ್ಟ್ ಆದೇಶವನ್ನೇ ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂಬ ಆರೋಪಗಳು ಬಂದಿವೆ.  “ಕೆಲವು ಶಿಕ್ಷಣ ಸಂಸ್ಥೆಗಳು ಮತ್ತು ಶೈಕ್ಷಣಿಕ ಜಿಲ್ಲಾಡಳಿತದಿಂದ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ಉಲ್ಲಂಘನೆಯಾಗುತ್ತಿದೆ” ಎಂದು ಶಿಕ್ಷಣತಜ್ಞ ವಿ.ಪಿ.ನಿರಂಜನಾರಾಧ್ಯ ಅವರು ಶಿಕ್ಷಣ ಆಯುಕ್ತರಿಗೆ ಪತ್ರ ಬರೆದಿದ್ದಾರೆ. “ಉಲ್ಲಂಘನೆಯನ್ನು ತಕ್ಷಣವೇ ನಿಲ್ಲಿಸಲು ಜಿಲ್ಲಾ ಮತ್ತು ಬ್ಲಾಕ್‌ ಅಂತದ ಅಧಿಕಾರಿಗಳಿಗೆ ಕೂಡಲೇ ಸ್ಪಷ್ಟೀಕರಣವನ್ನು ನೀಡಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಆದೇಶವು ಕೇವಲ ದಾವೆ ಹೂಡಿದ ವಿದ್ಯಾರ್ಥಿನಿಯರು ಓದುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ” ಎಂದು ಆದೇಶದ 11ನೆಯ ಕ್ರಮ ಸಂಖ್ಯೆಯಲ್ಲಿ ತಿಳಿಸಲಾಗಿದೆ. ಆದರೆ ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಧರಿಸದಂತೆ ನಿರ್ಬಂಧ ಹೊಂದಿರದ ಶಿಕ್ಷಣ ಸಂಸ್ಥೆಗಳ ಮೇಲೂ ನಿಷೇಧವನ್ನು ವಿಧಿಸುತ್ತಿವೆ. ಇದು ನ್ಯಾಯಾಲಯದ ಮಧ್ಯಂತರ ಆದೇಶದ ಉಲ್ಲಂಘನೆಯಲ್ಲದೆ ಮತ್ತೇನೂ ಅಲ್ಲ” ಎಂದು ತಿಳಿಸಿದ್ದಾರೆ.

ಸುದ್ದಿಯಾಗಿರುವ ಹಲವು ಶಾಲೆಗಳ ಸಂಬಂಧ ಸ್ಥಳೀಯ ಅಧಿಕಾರಿಗಳಿಂದ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ನಮ್ಮೊಂದಿಗೆ ಮಾತನಾಡಿದ ಅಧಿಕಾರಿಗಳಿಗೆ ಕೋರ್ಟ್ ಆದೇಶದ ಕುರಿತು ಸ್ಪಷ್ಟತೆಗಳಿಲ್ಲ ಎಂಬುದು ಕಂಡುಬಂದಿದೆ. ಜೊತೆಗೆ ಕೆಲವು ಅಧಿಕಾರಿಗಳು ಮಾಧ್ಯಮಗಳ ಅತಿರೇಕ, ಮಾಧ್ಯಮಗಳು ಸೃಷ್ಟಿಸುತ್ತಿರುವ ಭಯದ ವಾತಾವರಣದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಪ್ರತಿಕ್ರಿಯೆ

ಮಂಡ್ಯ ರೋಟರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬುರ್ಕಾ ತೆಗೆದ ಕುರಿತು ವರದಿಯಾದ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿಯವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ಘಟನೆಯ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, “ರೋಟರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬುರ್ಕಾ ತೆಗೆದಿದ್ದು ತಿಳಿಯಿತು. ನಾವು ಈ ಕುರಿತು ಯಾವುದೇ ಆದೇಶ ನೀಡಿಲ್ಲ. ಮೀಡಿಯಾದವರನ್ನು ನೋಡಿ ಹೆದರಿದ ಶಿಕ್ಷಕಿ ಭಯ ಬಿದ್ದು ತೆಗೆದಿದ್ದಾರೆ. ಆ ರೀತಿ ತೆಗೆಯುವ ಅಗತ್ಯವಿಲ್ಲ ಎಂದು ನಾವು ತಿಳಿಸಿದ್ದೇವೆ. ಇಂತಹ ಘಟನೆಗಳು ನಡೆದದ್ದು ವರದಿಯಾದರೆ ನಮ್ಮ ಗಮನಕ್ಕೆ ತನ್ನಿ, ಕ್ರಮ ಜರುಗಿಸುತ್ತೇನೆ” ಎಂದಿದ್ದಾರೆ.

