Homeಅಂಕಣಗಳುಹೊಸ ಮಾಧ್ಯಮಕ್ಕೆ ಸ್ವಾಗತ ನೀವೂ ಅದರ ಭಾಗವಾಗಿರುವುದು ಗೊತ್ತೇನು?

ಹೊಸ ಮಾಧ್ಯಮಕ್ಕೆ ಸ್ವಾಗತ ನೀವೂ ಅದರ ಭಾಗವಾಗಿರುವುದು ಗೊತ್ತೇನು?

- Advertisement -
- Advertisement -

| ಡಾ. ವಾಸು ಎಚ್.ವಿ |

‘ಮುಖ್ಯವಾಹಿನಿ’ ಮಾಧ್ಯಮಗಳ ಕೊಳಕುತನವನ್ನು ನೋಡಿ ಅಪಹಾಸ್ಯ ಮಾಡಿಕೊಂಡು ನಗುವುದು ಒಮ್ಮೊಮ್ಮೆ ಅಪಾಯಕಾರಿಯಾದುದು. ಏಕೆಂದರೆ ಇಂತಹ ಮಾಧ್ಯಮಗಳು ಜೀವವಿರೋಧಿಯಾಗಿದ್ದು ಪ್ರಜಾತಂತ್ರದ ಬುಡಕ್ಕೆ ಕೊಳ್ಳಿಯಿಡುತ್ತಿವೆ. ಆದರೆ ಅವನ್ನು ಬಯ್ದುಕೊಳ್ಳುತ್ತಾ, ಆತಂಕ ಪಡುತ್ತಾ, ವ್ಯಕ್ತಿಗತವಾಗಿ ಯಾರನ್ನೋ ಗುರಿ ಮಾಡುತ್ತಾ ಕಾಲವ್ಯಯ ಮಾಡುವುದು ಅಪಾಯವನ್ನು ಇನ್ನಷ್ಟು ಹೆಚ್ಚಿಸುತ್ತವೆ. ಪರ್ಯಾಯದ ನಿರ್ಮಾಣ ಮಾತ್ರ ಈ ವಿಷವ್ಯೂಹದಿಂದ ನಮ್ಮೆಲ್ಲರನ್ನು ಮೇಲೆತ್ತಬಹುದು.

ಇದರಲ್ಲಿ ಒಂದು ತೊಡಕಿದೆ. ಪರ್ಯಾಯದ ಮಾತಾಡುವವರು ಸಮಾಜದ ಮುಖ್ಯವಾಹಿನಿಯಲ್ಲಿ ಅಂತಹ ದೊಡ್ಡ ಪರಿಣಾಮ ಬೀರದ, ಶುದ್ಧ ಮತ್ತು ರ್ಯಾಡಿಕಲ್ ಕಂಟೆಂಟ್ ಹೊಂದಿರುವ ಪುಟ್ಟ ಪ್ರಯತ್ನದ ಕಡೆಗೆ ಒತ್ತು ಕೊಡುತ್ತಾರೆ. ಮೊದಲೇ ಅಂಚಿನಲ್ಲಿರುವುದನ್ನು, ಪರ್ಯಾಯದ ಹೆಸರಿನಲ್ಲಿ ಅಂಚಿನಲ್ಲೇ ಉಳಿಸುವುದು ಪರ್ಯಾಯವಾಗಲಾರದು. ಮುಖ್ಯವಾಹಿನಿಯ ಘಾತುಕ ಗಾತ್ರವನ್ನು ಹಿಮ್ಮೆಟ್ಟಿಸಿ, ಅದೇ ಮುಖ್ಯವಾಹಿನಿಯಲ್ಲಿ ತನ್ನನ್ನು ತಾನು ಪ್ರತಿಷ್ಠಾಪಿಸಿಕೊಳ್ಳುವ ಸೃಜನಶೀಲ ಮಾರ್ಗವನ್ನು ಶೋಧಿಸಿ, ಸಾಕಾರಗೊಳಿಸಿ ಜಯಿಸುವುದೇ ನಿಜವಾದ ಪರ್ಯಾಯ.

