Homeಅಂಕಣಗಳುಹೊಸ ಮಾಧ್ಯಮಕ್ಕೆ ಸ್ವಾಗತ ನೀವೂ ಅದರ ಭಾಗವಾಗಿರುವುದು ಗೊತ್ತೇನು?

ಹೊಸ ಮಾಧ್ಯಮಕ್ಕೆ ಸ್ವಾಗತ ನೀವೂ ಅದರ ಭಾಗವಾಗಿರುವುದು ಗೊತ್ತೇನು?

- Advertisement -
- Advertisement -

| ಡಾ. ವಾಸು ಎಚ್.ವಿ |

‘ಮುಖ್ಯವಾಹಿನಿ’ ಮಾಧ್ಯಮಗಳ ಕೊಳಕುತನವನ್ನು ನೋಡಿ ಅಪಹಾಸ್ಯ ಮಾಡಿಕೊಂಡು ನಗುವುದು ಒಮ್ಮೊಮ್ಮೆ ಅಪಾಯಕಾರಿಯಾದುದು. ಏಕೆಂದರೆ ಇಂತಹ ಮಾಧ್ಯಮಗಳು ಜೀವವಿರೋಧಿಯಾಗಿದ್ದು ಪ್ರಜಾತಂತ್ರದ ಬುಡಕ್ಕೆ ಕೊಳ್ಳಿಯಿಡುತ್ತಿವೆ. ಆದರೆ ಅವನ್ನು ಬಯ್ದುಕೊಳ್ಳುತ್ತಾ, ಆತಂಕ ಪಡುತ್ತಾ, ವ್ಯಕ್ತಿಗತವಾಗಿ ಯಾರನ್ನೋ ಗುರಿ ಮಾಡುತ್ತಾ ಕಾಲವ್ಯಯ ಮಾಡುವುದು ಅಪಾಯವನ್ನು ಇನ್ನಷ್ಟು ಹೆಚ್ಚಿಸುತ್ತವೆ. ಪರ್ಯಾಯದ ನಿರ್ಮಾಣ ಮಾತ್ರ ಈ ವಿಷವ್ಯೂಹದಿಂದ ನಮ್ಮೆಲ್ಲರನ್ನು ಮೇಲೆತ್ತಬಹುದು.

ಇದರಲ್ಲಿ ಒಂದು ತೊಡಕಿದೆ. ಪರ್ಯಾಯದ ಮಾತಾಡುವವರು ಸಮಾಜದ ಮುಖ್ಯವಾಹಿನಿಯಲ್ಲಿ ಅಂತಹ ದೊಡ್ಡ ಪರಿಣಾಮ ಬೀರದ, ಶುದ್ಧ ಮತ್ತು ರ್ಯಾಡಿಕಲ್ ಕಂಟೆಂಟ್ ಹೊಂದಿರುವ ಪುಟ್ಟ ಪ್ರಯತ್ನದ ಕಡೆಗೆ ಒತ್ತು ಕೊಡುತ್ತಾರೆ. ಮೊದಲೇ ಅಂಚಿನಲ್ಲಿರುವುದನ್ನು, ಪರ್ಯಾಯದ ಹೆಸರಿನಲ್ಲಿ ಅಂಚಿನಲ್ಲೇ ಉಳಿಸುವುದು ಪರ್ಯಾಯವಾಗಲಾರದು. ಮುಖ್ಯವಾಹಿನಿಯ ಘಾತುಕ ಗಾತ್ರವನ್ನು ಹಿಮ್ಮೆಟ್ಟಿಸಿ, ಅದೇ ಮುಖ್ಯವಾಹಿನಿಯಲ್ಲಿ ತನ್ನನ್ನು ತಾನು ಪ್ರತಿಷ್ಠಾಪಿಸಿಕೊಳ್ಳುವ ಸೃಜನಶೀಲ ಮಾರ್ಗವನ್ನು ಶೋಧಿಸಿ, ಸಾಕಾರಗೊಳಿಸಿ ಜಯಿಸುವುದೇ ನಿಜವಾದ ಪರ್ಯಾಯ.

