Homeಕರ್ನಾಟಕಆದೇಶ ಅರಿಯದೆ ಮಕ್ಕಳ ಮೇಲೆ ಮಾಧ್ಯಮಗಳ ಸವಾರಿ: ಅಧಿಕಾರಿಗಳ ಬೇಸರ

ಆದೇಶ ಅರಿಯದೆ ಮಕ್ಕಳ ಮೇಲೆ ಮಾಧ್ಯಮಗಳ ಸವಾರಿ: ಅಧಿಕಾರಿಗಳ ಬೇಸರ

- Advertisement -
- Advertisement -

ಹಿಜಾಬ್‌ ಕೇಸರಿ ವಿವಾದದ ಬೆನ್ನಲ್ಲೇ ಮೂರು ದಿನಗಳ ರಜೆಯ ಬಳಿಕ ರಾಜ್ಯದ ಪ್ರೌಢಶಾಲೆಗಳು ಸೋಮವಾರ ಮತ್ತೆ ಆರಂಭವಾದವು. ಶಾಲೆಗಳ ಮುಂದೆ ಹೋಗಿ ಕ್ಯಾಮೆರಾ ಹಿಡಿದು ನಿಂತ ಮಾಧ್ಯಮ ಪ್ರತಿನಿಧಿಗಳು, ಮುಖ್ಯವಾಹಿನಿ ದೃಶ್ಯ ಮಾಧ್ಯಮಗಳ ಸಂಪಾದಕರು ಮಕ್ಕಳ ಮೇಲೆ ದ್ವೇಷವನ್ನೇ ಹರಿಬಿಡಲು ಯತ್ನಿಸಿದ್ದಾರೆ.

ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿಗಳನ್ನು ಗೇಟ್‌ಗಳ ಬಳಿಯೇ ಶಾಲಾ ಆಡಳಿತ ಮಂಡಳಿ ತಡೆಯಿತು. ಹಿಜಾಬ್‌ ಬಿಚ್ಚಿಸಲಾಯಿತು. ಶಿಕ್ಷಕಿಯೊಬ್ಬರು ಬುರ್ಕಾವನ್ನು ಸಾರ್ವಜನಿಕವಾಗಿ ತೆಗೆದ ವಿಡಿಯೊ ವೈರಲ್ ಆಗಿದೆ.

ಕಾಲೇಜು ಮಟ್ಟದಲ್ಲಿದ್ದ ಹಿಜಾಬ್‌ – ಕೇಸರಿ ಶಾಲು ವಿವಾದ, ಪ್ರೌಢಶಾಲೆಗಳಿಗೂ ಹಬ್ಬಿಸಲು ಮಾಧ್ಯಮಗಳು ಯತ್ನಿಸಿದಂತೆ ಕಾಣುತ್ತಿವೆ. ಪೂರ್ವ ಸಿದ್ಧತಾ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯರನ್ನು ತಡೆಯುವಲ್ಲಿ ಮಾಧ್ಯಮಗಳ ಪಾತ್ರವೂ ಆಗಾಧವಾಗಿದೆ. ಕ್ಯಾಮೆರಾ ಹಿಡಿದು ನಿಂತು ಸೌಹಾರ್ದತೆಯನ್ನು ಕದಡಲು ಯತ್ನಿಸಿರುವುದು ಕಂಡು ಬಂದಿದೆ.

ಮಾಧ್ಯಮಗಳಲ್ಲಿ ಬಂದ ಕೆಲವು ವರದಿಗಳು

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಜಾಬ್‌‌ ತೆಗೆಯಲು ನಿರಾಕರಿಸಿ ಇಬ್ಬರು ವಿದ್ಯಾರ್ಥಿನಿಯರು ಮನೆಗೆ ವಾಪಸಾದರು.

