Homeಡೇಟಾ ಖೋಲಿಡೇಟಾ ಖೋಲಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-2

ಡೇಟಾ ಖೋಲಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-2

- Advertisement -
- Advertisement -

ಅರಿಸ್ಟಾಟಲ್ ಅಂತ್ ಒಬ್ಬ ಇದ್ದ. ಸುಮಾರು 2370 ವರ್ಷದ ಹಿಂದೆ. ಆ ಪುಣ್ಯಾತ್ಮ ಒಂದು ಮಾತು ಹೇಳಿ ಹೋದ. “ಅನೇಕ ಸಣ್ಣ ಸಣ್ಣ ವಸ್ತುಗಳು ಒಂದಕ್ಕೊಂದು ಸೇರುವುದರಿಂದ ಒಂದು ದೊಡ್ಡ ವಸ್ತು ಆಗಿರುತ್ತದೆ. ಆದರೆ ತನ್ನೊಳಗಿನ ಭಾಗಗಳಿಂದ ಆದ ಆ ದೊಡ್ಡ ವಸ್ತು, ತನ್ನ ಸಣ್ಣ ಸಣ್ಣ ಭಾಗಗಳ ಒಟ್ಟು ಮೊತ್ತಕ್ಕಿಂತ ಭಿನ್ನವಾಗಿರುತ್ತದೆ” ಎಂದು.

ಆದ್ರ ಆನಂತರ ಬಂದ ಕೆಲ ಮಹಾನುಭಾವರು ಅದನ್ನ ಬದಲು ಮಾಡಿದರು: “ಆ ದೊಡ್ಡ ವಸ್ತು, ತನ್ನ ಸಣ್ಣ ಸಣ್ಣ ಭಾಗಗಳ ಒಟ್ಟು ಮೊತ್ತಕ್ಕಿಂತ ದೊಡ್ಡದಾಗಿರುತ್ತದೆ” ಅಂತ. ಕೇವಲ ಒಂದು ಪದ ಬದಲಿ ಮಾಡಿದ್ರ ಎಷ್ಟು ಅಪಾರ್ಥ ಆಗತಾದ ಅನ್ನೋದು ಇದರಿಂದಾ ಗೊತ್ತಾಗ್ತದ.

ಇದನ್ನ ಗೆಸ್ಟಾಲ್ಟ್ ನಿಯಮ ಅಂತ ಕರೆದರು. ಗೆಸ್ಟಾಲ್ಟ್ ಅನ್ನೋದಕ್ಕ ಕನ್ನಡದೊಳಗ ರೂಪ, ಆಕಾರ ಅಂತ ಕರಿಯಬಹುದು.

ಹಂಗಾರ 20ನೆ ಶತಮಾನದ ಮರಿ ಅರಿಸ್ಟಾಟಲ್‌ಗಳು ರೂಪಿಸಿದ ‘ಗೆಸ್ಟಾಲ್ಟ್ ಥೆರಪಿ’ ಅಥವ ‘ಆಕಾರ ಸಿದ್ಧಾಂಥದ ರೋಗ ನಿದಾನ’ದ ಅರ್ಥ ಏನು? ಸರಳವಾಗಿ ಹೇಳೋದಾದರ, ಒಬ್ಬ ಮನುಷ್ಯನ ವ್ಯಕ್ತಿತ್ವ ತನ್ನ ದೇಹ-ಮನಸ್ಸು-ಸ್ವಂತ ವಿಚಾರ, ಹೊರಗಿನ ಪ್ರಭಾವ, ಸುತ್ತಲಿನ ಪರಿಸ್ಥಿತಿ, ಎಲ್ಲಾ ಸೇರಿ ಆಗಿರ್ತದ. ಈ ರೀತಿ ರೂಪುಗೊಂಡಿರುವುದನ್ನ ವ್ಯಕ್ತಿತ್ವ ಅನ್ನುವುದು. ಒಬ್ಬನ ಸ್ವಭಾವದ ಭಾಗಗಳಾದ ದೇಹ, ಮನಸ್ಸು, ವಿಚಾರ, ಪ್ರಭಾವ, ಪರಿಸ್ಥಿತಿ ಮುಂತಾದವುಗಳ ಒಟ್ಟು ಮೊತ್ತಕ್ಕಿಂತ ಅದು ದೊಡ್ಡದು ಅಂತ ಅವರು ವಾದಿಸಿದರು. ಆ ಮನೋವಿಜ್ಞಾನಿಗಳ ಗುಂಪಿನಲ್ಲಿ ವಿಲ್ಲ್ಹೆಲ್ಮ್ ಉಂಟ್, ಕರ್ಟ್ ಕೊಫ್ಕಾ, ಮ್ಯಾಕ್ಸ್
ವೆರ್ಥೆಮೆರ್, ಫ್ರಿಟ್ಸ್ ಪೆರ್ಲ್ಸ್, ವೂಲ್ಫ್‌ಗ್ಯಾಂಗ್ ಕೊಹ್ಲರ್, ಇತ್ಯಾದಿಗಳು ಇದ್ದರು.
ಅವರು ಪಾಪ ತಮ್ಮ ಕ್ಷೇತ್ರಕ್ಕ ತಮ್ಮ ಕೊಡುಗೆ ಕೊಟ್ಟರು, ಹೋದರು. ಆ ಸಿದ್ಧಾಂತ ಪಾಲಿಸೋ ವಿದ್ವಾಂಸರು ಈಗಲೂ ಇದ್ದಾರ.