ಈವರೆಗಿನ ಪರಿಭಾಷೆಯು ತಪ್ಪು ಅರ್ಥ ಕೊಡುವುದೆಂಬ ಕಾರಣಕ್ಕೆ, ಪರ್ಯಾಯ ಮಾಧ್ಯಮದ ಬದಲಿಗೆ ಹೊಸ ಮಾಧ್ಯಮ ಎಂಬ ಪದವನ್ನು ಶೀರ್ಷಿಕೆಯಲ್ಲಿ ಬಳಸಲಾಗಿದೆ. ಮಾಧ್ಯಮಗಳು ಉಳ್ಳವರ ಕಪಿಮುಷ್ಟಿಯಲ್ಲಿ ಸೇರುವುದು ಮತ್ತು ಹಳತಾಗುವುದು ಒಟ್ಟಿಗೇ ನಡೆಯುತ್ತಿರುತ್ತದೆ. ಆ ನಂತರ ಹೊಸ ಮಾಧ್ಯಮ ಹುಟ್ಟಿಕೊಳ್ಳುತ್ತದೆ. ಸಾಮಾಜಿಕ ಜಾಲತಾಣಗಳನ್ನು ಹೊಸ ಮಾಧ್ಯಮಗಳೆಂದು ಕರೆಯಲಾಗುತ್ತದಾದರೂ, ಅಲ್ಲೊಂದು ವಿಪರ್ಯಾಸವಿದೆ. Social media is not so social ಎಂಬ ಮಾತಿದೆ. ಏಕೆಂದರೆ, ಅದೂ ಸಹಾ ಕಾರ್ಪೋರೇಟ್ ಲಾಭವನ್ನು ಹಿಗ್ಗಿಸಲೆಂದೇ ಹೆಚ್ಚೆಚ್ಚು ಪುನರ್ರೂಪಿತಗೊಳ್ಳುತ್ತಿದೆ.

ಅಂದರೆ, ಹೊಸ ಮಾಧ್ಯಮವು ಬಹುಬೇಗ ಹಳತಾಗುತ್ತಿರುವ ಕಾಲದಲ್ಲಿ ನಾವು ನವನವೀನ ದಾರಿಯನ್ನು ನಮ್ಮದಾಗಿಸಿಕೊಳ್ಳಬೇಕಿದೆ. ಲಂಕೇಶರು 90ರ ದಶಕದ ಮಧ್ಯಭಾಗದಲ್ಲೇ ‘ಪತ್ರಿಕೆ’ಯ ಬರಹದಲ್ಲಿ ಅದನ್ನು ಹೇಳಿದ್ದರು. ಆಗಿಂದಾಗ್ಗೆ ಪೊರೆ ಕಳಚದೇ ಮಾಧ್ಯಮವು ಉಳಿದುಕೊಳ್ಳುವುದು ಸಾಧ್ಯವಿಲ್ಲ ಎಂಬುದು ಅವರ ಮಾತಾಗಿತ್ತು. ಲಂಕೇಶರು ರಾಜಕೀಯ ಮತ್ತು ಸಾಹಿತ್ಯಗಳನ್ನು ಪತ್ರಿಕೆಯ ಪ್ರಮುಖ ಭಾಗಗಳನ್ನಾಗಿಸಿ ಜಾಣ ಜಾಣೆಯರನ್ನು ಓರಿಯೆಂಟ್ ಮಾಡಲು ಟ್ಯಾಬ್ಲಾಯ್ಡ್ ವಾರಪತ್ರಿಕೆಯನ್ನು ಪ್ರಭಾವೀ ಹತಾರವಾಗಿ ಬಳಸಿದರು.

ಟ್ಯಾಬ್ಲಾಯ್ಡ್ ಪತ್ರಿಕೆಗಳು ತಳಮುಟ್ಟಿ, ಮುದ್ರಣ ಮಾಧ್ಯಮ ತನ್ನ ಬಿರುಸು ಕಳೆದುಕೊಳ್ಳುತ್ತಿರುವ ಯುಗದಲ್ಲಿ ‘ನ್ಯಾಯಪಥ’ ಆರಂಭವಾಗಿದೆ. ಹಾಗಾದರೆ, ಇದು ಕೇವಲ ಒಂದು ಸಾಂಕೇತಿಕ ಪ್ರಯತ್ನವಾಗಿ ಮುಂದುವರೆಯಬೇಕೆಂಬುದೇ ನಮ್ಮ ಯೋಜನೆಯೇ? ಖಂಡಿತಾ ಅಲ್ಲ. ನಷ್ಟದಲ್ಲೇ ನಡೆಯುತ್ತಿರುವ ಬಹುಪಾಲು ಟಿವಿ ಚಾನೆಲ್‍ಗಳು ಮುಂದೆಂದೋ ಕ್ಲಿಕ್ ಆಗುತ್ತೇವೆಂಬ ಭ್ರಾಂತಿಯಲ್ಲಿ ಕಾಲು ಎಳೆದುಕೊಂಡು ನಡೆಯುತ್ತವಲ್ಲಾ ಹಾಗೆ ಇದನ್ನು ನಡೆಸಲಾಗುತ್ತಿದೆಯೇ? ಇಲ್ಲವೇ ಇಲ್ಲ. ನ್ಯಾಯಪಥ ಪತ್ರಿಕೆ ಅಥವಾ ಈಗ ಚುರುಕು ಹಾಗೂ ವ್ಯಾಪಕತೆ ಪಡೆದುಕೊಳ್ಳುತ್ತಿರುವ ವೆಬ್ ಪೋರ್ಟಲ್‍ಗಳು ಹೊಸ ಮಾಧ್ಯಮ ರೂಪಿಸಲು ಬೇಕಾದ ಜನರನ್ನು ಒಟ್ಟುಗೂಡಿಸುವ ವೇದಿಕೆಗಳಷ್ಟೇ.