ಚಿಕ್ಕಮಗಳೂರು ತಾಲ್ಲೂಕಿನ ಇಂದಾವರ ಶಾಲೆಯಲ್ಲಿ ಹಿಜಾಬ್‌ ನಿಷೇಧ. ವಿದ್ಯಾರ್ಥಿನಿಯರು ವೇಲ್‌ಅನ್ನೇ ತಲೆಯ ಮೇಲೆ ಧರಿಸಿದ್ದರು. ಹಿಜಾಬ್‌ ಅಲ್ಲ ಇದು ವೇಲ್‌ ಎಂದು ಹೇಳುತ್ತಿರುವ ವಿದ್ಯಾರ್ಥಿನಿಯರಿಗೆ ಮಾಧ್ಯಮವೊಂದರ ವರದಿಗಾರ, “ಕೋರ್ಟ್ ಆದೇಶ ಇದೆಯಮ್ಮ. ಧರಿಸಿ ಬರಬಾರದೆಂದು. ನಿಮಗೆ ತಿಳಿದಿಲ್ಲವಾ?” ಎಂದು ಕೇಳುತ್ತಾರೆ. “ನಮಗೆ ಎಜುಕೇಷನ್‌ ಹಾಗೂ ಹಿಜಾಬ್‌ ಎರಡೂ ಬೇಕು” ಎಂದು ಎಂಟನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ಹೇಳುತ್ತಾರೆ.

ಶಿಕಾರಿಪುರದ ಮೌಲಾನಾ ಹಜಾದ್ ಶಾಲೆಯಲ್ಲಿ ಹೈಡ್ರಾಮಾ ಎಂದು ಕನ್ನಡದ ಮುಖ್ಯವಾಹಿನಿ ದೃಶ್ಯಮಾಧ್ಯಮದ ಸಂಪಾದಕರೊಬ್ಬರು ಪ್ರೈಮ್‌ಟೈಮ್‌ನಲ್ಲಿ ಹೇಳುತ್ತಾರೆ. ಜೊತೆಗೆ ವಿದ್ಯಾರ್ಥಿಗಳಿಗೆ ಧರ್ಮ ಬೋಧನೆ ಮಾಡುತ್ತಾರೆ.

ಯಾದಗಿರಿ ನಗರದ ಸರ್ಕಾರಿ ಉರ್ದು ಹೈಸ್ಕೂಲ್‌ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿದ್ದರೆಂದು ಅಡ್ಡಿಪಡಿಸಲಾಯಿತು. ಪ್ರಾಂಶುಪಾಲರು ಹಿಜಾಬ್‌ ಧರಿಸಿದ್ದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದ್ದನ್ನು ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದ ಗಲಿಬಿಲಿಯಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ಡಿಡಿಪಿಐ ಶಾಂತಗೌಡ ಪಾಟೀಲ್‌, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಅವರು ಶಾಲೆಗೆ ಆಗಮಿಸಿ ಹಿಜಾಬ್‌ ಹಾಕಿಸಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.

ಆದೇಶ ಅರಿಯದ ಅಧಿಕಾರಿಗಳು, ಮಾಧ್ಯಮಗಳು?

ಪುಟಾಣಿ ಮಕ್ಕಳ ಮೇಲೆ ಕ್ಯಾಮೆರಾ ದಾಳಿ ಒಂದೆಡೆಯಾದರೆ ಮತ್ತೊಂದೆಡೆ ಹೈಕೋರ್ಟ್ ಆದೇಶವನ್ನೇ ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂಬ ಆರೋಪಗಳು ಬಂದಿವೆ.  “ಕೆಲವು ಶಿಕ್ಷಣ ಸಂಸ್ಥೆಗಳು ಮತ್ತು ಶೈಕ್ಷಣಿಕ ಜಿಲ್ಲಾಡಳಿತದಿಂದ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ಉಲ್ಲಂಘನೆಯಾಗುತ್ತಿದೆ” ಎಂದು ಶಿಕ್ಷಣತಜ್ಞ ವಿ.ಪಿ.ನಿರಂಜನಾರಾಧ್ಯ ಅವರು ಶಿಕ್ಷಣ ಆಯುಕ್ತರಿಗೆ ಪತ್ರ ಬರೆದಿದ್ದಾರೆ. “ಉಲ್ಲಂಘನೆಯನ್ನು ತಕ್ಷಣವೇ ನಿಲ್ಲಿಸಲು ಜಿಲ್ಲಾ ಮತ್ತು ಬ್ಲಾಕ್‌ ಅಂತದ ಅಧಿಕಾರಿಗಳಿಗೆ ಕೂಡಲೇ ಸ್ಪಷ್ಟೀಕರಣವನ್ನು ನೀಡಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಆದೇಶವು ಕೇವಲ ದಾವೆ ಹೂಡಿದ ವಿದ್ಯಾರ್ಥಿನಿಯರು ಓದುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ” ಎಂದು ಆದೇಶದ 11ನೆಯ ಕ್ರಮ ಸಂಖ್ಯೆಯಲ್ಲಿ ತಿಳಿಸಲಾಗಿದೆ. ಆದರೆ ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಧರಿಸದಂತೆ ನಿರ್ಬಂಧ ಹೊಂದಿರದ ಶಿಕ್ಷಣ ಸಂಸ್ಥೆಗಳ ಮೇಲೂ ನಿಷೇಧವನ್ನು ವಿಧಿಸುತ್ತಿವೆ. ಇದು ನ್ಯಾಯಾಲಯದ ಮಧ್ಯಂತರ ಆದೇಶದ ಉಲ್ಲಂಘನೆಯಲ್ಲದೆ ಮತ್ತೇನೂ ಅಲ್ಲ” ಎಂದು ತಿಳಿಸಿದ್ದಾರೆ.

