Homeಕರ್ನಾಟಕಗುತ್ತಿಗೆದಾರ ಆತ್ಮಹತ್ಯೆ ಎಂದು ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮಗಳು: ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ- ತಂದೆ ಸ್ಪಷ್ಟನೆ

ಗುತ್ತಿಗೆದಾರ ಆತ್ಮಹತ್ಯೆ ಎಂದು ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮಗಳು: ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ- ತಂದೆ ಸ್ಪಷ್ಟನೆ

- Advertisement -
- Advertisement -

ಬೆಂಗಳೂರಿನ ವಿಜಯನಗರದಲ್ಲಿ ಮಾಜಿ ಕಾರ್ಪೋರೇಟರ್‌ ಪುತ್ರ ಗೌತಮ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕೆಲವು ಮಾಧ್ಯಮಗಳು ಕಾಮಗಾರಿಯ ಬಿಲ್ ಪಾವತಿಸದಿದ್ದಕ್ಕೆ ಬಿಬಿಎಂಪಿ ಗುತ್ತೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಬಿತ್ತರಿಸಿದ್ದವು. ಆದರೆ ಆತ ಗುತ್ತಿಗೆದಾರನೇ ಅಲ್ಲ ತನ್ನ ವೈಯಕ್ತಿಕ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಗೌತಮ್ ಅವರ ತಂದೆಯೇ ಸ್ಪಷ್ಟನೆ ನೀಡಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸಿದ ವಾಹಿನಿ

ಗೌತಮ್‌ ವಿಜಯನಗರದ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿಯೇ (ಆ.09) ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದರು. ಇವರು ಅತ್ತಿಗುಪ್ಪೆಯ ಮಾಜಿ ಕಾರ್ಪೋರೇಟರ್ ದೊಡ್ಡಯ್ಯರ ಅವರ ಮಗನಾಗಿದ್ದು, ಇದೀಗ ಅವರೇ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣ ಏನು ಎಂಬುದನ್ನು ಗೌತಮ್ ಅವರ ತಂದೆ ಹಾಗೂ ಮಾವ ಆನಂದ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮೃತ ಗೌತಮ್ ಅವರ ಮಾವ ಆನಂದ್, ”ನಾವು ಕಾಂಗ್ರೆಸ್ ಪಕ್ಷದವರು ನಮ್ಮ ವಿರುದ್ಧ ಬಿಜೆಪಿಯವರು ಪಿತೂರಿ ಮಾಡಿದ್ದಾರೆ. ಗೌತಮ್ ಯಾವುದೇ ಗುತ್ತಿಗೆದಾರನಲ್ಲ. ಅವರ ಹೆಸರಲ್ಲಿ ಯಾವುದೇ ಪರವಾನಗಿ ಇಲ್ಲ. ಗೌತಮ್ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌತಮ್‌ಗೆ ಮದುವೆ ಮಾಡಲು ಎರಡು ತಿಂಗಳಿಂದ ಹೆಣ್ಣು ಹುಡುಕುತ್ತಿದ್ದವಿ. ಗುತ್ತಿಗೆದಾರ ಆತ್ಮಹತ್ಯೆಗೆ ಶರಣು ಎಂಬುದೆಲ್ಲ ಸುಳ್ಳು ಬಿಜೆಪಿಯವರು ಪಿತೂರಿ ಮಾಡಿ ಸುಳ್ಳು ಮಾಹಿತಿ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

”ಗುರುವಾರ ಮಧ್ಯಾಹ್ನ ಊಟಕ್ಕೆ ಕರೆಯಲು ಹೋದಾಗ ನಮಗೆ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಬಂದಿದೆ” ಎಂದು ಗೌತಮ್ ತಂದೆ ಮಾಜಿ ಕಾರ್ಪೋರೇಟರ್ ದೊಡ್ಡಯ್ಯ ಹೇಳಿದ್ದಾರೆ.

”ರೂಮ್ ಲಾಕ್ ಆಗಿದ್ದರಿಂದ ಗೌತಮ್‌ ಫೋನ್‌ಗೆ ಕರೆ ಮಾಡಲಾಗಿತ್ತು. ಆದರೆ ತೆರೆಯದೆ ಇದ್ದಾಗ ಅನುಮಾನ ಬಂತು. ಬಾಗಿಲಿಂದ ವಾಸನೆ ಬರುತ್ತಿತ್ತು. ಬಾಗಿಲು ಹೊಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ” ಎಂದು ಅವರು ಹೇಳಿದರು.

”ಆತ ನಾಲ್ಕು ಐದು ತಿಂಗಳಿನಿಂದ ಡಿಪ್ರೆಷನ್‌ನಲ್ಲಿದ್ದನು. ಸಮಸ್ಯೆ ಏನು ಎಂದು ಕೇಳಿದರೂ ಅವನು ಏನು ಹೇಳುತ್ತಿರಲಿಲ್ಲ. ಅವನೇ ಮದುವೆ ಮಾಡಿ ಎಂದು ಹೇಳಿದ್ದನು. ಹೀಗಾಗಿ ಆರು ತಿಂಗಳಿನಿಂದ ಅವನಿಗೆ ಹುಡುಗಿ ಹುಡುಕುತ್ತಿದ್ದೆವು. ಕೆಲವು ಹುಡುಗಿಯರ ಫೋಟೊವನ್ನು ತೋರಿಸಿದ್ದೇವೆ. ಅವನು ಯಾವುದೇ ಗುತ್ತಿಗೆದಾರನಲ್ಲ ಯಾವುದೇ ಲೈಸೆನ್ಸ್ ಇಲ್ಲ. ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ನಮಗೆ ಪಿತ್ರಾರ್ಜಿತ ಆಸ್ತಿನೇ ಇದೆ. ನಾವು ನೋವಿನಲ್ಲಿದ್ದೇವೆ, ನಮಗೆ ಯಾಕೆ ಈ ರೀತಿ ಮಾಡುತ್ತಿದ್ದಾರೆ ತಿಳಿದಿಲ್ಲ. ಆತನ ರೂಮಿನಲ್ಲಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...