ಎಲ್ಲಾ ಕಾಲದಲ್ಲೂ ಅತ್ಯಂತ ಪ್ರಬಲವಾದ ಮಾಧ್ಯಮ ಯಾವುದು? ಅದು ಜನರೇ ವಾಹಕರಾಗಿ ಪ್ರಸಾರ ಮಾಡುವ ಮಾಧ್ಯಮ. ಜನರೇ ತಮಗೆ ಬೇಕಾದ ಕಥನವನ್ನೂ ಕಟ್ಟಿಕೊಳ್ಳುವಂತಾದರೆ? ಅಂತಹ ಮಾಧ್ಯಮವನ್ನು ಯಾವುದೂ ಸರಿಗಟ್ಟಲಾರದು. ವಿವಿಧ ದೇಶಗಳಲ್ಲಿ ತಮ್ಮ ಸ್ಥಾವರಗಳನ್ನು ಹೊಂದಿ, ವಚ್ರ್ಯುಯಲ್ ಜಗತ್ತಿನಲ್ಲಿ ಜಂಗಮವಾಗಿರುವ ಸಾಮಾಜಿಕ ಜಾಲತಾಣಗಳು ಜನರ ಆಲೋಚನೆಗಳು ಹರಳುಗಟ್ಟಿ ಪ್ರಸಾರಗೊಳ್ಳಲು ವೇದಿಕೆಯನ್ನು ಒದಗಿಸಿವೆ. ಮೇಲೆ ಹೇಳಿದಂತೆ ಇದಕ್ಕೆ ಮಿತಿಗಳಿವೆಯಾದರೂ, ಈ ಸದ್ಯ ಅವು ಇನ್ನೂ ವಿಸ್ತಾರಗೊಳ್ಳುವ ಹಂತದಲ್ಲೇ ಇವೆ. ಮುಂದೊಂದು ದಿನ (ಇಂದು ಕಾಶ್ಮೀರದಲ್ಲಿ ಆಗಿರುವಂತೆ) ಸ್ಥಗಿತಗೊಳ್ಳುವ ಅಥವಾ ಸಂಪೂರ್ಣ ಸೆಲೆಕ್ಟಿವ್ ಆಗುವುದಕ್ಕೆ ಮುಂಚೆ ಬದಲೀ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕಾಗುತ್ತದಾದರೂ, ಅಲ್ಲಿಯವರೆಗೆ ಅವು ನಮಗೆ ಕೆಲವು ಸಾಧ್ಯತೆಗಳನ್ನು ಒದಗಿಸುತ್ತವೆ.

ಬಲವಾದ ಹೊಸ ಮುಖ್ಯವಾಹಿನಿ ರೂಪಿಸಲು ಮೊದಲು ನಾವು ಓದುಗರ ಅಂದರೆ ಸಾಮಾನ್ಯ ಜನರ ಮುಂಚೂಣಿ ವಿಭಾಗದ ಹಿತಾಸಕ್ತಿಯನ್ನು ರೂಪಿಸುವುದು ಮುಖ್ಯ. ಆಗ ಅವರೇ ಸುದ್ದಿಯನ್ನು ರೂಪಿಸುತ್ತಾರೆ ಮತ್ತು ಅದರ ಪ್ರಸಾರಕ್ಕೂ ಕಾರಣರಾಗುತ್ತಾರೆ. ಎಲ್ಲಾ ಕಾಲದಲ್ಲೂ ಇವರೇ, ಅಂದರೆ ಈ ಸಾಮಾನ್ಯ ಜನರೇ, ಭಾರೀ ಬಹುಸಂಖ್ಯಾತರಾದ್ದರಿಂದ (overwhelming majority) ಅವರು ಸುದ್ದಿಯನ್ನು ರೂಪಿಸುವುದು ಮತ್ತು ಪ್ರಸಾರ ಮಾಡುವುದಕ್ಕೆ ಇಳಿದರೆ ಅದನ್ನು ಯಾರಾದರೂ ಹೇಗೆ ಸರಿಗಟ್ಟಬಲ್ಲರು. ಅವರೇ ಅದಕ್ಕೆ ಬೇಕಾದ ಸಂಪನ್ಮೂಲವನ್ನೂ ರೂಢಿಸಿಕೊಳ್ಳುತ್ತಾರೆ. ಅಂದರೆ ಬಹಳ ಹೆಚ್ಚಿನ ಜನರು ಅದನ್ನು ಓದಿದರೆ ಜಾಹೀರಾತಿನ ಮೂಲಕ ಅಥವಾ ನೇರವಾಗಿ ಹಣ ನೀಡುವ ಮೂಲಕ.