ಸುದ್ದಿಯಾಗಿರುವ ಹಲವು ಶಾಲೆಗಳ ಸಂಬಂಧ ಸ್ಥಳೀಯ ಅಧಿಕಾರಿಗಳಿಂದ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ನಮ್ಮೊಂದಿಗೆ ಮಾತನಾಡಿದ ಅಧಿಕಾರಿಗಳಿಗೆ ಕೋರ್ಟ್ ಆದೇಶದ ಕುರಿತು ಸ್ಪಷ್ಟತೆಗಳಿಲ್ಲ ಎಂಬುದು ಕಂಡುಬಂದಿದೆ. ಜೊತೆಗೆ ಕೆಲವು ಅಧಿಕಾರಿಗಳು ಮಾಧ್ಯಮಗಳ ಅತಿರೇಕ, ಮಾಧ್ಯಮಗಳು ಸೃಷ್ಟಿಸುತ್ತಿರುವ ಭಯದ ವಾತಾವರಣದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಪ್ರತಿಕ್ರಿಯೆ

ಮಂಡ್ಯ ರೋಟರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬುರ್ಕಾ ತೆಗೆದ ಕುರಿತು ವರದಿಯಾದ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿಯವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ಘಟನೆಯ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, “ರೋಟರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬುರ್ಕಾ ತೆಗೆದಿದ್ದು ತಿಳಿಯಿತು. ನಾವು ಈ ಕುರಿತು ಯಾವುದೇ ಆದೇಶ ನೀಡಿಲ್ಲ. ಮೀಡಿಯಾದವರನ್ನು ನೋಡಿ ಹೆದರಿದ ಶಿಕ್ಷಕಿ ಭಯ ಬಿದ್ದು ತೆಗೆದಿದ್ದಾರೆ. ಆ ರೀತಿ ತೆಗೆಯುವ ಅಗತ್ಯವಿಲ್ಲ ಎಂದು ನಾವು ತಿಳಿಸಿದ್ದೇವೆ. ಇಂತಹ ಘಟನೆಗಳು ನಡೆದದ್ದು ವರದಿಯಾದರೆ ನಮ್ಮ ಗಮನಕ್ಕೆ ತನ್ನಿ, ಕ್ರಮ ಜರುಗಿಸುತ್ತೇನೆ” ಎಂದಿದ್ದಾರೆ.

ಶಿವಮೊಗ್ಗ ಡಿಡಿಪಿಐ ಎಂ.ಎನ್‌.ರಮೇಶ್‌ ಅವರೊಂದಿಗೆ ಮಾತನಾಡುತ್ತಾ, ಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳನ್ನು ಅವರ ಗಮನಕ್ಕೆ ತರಲಾಯಿತು. ಮಾತು ಮುಂದುವರಿಸಿದ ಡಿಡಿಪಿಐ, “ನಾನು ಅಷ್ಟೊಂದು ಬುದ್ಧಿವಂತನಲ್ಲ. ರಾಜ್ಯಾದ್ಯಂತ ಇದೇ ಪ್ರಕರಣ ನಡೆಯುತ್ತಿದೆ. ನಾವು ಕೆಲವು ಕಡೆ ವಿದ್ಯಾರ್ಥಿಗಳನ್ನು ತಡೆದಿದ್ದೇವೆ. ಕೋರ್ಟ್ ಆದೇಶವನ್ನು ಸರಿಯಾಗಿ ತಿಳಿದುಕೊಂಡು ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