ಈವರೆಗಿನ ಪರಿಭಾಷೆಯು ತಪ್ಪು ಅರ್ಥ ಕೊಡುವುದೆಂಬ ಕಾರಣಕ್ಕೆ, ಪರ್ಯಾಯ ಮಾಧ್ಯಮದ ಬದಲಿಗೆ ಹೊಸ ಮಾಧ್ಯಮ ಎಂಬ ಪದವನ್ನು ಶೀರ್ಷಿಕೆಯಲ್ಲಿ ಬಳಸಲಾಗಿದೆ. ಮಾಧ್ಯಮಗಳು ಉಳ್ಳವರ ಕಪಿಮುಷ್ಟಿಯಲ್ಲಿ ಸೇರುವುದು ಮತ್ತು ಹಳತಾಗುವುದು ಒಟ್ಟಿಗೇ ನಡೆಯುತ್ತಿರುತ್ತದೆ. ಆ ನಂತರ ಹೊಸ ಮಾಧ್ಯಮ ಹುಟ್ಟಿಕೊಳ್ಳುತ್ತದೆ. ಸಾಮಾಜಿಕ ಜಾಲತಾಣಗಳನ್ನು ಹೊಸ ಮಾಧ್ಯಮಗಳೆಂದು ಕರೆಯಲಾಗುತ್ತದಾದರೂ, ಅಲ್ಲೊಂದು ವಿಪರ್ಯಾಸವಿದೆ. Social media is not so social ಎಂಬ ಮಾತಿದೆ. ಏಕೆಂದರೆ, ಅದೂ ಸಹಾ ಕಾರ್ಪೋರೇಟ್ ಲಾಭವನ್ನು ಹಿಗ್ಗಿಸಲೆಂದೇ ಹೆಚ್ಚೆಚ್ಚು ಪುನರ್ರೂಪಿತಗೊಳ್ಳುತ್ತಿದೆ.

ಅಂದರೆ, ಹೊಸ ಮಾಧ್ಯಮವು ಬಹುಬೇಗ ಹಳತಾಗುತ್ತಿರುವ ಕಾಲದಲ್ಲಿ ನಾವು ನವನವೀನ ದಾರಿಯನ್ನು ನಮ್ಮದಾಗಿಸಿಕೊಳ್ಳಬೇಕಿದೆ. ಲಂಕೇಶರು 90ರ ದಶಕದ ಮಧ್ಯಭಾಗದಲ್ಲೇ ‘ಪತ್ರಿಕೆ’ಯ ಬರಹದಲ್ಲಿ ಅದನ್ನು ಹೇಳಿದ್ದರು. ಆಗಿಂದಾಗ್ಗೆ ಪೊರೆ ಕಳಚದೇ ಮಾಧ್ಯಮವು ಉಳಿದುಕೊಳ್ಳುವುದು ಸಾಧ್ಯವಿಲ್ಲ ಎಂಬುದು ಅವರ ಮಾತಾಗಿತ್ತು. ಲಂಕೇಶರು ರಾಜಕೀಯ ಮತ್ತು ಸಾಹಿತ್ಯಗಳನ್ನು ಪತ್ರಿಕೆಯ ಪ್ರಮುಖ ಭಾಗಗಳನ್ನಾಗಿಸಿ ಜಾಣ ಜಾಣೆಯರನ್ನು ಓರಿಯೆಂಟ್ ಮಾಡಲು ಟ್ಯಾಬ್ಲಾಯ್ಡ್ ವಾರಪತ್ರಿಕೆಯನ್ನು ಪ್ರಭಾವೀ ಹತಾರವಾಗಿ ಬಳಸಿದರು.

ಟ್ಯಾಬ್ಲಾಯ್ಡ್ ಪತ್ರಿಕೆಗಳು ತಳಮುಟ್ಟಿ, ಮುದ್ರಣ ಮಾಧ್ಯಮ ತನ್ನ ಬಿರುಸು ಕಳೆದುಕೊಳ್ಳುತ್ತಿರುವ ಯುಗದಲ್ಲಿ ‘ನ್ಯಾಯಪಥ’ ಆರಂಭವಾಗಿದೆ. ಹಾಗಾದರೆ, ಇದು ಕೇವಲ ಒಂದು ಸಾಂಕೇತಿಕ ಪ್ರಯತ್ನವಾಗಿ ಮುಂದುವರೆಯಬೇಕೆಂಬುದೇ ನಮ್ಮ ಯೋಜನೆಯೇ? ಖಂಡಿತಾ ಅಲ್ಲ. ನಷ್ಟದಲ್ಲೇ ನಡೆಯುತ್ತಿರುವ ಬಹುಪಾಲು ಟಿವಿ ಚಾನೆಲ್‍ಗಳು ಮುಂದೆಂದೋ ಕ್ಲಿಕ್ ಆಗುತ್ತೇವೆಂಬ ಭ್ರಾಂತಿಯಲ್ಲಿ ಕಾಲು ಎಳೆದುಕೊಂಡು ನಡೆಯುತ್ತವಲ್ಲಾ ಹಾಗೆ ಇದನ್ನು ನಡೆಸಲಾಗುತ್ತಿದೆಯೇ? ಇಲ್ಲವೇ ಇಲ್ಲ. ನ್ಯಾಯಪಥ ಪತ್ರಿಕೆ ಅಥವಾ ಈಗ ಚುರುಕು ಹಾಗೂ ವ್ಯಾಪಕತೆ ಪಡೆದುಕೊಳ್ಳುತ್ತಿರುವ ವೆಬ್ ಪೋರ್ಟಲ್‍ಗಳು ಹೊಸ ಮಾಧ್ಯಮ ರೂಪಿಸಲು ಬೇಕಾದ ಜನರನ್ನು ಒಟ್ಟುಗೂಡಿಸುವ ವೇದಿಕೆಗಳಷ್ಟೇ.

