Homeಕರ್ನಾಟಕಆದೇಶ ಅರಿಯದೆ ಮಕ್ಕಳ ಮೇಲೆ ಮಾಧ್ಯಮಗಳ ಸವಾರಿ: ಅಧಿಕಾರಿಗಳ ಬೇಸರ

ಆದೇಶ ಅರಿಯದೆ ಮಕ್ಕಳ ಮೇಲೆ ಮಾಧ್ಯಮಗಳ ಸವಾರಿ: ಅಧಿಕಾರಿಗಳ ಬೇಸರ

- Advertisement -
- Advertisement -

ಹಿಜಾಬ್‌ ಕೇಸರಿ ವಿವಾದದ ಬೆನ್ನಲ್ಲೇ ಮೂರು ದಿನಗಳ ರಜೆಯ ಬಳಿಕ ರಾಜ್ಯದ ಪ್ರೌಢಶಾಲೆಗಳು ಸೋಮವಾರ ಮತ್ತೆ ಆರಂಭವಾದವು. ಶಾಲೆಗಳ ಮುಂದೆ ಹೋಗಿ ಕ್ಯಾಮೆರಾ ಹಿಡಿದು ನಿಂತ ಮಾಧ್ಯಮ ಪ್ರತಿನಿಧಿಗಳು, ಮುಖ್ಯವಾಹಿನಿ ದೃಶ್ಯ ಮಾಧ್ಯಮಗಳ ಸಂಪಾದಕರು ಮಕ್ಕಳ ಮೇಲೆ ದ್ವೇಷವನ್ನೇ ಹರಿಬಿಡಲು ಯತ್ನಿಸಿದ್ದಾರೆ.

ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿಗಳನ್ನು ಗೇಟ್‌ಗಳ ಬಳಿಯೇ ಶಾಲಾ ಆಡಳಿತ ಮಂಡಳಿ ತಡೆಯಿತು. ಹಿಜಾಬ್‌ ಬಿಚ್ಚಿಸಲಾಯಿತು. ಶಿಕ್ಷಕಿಯೊಬ್ಬರು ಬುರ್ಕಾವನ್ನು ಸಾರ್ವಜನಿಕವಾಗಿ ತೆಗೆದ ವಿಡಿಯೊ ವೈರಲ್ ಆಗಿದೆ.

ಕಾಲೇಜು ಮಟ್ಟದಲ್ಲಿದ್ದ ಹಿಜಾಬ್‌ – ಕೇಸರಿ ಶಾಲು ವಿವಾದ, ಪ್ರೌಢಶಾಲೆಗಳಿಗೂ ಹಬ್ಬಿಸಲು ಮಾಧ್ಯಮಗಳು ಯತ್ನಿಸಿದಂತೆ ಕಾಣುತ್ತಿವೆ. ಪೂರ್ವ ಸಿದ್ಧತಾ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯರನ್ನು ತಡೆಯುವಲ್ಲಿ ಮಾಧ್ಯಮಗಳ ಪಾತ್ರವೂ ಆಗಾಧವಾಗಿದೆ. ಕ್ಯಾಮೆರಾ ಹಿಡಿದು ನಿಂತು ಸೌಹಾರ್ದತೆಯನ್ನು ಕದಡಲು ಯತ್ನಿಸಿರುವುದು ಕಂಡು ಬಂದಿದೆ.

ಮಾಧ್ಯಮಗಳಲ್ಲಿ ಬಂದ ಕೆಲವು ವರದಿಗಳು

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಜಾಬ್‌‌ ತೆಗೆಯಲು ನಿರಾಕರಿಸಿ ಇಬ್ಬರು ವಿದ್ಯಾರ್ಥಿನಿಯರು ಮನೆಗೆ ವಾಪಸಾದರು.

