Homeಕರ್ನಾಟಕಗುತ್ತಿಗೆದಾರ ಆತ್ಮಹತ್ಯೆ ಎಂದು ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮಗಳು: ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ- ತಂದೆ ಸ್ಪಷ್ಟನೆ

ಗುತ್ತಿಗೆದಾರ ಆತ್ಮಹತ್ಯೆ ಎಂದು ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮಗಳು: ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ- ತಂದೆ ಸ್ಪಷ್ಟನೆ

- Advertisement -
- Advertisement -

ಬೆಂಗಳೂರಿನ ವಿಜಯನಗರದಲ್ಲಿ ಮಾಜಿ ಕಾರ್ಪೋರೇಟರ್‌ ಪುತ್ರ ಗೌತಮ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕೆಲವು ಮಾಧ್ಯಮಗಳು ಕಾಮಗಾರಿಯ ಬಿಲ್ ಪಾವತಿಸದಿದ್ದಕ್ಕೆ ಬಿಬಿಎಂಪಿ ಗುತ್ತೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಬಿತ್ತರಿಸಿದ್ದವು. ಆದರೆ ಆತ ಗುತ್ತಿಗೆದಾರನೇ ಅಲ್ಲ ತನ್ನ ವೈಯಕ್ತಿಕ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಗೌತಮ್ ಅವರ ತಂದೆಯೇ ಸ್ಪಷ್ಟನೆ ನೀಡಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸಿದ ವಾಹಿನಿ

ಗೌತಮ್‌ ವಿಜಯನಗರದ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿಯೇ (ಆ.09) ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದರು. ಇವರು ಅತ್ತಿಗುಪ್ಪೆಯ ಮಾಜಿ ಕಾರ್ಪೋರೇಟರ್ ದೊಡ್ಡಯ್ಯರ ಅವರ ಮಗನಾಗಿದ್ದು, ಇದೀಗ ಅವರೇ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣ ಏನು ಎಂಬುದನ್ನು ಗೌತಮ್ ಅವರ ತಂದೆ ಹಾಗೂ ಮಾವ ಆನಂದ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮೃತ ಗೌತಮ್ ಅವರ ಮಾವ ಆನಂದ್, ”ನಾವು ಕಾಂಗ್ರೆಸ್ ಪಕ್ಷದವರು ನಮ್ಮ ವಿರುದ್ಧ ಬಿಜೆಪಿಯವರು ಪಿತೂರಿ ಮಾಡಿದ್ದಾರೆ. ಗೌತಮ್ ಯಾವುದೇ ಗುತ್ತಿಗೆದಾರನಲ್ಲ. ಅವರ ಹೆಸರಲ್ಲಿ ಯಾವುದೇ ಪರವಾನಗಿ ಇಲ್ಲ. ಗೌತಮ್ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌತಮ್‌ಗೆ ಮದುವೆ ಮಾಡಲು ಎರಡು ತಿಂಗಳಿಂದ ಹೆಣ್ಣು ಹುಡುಕುತ್ತಿದ್ದವಿ. ಗುತ್ತಿಗೆದಾರ ಆತ್ಮಹತ್ಯೆಗೆ ಶರಣು ಎಂಬುದೆಲ್ಲ ಸುಳ್ಳು ಬಿಜೆಪಿಯವರು ಪಿತೂರಿ ಮಾಡಿ ಸುಳ್ಳು ಮಾಹಿತಿ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

”ಗುರುವಾರ ಮಧ್ಯಾಹ್ನ ಊಟಕ್ಕೆ ಕರೆಯಲು ಹೋದಾಗ ನಮಗೆ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಬಂದಿದೆ” ಎಂದು ಗೌತಮ್ ತಂದೆ ಮಾಜಿ ಕಾರ್ಪೋರೇಟರ್ ದೊಡ್ಡಯ್ಯ ಹೇಳಿದ್ದಾರೆ.

”ರೂಮ್ ಲಾಕ್ ಆಗಿದ್ದರಿಂದ ಗೌತಮ್‌ ಫೋನ್‌ಗೆ ಕರೆ ಮಾಡಲಾಗಿತ್ತು. ಆದರೆ ತೆರೆಯದೆ ಇದ್ದಾಗ ಅನುಮಾನ ಬಂತು. ಬಾಗಿಲಿಂದ ವಾಸನೆ ಬರುತ್ತಿತ್ತು. ಬಾಗಿಲು ಹೊಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ” ಎಂದು ಅವರು ಹೇಳಿದರು.

”ಆತ ನಾಲ್ಕು ಐದು ತಿಂಗಳಿನಿಂದ ಡಿಪ್ರೆಷನ್‌ನಲ್ಲಿದ್ದನು. ಸಮಸ್ಯೆ ಏನು ಎಂದು ಕೇಳಿದರೂ ಅವನು ಏನು ಹೇಳುತ್ತಿರಲಿಲ್ಲ. ಅವನೇ ಮದುವೆ ಮಾಡಿ ಎಂದು ಹೇಳಿದ್ದನು. ಹೀಗಾಗಿ ಆರು ತಿಂಗಳಿನಿಂದ ಅವನಿಗೆ ಹುಡುಗಿ ಹುಡುಕುತ್ತಿದ್ದೆವು. ಕೆಲವು ಹುಡುಗಿಯರ ಫೋಟೊವನ್ನು ತೋರಿಸಿದ್ದೇವೆ. ಅವನು ಯಾವುದೇ ಗುತ್ತಿಗೆದಾರನಲ್ಲ ಯಾವುದೇ ಲೈಸೆನ್ಸ್ ಇಲ್ಲ. ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ನಮಗೆ ಪಿತ್ರಾರ್ಜಿತ ಆಸ್ತಿನೇ ಇದೆ. ನಾವು ನೋವಿನಲ್ಲಿದ್ದೇವೆ, ನಮಗೆ ಯಾಕೆ ಈ ರೀತಿ ಮಾಡುತ್ತಿದ್ದಾರೆ ತಿಳಿದಿಲ್ಲ. ಆತನ ರೂಮಿನಲ್ಲಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...