Homeಡೇಟಾ ಖೋಲಿಡೇಟಾ ಖೋಲಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-2

ಡೇಟಾ ಖೋಲಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-2

- Advertisement -
- Advertisement -

ಅರಿಸ್ಟಾಟಲ್ ಅಂತ್ ಒಬ್ಬ ಇದ್ದ. ಸುಮಾರು 2370 ವರ್ಷದ ಹಿಂದೆ. ಆ ಪುಣ್ಯಾತ್ಮ ಒಂದು ಮಾತು ಹೇಳಿ ಹೋದ. “ಅನೇಕ ಸಣ್ಣ ಸಣ್ಣ ವಸ್ತುಗಳು ಒಂದಕ್ಕೊಂದು ಸೇರುವುದರಿಂದ ಒಂದು ದೊಡ್ಡ ವಸ್ತು ಆಗಿರುತ್ತದೆ. ಆದರೆ ತನ್ನೊಳಗಿನ ಭಾಗಗಳಿಂದ ಆದ ಆ ದೊಡ್ಡ ವಸ್ತು, ತನ್ನ ಸಣ್ಣ ಸಣ್ಣ ಭಾಗಗಳ ಒಟ್ಟು ಮೊತ್ತಕ್ಕಿಂತ ಭಿನ್ನವಾಗಿರುತ್ತದೆ” ಎಂದು.

ಆದ್ರ ಆನಂತರ ಬಂದ ಕೆಲ ಮಹಾನುಭಾವರು ಅದನ್ನ ಬದಲು ಮಾಡಿದರು: “ಆ ದೊಡ್ಡ ವಸ್ತು, ತನ್ನ ಸಣ್ಣ ಸಣ್ಣ ಭಾಗಗಳ ಒಟ್ಟು ಮೊತ್ತಕ್ಕಿಂತ ದೊಡ್ಡದಾಗಿರುತ್ತದೆ” ಅಂತ. ಕೇವಲ ಒಂದು ಪದ ಬದಲಿ ಮಾಡಿದ್ರ ಎಷ್ಟು ಅಪಾರ್ಥ ಆಗತಾದ ಅನ್ನೋದು ಇದರಿಂದಾ ಗೊತ್ತಾಗ್ತದ.

ಇದನ್ನ ಗೆಸ್ಟಾಲ್ಟ್ ನಿಯಮ ಅಂತ ಕರೆದರು. ಗೆಸ್ಟಾಲ್ಟ್ ಅನ್ನೋದಕ್ಕ ಕನ್ನಡದೊಳಗ ರೂಪ, ಆಕಾರ ಅಂತ ಕರಿಯಬಹುದು.

ಹಂಗಾರ 20ನೆ ಶತಮಾನದ ಮರಿ ಅರಿಸ್ಟಾಟಲ್‌ಗಳು ರೂಪಿಸಿದ ‘ಗೆಸ್ಟಾಲ್ಟ್ ಥೆರಪಿ’ ಅಥವ ‘ಆಕಾರ ಸಿದ್ಧಾಂಥದ ರೋಗ ನಿದಾನ’ದ ಅರ್ಥ ಏನು? ಸರಳವಾಗಿ ಹೇಳೋದಾದರ, ಒಬ್ಬ ಮನುಷ್ಯನ ವ್ಯಕ್ತಿತ್ವ ತನ್ನ ದೇಹ-ಮನಸ್ಸು-ಸ್ವಂತ ವಿಚಾರ, ಹೊರಗಿನ ಪ್ರಭಾವ, ಸುತ್ತಲಿನ ಪರಿಸ್ಥಿತಿ, ಎಲ್ಲಾ ಸೇರಿ ಆಗಿರ್ತದ. ಈ ರೀತಿ ರೂಪುಗೊಂಡಿರುವುದನ್ನ ವ್ಯಕ್ತಿತ್ವ ಅನ್ನುವುದು. ಒಬ್ಬನ ಸ್ವಭಾವದ ಭಾಗಗಳಾದ ದೇಹ, ಮನಸ್ಸು, ವಿಚಾರ, ಪ್ರಭಾವ, ಪರಿಸ್ಥಿತಿ ಮುಂತಾದವುಗಳ ಒಟ್ಟು ಮೊತ್ತಕ್ಕಿಂತ ಅದು ದೊಡ್ಡದು ಅಂತ ಅವರು ವಾದಿಸಿದರು. ಆ ಮನೋವಿಜ್ಞಾನಿಗಳ ಗುಂಪಿನಲ್ಲಿ ವಿಲ್ಲ್ಹೆಲ್ಮ್ ಉಂಟ್, ಕರ್ಟ್ ಕೊಫ್ಕಾ, ಮ್ಯಾಕ್ಸ್
ವೆರ್ಥೆಮೆರ್, ಫ್ರಿಟ್ಸ್ ಪೆರ್ಲ್ಸ್, ವೂಲ್ಫ್‌ಗ್ಯಾಂಗ್ ಕೊಹ್ಲರ್, ಇತ್ಯಾದಿಗಳು ಇದ್ದರು.
ಅವರು ಪಾಪ ತಮ್ಮ ಕ್ಷೇತ್ರಕ್ಕ ತಮ್ಮ ಕೊಡುಗೆ ಕೊಟ್ಟರು, ಹೋದರು. ಆ ಸಿದ್ಧಾಂತ ಪಾಲಿಸೋ ವಿದ್ವಾಂಸರು ಈಗಲೂ ಇದ್ದಾರ.