ಚಿಕ್ಕಮಗಳೂರು ತಾಲ್ಲೂಕಿನ ಇಂದಾವರ ಶಾಲೆಯಲ್ಲಿ ಹಿಜಾಬ್‌ ನಿಷೇಧ. ವಿದ್ಯಾರ್ಥಿನಿಯರು ವೇಲ್‌ಅನ್ನೇ ತಲೆಯ ಮೇಲೆ ಧರಿಸಿದ್ದರು. ಹಿಜಾಬ್‌ ಅಲ್ಲ ಇದು ವೇಲ್‌ ಎಂದು ಹೇಳುತ್ತಿರುವ ವಿದ್ಯಾರ್ಥಿನಿಯರಿಗೆ ಮಾಧ್ಯಮವೊಂದರ ವರದಿಗಾರ, “ಕೋರ್ಟ್ ಆದೇಶ ಇದೆಯಮ್ಮ. ಧರಿಸಿ ಬರಬಾರದೆಂದು. ನಿಮಗೆ ತಿಳಿದಿಲ್ಲವಾ?” ಎಂದು ಕೇಳುತ್ತಾರೆ. “ನಮಗೆ ಎಜುಕೇಷನ್‌ ಹಾಗೂ ಹಿಜಾಬ್‌ ಎರಡೂ ಬೇಕು” ಎಂದು ಎಂಟನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ಹೇಳುತ್ತಾರೆ.

ಶಿಕಾರಿಪುರದ ಮೌಲಾನಾ ಹಜಾದ್ ಶಾಲೆಯಲ್ಲಿ ಹೈಡ್ರಾಮಾ ಎಂದು ಕನ್ನಡದ ಮುಖ್ಯವಾಹಿನಿ ದೃಶ್ಯಮಾಧ್ಯಮದ ಸಂಪಾದಕರೊಬ್ಬರು ಪ್ರೈಮ್‌ಟೈಮ್‌ನಲ್ಲಿ ಹೇಳುತ್ತಾರೆ. ಜೊತೆಗೆ ವಿದ್ಯಾರ್ಥಿಗಳಿಗೆ ಧರ್ಮ ಬೋಧನೆ ಮಾಡುತ್ತಾರೆ.

ಯಾದಗಿರಿ ನಗರದ ಸರ್ಕಾರಿ ಉರ್ದು ಹೈಸ್ಕೂಲ್‌ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿದ್ದರೆಂದು ಅಡ್ಡಿಪಡಿಸಲಾಯಿತು. ಪ್ರಾಂಶುಪಾಲರು ಹಿಜಾಬ್‌ ಧರಿಸಿದ್ದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದ್ದನ್ನು ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದ ಗಲಿಬಿಲಿಯಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ಡಿಡಿಪಿಐ ಶಾಂತಗೌಡ ಪಾಟೀಲ್‌, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಅವರು ಶಾಲೆಗೆ ಆಗಮಿಸಿ ಹಿಜಾಬ್‌ ಹಾಕಿಸಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.

ಆದೇಶ ಅರಿಯದ ಅಧಿಕಾರಿಗಳು, ಮಾಧ್ಯಮಗಳು?

ಪುಟಾಣಿ ಮಕ್ಕಳ ಮೇಲೆ ಕ್ಯಾಮೆರಾ ದಾಳಿ ಒಂದೆಡೆಯಾದರೆ ಮತ್ತೊಂದೆಡೆ ಹೈಕೋರ್ಟ್ ಆದೇಶವನ್ನೇ ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂಬ ಆರೋಪಗಳು ಬಂದಿವೆ.  “ಕೆಲವು ಶಿಕ್ಷಣ ಸಂಸ್ಥೆಗಳು ಮತ್ತು ಶೈಕ್ಷಣಿಕ ಜಿಲ್ಲಾಡಳಿತದಿಂದ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ಉಲ್ಲಂಘನೆಯಾಗುತ್ತಿದೆ” ಎಂದು ಶಿಕ್ಷಣತಜ್ಞ ವಿ.ಪಿ.ನಿರಂಜನಾರಾಧ್ಯ ಅವರು ಶಿಕ್ಷಣ ಆಯುಕ್ತರಿಗೆ ಪತ್ರ ಬರೆದಿದ್ದಾರೆ. “ಉಲ್ಲಂಘನೆಯನ್ನು ತಕ್ಷಣವೇ ನಿಲ್ಲಿಸಲು ಜಿಲ್ಲಾ ಮತ್ತು ಬ್ಲಾಕ್‌ ಅಂತದ ಅಧಿಕಾರಿಗಳಿಗೆ ಕೂಡಲೇ ಸ್ಪಷ್ಟೀಕರಣವನ್ನು ನೀಡಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಆದೇಶವು ಕೇವಲ ದಾವೆ ಹೂಡಿದ ವಿದ್ಯಾರ್ಥಿನಿಯರು ಓದುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ” ಎಂದು ಆದೇಶದ 11ನೆಯ ಕ್ರಮ ಸಂಖ್ಯೆಯಲ್ಲಿ ತಿಳಿಸಲಾಗಿದೆ. ಆದರೆ ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಧರಿಸದಂತೆ ನಿರ್ಬಂಧ ಹೊಂದಿರದ ಶಿಕ್ಷಣ ಸಂಸ್ಥೆಗಳ ಮೇಲೂ ನಿಷೇಧವನ್ನು ವಿಧಿಸುತ್ತಿವೆ. ಇದು ನ್ಯಾಯಾಲಯದ ಮಧ್ಯಂತರ ಆದೇಶದ ಉಲ್ಲಂಘನೆಯಲ್ಲದೆ ಮತ್ತೇನೂ ಅಲ್ಲ” ಎಂದು ತಿಳಿಸಿದ್ದಾರೆ.

