Homeಮುಖಪುಟಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಇಂದು ಹೋರಾಟ ನಿರತ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿದರು. ರೈತರ ಒಂದು ಗುಂಪು ಉದ್ದೇಶಿತ ಮಾರ್ಗ ಬಿಟ್ಟು ಕೆಂಪು ಕೋಟೆಗೆ ರ್ಯಾಲಿ ನಡೆಸಿತು. ಅಲ್ಲದೇ ಕೋಟೆಯ ಮೇಲೆ ಹತ್ತಿದ ರೈತರು ರೈತ ಧ್ವಜ ಮತ್ತು ಸಿಖ್ ರಿಗೆ ಪವಿತ್ರ ಎಂದು ಭಾವಿಸುವ ನಿಶಾನ್ ಸಾಹಿಬ್ ಧ್ವಜ ಹಾರಿಸಿದರು. ಆದರೆ ಕೆಲ ಮಾಧ್ಯಮಗಳು ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿದೆ ಎಂದು ಆರೋಪಿಸಿ ಸುಳ್ಳು ಸುದ್ದಿ ಮಾಡಿವೆ.

ಟೈಮ್ಸ್ ನೌ ಆಂಗ್ಲ ಮಾಧ್ಯಮ “ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿದೆ, ರೈತರು ಭಾರತದ ರಾಷ್ಟ್ರ ಚಿಹ್ನೆಗಳಿಗೆ ಅವಮಾನ ಮಾಡಿದ್ದಾರೆ” ಎಂದು ಸುದ್ದಿ ಮಾಡಿದೆ. ಆದರೆ ಈ ಪ್ರತಿಪಾದನೆ ತಪ್ಪಾಗಿದೆ. ಇಂದು ಕೆಂಪು ಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜ ಎತ್ತರದಲ್ಲಿ ಹಾರಾಡುತ್ತಿದೆ. ಅದಕ್ಕೆ ರೈತರು ಯಾವುದೇ ಹಾನಿ ಮಾಡಿಲ್ಲ. ಬದಲಿಗೆ ಅದರ ಪಕ್ಕದಲ್ಲಿದ್ದ ಚಿಕ್ಕ ಖಾಲಿ ಕಂಬಗಳಲ್ಲಿ ರೈತರು ತಮ್ಮ ಧ್ವಜಗಳನ್ನು ಹಾರಿಸಿದ್ದಾರೆ.

Photo Courtesy: Wikipedia

ಈ ಮೇಲಿನ ಹಳೆಯ ಚಿತ್ರದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರುವುದನ್ನು ನಾವು ಗಮನಿಸಬಹುದು. ಹಾಗೆಯೇ ಇಂದು ರೈತರು ನಿಶಾನ್ ಸಾಹಿಬ್ ಧ್ವಜ ಹಾರಿಸಲಾದ ಕಂಬ ಖಾಲಿ ಇರುವುದನ್ನೂ ಗಮನಿಸಿ. ರಾಷ್ಟ್ರಧ್ವಜಕ್ಕಿಂತ ಕೆಳಭಾಗದ ಖಾಲಿ ಕಂಬಗಳಲ್ಲಿ ರೈತರು ತಮ್ಮ ಧ್ವಜ ಮತ್ತು ನಿಶಾನ್ ಸಾಹಿಬ್ ಹಾರಿಸಿದ್ದಾರೆ. ಈ ಕೆಳಗಿನ ಚಿತ್ರ ನೋಡಿ. (ರಾಷ್ಟ್ರಧ್ವಜಕ್ಕಿಂತ ಕೆಳಭಾಗದಲ್ಲಿ ಬೇರೆ ಧ್ವಜಗಳನ್ನು ಹಾರಿಸುವುದು ಕಾನೂನು ಸಮ್ಮತ. ಬೇರೆ ದೇಶದ ಪ್ರಧಾನಿಗಳು ಬಂದಾಗ ರಾಷ್ಟ್ರಧ್ವಜದ ಪಕ್ಕದಲ್ಲೇ ವಿದೇಶದ ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತದೆ.)

ಇನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಕೆಂಪು ಕೋಟೆಯ ಮೇಲೆ ಖಾಲಿಸ್ತಾನಿ ಧ್ವಜಗಳನ್ನು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅದು ಸಂಪೂರ್ಣ ಸುಳ್ಳಾಗಿದೆ. ಇಂದು ರೈತರು ತ್ರಿವರ್ಣ ಧ್ವಜಕ್ಕಿಂತ ಕೆಳಭಾಗದಲ್ಲಿ ರೈತಧ್ವಜ ಮತ್ತು ನಿಶಾನ್ ಸಾಹಿಬ್ ಹಾರಿಸಿದ್ದಾರೆ.

ನಿಶಾನ್ ಸಾಹಿಬ್ ಎಂಬುದು ಸಿಖ್ಖರ ಪವಿತ್ರ ಧ್ವಜ ಎಂದು ಹೆಸರು ಪಡೆದಿದೆ. ಖಾಲ್ಸಾದ ನೆನಪಿಗಾಗಿ ಅದನ್ನು ಪ್ರತಿ ಗುರುದ್ವಾರದ ಆವರಣದಲ್ಲಿ ಹಾರಿಸಲಾಗುತ್ತದೆ. ಇನ್ನು ಖಾಲ್ಸಾಗೂ ಖಾಲಿಸ್ತಾನ್ ಚಳವಳಿಗೂ ಯಾವುದೇ ಸಂಬಂಧವಿಲ್ಲ. ಅಮೃತಸರದ ಹರ್‌ಮಂದಿರ್ ಸಾಹಿಬ್ ಕಾಂಪ್ಲೆಕ್ಸ್ ಗುರುದ್ವಾರದ ಎದುರು ನಿಶಾನ್ ಸಾಹಿಬ್ ಹಾರಾಡುವುದನ್ನು ಈ ಕೆಳಗಿನ ಚಿತ್ರದಲ್ಲಿ ನೋಡಬಹುದು.

Photo Courtesy: Wikipedia

ನಿಶಾನ್ ಸಾಹಿಬ್ ತ್ರಿಕೋನಾಕಾರದ ಬಾವುಟವಾಗಿದೆ ಮತ್ತು ಖಾಲಿಸ್ತಾನ ಬಾವುಟಕ್ಕೂ ಅದಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಖಾಲಿಸ್ತಾನಿ ಧ್ವಜ ಆಯಾತಾಕಾರದಲ್ಲಿದ್ದು ಅದರ ಬಾವುಟವನ್ನು ಕೆಳಗಿನ ಚಿತ್ರದಲ್ಲಿ ಕಾಣಬಹುದು.

ಖಾಲಿಸ್ತಾನಿ ಧ್ವಜ. Photo Courtesy: Gurvinder Singh

ನಿಶಾನ್ ಸಾಹಿಬ್ ಭಾರತೀಯ ಸೇನೆಯ ಸಿಖ್ ರೆಜಿಮೆಂಟ್‌ಗೆ ಅಪಾರ ಮಹತ್ವದ್ದಾಗಿದೆ. ಒಟ್ಟಿನಲ್ಲಿ ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ. ಮತ್ತು ರೈತರು ಕೆಳಗಡೆ ಹಾರಿಸಿದ ಧ್ವಜ ಖಾಲಿಸ್ತಾನಿ ಧ್ವಜ ಅಲ್ಲ. ಹಾಗೂ ರೈತ ಹೋರಾಟಕ್ಕೂ ಖಾಲಿಸ್ತಾನಿಗಳಿಗೂ ಯಾವುದೇ ಸಂಬಂಧವಿಲ್ಲ.


ಇದನ್ನೂ ಓದಿ: ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...