ಆದರ ಪ್ರಾಚೀನ ಕಾಲದಿಂದಲೂ ನಮ್ಮ ಕಣ್ಣಿಗೆ ಕಾಣುವ ಜಗತ್ತಿನ ವಿಶ್ವ ಗುರು ಆಗಿರುವ ಭಾರತದ ಕೆಲವು ತಜ್ಞರು ಈ ಗೆಸ್ಟಾಲ್ಟ್ ಸಿದ್ಧಾಂತವನ್ನು ಹೊಸ ಕಣ್ಣಿನಿಂದ ನೋಡಿದರು. ಅದು ಅನ್ವಯ ಆಗುವುದು ನಮ್ಮ ದೇಹಕ್ಕೆ ಅಲ್ಲಾ, ನಮ್ಮ ದೇಶಕ್ಕೆ ಅಂತ ಚೀರಿ ಹೇಳಿದರು.

ಅವ್ರ ಪ್ರಕಾರ ಭಾರತ ಎಂಬೋ ರಾಷ್ಟ್ರ, ಎಲ್ಲಾ ರಾಜ್ಯಗಳ ಒಟ್ಟು ಮೊತ್ತಕ್ಕಿಂತಲೂ ದೊಡ್ಡದು, ಭವ್ಯವಾದದ್ದು. ಭಾರತ ಅನ್ನುವುದು ಕೇವಲ ರಾಜ್ಯಗಳ ಸಮೂಹ ಅಲ್ಲ, ಅದು ಅದಕ್ಕಿಂತಲೂ ದೊಡ್ಡದು, ಭಿನ್ನವಾದದ್ದು, ಭವ್ಯವಾದದ್ದು. ಒಟ್ಟಿನಲ್ಲಿ ಇದು ಒಕ್ಕೂಟ ಅಲ್ಲ, ಸಂಯುಕ್ತ ಸಂಘ ಅಲ್ಲ, ಕೇವಲ ರಾಜ್ಯಗಳ ಒಂದು ಗುಂಪು. ಹೀಗಾಗಿ, ದೇಶದ ಅಸ್ಮಿತೆ ಅನ್ನೋದು ದೊಡ್ಡದು. ರಾಜ್ಯಗಳ ಅನನ್ಯತೆ ಅಥವಾ ತನ್ನತನ ಅನ್ನೋದು ಯಾವ ಲೆಕ್ಕಕ್ಕೂ ಇಲ್ಲ.