ಸುದ್ದಿಯಾಗಿರುವ ಹಲವು ಶಾಲೆಗಳ ಸಂಬಂಧ ಸ್ಥಳೀಯ ಅಧಿಕಾರಿಗಳಿಂದ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ನಮ್ಮೊಂದಿಗೆ ಮಾತನಾಡಿದ ಅಧಿಕಾರಿಗಳಿಗೆ ಕೋರ್ಟ್ ಆದೇಶದ ಕುರಿತು ಸ್ಪಷ್ಟತೆಗಳಿಲ್ಲ ಎಂಬುದು ಕಂಡುಬಂದಿದೆ. ಜೊತೆಗೆ ಕೆಲವು ಅಧಿಕಾರಿಗಳು ಮಾಧ್ಯಮಗಳ ಅತಿರೇಕ, ಮಾಧ್ಯಮಗಳು ಸೃಷ್ಟಿಸುತ್ತಿರುವ ಭಯದ ವಾತಾವರಣದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಪ್ರತಿಕ್ರಿಯೆ

ಮಂಡ್ಯ ರೋಟರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬುರ್ಕಾ ತೆಗೆದ ಕುರಿತು ವರದಿಯಾದ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿಯವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ಘಟನೆಯ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, “ರೋಟರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬುರ್ಕಾ ತೆಗೆದಿದ್ದು ತಿಳಿಯಿತು. ನಾವು ಈ ಕುರಿತು ಯಾವುದೇ ಆದೇಶ ನೀಡಿಲ್ಲ. ಮೀಡಿಯಾದವರನ್ನು ನೋಡಿ ಹೆದರಿದ ಶಿಕ್ಷಕಿ ಭಯ ಬಿದ್ದು ತೆಗೆದಿದ್ದಾರೆ. ಆ ರೀತಿ ತೆಗೆಯುವ ಅಗತ್ಯವಿಲ್ಲ ಎಂದು ನಾವು ತಿಳಿಸಿದ್ದೇವೆ. ಇಂತಹ ಘಟನೆಗಳು ನಡೆದದ್ದು ವರದಿಯಾದರೆ ನಮ್ಮ ಗಮನಕ್ಕೆ ತನ್ನಿ, ಕ್ರಮ ಜರುಗಿಸುತ್ತೇನೆ” ಎಂದಿದ್ದಾರೆ.

ಶಿವಮೊಗ್ಗ ಡಿಡಿಪಿಐ ಎಂ.ಎನ್‌.ರಮೇಶ್‌ ಅವರೊಂದಿಗೆ ಮಾತನಾಡುತ್ತಾ, ಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳನ್ನು ಅವರ ಗಮನಕ್ಕೆ ತರಲಾಯಿತು. ಮಾತು ಮುಂದುವರಿಸಿದ ಡಿಡಿಪಿಐ, “ನಾನು ಅಷ್ಟೊಂದು ಬುದ್ಧಿವಂತನಲ್ಲ. ರಾಜ್ಯಾದ್ಯಂತ ಇದೇ ಪ್ರಕರಣ ನಡೆಯುತ್ತಿದೆ. ನಾವು ಕೆಲವು ಕಡೆ ವಿದ್ಯಾರ್ಥಿಗಳನ್ನು ತಡೆದಿದ್ದೇವೆ. ಕೋರ್ಟ್ ಆದೇಶವನ್ನು ಸರಿಯಾಗಿ ತಿಳಿದುಕೊಂಡು ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