ಶಿವಮೊಗ್ಗ ಡಿಡಿಪಿಐ ಎಂ.ಎನ್‌.ರಮೇಶ್‌ ಅವರೊಂದಿಗೆ ಮಾತನಾಡುತ್ತಾ, ಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳನ್ನು ಅವರ ಗಮನಕ್ಕೆ ತರಲಾಯಿತು. ಮಾತು ಮುಂದುವರಿಸಿದ ಡಿಡಿಪಿಐ, “ನಾನು ಅಷ್ಟೊಂದು ಬುದ್ಧಿವಂತನಲ್ಲ. ರಾಜ್ಯಾದ್ಯಂತ ಇದೇ ಪ್ರಕರಣ ನಡೆಯುತ್ತಿದೆ. ನಾವು ಕೆಲವು ಕಡೆ ವಿದ್ಯಾರ್ಥಿಗಳನ್ನು ತಡೆದಿದ್ದೇವೆ. ಕೋರ್ಟ್ ಆದೇಶವನ್ನು ಸರಿಯಾಗಿ ತಿಳಿದುಕೊಂಡು ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

ಸೂಫಿ ಸಂತರ ನಾಡು ಹೈದ್ರಾಬಾದ್ ಕರ್ನಾಟಕ. ಬಹುಶಃ ಅತಿ ಹೆಚ್ಚು ಕೋಮು ಸೌಹಾರ್ದತೆಯನ್ನು ಇಲ್ಲಿ ಕಾಣಬಹುದು. ಇಂತಹ ಹೈದ್ರಾಬಾದ್ ಕರ್ನಾಟಕಕ್ಕೆ ಸೇರಿದ ಯಾದಗಿರಿ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದ ಘಟನೆಯ ಕುರಿತು ಅಲ್ಲಿನ ಡಿಡಿಪಿಐ ಪ್ರತಿಕ್ರಿಯೆಯನ್ನು ನಾವು ಪಡೆದವು. ಡಿಡಿಪಿಐ ಶಾಂತಗೌಡ ಪಾಟೀಲ್‌ ಬಹಳ ವಿಷಾದದಿಂದ ಮಾಧ್ಯಮಗಳ ಕುರಿತು ಮಾತನಾಡಿದರು.

“ಶಾಲೆಗಳು ಸೋಮವಾರ ರೀಓಪನ್ ಆದವು. ಸಾಮಾನ್ಯವಾಗಿ ಎಂದಿನಂತೆ ಮಕ್ಕಳು ಹಿಜಾಬ್ ಧರಿಸಿ ಬಂದಿದ್ದರು. ಸರ್ಕಾರದ ಆದೇಶವನ್ನು ನಾವು ಪಾಲಿಸುತ್ತಿದ್ದೇವೆ. ಯಾವುದೇ ವಿವಾದ ಇಲ್ಲಿನ ಶಾಲೆಯಲ್ಲಿ ಇರಲಿಲ್ಲ. ಆದರೆ ಕೆಲವು ಮಾಧ್ಯಮಗಳು ಮುಂಚಿತವಾಗಿ ಹೋಗಿ ಇದನ್ನು ವಿವಾದ ಮಾಡಿವೆ. ಇಲ್ಲಿನ ಸಾರ್ವಜನಿಕರಿಗೆ ಈ ಕುರಿತು ಆಸಕ್ತಿಯೂ ಇಲ್ಲ. ವಿರೋಧನೂ ಇಲ್ಲ. ಪರವಾದ ವಾದವೂ ಇಲ್ಲ. ಆದರೆ ಮಾಧ್ಯಮಗಳು ಮಾತ್ರ ಇದನ್ನು ಸೃಷ್ಟಿಸುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕೋರ್ಟ್ ಆದೇಶದಂತೆ ಸರ್ಕಾರದ ಆದೇಶವಿತ್ತು. ಹೀಗಾಗಿ ಜಿಲ್ಲಾಡಳಿತ ನಮಗೆ ಸೂಚನೆ ನೀಡಿತ್ತು. ತರಗತಿಯಲ್ಲಿ ಕೂತಾಗ ಮಾತ್ರ ಹಿಜಾಬ್‌ ಧರಿಸದಿರಲು ಹೇಳಿದ್ದೆವು. ಆದರೆ ಶಾಲೆ ಆರಂಭಕ್ಕೂ ಮುನ್ನ ಮಾಧ್ಯಮಗಳು ಅಲ್ಲಿಗೆ ಹೋಗಿ- ನೋಡಿ, ಹಿಜಾಬ್ ಧರಿಸಿದ್ದಾರೆ, ಹಾಗೇ ಹೀಗೆ ಎಂದು ಸುದ್ದಿ ಮಾಡಲು ಶುರುಮಾಡಿದವು. ಈ ಮಾಧ್ಯಮಗಳು ಹೀಗೆ ನ್ಯೂಸ್ ಮಾಡುತ್ತಿರುವುದರಿಂದಲೇ ಸಮಸ್ಯೆಗಳು ಆಗುತ್ತಿರುವುದು” ಎಂದು ಅಭಿಪ್ರಾಯಪಟ್ಟರು ಶಾಂತಗೌಡ.


ಇದನ್ನೂ ಓದಿರಿ: ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...