ಈ ಬಹುಸಂಖ್ಯಾತ ಜನರನ್ನು ಅವರ ಹಿತಾಸಕ್ತಿಗೆ ಪೂರಕವಾಗಿ ಚಿಂತಿಸಲು, ಕಥನ ರೂಪಿಸಲು, ಸುದ್ದಿ ಕಟ್ಟಲು ಓರಿಯೆಂಟ್ ಮಾಡುವುದೆಂದರೆ, ಅದು ಹೊಸ ಮಾಧ್ಯಮ ಕಟ್ಟಲು ಬೇಕಾದ ಸೃಜನಶೀಲ ದಾರಿಗಳನ್ನು ಕಂಡುಕೊಳ್ಳುವ ಕೆಲಸ. ಆ ಸವಾಲನ್ನು ನಾವೀಗ ಕೈಗೆತ್ತಿಕೊಳ್ಳಬೇಕಿದೆ.

ದೇಶದ ಬಹುಸಂಖ್ಯೆಯ ಜನರು ಪರ್ಯಾಯ ಚಿಂತನೆ, ಪ್ರಜ್ಞೆಯನ್ನು ಪಡೆದುಕೊಳ್ಳಲು ಸಾಧ್ಯವಾಗುವುದು ಅವರೇ ಪಾಲ್ಗೊಳ್ಳುವ ಗುದ್ದಾಟದಿಂದ ಪಡೆಯುವ ಅನುಭವದ ಮೂಲಕವೇ. ಆ ರೀತಿಯಲ್ಲಿ ಬಹುಸಂಖ್ಯೆಯ ಜನರೆಲ್ಲರೂ ಒಂದಾಗಿ ನಿರ್ಮಿಸಹೊರಡುವ ಪರ್ಯಾಯ ಬೆಳೆಯದೇ, ಮಾಧ್ಯಮ ಮಾತ್ರ ಬೆಳೆದುಬಿಡುತ್ತದೆಯೇ ಎಂಬ ಪ್ರಶ್ನೆಯನ್ನು ಕೆಲವು ಶಾಶ್ವತ ಸಿನಿಕರು ಕೇಳಬಹುದು. ಹೌದು, ಬೆಳೆಯುತ್ತದೆ ಎಂಬ ವಿಶ್ವಾಸ ನಮ್ಮದು. ಅದು ಇಂದಿನ ಎಲ್ಲಾ ಮುಖ್ಯವಾಹಿನಿ ಮಾಧ್ಯಮಗಳನ್ನು ಗಾತ್ರದಲ್ಲಿ ಮೀರದಿದ್ದರೂ, ಪರಿಣಾಮದಲ್ಲಿ ಬೀರುತ್ತದೆ. ಏಕೆಂದರೆ

ಮಾಧ್ಯಮವೆನ್ನುವುದು ಸಮಾಜದಲ್ಲಿ ವೇಗವರ್ಧಕದ ಕೆಲಸ ಮಾಡುತ್ತದೆಯೇ ಹೊರತು, ತಾನೇ ಸಮಾಜವಲ್ಲ.
ಅಂತಹ ‘ಮುಖ್ಯವಾಹಿನಿ’ ಮಾಧ್ಯಮವನ್ನು ಕಟ್ಟಿ ನಿಲ್ಲಿಸುವ ಯೋಚನೆಯನ್ನು ನಾವು ಹೊಂದಿದ್ದೇವೆ. ಹೇಗೆ ಎಂಬ ಯೋಜನೆಯನ್ನು ಜೊತೆಗೂಡಿ ರೂಪಿಸೋಣ. ಈ ನಿಟ್ಟಿನಲ್ಲಿ ನೀವೇನು ಜವಾಬ್ದಾರಿ ತೆಗೆದುಕೊಳ್ಳಬಹುದು ಎಂಬುದನ್ನು ನಮ್ಮೊಂದಿಗೆ ಹಂಚಿಕೊಳ್ಳಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...