ಆದರ ಪ್ರಾಚೀನ ಕಾಲದಿಂದಲೂ ನಮ್ಮ ಕಣ್ಣಿಗೆ ಕಾಣುವ ಜಗತ್ತಿನ ವಿಶ್ವ ಗುರು ಆಗಿರುವ ಭಾರತದ ಕೆಲವು ತಜ್ಞರು ಈ ಗೆಸ್ಟಾಲ್ಟ್ ಸಿದ್ಧಾಂತವನ್ನು ಹೊಸ ಕಣ್ಣಿನಿಂದ ನೋಡಿದರು. ಅದು ಅನ್ವಯ ಆಗುವುದು ನಮ್ಮ ದೇಹಕ್ಕೆ ಅಲ್ಲಾ, ನಮ್ಮ ದೇಶಕ್ಕೆ ಅಂತ ಚೀರಿ ಹೇಳಿದರು.

ಅವ್ರ ಪ್ರಕಾರ ಭಾರತ ಎಂಬೋ ರಾಷ್ಟ್ರ, ಎಲ್ಲಾ ರಾಜ್ಯಗಳ ಒಟ್ಟು ಮೊತ್ತಕ್ಕಿಂತಲೂ ದೊಡ್ಡದು, ಭವ್ಯವಾದದ್ದು. ಭಾರತ ಅನ್ನುವುದು ಕೇವಲ ರಾಜ್ಯಗಳ ಸಮೂಹ ಅಲ್ಲ, ಅದು ಅದಕ್ಕಿಂತಲೂ ದೊಡ್ಡದು, ಭಿನ್ನವಾದದ್ದು, ಭವ್ಯವಾದದ್ದು. ಒಟ್ಟಿನಲ್ಲಿ ಇದು ಒಕ್ಕೂಟ ಅಲ್ಲ, ಸಂಯುಕ್ತ ಸಂಘ ಅಲ್ಲ, ಕೇವಲ ರಾಜ್ಯಗಳ ಒಂದು ಗುಂಪು. ಹೀಗಾಗಿ, ದೇಶದ ಅಸ್ಮಿತೆ ಅನ್ನೋದು ದೊಡ್ಡದು. ರಾಜ್ಯಗಳ ಅನನ್ಯತೆ ಅಥವಾ ತನ್ನತನ ಅನ್ನೋದು ಯಾವ ಲೆಕ್ಕಕ್ಕೂ ಇಲ್ಲ.