ಸೂಫಿ ಸಂತರ ನಾಡು ಹೈದ್ರಾಬಾದ್ ಕರ್ನಾಟಕ. ಬಹುಶಃ ಅತಿ ಹೆಚ್ಚು ಕೋಮು ಸೌಹಾರ್ದತೆಯನ್ನು ಇಲ್ಲಿ ಕಾಣಬಹುದು. ಇಂತಹ ಹೈದ್ರಾಬಾದ್ ಕರ್ನಾಟಕಕ್ಕೆ ಸೇರಿದ ಯಾದಗಿರಿ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದ ಘಟನೆಯ ಕುರಿತು ಅಲ್ಲಿನ ಡಿಡಿಪಿಐ ಪ್ರತಿಕ್ರಿಯೆಯನ್ನು ನಾವು ಪಡೆದವು. ಡಿಡಿಪಿಐ ಶಾಂತಗೌಡ ಪಾಟೀಲ್‌ ಬಹಳ ವಿಷಾದದಿಂದ ಮಾಧ್ಯಮಗಳ ಕುರಿತು ಮಾತನಾಡಿದರು.

“ಶಾಲೆಗಳು ಸೋಮವಾರ ರೀಓಪನ್ ಆದವು. ಸಾಮಾನ್ಯವಾಗಿ ಎಂದಿನಂತೆ ಮಕ್ಕಳು ಹಿಜಾಬ್ ಧರಿಸಿ ಬಂದಿದ್ದರು. ಸರ್ಕಾರದ ಆದೇಶವನ್ನು ನಾವು ಪಾಲಿಸುತ್ತಿದ್ದೇವೆ. ಯಾವುದೇ ವಿವಾದ ಇಲ್ಲಿನ ಶಾಲೆಯಲ್ಲಿ ಇರಲಿಲ್ಲ. ಆದರೆ ಕೆಲವು ಮಾಧ್ಯಮಗಳು ಮುಂಚಿತವಾಗಿ ಹೋಗಿ ಇದನ್ನು ವಿವಾದ ಮಾಡಿವೆ. ಇಲ್ಲಿನ ಸಾರ್ವಜನಿಕರಿಗೆ ಈ ಕುರಿತು ಆಸಕ್ತಿಯೂ ಇಲ್ಲ. ವಿರೋಧನೂ ಇಲ್ಲ. ಪರವಾದ ವಾದವೂ ಇಲ್ಲ. ಆದರೆ ಮಾಧ್ಯಮಗಳು ಮಾತ್ರ ಇದನ್ನು ಸೃಷ್ಟಿಸುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕೋರ್ಟ್ ಆದೇಶದಂತೆ ಸರ್ಕಾರದ ಆದೇಶವಿತ್ತು. ಹೀಗಾಗಿ ಜಿಲ್ಲಾಡಳಿತ ನಮಗೆ ಸೂಚನೆ ನೀಡಿತ್ತು. ತರಗತಿಯಲ್ಲಿ ಕೂತಾಗ ಮಾತ್ರ ಹಿಜಾಬ್‌ ಧರಿಸದಿರಲು ಹೇಳಿದ್ದೆವು. ಆದರೆ ಶಾಲೆ ಆರಂಭಕ್ಕೂ ಮುನ್ನ ಮಾಧ್ಯಮಗಳು ಅಲ್ಲಿಗೆ ಹೋಗಿ- ನೋಡಿ, ಹಿಜಾಬ್ ಧರಿಸಿದ್ದಾರೆ, ಹಾಗೇ ಹೀಗೆ ಎಂದು ಸುದ್ದಿ ಮಾಡಲು ಶುರುಮಾಡಿದವು. ಈ ಮಾಧ್ಯಮಗಳು ಹೀಗೆ ನ್ಯೂಸ್ ಮಾಡುತ್ತಿರುವುದರಿಂದಲೇ ಸಮಸ್ಯೆಗಳು ಆಗುತ್ತಿರುವುದು” ಎಂದು ಅಭಿಪ್ರಾಯಪಟ್ಟರು ಶಾಂತಗೌಡ.


ಇದನ್ನೂ ಓದಿರಿ: ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...