Homeಮುಖಪುಟಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಇಂದು ಹೋರಾಟ ನಿರತ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿದರು. ರೈತರ ಒಂದು ಗುಂಪು ಉದ್ದೇಶಿತ ಮಾರ್ಗ ಬಿಟ್ಟು ಕೆಂಪು ಕೋಟೆಗೆ ರ್ಯಾಲಿ ನಡೆಸಿತು. ಅಲ್ಲದೇ ಕೋಟೆಯ ಮೇಲೆ ಹತ್ತಿದ ರೈತರು ರೈತ ಧ್ವಜ ಮತ್ತು ಸಿಖ್ ರಿಗೆ ಪವಿತ್ರ ಎಂದು ಭಾವಿಸುವ ನಿಶಾನ್ ಸಾಹಿಬ್ ಧ್ವಜ ಹಾರಿಸಿದರು. ಆದರೆ ಕೆಲ ಮಾಧ್ಯಮಗಳು ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿದೆ ಎಂದು ಆರೋಪಿಸಿ ಸುಳ್ಳು ಸುದ್ದಿ ಮಾಡಿವೆ.

ಟೈಮ್ಸ್ ನೌ ಆಂಗ್ಲ ಮಾಧ್ಯಮ “ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿದೆ, ರೈತರು ಭಾರತದ ರಾಷ್ಟ್ರ ಚಿಹ್ನೆಗಳಿಗೆ ಅವಮಾನ ಮಾಡಿದ್ದಾರೆ” ಎಂದು ಸುದ್ದಿ ಮಾಡಿದೆ. ಆದರೆ ಈ ಪ್ರತಿಪಾದನೆ ತಪ್ಪಾಗಿದೆ. ಇಂದು ಕೆಂಪು ಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜ ಎತ್ತರದಲ್ಲಿ ಹಾರಾಡುತ್ತಿದೆ. ಅದಕ್ಕೆ ರೈತರು ಯಾವುದೇ ಹಾನಿ ಮಾಡಿಲ್ಲ. ಬದಲಿಗೆ ಅದರ ಪಕ್ಕದಲ್ಲಿದ್ದ ಚಿಕ್ಕ ಖಾಲಿ ಕಂಬಗಳಲ್ಲಿ ರೈತರು ತಮ್ಮ ಧ್ವಜಗಳನ್ನು ಹಾರಿಸಿದ್ದಾರೆ.

Photo Courtesy: Wikipedia

ಈ ಮೇಲಿನ ಹಳೆಯ ಚಿತ್ರದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರುವುದನ್ನು ನಾವು ಗಮನಿಸಬಹುದು. ಹಾಗೆಯೇ ಇಂದು ರೈತರು ನಿಶಾನ್ ಸಾಹಿಬ್ ಧ್ವಜ ಹಾರಿಸಲಾದ ಕಂಬ ಖಾಲಿ ಇರುವುದನ್ನೂ ಗಮನಿಸಿ. ರಾಷ್ಟ್ರಧ್ವಜಕ್ಕಿಂತ ಕೆಳಭಾಗದ ಖಾಲಿ ಕಂಬಗಳಲ್ಲಿ ರೈತರು ತಮ್ಮ ಧ್ವಜ ಮತ್ತು ನಿಶಾನ್ ಸಾಹಿಬ್ ಹಾರಿಸಿದ್ದಾರೆ. ಈ ಕೆಳಗಿನ ಚಿತ್ರ ನೋಡಿ. (ರಾಷ್ಟ್ರಧ್ವಜಕ್ಕಿಂತ ಕೆಳಭಾಗದಲ್ಲಿ ಬೇರೆ ಧ್ವಜಗಳನ್ನು ಹಾರಿಸುವುದು ಕಾನೂನು ಸಮ್ಮತ. ಬೇರೆ ದೇಶದ ಪ್ರಧಾನಿಗಳು ಬಂದಾಗ ರಾಷ್ಟ್ರಧ್ವಜದ ಪಕ್ಕದಲ್ಲೇ ವಿದೇಶದ ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತದೆ.)

ಇನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಕೆಂಪು ಕೋಟೆಯ ಮೇಲೆ ಖಾಲಿಸ್ತಾನಿ ಧ್ವಜಗಳನ್ನು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅದು ಸಂಪೂರ್ಣ ಸುಳ್ಳಾಗಿದೆ. ಇಂದು ರೈತರು ತ್ರಿವರ್ಣ ಧ್ವಜಕ್ಕಿಂತ ಕೆಳಭಾಗದಲ್ಲಿ ರೈತಧ್ವಜ ಮತ್ತು ನಿಶಾನ್ ಸಾಹಿಬ್ ಹಾರಿಸಿದ್ದಾರೆ.

ನಿಶಾನ್ ಸಾಹಿಬ್ ಎಂಬುದು ಸಿಖ್ಖರ ಪವಿತ್ರ ಧ್ವಜ ಎಂದು ಹೆಸರು ಪಡೆದಿದೆ. ಖಾಲ್ಸಾದ ನೆನಪಿಗಾಗಿ ಅದನ್ನು ಪ್ರತಿ ಗುರುದ್ವಾರದ ಆವರಣದಲ್ಲಿ ಹಾರಿಸಲಾಗುತ್ತದೆ. ಇನ್ನು ಖಾಲ್ಸಾಗೂ ಖಾಲಿಸ್ತಾನ್ ಚಳವಳಿಗೂ ಯಾವುದೇ ಸಂಬಂಧವಿಲ್ಲ. ಅಮೃತಸರದ ಹರ್‌ಮಂದಿರ್ ಸಾಹಿಬ್ ಕಾಂಪ್ಲೆಕ್ಸ್ ಗುರುದ್ವಾರದ ಎದುರು ನಿಶಾನ್ ಸಾಹಿಬ್ ಹಾರಾಡುವುದನ್ನು ಈ ಕೆಳಗಿನ ಚಿತ್ರದಲ್ಲಿ ನೋಡಬಹುದು.

Photo Courtesy: Wikipedia

ನಿಶಾನ್ ಸಾಹಿಬ್ ತ್ರಿಕೋನಾಕಾರದ ಬಾವುಟವಾಗಿದೆ ಮತ್ತು ಖಾಲಿಸ್ತಾನ ಬಾವುಟಕ್ಕೂ ಅದಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಖಾಲಿಸ್ತಾನಿ ಧ್ವಜ ಆಯಾತಾಕಾರದಲ್ಲಿದ್ದು ಅದರ ಬಾವುಟವನ್ನು ಕೆಳಗಿನ ಚಿತ್ರದಲ್ಲಿ ಕಾಣಬಹುದು.

ಖಾಲಿಸ್ತಾನಿ ಧ್ವಜ. Photo Courtesy: Gurvinder Singh

ನಿಶಾನ್ ಸಾಹಿಬ್ ಭಾರತೀಯ ಸೇನೆಯ ಸಿಖ್ ರೆಜಿಮೆಂಟ್‌ಗೆ ಅಪಾರ ಮಹತ್ವದ್ದಾಗಿದೆ. ಒಟ್ಟಿನಲ್ಲಿ ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ. ಮತ್ತು ರೈತರು ಕೆಳಗಡೆ ಹಾರಿಸಿದ ಧ್ವಜ ಖಾಲಿಸ್ತಾನಿ ಧ್ವಜ ಅಲ್ಲ. ಹಾಗೂ ರೈತ ಹೋರಾಟಕ್ಕೂ ಖಾಲಿಸ್ತಾನಿಗಳಿಗೂ ಯಾವುದೇ ಸಂಬಂಧವಿಲ್ಲ.


ಇದನ್ನೂ ಓದಿ: ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...