Homeಮುಖಪುಟಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಇಂದು ಹೋರಾಟ ನಿರತ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿದರು. ರೈತರ ಒಂದು ಗುಂಪು ಉದ್ದೇಶಿತ ಮಾರ್ಗ ಬಿಟ್ಟು ಕೆಂಪು ಕೋಟೆಗೆ ರ್ಯಾಲಿ ನಡೆಸಿತು. ಅಲ್ಲದೇ ಕೋಟೆಯ ಮೇಲೆ ಹತ್ತಿದ ರೈತರು ರೈತ ಧ್ವಜ ಮತ್ತು ಸಿಖ್ ರಿಗೆ ಪವಿತ್ರ ಎಂದು ಭಾವಿಸುವ ನಿಶಾನ್ ಸಾಹಿಬ್ ಧ್ವಜ ಹಾರಿಸಿದರು. ಆದರೆ ಕೆಲ ಮಾಧ್ಯಮಗಳು ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿದೆ ಎಂದು ಆರೋಪಿಸಿ ಸುಳ್ಳು ಸುದ್ದಿ ಮಾಡಿವೆ.

ಟೈಮ್ಸ್ ನೌ ಆಂಗ್ಲ ಮಾಧ್ಯಮ “ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿದೆ, ರೈತರು ಭಾರತದ ರಾಷ್ಟ್ರ ಚಿಹ್ನೆಗಳಿಗೆ ಅವಮಾನ ಮಾಡಿದ್ದಾರೆ” ಎಂದು ಸುದ್ದಿ ಮಾಡಿದೆ. ಆದರೆ ಈ ಪ್ರತಿಪಾದನೆ ತಪ್ಪಾಗಿದೆ. ಇಂದು ಕೆಂಪು ಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜ ಎತ್ತರದಲ್ಲಿ ಹಾರಾಡುತ್ತಿದೆ. ಅದಕ್ಕೆ ರೈತರು ಯಾವುದೇ ಹಾನಿ ಮಾಡಿಲ್ಲ. ಬದಲಿಗೆ ಅದರ ಪಕ್ಕದಲ್ಲಿದ್ದ ಚಿಕ್ಕ ಖಾಲಿ ಕಂಬಗಳಲ್ಲಿ ರೈತರು ತಮ್ಮ ಧ್ವಜಗಳನ್ನು ಹಾರಿಸಿದ್ದಾರೆ.

Photo Courtesy: Wikipedia

ಈ ಮೇಲಿನ ಹಳೆಯ ಚಿತ್ರದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರುವುದನ್ನು ನಾವು ಗಮನಿಸಬಹುದು. ಹಾಗೆಯೇ ಇಂದು ರೈತರು ನಿಶಾನ್ ಸಾಹಿಬ್ ಧ್ವಜ ಹಾರಿಸಲಾದ ಕಂಬ ಖಾಲಿ ಇರುವುದನ್ನೂ ಗಮನಿಸಿ. ರಾಷ್ಟ್ರಧ್ವಜಕ್ಕಿಂತ ಕೆಳಭಾಗದ ಖಾಲಿ ಕಂಬಗಳಲ್ಲಿ ರೈತರು ತಮ್ಮ ಧ್ವಜ ಮತ್ತು ನಿಶಾನ್ ಸಾಹಿಬ್ ಹಾರಿಸಿದ್ದಾರೆ. ಈ ಕೆಳಗಿನ ಚಿತ್ರ ನೋಡಿ. (ರಾಷ್ಟ್ರಧ್ವಜಕ್ಕಿಂತ ಕೆಳಭಾಗದಲ್ಲಿ ಬೇರೆ ಧ್ವಜಗಳನ್ನು ಹಾರಿಸುವುದು ಕಾನೂನು ಸಮ್ಮತ. ಬೇರೆ ದೇಶದ ಪ್ರಧಾನಿಗಳು ಬಂದಾಗ ರಾಷ್ಟ್ರಧ್ವಜದ ಪಕ್ಕದಲ್ಲೇ ವಿದೇಶದ ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತದೆ.)

ಇನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಕೆಂಪು ಕೋಟೆಯ ಮೇಲೆ ಖಾಲಿಸ್ತಾನಿ ಧ್ವಜಗಳನ್ನು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅದು ಸಂಪೂರ್ಣ ಸುಳ್ಳಾಗಿದೆ. ಇಂದು ರೈತರು ತ್ರಿವರ್ಣ ಧ್ವಜಕ್ಕಿಂತ ಕೆಳಭಾಗದಲ್ಲಿ ರೈತಧ್ವಜ ಮತ್ತು ನಿಶಾನ್ ಸಾಹಿಬ್ ಹಾರಿಸಿದ್ದಾರೆ.

ನಿಶಾನ್ ಸಾಹಿಬ್ ಎಂಬುದು ಸಿಖ್ಖರ ಪವಿತ್ರ ಧ್ವಜ ಎಂದು ಹೆಸರು ಪಡೆದಿದೆ. ಖಾಲ್ಸಾದ ನೆನಪಿಗಾಗಿ ಅದನ್ನು ಪ್ರತಿ ಗುರುದ್ವಾರದ ಆವರಣದಲ್ಲಿ ಹಾರಿಸಲಾಗುತ್ತದೆ. ಇನ್ನು ಖಾಲ್ಸಾಗೂ ಖಾಲಿಸ್ತಾನ್ ಚಳವಳಿಗೂ ಯಾವುದೇ ಸಂಬಂಧವಿಲ್ಲ. ಅಮೃತಸರದ ಹರ್‌ಮಂದಿರ್ ಸಾಹಿಬ್ ಕಾಂಪ್ಲೆಕ್ಸ್ ಗುರುದ್ವಾರದ ಎದುರು ನಿಶಾನ್ ಸಾಹಿಬ್ ಹಾರಾಡುವುದನ್ನು ಈ ಕೆಳಗಿನ ಚಿತ್ರದಲ್ಲಿ ನೋಡಬಹುದು.

Photo Courtesy: Wikipedia

ನಿಶಾನ್ ಸಾಹಿಬ್ ತ್ರಿಕೋನಾಕಾರದ ಬಾವುಟವಾಗಿದೆ ಮತ್ತು ಖಾಲಿಸ್ತಾನ ಬಾವುಟಕ್ಕೂ ಅದಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಖಾಲಿಸ್ತಾನಿ ಧ್ವಜ ಆಯಾತಾಕಾರದಲ್ಲಿದ್ದು ಅದರ ಬಾವುಟವನ್ನು ಕೆಳಗಿನ ಚಿತ್ರದಲ್ಲಿ ಕಾಣಬಹುದು.

ಖಾಲಿಸ್ತಾನಿ ಧ್ವಜ. Photo Courtesy: Gurvinder Singh

ನಿಶಾನ್ ಸಾಹಿಬ್ ಭಾರತೀಯ ಸೇನೆಯ ಸಿಖ್ ರೆಜಿಮೆಂಟ್‌ಗೆ ಅಪಾರ ಮಹತ್ವದ್ದಾಗಿದೆ. ಒಟ್ಟಿನಲ್ಲಿ ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ. ಮತ್ತು ರೈತರು ಕೆಳಗಡೆ ಹಾರಿಸಿದ ಧ್ವಜ ಖಾಲಿಸ್ತಾನಿ ಧ್ವಜ ಅಲ್ಲ. ಹಾಗೂ ರೈತ ಹೋರಾಟಕ್ಕೂ ಖಾಲಿಸ್ತಾನಿಗಳಿಗೂ ಯಾವುದೇ ಸಂಬಂಧವಿಲ್ಲ.


ಇದನ್ನೂ ಓದಿ: ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...