ಈ ಪೀಠಿಕೆಯ ನಂತರ ನಮ್ಮ ವಿಷಯಕ್ಕ ಬರೋಣ. ಅದು ಮಾಧ್ಯಮ ನಲ್ಲರ ಬಗ್ಗೆ. ಈ ಹೊತ್ತಿನ ಮಾಧ್ಯಮ ನಲ್ಲರು ಯಾರು ಅಂದರ ಸದಾ ಸುದ್ದಿಯಲ್ಲಿ ಇರುವ ಕೆಲ ರಾಜ್ಯದ ಮುಖ್ಯ ಮಂತ್ರಿಗಳು. ಸುದ್ದಿ ಎನ್ನುವುದು ನಮ್ಮ ದೇಶದಾಗ ಬಹಳ ತಟಸ್ಥ ಹಾಗೂ ಯಾವ ಪಕ್ಷಕ್ಕೂ ಸೇರದೆ ಇರೋದರಿಂದ ಅವರು ಒಳ್ಳೆ ಕೆಲಸ ಮಾಡಿದಾಗ ಅಥವ ಕೆಟ್ಟ ಕೆಲಸ ಮಾಡಿದಾಗ ಅವರು ಸುದ್ದಿ ಮಾಡ್ತಾರ.

ಅದರೊಳಗ ಕೆಲವು ಹೆಸರು – ಅರವಿಂದ ಕೇಜ್ರಿವಾಲ್, ಮಮತಾ ಬ್ಯಾನರ್ಜಿ, ಪಿನರಾಯಿ ವಿಜಯನ್, ಹೇಮಂತ್ ಸೊರೆನ್, ಅಜಯ್ ಸಿಂಗ್ ಬಿಸ್ಟ್ ಅಲಿಯಾಸ್ ಯೋಗಿ ಆದಿತ್ಯನಾಥ್, ಬಿ ಎಸ್ ಯಡಿಯೂರಪ್ಪ, ಇತ್ಯಾದಿ. ಇವರು ಜಾಸ್ತಿ ಹೆಸರು ಮಾಡಿದಾಗಲೆಲ್ಲಾ ಪಂಥ ಪ್ರಧಾನ ಸೇವಕರ ಹೆಸರು ಮರೆ ಆಗಲಿಕ್ಕೆ ಸುರು ಆಗೇದ ಅಂತ ಕೆಲವರಿಗೆ ಚಡಪಡಿಕೆ ಆಗಲಿಕ್ಕೆ ಸುರು ಆಗ್ತದ. ಅವರು ಏನು ಸಣ್ಣ ಸಣ್ಣವರಿಗೆಲ್ಲಾ ಪ್ರಾಮುಖ್ಯತೆ ಕೊಡೋದು? ದೊಡ್ಡವರನ್ನ ಮರೆತರೆ ಹೆಂಗ? ಅಂತ ಜೋರಾಗಿ ಹೇಳ್ತಾರ, “ನಿನ್ನ ಬಿಟ್ಟು ಬೇರೆ ದೇವರನ್ನು ಪೂಜಿಸಿದೊಡೆ ಎಂತಯ್ಯಾ?” ಅಂತ ಗೋಳಾಡುತ್ತಾರೆ. ಅವರ ಮನಸ್ಸಿನಾಗ ಎರಡು ತಪ್ಪು ಕಲ್ಪನೆಗಳು ಇರಬಹುದು. ಒಂದು ಪ್ರಧಾನಿ ಪಟ್ಟ ಅನ್ನೋದು ಸರ್ವ ಪ್ರಥಮ ಪ್ರಮುಖ ಅನ್ನೋದು, ಇನ್ನೊಂದು ರಾಜ್ಯಗಳು ಕನಿಷ್ಠ, ದೇಶ ಶ್ರೇಷ್ಠ ಅನ್ನೋದು. ಅವರೆಲ್ಲ ನಮ್ಮ ಕಾಲದ ಗೆಸ್ಟಾಲ್ಟ್ ನಂಬಿಕಸ್ಥರು.

