Homeಮುಖಪುಟಮೀಡಿಯಾ ಟ್ರಯಲ್ | ನ್ಯೂಸ್ 18, ನಿರೂಪಕಿ ರುಬಿಕಾ ಲಿಯಾಕತ್‌ರನ್ನು ಖಂಡಿಸಿದ ಮಾಧ್ಯಮ ಪ್ರಾಧಿಕಾರ

ಮೀಡಿಯಾ ಟ್ರಯಲ್ | ನ್ಯೂಸ್ 18, ನಿರೂಪಕಿ ರುಬಿಕಾ ಲಿಯಾಕತ್‌ರನ್ನು ಖಂಡಿಸಿದ ಮಾಧ್ಯಮ ಪ್ರಾಧಿಕಾರ

- Advertisement -
- Advertisement -

ಮದ್ಯ ನೀತಿ ಪ್ರಕರಣದಲ್ಲಿ ಪ್ರಕರಣವು ತನಿಖೆ ನಡೆಯುತ್ತಿರುವ ವೇಳೆಯೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಪ್ಪಿತಸ್ಥರೆಂದು ಹೇಳುವ ಮೂಲಕ ಪ್ರಸಾರ ನೀತಿಯನ್ನು ಉಲ್ಲಂಘಿಸಿದ್ದಕ್ಕಾಗಿ ನ್ಯೂಸ್ 18 ಇಂಡಿಯಾ ಮತ್ತು ಅದರ ನಿರೂಪಕಿ ರುಬಿಕಾ ಲಿಯಾಕತ್ ಅವರನ್ನು ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು ಖಂಡಿಸಿದೆ. ಮೀಡಿಯಾ ಟ್ರಯಲ್

ಪ್ರಾಧಿಕಾರವು ಏಳು ದಿನಗಳಲ್ಲಿ ಈ ಪ್ರಸಾರದ ಆಕ್ಷೇಪಾರ್ಹ ಭಾಗಗಳನ್ನು ಅಳಿಸಿ ಹಾಕುವಂತೆ ಚಾನೆಲ್‌ಗೆ ನಿರ್ದೇಶಿಸಿದೆ. ಗೂಂಜ್ ವಿಥ್ ರುಬಿಕಾ ಲಿಯಾಕತ್ ಎಂಬ ಕಾರ್ಯಕ್ರಮದಲ್ಲಿ ಮಾರ್ಚ್ 28 ರಂದು ಈ ಆಕ್ಷೇಪಾರ್ಹ ಆರೋಪ ಮಾಡಲಾಗಿತ್ತು. ದೆಹಲಿ ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಬಂಧಿಸಿದ್ದನ್ನು ಈ ಕಾರ್ಯಕ್ರಮದಲ್ಲಿ ಚರ್ಚಿಸಲಾಗಿತ್ತು. ಮೀಡಿಯಾ ಟ್ರಯಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೂರುದಾರರಾದ ಪುಣೆ ಮೂಲದ ಹೋರಾಟಗಾರ ಇಂದ್ರಜೀತ್ ಘೋರ್ಪಡೆ, ಮಾಧ್ಯಮದ ಈ ಪ್ರಸಾರವು ತಟಸ್ಥತೆಯನ್ನು ಉಲ್ಲಂಘಿಸಿ ಮತ್ತು ರಾಜಕೀಯ ಪಕ್ಷಪಾತವನ್ನು ಉತ್ತೇಜಿಸಿದೆ ಎಂದು ಆರೋಪಿಸಿದ್ದಾರೆ. ನಿರೂಪಕಿ ಲಿಯಾಕತ್ ಅವರು ಆಮ್ ಆದ್ಮಿ ಪಕ್ಷದ ನಾಯಕನ ಬಗ್ಗೆ ಯಾವುದೆ ಪರಿಶೀಲನೆ ಇಲ್ಲದೆ ಪದೇ ಪದೇ ತಪ್ಪಾಗಿ ಹೇಳಿಕೆ ನೀಡಲಾಗಿತ್ತು ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಜನವರಿ 24 ರಂದು ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರ ಆದೇಶದಲ್ಲಿ, “ಪ್ರಧಾನ ಮಂತ್ರಿಯನ್ನು ಸಮರ್ಥಿಸುವ ನಿರೂಪಕರ ಬಗ್ಗೆ ಯಾವುದೇ ಸಮಸ್ಯೆ ಇರಲಿಲ್ಲ… ಆದಾಗ್ಯೂ, ಸಮಸ್ಯೆ ಇರುವುದು ನ್ಯಾಯಾಲಯದ ವ್ಯಾಪ್ತಿಗೆ ಒಳಪಟ್ಟ ವಿಷಯದಲ್ಲಿ ನಿರೂಪಕಿ ಆರೋಪಿಯನ್ನು ತಪ್ಪಿತಸ್ಥನೆಂದು ಆರೋಪಿಸಿದ ರೀತಿಯಲ್ಲಿ.” ಎಂದು ಹೇಳಿದ್ದಾರೆ.