ಈ ಪೀಠಿಕೆಯ ನಂತರ ನಮ್ಮ ವಿಷಯಕ್ಕ ಬರೋಣ. ಅದು ಮಾಧ್ಯಮ ನಲ್ಲರ ಬಗ್ಗೆ. ಈ ಹೊತ್ತಿನ ಮಾಧ್ಯಮ ನಲ್ಲರು ಯಾರು ಅಂದರ ಸದಾ ಸುದ್ದಿಯಲ್ಲಿ ಇರುವ ಕೆಲ ರಾಜ್ಯದ ಮುಖ್ಯ ಮಂತ್ರಿಗಳು. ಸುದ್ದಿ ಎನ್ನುವುದು ನಮ್ಮ ದೇಶದಾಗ ಬಹಳ ತಟಸ್ಥ ಹಾಗೂ ಯಾವ ಪಕ್ಷಕ್ಕೂ ಸೇರದೆ ಇರೋದರಿಂದ ಅವರು ಒಳ್ಳೆ ಕೆಲಸ ಮಾಡಿದಾಗ ಅಥವ ಕೆಟ್ಟ ಕೆಲಸ ಮಾಡಿದಾಗ ಅವರು ಸುದ್ದಿ ಮಾಡ್ತಾರ.

ಅದರೊಳಗ ಕೆಲವು ಹೆಸರು – ಅರವಿಂದ ಕೇಜ್ರಿವಾಲ್, ಮಮತಾ ಬ್ಯಾನರ್ಜಿ, ಪಿನರಾಯಿ ವಿಜಯನ್, ಹೇಮಂತ್ ಸೊರೆನ್, ಅಜಯ್ ಸಿಂಗ್ ಬಿಸ್ಟ್ ಅಲಿಯಾಸ್ ಯೋಗಿ ಆದಿತ್ಯನಾಥ್, ಬಿ ಎಸ್ ಯಡಿಯೂರಪ್ಪ, ಇತ್ಯಾದಿ. ಇವರು ಜಾಸ್ತಿ ಹೆಸರು ಮಾಡಿದಾಗಲೆಲ್ಲಾ ಪಂಥ ಪ್ರಧಾನ ಸೇವಕರ ಹೆಸರು ಮರೆ ಆಗಲಿಕ್ಕೆ ಸುರು ಆಗೇದ ಅಂತ ಕೆಲವರಿಗೆ ಚಡಪಡಿಕೆ ಆಗಲಿಕ್ಕೆ ಸುರು ಆಗ್ತದ. ಅವರು ಏನು ಸಣ್ಣ ಸಣ್ಣವರಿಗೆಲ್ಲಾ ಪ್ರಾಮುಖ್ಯತೆ ಕೊಡೋದು? ದೊಡ್ಡವರನ್ನ ಮರೆತರೆ ಹೆಂಗ? ಅಂತ ಜೋರಾಗಿ ಹೇಳ್ತಾರ, “ನಿನ್ನ ಬಿಟ್ಟು ಬೇರೆ ದೇವರನ್ನು ಪೂಜಿಸಿದೊಡೆ ಎಂತಯ್ಯಾ?” ಅಂತ ಗೋಳಾಡುತ್ತಾರೆ. ಅವರ ಮನಸ್ಸಿನಾಗ ಎರಡು ತಪ್ಪು ಕಲ್ಪನೆಗಳು ಇರಬಹುದು. ಒಂದು ಪ್ರಧಾನಿ ಪಟ್ಟ ಅನ್ನೋದು ಸರ್ವ ಪ್ರಥಮ ಪ್ರಮುಖ ಅನ್ನೋದು, ಇನ್ನೊಂದು ರಾಜ್ಯಗಳು ಕನಿಷ್ಠ, ದೇಶ ಶ್ರೇಷ್ಠ ಅನ್ನೋದು. ಅವರೆಲ್ಲ ನಮ್ಮ ಕಾಲದ ಗೆಸ್ಟಾಲ್ಟ್ ನಂಬಿಕಸ್ಥರು.