ಅವರ ನಂಬಿಕೆ ತಪ್ಪು. ಅದಕ್ಕೆ ಯಾವುದೇ ಸಾಮಾಜಿಕ ವಿಜ್ಞಾನದ ಆಧಾರ ಇಲ್ಲ. ಮನೋವಿಜ್ಞಾನದ ಒಳಗ ಈ ವಿಚಾರಕ್ಕೆ ಮನ್ನಣೆ ಇರಬಹುದು. ಅದರಿಂದ ಬಹಳ ಜನ ಗುಣ ಆಗಿರಬಹುದು. ಆದರ ರಾಜ್ಯಶಾಸ್ತ್ರದೊಳಗ ಇದಕ್ಕೆ ಮನ್ನಣೆ ಇಲ್ಲ. ಇದು ಬಹು ಚರ್ಚಿತ ವಿಷಯ ಅಷ್ಟೇ ಅಲ್ಲ, ಬಹಳ ಜನ ಪಂಡಿತರಿಂದ ಟೀಕೆ-ನಿಂದನೆಗೆ ಒಳಗಾದ ವಿಷಯ. ರಾಜ್ಯಗಳ ಅನನ್ಯತೆ ಅನ್ನೋದು, ದೇಶದ ಅಸ್ಮಿತೆಗಿಂತ ದೊಡ್ಡದು. ರಾಜ್ಯಗಳಿಂದ ದೇಶಕ್ಕ ಪ್ರಾಮುಖ್ಯತೆ ಬರ್ತದ. ಉಲ್ಟಾ ಅಲ್ಲಾ.

ಇದಕ್ಕೆ ಒಂದು ಉದಾಹರಣೆ ಕೊಡೋಣ. 2015ರಲ್ಲಿ ಭಾರತದಿಂದ ಕಿರಿಯ ಐಪಿಎಸ್ ಅಧಿಕಾರಿಗಳ ತಂಡ ಅಮೆರಿಕ ದೇಶದ ಅಧ್ಯಯನ ಪ್ರವಾಸಕ್ಕ ಹೋಗಿತ್ತು. ಅವಾಗ ಅವರು ಅಲ್ಲಿನ ಕೆಲವು ಕೇಂದ್ರ ಪೊಲೀಸು ಪಡೆಗಳಾದ ಸಿಐಎ, ಎಫ್‌ಬಿಐ, ಐಆರ್‌ಎಸ್‌ಗಳ ಕಚೇರಿಗೆ ಕರಕೊಂಡು ಹೋದರು. ಆಮ್ಯಾಲೆ ಲಾಸ್ ಎಂಜಲಿಸ್, ಫ್ಲೋರಿಡಾ, ಕೆಂಟಕಿ, ನ್ಯುಯಾರ್ಕ್, ವಾಶಿಂಗ್‌ಟನ್ ಇತ್ಯಾದಿ ರಾಜ್ಯಗಳ ಪೊಲೀಸು ಅಧಿಕಾರಿಗಳ ಜೊತೆ ಭೇಟಿ ಮಾಡಿಸಿದರು.

ಅವಾಗ ಭಾರತೀಯ ಅಧಿಕಾರಿಗಳು ನಂಬಲಿಕ್ಕೆ ಸಾಧ್ಯವಿಲ್ಲದ ಎರಡು ವಿಷಯ ಅವರಿಗೆ ಗೊತ್ತಾತು. ಒಂದು ಅಲ್ಲಿ ಐಪಿಎಸ್ಸು-ಐಎಎಸ್ಸು ಅನ್ನೋದು ಇಲ್ಲ್ಲ.

ಇನ್ನೊಂದು ಅದು ಏನು ಅಂದರ ಅಮೆರಿಕ ದೇಶದಲ್ಲಿ ಕೇವಲ ಒಂದು ಪೊಲೀಸು ವ್ಯವಸ್ಥೆ ಇಲ್ಲ. ಅಲ್ಲೇ ಸುಮಾರು 19,000 ವಿವಿಧ ವ್ಯವಸ್ಥೆಗಳು ಇವೆ. ನಮ್ಮ ಊರಿನಲ್ಲಿ ಪೊಲೀಸು ಕೆಲಸ ಹೆಂಗ ಮಾಡಬೇಕು ಅನ್ನೋದು ನನಗೆ ಚನ್ನಾಗಿ ಗೊತ್ತಿರುತ್ತದೆ. ನನ್ನ ಊರಿಗೆ ಭೇಟಿಯೇ ನೀಡದ ವಾಶಿಂಗ್‌ಟನ್‌ನ ಹಿರಿಯ ಅಧಿಕಾರಿಗೆ ಏನು ಗೊತ್ತಿರ್ತದ ಮಣ್ಣು ಅಂತ ಅಲ್ಲಿನ ಪುಟ್ಟ ನಗರದ ಪೊಲೀಸು ಅಧಿಕಾರಿ ಒಬ್ಬ
ಇವರಿಗೆ ಹೇಳಿದ.