ಎಲ್ಲಾ ಕಾಲದಲ್ಲೂ ಅತ್ಯಂತ ಪ್ರಬಲವಾದ ಮಾಧ್ಯಮ ಯಾವುದು? ಅದು ಜನರೇ ವಾಹಕರಾಗಿ ಪ್ರಸಾರ ಮಾಡುವ ಮಾಧ್ಯಮ. ಜನರೇ ತಮಗೆ ಬೇಕಾದ ಕಥನವನ್ನೂ ಕಟ್ಟಿಕೊಳ್ಳುವಂತಾದರೆ? ಅಂತಹ ಮಾಧ್ಯಮವನ್ನು ಯಾವುದೂ ಸರಿಗಟ್ಟಲಾರದು. ವಿವಿಧ ದೇಶಗಳಲ್ಲಿ ತಮ್ಮ ಸ್ಥಾವರಗಳನ್ನು ಹೊಂದಿ, ವಚ್ರ್ಯುಯಲ್ ಜಗತ್ತಿನಲ್ಲಿ ಜಂಗಮವಾಗಿರುವ ಸಾಮಾಜಿಕ ಜಾಲತಾಣಗಳು ಜನರ ಆಲೋಚನೆಗಳು ಹರಳುಗಟ್ಟಿ ಪ್ರಸಾರಗೊಳ್ಳಲು ವೇದಿಕೆಯನ್ನು ಒದಗಿಸಿವೆ. ಮೇಲೆ ಹೇಳಿದಂತೆ ಇದಕ್ಕೆ ಮಿತಿಗಳಿವೆಯಾದರೂ, ಈ ಸದ್ಯ ಅವು ಇನ್ನೂ ವಿಸ್ತಾರಗೊಳ್ಳುವ ಹಂತದಲ್ಲೇ ಇವೆ. ಮುಂದೊಂದು ದಿನ (ಇಂದು ಕಾಶ್ಮೀರದಲ್ಲಿ ಆಗಿರುವಂತೆ) ಸ್ಥಗಿತಗೊಳ್ಳುವ ಅಥವಾ ಸಂಪೂರ್ಣ ಸೆಲೆಕ್ಟಿವ್ ಆಗುವುದಕ್ಕೆ ಮುಂಚೆ ಬದಲೀ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕಾಗುತ್ತದಾದರೂ, ಅಲ್ಲಿಯವರೆಗೆ ಅವು ನಮಗೆ ಕೆಲವು ಸಾಧ್ಯತೆಗಳನ್ನು ಒದಗಿಸುತ್ತವೆ.

ಬಲವಾದ ಹೊಸ ಮುಖ್ಯವಾಹಿನಿ ರೂಪಿಸಲು ಮೊದಲು ನಾವು ಓದುಗರ ಅಂದರೆ ಸಾಮಾನ್ಯ ಜನರ ಮುಂಚೂಣಿ ವಿಭಾಗದ ಹಿತಾಸಕ್ತಿಯನ್ನು ರೂಪಿಸುವುದು ಮುಖ್ಯ. ಆಗ ಅವರೇ ಸುದ್ದಿಯನ್ನು ರೂಪಿಸುತ್ತಾರೆ ಮತ್ತು ಅದರ ಪ್ರಸಾರಕ್ಕೂ ಕಾರಣರಾಗುತ್ತಾರೆ. ಎಲ್ಲಾ ಕಾಲದಲ್ಲೂ ಇವರೇ, ಅಂದರೆ ಈ ಸಾಮಾನ್ಯ ಜನರೇ, ಭಾರೀ ಬಹುಸಂಖ್ಯಾತರಾದ್ದರಿಂದ (overwhelming majority) ಅವರು ಸುದ್ದಿಯನ್ನು ರೂಪಿಸುವುದು ಮತ್ತು ಪ್ರಸಾರ ಮಾಡುವುದಕ್ಕೆ ಇಳಿದರೆ ಅದನ್ನು ಯಾರಾದರೂ ಹೇಗೆ ಸರಿಗಟ್ಟಬಲ್ಲರು. ಅವರೇ ಅದಕ್ಕೆ ಬೇಕಾದ ಸಂಪನ್ಮೂಲವನ್ನೂ ರೂಢಿಸಿಕೊಳ್ಳುತ್ತಾರೆ. ಅಂದರೆ ಬಹಳ ಹೆಚ್ಚಿನ ಜನರು ಅದನ್ನು ಓದಿದರೆ ಜಾಹೀರಾತಿನ ಮೂಲಕ ಅಥವಾ ನೇರವಾಗಿ ಹಣ ನೀಡುವ ಮೂಲಕ.