ಅವರ ನಂಬಿಕೆ ತಪ್ಪು. ಅದಕ್ಕೆ ಯಾವುದೇ ಸಾಮಾಜಿಕ ವಿಜ್ಞಾನದ ಆಧಾರ ಇಲ್ಲ. ಮನೋವಿಜ್ಞಾನದ ಒಳಗ ಈ ವಿಚಾರಕ್ಕೆ ಮನ್ನಣೆ ಇರಬಹುದು. ಅದರಿಂದ ಬಹಳ ಜನ ಗುಣ ಆಗಿರಬಹುದು. ಆದರ ರಾಜ್ಯಶಾಸ್ತ್ರದೊಳಗ ಇದಕ್ಕೆ ಮನ್ನಣೆ ಇಲ್ಲ. ಇದು ಬಹು ಚರ್ಚಿತ ವಿಷಯ ಅಷ್ಟೇ ಅಲ್ಲ, ಬಹಳ ಜನ ಪಂಡಿತರಿಂದ ಟೀಕೆ-ನಿಂದನೆಗೆ ಒಳಗಾದ ವಿಷಯ. ರಾಜ್ಯಗಳ ಅನನ್ಯತೆ ಅನ್ನೋದು, ದೇಶದ ಅಸ್ಮಿತೆಗಿಂತ ದೊಡ್ಡದು. ರಾಜ್ಯಗಳಿಂದ ದೇಶಕ್ಕ ಪ್ರಾಮುಖ್ಯತೆ ಬರ್ತದ. ಉಲ್ಟಾ ಅಲ್ಲಾ.

ಇದಕ್ಕೆ ಒಂದು ಉದಾಹರಣೆ ಕೊಡೋಣ. 2015ರಲ್ಲಿ ಭಾರತದಿಂದ ಕಿರಿಯ ಐಪಿಎಸ್ ಅಧಿಕಾರಿಗಳ ತಂಡ ಅಮೆರಿಕ ದೇಶದ ಅಧ್ಯಯನ ಪ್ರವಾಸಕ್ಕ ಹೋಗಿತ್ತು. ಅವಾಗ ಅವರು ಅಲ್ಲಿನ ಕೆಲವು ಕೇಂದ್ರ ಪೊಲೀಸು ಪಡೆಗಳಾದ ಸಿಐಎ, ಎಫ್‌ಬಿಐ, ಐಆರ್‌ಎಸ್‌ಗಳ ಕಚೇರಿಗೆ ಕರಕೊಂಡು ಹೋದರು. ಆಮ್ಯಾಲೆ ಲಾಸ್ ಎಂಜಲಿಸ್, ಫ್ಲೋರಿಡಾ, ಕೆಂಟಕಿ, ನ್ಯುಯಾರ್ಕ್, ವಾಶಿಂಗ್‌ಟನ್ ಇತ್ಯಾದಿ ರಾಜ್ಯಗಳ ಪೊಲೀಸು ಅಧಿಕಾರಿಗಳ ಜೊತೆ ಭೇಟಿ ಮಾಡಿಸಿದರು.

ಅವಾಗ ಭಾರತೀಯ ಅಧಿಕಾರಿಗಳು ನಂಬಲಿಕ್ಕೆ ಸಾಧ್ಯವಿಲ್ಲದ ಎರಡು ವಿಷಯ ಅವರಿಗೆ ಗೊತ್ತಾತು. ಒಂದು ಅಲ್ಲಿ ಐಪಿಎಸ್ಸು-ಐಎಎಸ್ಸು ಅನ್ನೋದು ಇಲ್ಲ್ಲ.

ಇನ್ನೊಂದು ಅದು ಏನು ಅಂದರ ಅಮೆರಿಕ ದೇಶದಲ್ಲಿ ಕೇವಲ ಒಂದು ಪೊಲೀಸು ವ್ಯವಸ್ಥೆ ಇಲ್ಲ. ಅಲ್ಲೇ ಸುಮಾರು 19,000 ವಿವಿಧ ವ್ಯವಸ್ಥೆಗಳು ಇವೆ. ನಮ್ಮ ಊರಿನಲ್ಲಿ ಪೊಲೀಸು ಕೆಲಸ ಹೆಂಗ ಮಾಡಬೇಕು ಅನ್ನೋದು ನನಗೆ ಚನ್ನಾಗಿ ಗೊತ್ತಿರುತ್ತದೆ. ನನ್ನ ಊರಿಗೆ ಭೇಟಿಯೇ ನೀಡದ ವಾಶಿಂಗ್‌ಟನ್‌ನ ಹಿರಿಯ ಅಧಿಕಾರಿಗೆ ಏನು ಗೊತ್ತಿರ್ತದ ಮಣ್ಣು ಅಂತ ಅಲ್ಲಿನ ಪುಟ್ಟ ನಗರದ ಪೊಲೀಸು ಅಧಿಕಾರಿ ಒಬ್ಬ
ಇವರಿಗೆ ಹೇಳಿದ.