ಇದನ್ನ ಜೀರ್ಣಿಸಿಕೊಳ್ಳಲಿಕ್ಕೆ ಈಸ್ಟ್ ಇಂಡಿಯಾ ಕಂಪನಿಯ ಪಳೆಯುಳಿಕೆಗಳಾದ ನಮ್ಮ ಐಪಿಎಸ್ಸು ಅಧಿಕಾರಿಗಳಿಗೆ ಸಾಧ್ಯ ಆಗಲಿಲ್ಲ. ಅದು ಹೇಗೆ ಸಾಧ್ಯ, ನೀವು ನಮಗೆ ಸುಳ್ಳು ಹೇಳುತ್ತಿದ್ದೀರಿ ಅಂತ ಹೇಳಿ ಜೋರಾಗಿ ಜಗಳ ಮಾಡಿದರು. ಆಮ್ಯಾಲೆ ಅಲ್ಲಿಯೇ ನೆಲೆಸಿದ್ದ ಭಾರತಿಯ ಮೂಲದ ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರನ್ನ ಅಲ್ಲಿಯ ಪೊಲೀಸರು ಕರೆಸಿದರು. ಅವರು ಇವರಿಗೆ ತಿಳಿಸಿ ಹೇಳಿದರು. ನಿಮಗೆ ಸುಳ್ಳು ಹೇಳಿ ಇವರಿಗೆ ಯಾವ ಲಾಭವೂ ಇಲ್ಲ. ಇಲ್ಲೇ ಇರುವುದು ನೈಜ ಒಕ್ಕೂಟ ವ್ಯವಸ್ಥೆ. ಭಾರತದ ಒಕ್ಕೂಟ ವ್ಯವಸ್ಥೆ ಇರೋದು ಬರೀ ಕಾಗದದ ಮೇಲೆ ಅಂತ ಅವರು ತಿಳಿ ಹೇಳುವಾಗ ರಾತ್ರಿ ಆಗಿತ್ತು. ಎಲ್ಲರೂ ಊಟ ಮಾಡಿ ತಲೆನೋವಿನ ಮಾತ್ರೆ ತೊಗೊಂಡು ಮಲಗಿಕೊಂಡರು. ಅವರು ಮರಳಿ ಭಾರತಕ್ಕೆ ಬಂದರೂ ಕೂಡ ಅವರಿಗೆ ಅಲ್ಲಿನ ಪೊಲೀಸು ವ್ಯವಸ್ಥೆ ಅರ್ಥ ಅಗಲಿಲ್ಲ.

ಈ ಕಳೆದ ಐದಾರು ವರ್ಷದೊಳಗ ಎರಡು ಶಬ್ದ ಮತ್ತ ಮತ್ತ ಬಳಕೆ ಆಗಲಿಕ್ಕೆ ಹತ್ತಿದ್ದಾವು. ಅವು ಯಾವಪಾ ಅಂದ್ರ – ವಿಕೇಂದ್ರೀಕರಣ ಮತ್ತು ಒಕ್ಕೂಟ ವ್ಯವಸ್ಥೆ. ಅವು ನಮಗ ಈಗ ಎಷ್ಟು ಮುಖ್ಯ ಅಗ್ಯಾವು ಅನ್ನೋದು ನಾವು ತಿಳಕೊಬೇಕು. ಆ ದಿಕ್ಕಿನಾಗ ಇದು ಒಕ್ಕೂಟ ವ್ಯವಸ್ಥೆಯ ಪರಿಚಯದ ಪ್ರಯತ್ನ. ಉಳಿದದ್ದು ಮುಂದ ನೋಡೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...