Homeಮುಖಪುಟಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಇಂದು ಹೋರಾಟ ನಿರತ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿದರು. ರೈತರ ಒಂದು ಗುಂಪು ಉದ್ದೇಶಿತ ಮಾರ್ಗ ಬಿಟ್ಟು ಕೆಂಪು ಕೋಟೆಗೆ ರ್ಯಾಲಿ ನಡೆಸಿತು. ಅಲ್ಲದೇ ಕೋಟೆಯ ಮೇಲೆ ಹತ್ತಿದ ರೈತರು ರೈತ ಧ್ವಜ ಮತ್ತು ಸಿಖ್ ರಿಗೆ ಪವಿತ್ರ ಎಂದು ಭಾವಿಸುವ ನಿಶಾನ್ ಸಾಹಿಬ್ ಧ್ವಜ ಹಾರಿಸಿದರು. ಆದರೆ ಕೆಲ ಮಾಧ್ಯಮಗಳು ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿದೆ ಎಂದು ಆರೋಪಿಸಿ ಸುಳ್ಳು ಸುದ್ದಿ ಮಾಡಿವೆ.

ಟೈಮ್ಸ್ ನೌ ಆಂಗ್ಲ ಮಾಧ್ಯಮ “ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿದೆ, ರೈತರು ಭಾರತದ ರಾಷ್ಟ್ರ ಚಿಹ್ನೆಗಳಿಗೆ ಅವಮಾನ ಮಾಡಿದ್ದಾರೆ” ಎಂದು ಸುದ್ದಿ ಮಾಡಿದೆ. ಆದರೆ ಈ ಪ್ರತಿಪಾದನೆ ತಪ್ಪಾಗಿದೆ. ಇಂದು ಕೆಂಪು ಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜ ಎತ್ತರದಲ್ಲಿ ಹಾರಾಡುತ್ತಿದೆ. ಅದಕ್ಕೆ ರೈತರು ಯಾವುದೇ ಹಾನಿ ಮಾಡಿಲ್ಲ. ಬದಲಿಗೆ ಅದರ ಪಕ್ಕದಲ್ಲಿದ್ದ ಚಿಕ್ಕ ಖಾಲಿ ಕಂಬಗಳಲ್ಲಿ ರೈತರು ತಮ್ಮ ಧ್ವಜಗಳನ್ನು ಹಾರಿಸಿದ್ದಾರೆ.

Photo Courtesy: Wikipedia

ಈ ಮೇಲಿನ ಹಳೆಯ ಚಿತ್ರದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರುವುದನ್ನು ನಾವು ಗಮನಿಸಬಹುದು. ಹಾಗೆಯೇ ಇಂದು ರೈತರು ನಿಶಾನ್ ಸಾಹಿಬ್ ಧ್ವಜ ಹಾರಿಸಲಾದ ಕಂಬ ಖಾಲಿ ಇರುವುದನ್ನೂ ಗಮನಿಸಿ. ರಾಷ್ಟ್ರಧ್ವಜಕ್ಕಿಂತ ಕೆಳಭಾಗದ ಖಾಲಿ ಕಂಬಗಳಲ್ಲಿ ರೈತರು ತಮ್ಮ ಧ್ವಜ ಮತ್ತು ನಿಶಾನ್ ಸಾಹಿಬ್ ಹಾರಿಸಿದ್ದಾರೆ. ಈ ಕೆಳಗಿನ ಚಿತ್ರ ನೋಡಿ. (ರಾಷ್ಟ್ರಧ್ವಜಕ್ಕಿಂತ ಕೆಳಭಾಗದಲ್ಲಿ ಬೇರೆ ಧ್ವಜಗಳನ್ನು ಹಾರಿಸುವುದು ಕಾನೂನು ಸಮ್ಮತ. ಬೇರೆ ದೇಶದ ಪ್ರಧಾನಿಗಳು ಬಂದಾಗ ರಾಷ್ಟ್ರಧ್ವಜದ ಪಕ್ಕದಲ್ಲೇ ವಿದೇಶದ ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತದೆ.)

ಇನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಕೆಂಪು ಕೋಟೆಯ ಮೇಲೆ ಖಾಲಿಸ್ತಾನಿ ಧ್ವಜಗಳನ್ನು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅದು ಸಂಪೂರ್ಣ ಸುಳ್ಳಾಗಿದೆ. ಇಂದು ರೈತರು ತ್ರಿವರ್ಣ ಧ್ವಜಕ್ಕಿಂತ ಕೆಳಭಾಗದಲ್ಲಿ ರೈತಧ್ವಜ ಮತ್ತು ನಿಶಾನ್ ಸಾಹಿಬ್ ಹಾರಿಸಿದ್ದಾರೆ.

ನಿಶಾನ್ ಸಾಹಿಬ್ ಎಂಬುದು ಸಿಖ್ಖರ ಪವಿತ್ರ ಧ್ವಜ ಎಂದು ಹೆಸರು ಪಡೆದಿದೆ. ಖಾಲ್ಸಾದ ನೆನಪಿಗಾಗಿ ಅದನ್ನು ಪ್ರತಿ ಗುರುದ್ವಾರದ ಆವರಣದಲ್ಲಿ ಹಾರಿಸಲಾಗುತ್ತದೆ. ಇನ್ನು ಖಾಲ್ಸಾಗೂ ಖಾಲಿಸ್ತಾನ್ ಚಳವಳಿಗೂ ಯಾವುದೇ ಸಂಬಂಧವಿಲ್ಲ. ಅಮೃತಸರದ ಹರ್‌ಮಂದಿರ್ ಸಾಹಿಬ್ ಕಾಂಪ್ಲೆಕ್ಸ್ ಗುರುದ್ವಾರದ ಎದುರು ನಿಶಾನ್ ಸಾಹಿಬ್ ಹಾರಾಡುವುದನ್ನು ಈ ಕೆಳಗಿನ ಚಿತ್ರದಲ್ಲಿ ನೋಡಬಹುದು.

Photo Courtesy: Wikipedia

ನಿಶಾನ್ ಸಾಹಿಬ್ ತ್ರಿಕೋನಾಕಾರದ ಬಾವುಟವಾಗಿದೆ ಮತ್ತು ಖಾಲಿಸ್ತಾನ ಬಾವುಟಕ್ಕೂ ಅದಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಖಾಲಿಸ್ತಾನಿ ಧ್ವಜ ಆಯಾತಾಕಾರದಲ್ಲಿದ್ದು ಅದರ ಬಾವುಟವನ್ನು ಕೆಳಗಿನ ಚಿತ್ರದಲ್ಲಿ ಕಾಣಬಹುದು.

ಖಾಲಿಸ್ತಾನಿ ಧ್ವಜ. Photo Courtesy: Gurvinder Singh

ನಿಶಾನ್ ಸಾಹಿಬ್ ಭಾರತೀಯ ಸೇನೆಯ ಸಿಖ್ ರೆಜಿಮೆಂಟ್‌ಗೆ ಅಪಾರ ಮಹತ್ವದ್ದಾಗಿದೆ. ಒಟ್ಟಿನಲ್ಲಿ ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ. ಮತ್ತು ರೈತರು ಕೆಳಗಡೆ ಹಾರಿಸಿದ ಧ್ವಜ ಖಾಲಿಸ್ತಾನಿ ಧ್ವಜ ಅಲ್ಲ. ಹಾಗೂ ರೈತ ಹೋರಾಟಕ್ಕೂ ಖಾಲಿಸ್ತಾನಿಗಳಿಗೂ ಯಾವುದೇ ಸಂಬಂಧವಿಲ್ಲ.


ಇದನ್ನೂ ಓದಿ: ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...