ಸೂಫಿ ಸಂತರ ನಾಡು ಹೈದ್ರಾಬಾದ್ ಕರ್ನಾಟಕ. ಬಹುಶಃ ಅತಿ ಹೆಚ್ಚು ಕೋಮು ಸೌಹಾರ್ದತೆಯನ್ನು ಇಲ್ಲಿ ಕಾಣಬಹುದು. ಇಂತಹ ಹೈದ್ರಾಬಾದ್ ಕರ್ನಾಟಕಕ್ಕೆ ಸೇರಿದ ಯಾದಗಿರಿ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದ ಘಟನೆಯ ಕುರಿತು ಅಲ್ಲಿನ ಡಿಡಿಪಿಐ ಪ್ರತಿಕ್ರಿಯೆಯನ್ನು ನಾವು ಪಡೆದವು. ಡಿಡಿಪಿಐ ಶಾಂತಗೌಡ ಪಾಟೀಲ್‌ ಬಹಳ ವಿಷಾದದಿಂದ ಮಾಧ್ಯಮಗಳ ಕುರಿತು ಮಾತನಾಡಿದರು.

“ಶಾಲೆಗಳು ಸೋಮವಾರ ರೀಓಪನ್ ಆದವು. ಸಾಮಾನ್ಯವಾಗಿ ಎಂದಿನಂತೆ ಮಕ್ಕಳು ಹಿಜಾಬ್ ಧರಿಸಿ ಬಂದಿದ್ದರು. ಸರ್ಕಾರದ ಆದೇಶವನ್ನು ನಾವು ಪಾಲಿಸುತ್ತಿದ್ದೇವೆ. ಯಾವುದೇ ವಿವಾದ ಇಲ್ಲಿನ ಶಾಲೆಯಲ್ಲಿ ಇರಲಿಲ್ಲ. ಆದರೆ ಕೆಲವು ಮಾಧ್ಯಮಗಳು ಮುಂಚಿತವಾಗಿ ಹೋಗಿ ಇದನ್ನು ವಿವಾದ ಮಾಡಿವೆ. ಇಲ್ಲಿನ ಸಾರ್ವಜನಿಕರಿಗೆ ಈ ಕುರಿತು ಆಸಕ್ತಿಯೂ ಇಲ್ಲ. ವಿರೋಧನೂ ಇಲ್ಲ. ಪರವಾದ ವಾದವೂ ಇಲ್ಲ. ಆದರೆ ಮಾಧ್ಯಮಗಳು ಮಾತ್ರ ಇದನ್ನು ಸೃಷ್ಟಿಸುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕೋರ್ಟ್ ಆದೇಶದಂತೆ ಸರ್ಕಾರದ ಆದೇಶವಿತ್ತು. ಹೀಗಾಗಿ ಜಿಲ್ಲಾಡಳಿತ ನಮಗೆ ಸೂಚನೆ ನೀಡಿತ್ತು. ತರಗತಿಯಲ್ಲಿ ಕೂತಾಗ ಮಾತ್ರ ಹಿಜಾಬ್‌ ಧರಿಸದಿರಲು ಹೇಳಿದ್ದೆವು. ಆದರೆ ಶಾಲೆ ಆರಂಭಕ್ಕೂ ಮುನ್ನ ಮಾಧ್ಯಮಗಳು ಅಲ್ಲಿಗೆ ಹೋಗಿ- ನೋಡಿ, ಹಿಜಾಬ್ ಧರಿಸಿದ್ದಾರೆ, ಹಾಗೇ ಹೀಗೆ ಎಂದು ಸುದ್ದಿ ಮಾಡಲು ಶುರುಮಾಡಿದವು. ಈ ಮಾಧ್ಯಮಗಳು ಹೀಗೆ ನ್ಯೂಸ್ ಮಾಡುತ್ತಿರುವುದರಿಂದಲೇ ಸಮಸ್ಯೆಗಳು ಆಗುತ್ತಿರುವುದು” ಎಂದು ಅಭಿಪ್ರಾಯಪಟ್ಟರು ಶಾಂತಗೌಡ.


ಇದನ್ನೂ ಓದಿರಿ: ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...