ಕೇಜ್ರಿವಾಲ್‌ ಅವರು ಆಪಾದಿತ ಹಗರಣದಲ್ಲಿ ಭಾಗಿಯಾಗಿರುವುದರಿಂದ ನ್ಯಾಯಾಲಯಗಳು ಜಾಮೀನು ನಿರಾಕರಿಸಿವೆ ಎಂದು ಹೇಳಿಕೊಂಡ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರ ಸುಳ್ಳು ಹೇಳಿಕೆಗಳನ್ನು ವಿರೋಧಿಸಲು ಲಿಯಾಕತ್ ವಿಫಲರಾಗಿದ್ದಾರೆ ಎಂದು ಪ್ರಾಧಿಕಾರವು ಕಂಡುಕೊಂಡಿದೆ.

ಚರ್ಚೆಯ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಕ್ಕಾಗಿ ಸಮಾಜವಾದಿ ಪಕ್ಷದ ವಕ್ತಾರೆ ಅಮೀಕ್ ಜಮೈ ಅವರನ್ನು ಲಿಯಾಕತ್ ಖಂಡಿಸಿದ್ದಾರೆ ಎಂದು ಪ್ರಾಧಿಕಾರವು ಗಮನಿಸಿದೆ. “ಅವರು ನಿಮ್ಮ ಪ್ರಧಾನಿಯೂ ಹೌದು… ನೀವು ಶಿಷ್ಟಾಚಾರ ಮತ್ತು ಶಿಷ್ಟಾಚಾರದ ಮಿತಿಯಲ್ಲಿಯೇ ಇರಿ ಮತ್ತು ನಂತರ ಮಾತನಾಡಿ” ಎಂದು ಅವರು ಜಮೈಗೆ ತಿಳಿಸಿದ್ದರು.

ನಿಷ್ಪಕ್ಷಪಾತತೆ, ತಟಸ್ಥತೆ ಮತ್ತು ನ್ಯಾಯಾಲಯದ ಪ್ರಕ್ರಿಯೆಗಳ ವರದಿ ಮಾಡುವಿಕೆಯ ಕುರಿತಾದ ಮಾರ್ಗಸೂಚಿಗಳನ್ನು ಈ ಕಾರ್ಯಕ್ರಮದ ಚರ್ಚೆಯು ಉಲ್ಲಂಘಿಸಿದೆ ಎಂದು ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು ತೀರ್ಪು ನೀಡಿತು. ನೀಲೇಶ್ ನವಲಖಾ vs ಯೂನಿಯನ್ ಆಫ್ ಇಂಡಿಯಾ (2021) ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ನೀಡಿದ ತೀರ್ಪನ್ನು ಸಹ ಇದು ಉಲ್ಲೇಖಿಸಿದೆ. ಈ ತೀರ್ಪು ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸಲಾಗುತ್ತಿರುವ ವಿಷಯಗಳಲ್ಲಿ ತಟಸ್ಥತೆಯನ್ನು ಪಾಲಿಸುವುದನ್ನು ಒತ್ತಿಹೇಳಿತ್ತು.

ಪ್ರಾಧಿಕಾರವು ಕಾರ್ಯಕ್ರಮದ ವಿವಾದಾತ್ಮಕ ಭಾಗಗಳನ್ನು ತೆಗೆದುಹಾಕುವಂತೆ ಚಾನೆಲ್‌ಗೆ ಸೂಚಿಸಿದ್ದು, ಭವಿಷ್ಯದಲ್ಲಿ ನಡೆಸುವ ಚರ್ಚೆಗಳಲ್ಲಿ ಪ್ರಸಾರ ಮಾರ್ಗಸೂಚಿಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳುವಂತೆ ಸಲಹೆ ನೀಡಿದೆ. ಈ ನಿರ್ದೇಶನಗಳೊಂದಿಗೆ ದೂರನ್ನು ಮುಕ್ತಾಯಗೊಳಿಸಲಾಯಿತು.

ಇದನ್ನೂಓದಿ:  ಮದುವೆಗೆ ಒತ್ತಡ: ಯುವತಿಯ ಕೊಂದು, ದೇಹಕ್ಕೆ ಬೆಂಕಿ ಹಚ್ಚಿ, ಸೂಟ್‌ಕೇಸ್‌ನಲ್ಲಿ ಎಸೆದ ವ್ಯಕ್ತಿ

ಮದುವೆಗೆ ಒತ್ತಡ: ಯುವತಿಯ ಕೊಂದು, ದೇಹಕ್ಕೆ ಬೆಂಕಿ ಹಚ್ಚಿ, ಸೂಟ್‌ಕೇಸ್‌ನಲ್ಲಿ ಎಸೆದ ವ್ಯಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...