ಇದನ್ನ ಜೀರ್ಣಿಸಿಕೊಳ್ಳಲಿಕ್ಕೆ ಈಸ್ಟ್ ಇಂಡಿಯಾ ಕಂಪನಿಯ ಪಳೆಯುಳಿಕೆಗಳಾದ ನಮ್ಮ ಐಪಿಎಸ್ಸು ಅಧಿಕಾರಿಗಳಿಗೆ ಸಾಧ್ಯ ಆಗಲಿಲ್ಲ. ಅದು ಹೇಗೆ ಸಾಧ್ಯ, ನೀವು ನಮಗೆ ಸುಳ್ಳು ಹೇಳುತ್ತಿದ್ದೀರಿ ಅಂತ ಹೇಳಿ ಜೋರಾಗಿ ಜಗಳ ಮಾಡಿದರು. ಆಮ್ಯಾಲೆ ಅಲ್ಲಿಯೇ ನೆಲೆಸಿದ್ದ ಭಾರತಿಯ ಮೂಲದ ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರನ್ನ ಅಲ್ಲಿಯ ಪೊಲೀಸರು ಕರೆಸಿದರು. ಅವರು ಇವರಿಗೆ ತಿಳಿಸಿ ಹೇಳಿದರು. ನಿಮಗೆ ಸುಳ್ಳು ಹೇಳಿ ಇವರಿಗೆ ಯಾವ ಲಾಭವೂ ಇಲ್ಲ. ಇಲ್ಲೇ ಇರುವುದು ನೈಜ ಒಕ್ಕೂಟ ವ್ಯವಸ್ಥೆ. ಭಾರತದ ಒಕ್ಕೂಟ ವ್ಯವಸ್ಥೆ ಇರೋದು ಬರೀ ಕಾಗದದ ಮೇಲೆ ಅಂತ ಅವರು ತಿಳಿ ಹೇಳುವಾಗ ರಾತ್ರಿ ಆಗಿತ್ತು. ಎಲ್ಲರೂ ಊಟ ಮಾಡಿ ತಲೆನೋವಿನ ಮಾತ್ರೆ ತೊಗೊಂಡು ಮಲಗಿಕೊಂಡರು. ಅವರು ಮರಳಿ ಭಾರತಕ್ಕೆ ಬಂದರೂ ಕೂಡ ಅವರಿಗೆ ಅಲ್ಲಿನ ಪೊಲೀಸು ವ್ಯವಸ್ಥೆ ಅರ್ಥ ಅಗಲಿಲ್ಲ.

ಈ ಕಳೆದ ಐದಾರು ವರ್ಷದೊಳಗ ಎರಡು ಶಬ್ದ ಮತ್ತ ಮತ್ತ ಬಳಕೆ ಆಗಲಿಕ್ಕೆ ಹತ್ತಿದ್ದಾವು. ಅವು ಯಾವಪಾ ಅಂದ್ರ – ವಿಕೇಂದ್ರೀಕರಣ ಮತ್ತು ಒಕ್ಕೂಟ ವ್ಯವಸ್ಥೆ. ಅವು ನಮಗ ಈಗ ಎಷ್ಟು ಮುಖ್ಯ ಅಗ್ಯಾವು ಅನ್ನೋದು ನಾವು ತಿಳಕೊಬೇಕು. ಆ ದಿಕ್ಕಿನಾಗ ಇದು ಒಕ್ಕೂಟ ವ್ಯವಸ್ಥೆಯ ಪರಿಚಯದ ಪ್ರಯತ್ನ. ಉಳಿದದ್ದು ಮುಂದ ನೋಡೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...