ಈ ಬಹುಸಂಖ್ಯಾತ ಜನರನ್ನು ಅವರ ಹಿತಾಸಕ್ತಿಗೆ ಪೂರಕವಾಗಿ ಚಿಂತಿಸಲು, ಕಥನ ರೂಪಿಸಲು, ಸುದ್ದಿ ಕಟ್ಟಲು ಓರಿಯೆಂಟ್ ಮಾಡುವುದೆಂದರೆ, ಅದು ಹೊಸ ಮಾಧ್ಯಮ ಕಟ್ಟಲು ಬೇಕಾದ ಸೃಜನಶೀಲ ದಾರಿಗಳನ್ನು ಕಂಡುಕೊಳ್ಳುವ ಕೆಲಸ. ಆ ಸವಾಲನ್ನು ನಾವೀಗ ಕೈಗೆತ್ತಿಕೊಳ್ಳಬೇಕಿದೆ.

ದೇಶದ ಬಹುಸಂಖ್ಯೆಯ ಜನರು ಪರ್ಯಾಯ ಚಿಂತನೆ, ಪ್ರಜ್ಞೆಯನ್ನು ಪಡೆದುಕೊಳ್ಳಲು ಸಾಧ್ಯವಾಗುವುದು ಅವರೇ ಪಾಲ್ಗೊಳ್ಳುವ ಗುದ್ದಾಟದಿಂದ ಪಡೆಯುವ ಅನುಭವದ ಮೂಲಕವೇ. ಆ ರೀತಿಯಲ್ಲಿ ಬಹುಸಂಖ್ಯೆಯ ಜನರೆಲ್ಲರೂ ಒಂದಾಗಿ ನಿರ್ಮಿಸಹೊರಡುವ ಪರ್ಯಾಯ ಬೆಳೆಯದೇ, ಮಾಧ್ಯಮ ಮಾತ್ರ ಬೆಳೆದುಬಿಡುತ್ತದೆಯೇ ಎಂಬ ಪ್ರಶ್ನೆಯನ್ನು ಕೆಲವು ಶಾಶ್ವತ ಸಿನಿಕರು ಕೇಳಬಹುದು. ಹೌದು, ಬೆಳೆಯುತ್ತದೆ ಎಂಬ ವಿಶ್ವಾಸ ನಮ್ಮದು. ಅದು ಇಂದಿನ ಎಲ್ಲಾ ಮುಖ್ಯವಾಹಿನಿ ಮಾಧ್ಯಮಗಳನ್ನು ಗಾತ್ರದಲ್ಲಿ ಮೀರದಿದ್ದರೂ, ಪರಿಣಾಮದಲ್ಲಿ ಬೀರುತ್ತದೆ. ಏಕೆಂದರೆ

ಮಾಧ್ಯಮವೆನ್ನುವುದು ಸಮಾಜದಲ್ಲಿ ವೇಗವರ್ಧಕದ ಕೆಲಸ ಮಾಡುತ್ತದೆಯೇ ಹೊರತು, ತಾನೇ ಸಮಾಜವಲ್ಲ.
ಅಂತಹ ‘ಮುಖ್ಯವಾಹಿನಿ’ ಮಾಧ್ಯಮವನ್ನು ಕಟ್ಟಿ ನಿಲ್ಲಿಸುವ ಯೋಚನೆಯನ್ನು ನಾವು ಹೊಂದಿದ್ದೇವೆ. ಹೇಗೆ ಎಂಬ ಯೋಜನೆಯನ್ನು ಜೊತೆಗೂಡಿ ರೂಪಿಸೋಣ. ಈ ನಿಟ್ಟಿನಲ್ಲಿ ನೀವೇನು ಜವಾಬ್ದಾರಿ ತೆಗೆದುಕೊಳ್ಳಬಹುದು ಎಂಬುದನ್ನು ನಮ್ಮೊಂದಿಗೆ ಹಂಚಿಕೊಳ್ಳಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...